Homeಮುಖಪುಟ'ಆಸಕ್ತಿದಾಯಕ ಸಂಭಾಷಣೆ': ಹೆದ್ದಾರಿಯಲ್ಲಿ ಟ್ರಕ್ ಸವಾರಿಯ ವಿಡಿಯೋ ಹಂಚಿಕೊಂಡ ರಾಹುಲ್

‘ಆಸಕ್ತಿದಾಯಕ ಸಂಭಾಷಣೆ’: ಹೆದ್ದಾರಿಯಲ್ಲಿ ಟ್ರಕ್ ಸವಾರಿಯ ವಿಡಿಯೋ ಹಂಚಿಕೊಂಡ ರಾಹುಲ್

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿ-ಚಂಡೀಗಡ ಹೆದ್ದಾರಿಯಲ್ಲಿ ಪ್ರಯಾಣಿಸುವಾಗ ಟ್ರಕ್ ಡ್ರೈವರ್‌ಗಳೊಂದಿಗಿನ ತಮ್ಮ ರಾತ್ರಿಯ “ಯಾತ್ರೆ” ಮತ್ತು ಅವರೊಂದಿಗೆ ನಡೆಸಿದ ಸಂಭಾಷಣೆಯ ವಿಡಿಯೋವನ್ನು ಸೋಮವಾರ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ರಾಹುಲ್ ಗಾಂಧಿ ಕಳೆದ ಸೋಮವಾರ ದೆಹಲಿಯಿಂದ ಚಂಡೀಗಡಕ್ಕೆ ಪ್ರಯಾಣ ಬೆಳೆಸಿದರು. ಆ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್‌ ಆಗಿದ್ದವು.

ತಮ್ಮ ಟ್ರೇಡ್‌ಮಾರ್ಕ್ ಬಿಳಿ ಟಿ-ಶರ್ಟ್ ಅನ್ನು ಧರಿಸಿರುವ ರಾಹುಲ್ ಗಾಂಧಿ, ಟ್ರಕ್‌ನೊಳಗೆ ಕುಳಿತು, ಚಾಲಕನೊಂದಿಗೆ ಪ್ರಯಾಣಿಸುತ್ತಿರುವುದನ್ನು ಮತ್ತು ಧಾಬಾದಲ್ಲಿ ಚಾಲಕರೊಂದಿಗೆ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

”ಆರು ಗಂಟೆಗಳ ದೆಹಲಿ-ಚಂಡೀಗಡ ಪ್ರಯಾಣದಲ್ಲಿ ಟ್ರಕ್ ಡ್ರೈವರ್‌ಗಳೊಂದಿಗೆ ಆಸಕ್ತಿದಾಯಕ ಸಂಭಾಷಣೆ! 24 ಗಂಟೆಗಳ ಕಾಲ ರಸ್ತೆಯಲ್ಲಿ ಕಳೆಯುವ ಅವರು ಭಾರತದ ಪ್ರತಿಯೊಂದು ಮೂಲೆಯನ್ನು ಒಂದುಗೂಡಿಸುತ್ತಾರೆ” ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ. ತಮ್ಮ ಪ್ರಯಾಣದ ಸಮಯದಲ್ಲಿನ 35 ಸೆಕೆಂಡ್ ವಿಡಿಯೋವನ್ನು ಹಂಚಿಕೊಂಡಿದ್ದು, ಇನ್ನು ತಮ್ಮ ಪ್ರಯಾಣದ ಸಂಪೂರ್ಣ ವಿಡಿಯೋದ ಲಿಂಕ್‌ನ್ನು ತಮ್ಮ ಯೂಟ್ಯೂಬ್ ಪುಟದಲ್ಲಿ ಹಂಚಿಕೊಂಡಿದ್ದಾರೆ.

”ಭಾರತ್ ಜೋಡೋ ಯಾತ್ರೆಯಂತೆಯೇ ಜನರೊಂದಿಗೆ ತಮ್ಮ ಸಂವಾದವನ್ನು ಮುಂದುವರೆಸುತ್ತಾ, ರಾಹುಲ್ ಗಾಂಧಿಯವರು NH-44ರ ಮುರ್ಥಾಲ್‌ನಲ್ಲಿರುವ ಧಾಬಾದಲ್ಲಿ ಟ್ರಕ್ ಡ್ರೈವರ್‌ಗಳ ಗುಂಪನ್ನು ಭೇಟಿಯಾಗಿ ಮಾತನಾಡಿದರು ಮತ್ತು ಅಲ್ಲಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದರು, ಶಿಮ್ಲಾಗೆ ತೆರಳುತ್ತಿದ್ದರು” ಎಂದು ಕಾಂಗ್ರೆಸ್‌ ಹೇಳಿದೆ.

ಮೂರು ಕೋಟಿ ಭಾರತೀಯರು ನೇರವಾಗಿ ಟ್ರಕ್ ಉದ್ಯಮದಲ್ಲಿ ಉದ್ಯೋಗದಲ್ಲಿದ್ದಾರೆ ಮತ್ತು ಪ್ರತಿ ವರ್ಷ ಒಂಬತ್ತು ಲಕ್ಷ ಹೊಸ ಟ್ರಕ್ ಡ್ರೈವರ್‌ಗಳಿಗೆ ಬೇಡಿಕೆಯಿದೆ ಎಂದು ವರದಿಗಳು ಸೂಚಿಸುತ್ತವೆ ಎಂಬ ಕಥೆಯನ್ನು ಸಂಪೂರ್ಣ ವಿಡಿಯೋ ವಿವರಿಸುತ್ತದೆ.

ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ, ಮಧ್ಯಪ್ರದೇಶದಲ್ಲೂ ಪುನರಾವರ್ತನೆ: 150 ಸ್ಥಾನ ಗೆಲ್ಲುತ್ತೇವೆ ಎಂದ ರಾಹುಲ್ ಗಾಂಧಿ

ಯುಪಿಯ ಲೋಧಿ ಯುವಕ ಪ್ರೇಮ್ ರಾಜ್‌ಪೂತ್ ಮಾತನಾಡುತ್ತಾ, ”ಸುಮಾರು 98 ಪ್ರತಿಶತದಷ್ಟು ಟ್ರಕ್ ಡ್ರೈವರ್‌ಗಳು, ತಮ್ಮ ಕುಟುಂಬ ಸದಸ್ಯರು ತಮ್ಮ ವೃತ್ತಿಗೆ ಸೇರಲು ಬಯಸುವುದಿಲ್ಲ. ಅವರಲ್ಲಿ ಹೆಚ್ಚಿನವರು ಪೊಲೀಸರಿಂದ ಕಿರುಕುಳ, ಕಡಿಮೆ ಮತ್ತು ಅನಿಯಮಿತ ಆದಾಯ ಬರುತ್ತದೆ” ಎಂದು ದೂರು ಹೇಳಿರುವುದು ವಿಡಿಯೋ ಹೇಳಿದೆ.

ಆಗ ರಾಹುಲ್ ಗಾಂಧಿ ಅವರು ಮುಂದಿನ ಕಾಂಗ್ರೆಸ್ ಸರ್ಕಾರವು ಅವರ ದುಃಸ್ಥಿತಿಯನ್ನು ಸುಧಾರಿಸಲು ಅತ್ಯುತ್ತಮವಾಗಿ ಪ್ರಯತ್ನಿಸುತ್ತದೆ ಎಂದು ಭರವಸೆ ನೀಡಿದರು ಎಂದು ಪಕ್ಷವು ಹೇಳಿದೆ.

ರಾಹುಲ್ ಗಾಂಧಿಯವರು ಜನರನ್ನು ಭೇಟಿಯಾಗುತ್ತಿದ್ದಾರೆ ಮತ್ತು ಸಾಮಾನ್ಯ ಭಾರತೀಯರ ಧ್ವನಿಯನ್ನು ನಿಯಮಿತವಾಗಿ ಕೇಳುತ್ತಿದ್ದಾರೆ. ಹಳೆ ದೆಹಲಿ ಮತ್ತು ಮುಖರ್ಜಿ ನಗರ ಮತ್ತು ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಭೇಟಿಯಿಂದ ಹಿಡಿದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತು ಬ್ಲಿಂಕಿಟ್ ಬೈಕ್ ಸವಾರಿ ಮಾಡುವವರೆಗೆ, ಅವರು ಸಮಾಜದ ವಿವಿಧ ವರ್ಗಗಳ ಜನರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಜನರನ್ನು ಆಲಿಸುವ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...