Homeಮುಖಪುಟ'ಆಸಕ್ತಿದಾಯಕ ಸಂಭಾಷಣೆ': ಹೆದ್ದಾರಿಯಲ್ಲಿ ಟ್ರಕ್ ಸವಾರಿಯ ವಿಡಿಯೋ ಹಂಚಿಕೊಂಡ ರಾಹುಲ್

‘ಆಸಕ್ತಿದಾಯಕ ಸಂಭಾಷಣೆ’: ಹೆದ್ದಾರಿಯಲ್ಲಿ ಟ್ರಕ್ ಸವಾರಿಯ ವಿಡಿಯೋ ಹಂಚಿಕೊಂಡ ರಾಹುಲ್

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿ-ಚಂಡೀಗಡ ಹೆದ್ದಾರಿಯಲ್ಲಿ ಪ್ರಯಾಣಿಸುವಾಗ ಟ್ರಕ್ ಡ್ರೈವರ್‌ಗಳೊಂದಿಗಿನ ತಮ್ಮ ರಾತ್ರಿಯ “ಯಾತ್ರೆ” ಮತ್ತು ಅವರೊಂದಿಗೆ ನಡೆಸಿದ ಸಂಭಾಷಣೆಯ ವಿಡಿಯೋವನ್ನು ಸೋಮವಾರ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ರಾಹುಲ್ ಗಾಂಧಿ ಕಳೆದ ಸೋಮವಾರ ದೆಹಲಿಯಿಂದ ಚಂಡೀಗಡಕ್ಕೆ ಪ್ರಯಾಣ ಬೆಳೆಸಿದರು. ಆ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್‌ ಆಗಿದ್ದವು.

ತಮ್ಮ ಟ್ರೇಡ್‌ಮಾರ್ಕ್ ಬಿಳಿ ಟಿ-ಶರ್ಟ್ ಅನ್ನು ಧರಿಸಿರುವ ರಾಹುಲ್ ಗಾಂಧಿ, ಟ್ರಕ್‌ನೊಳಗೆ ಕುಳಿತು, ಚಾಲಕನೊಂದಿಗೆ ಪ್ರಯಾಣಿಸುತ್ತಿರುವುದನ್ನು ಮತ್ತು ಧಾಬಾದಲ್ಲಿ ಚಾಲಕರೊಂದಿಗೆ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

”ಆರು ಗಂಟೆಗಳ ದೆಹಲಿ-ಚಂಡೀಗಡ ಪ್ರಯಾಣದಲ್ಲಿ ಟ್ರಕ್ ಡ್ರೈವರ್‌ಗಳೊಂದಿಗೆ ಆಸಕ್ತಿದಾಯಕ ಸಂಭಾಷಣೆ! 24 ಗಂಟೆಗಳ ಕಾಲ ರಸ್ತೆಯಲ್ಲಿ ಕಳೆಯುವ ಅವರು ಭಾರತದ ಪ್ರತಿಯೊಂದು ಮೂಲೆಯನ್ನು ಒಂದುಗೂಡಿಸುತ್ತಾರೆ” ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ. ತಮ್ಮ ಪ್ರಯಾಣದ ಸಮಯದಲ್ಲಿನ 35 ಸೆಕೆಂಡ್ ವಿಡಿಯೋವನ್ನು ಹಂಚಿಕೊಂಡಿದ್ದು, ಇನ್ನು ತಮ್ಮ ಪ್ರಯಾಣದ ಸಂಪೂರ್ಣ ವಿಡಿಯೋದ ಲಿಂಕ್‌ನ್ನು ತಮ್ಮ ಯೂಟ್ಯೂಬ್ ಪುಟದಲ್ಲಿ ಹಂಚಿಕೊಂಡಿದ್ದಾರೆ.

”ಭಾರತ್ ಜೋಡೋ ಯಾತ್ರೆಯಂತೆಯೇ ಜನರೊಂದಿಗೆ ತಮ್ಮ ಸಂವಾದವನ್ನು ಮುಂದುವರೆಸುತ್ತಾ, ರಾಹುಲ್ ಗಾಂಧಿಯವರು NH-44ರ ಮುರ್ಥಾಲ್‌ನಲ್ಲಿರುವ ಧಾಬಾದಲ್ಲಿ ಟ್ರಕ್ ಡ್ರೈವರ್‌ಗಳ ಗುಂಪನ್ನು ಭೇಟಿಯಾಗಿ ಮಾತನಾಡಿದರು ಮತ್ತು ಅಲ್ಲಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದರು, ಶಿಮ್ಲಾಗೆ ತೆರಳುತ್ತಿದ್ದರು” ಎಂದು ಕಾಂಗ್ರೆಸ್‌ ಹೇಳಿದೆ.

ಮೂರು ಕೋಟಿ ಭಾರತೀಯರು ನೇರವಾಗಿ ಟ್ರಕ್ ಉದ್ಯಮದಲ್ಲಿ ಉದ್ಯೋಗದಲ್ಲಿದ್ದಾರೆ ಮತ್ತು ಪ್ರತಿ ವರ್ಷ ಒಂಬತ್ತು ಲಕ್ಷ ಹೊಸ ಟ್ರಕ್ ಡ್ರೈವರ್‌ಗಳಿಗೆ ಬೇಡಿಕೆಯಿದೆ ಎಂದು ವರದಿಗಳು ಸೂಚಿಸುತ್ತವೆ ಎಂಬ ಕಥೆಯನ್ನು ಸಂಪೂರ್ಣ ವಿಡಿಯೋ ವಿವರಿಸುತ್ತದೆ.

ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ, ಮಧ್ಯಪ್ರದೇಶದಲ್ಲೂ ಪುನರಾವರ್ತನೆ: 150 ಸ್ಥಾನ ಗೆಲ್ಲುತ್ತೇವೆ ಎಂದ ರಾಹುಲ್ ಗಾಂಧಿ

ಯುಪಿಯ ಲೋಧಿ ಯುವಕ ಪ್ರೇಮ್ ರಾಜ್‌ಪೂತ್ ಮಾತನಾಡುತ್ತಾ, ”ಸುಮಾರು 98 ಪ್ರತಿಶತದಷ್ಟು ಟ್ರಕ್ ಡ್ರೈವರ್‌ಗಳು, ತಮ್ಮ ಕುಟುಂಬ ಸದಸ್ಯರು ತಮ್ಮ ವೃತ್ತಿಗೆ ಸೇರಲು ಬಯಸುವುದಿಲ್ಲ. ಅವರಲ್ಲಿ ಹೆಚ್ಚಿನವರು ಪೊಲೀಸರಿಂದ ಕಿರುಕುಳ, ಕಡಿಮೆ ಮತ್ತು ಅನಿಯಮಿತ ಆದಾಯ ಬರುತ್ತದೆ” ಎಂದು ದೂರು ಹೇಳಿರುವುದು ವಿಡಿಯೋ ಹೇಳಿದೆ.

ಆಗ ರಾಹುಲ್ ಗಾಂಧಿ ಅವರು ಮುಂದಿನ ಕಾಂಗ್ರೆಸ್ ಸರ್ಕಾರವು ಅವರ ದುಃಸ್ಥಿತಿಯನ್ನು ಸುಧಾರಿಸಲು ಅತ್ಯುತ್ತಮವಾಗಿ ಪ್ರಯತ್ನಿಸುತ್ತದೆ ಎಂದು ಭರವಸೆ ನೀಡಿದರು ಎಂದು ಪಕ್ಷವು ಹೇಳಿದೆ.

ರಾಹುಲ್ ಗಾಂಧಿಯವರು ಜನರನ್ನು ಭೇಟಿಯಾಗುತ್ತಿದ್ದಾರೆ ಮತ್ತು ಸಾಮಾನ್ಯ ಭಾರತೀಯರ ಧ್ವನಿಯನ್ನು ನಿಯಮಿತವಾಗಿ ಕೇಳುತ್ತಿದ್ದಾರೆ. ಹಳೆ ದೆಹಲಿ ಮತ್ತು ಮುಖರ್ಜಿ ನಗರ ಮತ್ತು ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಭೇಟಿಯಿಂದ ಹಿಡಿದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತು ಬ್ಲಿಂಕಿಟ್ ಬೈಕ್ ಸವಾರಿ ಮಾಡುವವರೆಗೆ, ಅವರು ಸಮಾಜದ ವಿವಿಧ ವರ್ಗಗಳ ಜನರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಜನರನ್ನು ಆಲಿಸುವ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...