Homeಕರ್ನಾಟಕಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

ಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

- Advertisement -
- Advertisement -

ರಾಜ್ಯದ ಸಹಕಾರ ಸಂಘಗಳಲ್ಲಿನ ಸುಸ್ತಿದಾರ ರೈತರು ಸಾಲದ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಹಾಗೂ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧರಿಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ನಿರ್ಧರಿಸಿತು. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತದ ₹142.47 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ‘ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ’ ನಿರ್ಮಾಣವನ್ನು ₹47.32 ಕೋಟಿಗಳ ಅಂದಾಜು ಮೊತ್ತದಲ್ಲಿ ಕೆಕೆಆರ್ ಡಿ ಬಿ ಅನುದಾನದಲ್ಲಿ ಕೈಗೊಳ್ಳಲು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. 2023-24ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ‘ಕರ್ನಾಟಕ ಪಬ್ಲಿಕ್ ಶಾಲೆ;’ಳಿಗೆ ₹60 ಕೋಟಿ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ಅನುಮೋದನೆ ನೀಡಲಾಯಿತು.

ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಅನ್ನು ಸಂಪರ್ಕಿಸಲು ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ₹263 ಕೋಟಿಗಳ ಅಂದಾಜು ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಬೆಳಗಾವಿ ಜಿಲ್ಲೆಯ ಉಚ್ಛಗಾಂವ್ ಹಾಗೂ ಸಂತಿಬಸ್ತವಾಡ ಹೋಬಳಿಯ 20 ಕೆರೆಗಳನ್ನು ₹287.55 ಕೋಟಿ ಮೊತ್ತದಲ್ಲಿ ನಿರ್ಮಿಸುವ ಯೋಜನಾ ವರದಿಗೆ ಹಾಗೂ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ ‘ಬಾಗೇವಾಡಿ ಕೆರೆ ತುಂಬಿಸುವ ಯೋಜನೆ’ಯ ₹519.10 ಕೋಟಿಗಳ ಅಂದಾಜು ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ಸಭೆ ಅನುಮೋದನೆ ನೀಡಿದೆ.

ರಾಯಚೂರು ತಾಲ್ಲೂಕಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ ₹158.10 ಕೋಟಿ ಯೋಜನಾ ವರದಿಗೆ ಅನುಮೋದನೆ, ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹499 ಕೋಟಿ ಮೊತ್ತದ ಯೋಜನೆ ಆರಂಭಕ್ಕೆ ಸರ್ಕಾರ ಒಪ್ಪಿಕೊಂಡಿದೆ.

‘ರಾಜ್ಯದ 6 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು, ರಾಯಚೂರು, ಬಳ್ಳಾರಿ, ವಿಜಯಪುರಗಳಲ್ಲಿ ₹52.81 ಕೋಟಿ ವೆಚ್ಚದಲ್ಲಿ ಮತ್ತು ಬೆಂಗಳೂರಿನ ಹೊಸೂರು ರಸ್ತೆ, ಕಲಬುರಗಿ, ಮೈಸೂರು ಸರ್ಕಾರಿ ಕೈಗಾರಿಕಾ ಸಂಸ್ಥೆಗಳಲ್ಲಿ ₹47.18 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲ ಮೂಲಭೂತ ಸೌಕರ್ಯ ಕಾಮಗಾರಿಗಳ ₹120 ಕೋಟಿ ಕ್ರಿಯಾ ಯೋಜನೆಗೆ ಅನುಮತಿ ನೀಡಿ, ದಿನಾಂಕ: 12-01-2024 ರಂದು ಹೊರಡಿಸಿದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಯಿತು. ಜತೆಗೆ, ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ , ಲಾಂಡ್ರಿ ಕಟ್ಟಡ, ಎಸ್ ಟಿ ಪಿ ಉನ್ನತೀಕರಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಒಟ್ಟು ₹150 ಕೋಟಿ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹455 ಕೋಟಿಗಳ ಕಾಮಗಾರಿಗೆ ಸಭೆ ಒಪ್ಪಿಕೊಂಡಿದೆ.

ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟುಹೋಗಿರುವ ಪ್ರದೇಶಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಹಂದಲ್ಲಿ ₹208.45 ಕೋಟಿ ಅಂದಾಜು ಮೊತ್ತದ ಕುಡಿಯು ನೀರಿನ ಯೋಜನೆ, ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು ₹440.20 ಕೋಟಿಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ನೀಡಲಾಗಿದೆ.

ಇದನ್ನೂ ಓದಿ; ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...