Homeಮುಖಪುಟ'ಆಸಕ್ತಿದಾಯಕ ಸಂಭಾಷಣೆ': ಹೆದ್ದಾರಿಯಲ್ಲಿ ಟ್ರಕ್ ಸವಾರಿಯ ವಿಡಿಯೋ ಹಂಚಿಕೊಂಡ ರಾಹುಲ್

‘ಆಸಕ್ತಿದಾಯಕ ಸಂಭಾಷಣೆ’: ಹೆದ್ದಾರಿಯಲ್ಲಿ ಟ್ರಕ್ ಸವಾರಿಯ ವಿಡಿಯೋ ಹಂಚಿಕೊಂಡ ರಾಹುಲ್

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿ-ಚಂಡೀಗಡ ಹೆದ್ದಾರಿಯಲ್ಲಿ ಪ್ರಯಾಣಿಸುವಾಗ ಟ್ರಕ್ ಡ್ರೈವರ್‌ಗಳೊಂದಿಗಿನ ತಮ್ಮ ರಾತ್ರಿಯ “ಯಾತ್ರೆ” ಮತ್ತು ಅವರೊಂದಿಗೆ ನಡೆಸಿದ ಸಂಭಾಷಣೆಯ ವಿಡಿಯೋವನ್ನು ಸೋಮವಾರ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ರಾಹುಲ್ ಗಾಂಧಿ ಕಳೆದ ಸೋಮವಾರ ದೆಹಲಿಯಿಂದ ಚಂಡೀಗಡಕ್ಕೆ ಪ್ರಯಾಣ ಬೆಳೆಸಿದರು. ಆ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್‌ ಆಗಿದ್ದವು.

ತಮ್ಮ ಟ್ರೇಡ್‌ಮಾರ್ಕ್ ಬಿಳಿ ಟಿ-ಶರ್ಟ್ ಅನ್ನು ಧರಿಸಿರುವ ರಾಹುಲ್ ಗಾಂಧಿ, ಟ್ರಕ್‌ನೊಳಗೆ ಕುಳಿತು, ಚಾಲಕನೊಂದಿಗೆ ಪ್ರಯಾಣಿಸುತ್ತಿರುವುದನ್ನು ಮತ್ತು ಧಾಬಾದಲ್ಲಿ ಚಾಲಕರೊಂದಿಗೆ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

”ಆರು ಗಂಟೆಗಳ ದೆಹಲಿ-ಚಂಡೀಗಡ ಪ್ರಯಾಣದಲ್ಲಿ ಟ್ರಕ್ ಡ್ರೈವರ್‌ಗಳೊಂದಿಗೆ ಆಸಕ್ತಿದಾಯಕ ಸಂಭಾಷಣೆ! 24 ಗಂಟೆಗಳ ಕಾಲ ರಸ್ತೆಯಲ್ಲಿ ಕಳೆಯುವ ಅವರು ಭಾರತದ ಪ್ರತಿಯೊಂದು ಮೂಲೆಯನ್ನು ಒಂದುಗೂಡಿಸುತ್ತಾರೆ” ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ. ತಮ್ಮ ಪ್ರಯಾಣದ ಸಮಯದಲ್ಲಿನ 35 ಸೆಕೆಂಡ್ ವಿಡಿಯೋವನ್ನು ಹಂಚಿಕೊಂಡಿದ್ದು, ಇನ್ನು ತಮ್ಮ ಪ್ರಯಾಣದ ಸಂಪೂರ್ಣ ವಿಡಿಯೋದ ಲಿಂಕ್‌ನ್ನು ತಮ್ಮ ಯೂಟ್ಯೂಬ್ ಪುಟದಲ್ಲಿ ಹಂಚಿಕೊಂಡಿದ್ದಾರೆ.

”ಭಾರತ್ ಜೋಡೋ ಯಾತ್ರೆಯಂತೆಯೇ ಜನರೊಂದಿಗೆ ತಮ್ಮ ಸಂವಾದವನ್ನು ಮುಂದುವರೆಸುತ್ತಾ, ರಾಹುಲ್ ಗಾಂಧಿಯವರು NH-44ರ ಮುರ್ಥಾಲ್‌ನಲ್ಲಿರುವ ಧಾಬಾದಲ್ಲಿ ಟ್ರಕ್ ಡ್ರೈವರ್‌ಗಳ ಗುಂಪನ್ನು ಭೇಟಿಯಾಗಿ ಮಾತನಾಡಿದರು ಮತ್ತು ಅಲ್ಲಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದರು, ಶಿಮ್ಲಾಗೆ ತೆರಳುತ್ತಿದ್ದರು” ಎಂದು ಕಾಂಗ್ರೆಸ್‌ ಹೇಳಿದೆ.

ಮೂರು ಕೋಟಿ ಭಾರತೀಯರು ನೇರವಾಗಿ ಟ್ರಕ್ ಉದ್ಯಮದಲ್ಲಿ ಉದ್ಯೋಗದಲ್ಲಿದ್ದಾರೆ ಮತ್ತು ಪ್ರತಿ ವರ್ಷ ಒಂಬತ್ತು ಲಕ್ಷ ಹೊಸ ಟ್ರಕ್ ಡ್ರೈವರ್‌ಗಳಿಗೆ ಬೇಡಿಕೆಯಿದೆ ಎಂದು ವರದಿಗಳು ಸೂಚಿಸುತ್ತವೆ ಎಂಬ ಕಥೆಯನ್ನು ಸಂಪೂರ್ಣ ವಿಡಿಯೋ ವಿವರಿಸುತ್ತದೆ.

ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ, ಮಧ್ಯಪ್ರದೇಶದಲ್ಲೂ ಪುನರಾವರ್ತನೆ: 150 ಸ್ಥಾನ ಗೆಲ್ಲುತ್ತೇವೆ ಎಂದ ರಾಹುಲ್ ಗಾಂಧಿ

ಯುಪಿಯ ಲೋಧಿ ಯುವಕ ಪ್ರೇಮ್ ರಾಜ್‌ಪೂತ್ ಮಾತನಾಡುತ್ತಾ, ”ಸುಮಾರು 98 ಪ್ರತಿಶತದಷ್ಟು ಟ್ರಕ್ ಡ್ರೈವರ್‌ಗಳು, ತಮ್ಮ ಕುಟುಂಬ ಸದಸ್ಯರು ತಮ್ಮ ವೃತ್ತಿಗೆ ಸೇರಲು ಬಯಸುವುದಿಲ್ಲ. ಅವರಲ್ಲಿ ಹೆಚ್ಚಿನವರು ಪೊಲೀಸರಿಂದ ಕಿರುಕುಳ, ಕಡಿಮೆ ಮತ್ತು ಅನಿಯಮಿತ ಆದಾಯ ಬರುತ್ತದೆ” ಎಂದು ದೂರು ಹೇಳಿರುವುದು ವಿಡಿಯೋ ಹೇಳಿದೆ.

ಆಗ ರಾಹುಲ್ ಗಾಂಧಿ ಅವರು ಮುಂದಿನ ಕಾಂಗ್ರೆಸ್ ಸರ್ಕಾರವು ಅವರ ದುಃಸ್ಥಿತಿಯನ್ನು ಸುಧಾರಿಸಲು ಅತ್ಯುತ್ತಮವಾಗಿ ಪ್ರಯತ್ನಿಸುತ್ತದೆ ಎಂದು ಭರವಸೆ ನೀಡಿದರು ಎಂದು ಪಕ್ಷವು ಹೇಳಿದೆ.

ರಾಹುಲ್ ಗಾಂಧಿಯವರು ಜನರನ್ನು ಭೇಟಿಯಾಗುತ್ತಿದ್ದಾರೆ ಮತ್ತು ಸಾಮಾನ್ಯ ಭಾರತೀಯರ ಧ್ವನಿಯನ್ನು ನಿಯಮಿತವಾಗಿ ಕೇಳುತ್ತಿದ್ದಾರೆ. ಹಳೆ ದೆಹಲಿ ಮತ್ತು ಮುಖರ್ಜಿ ನಗರ ಮತ್ತು ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಭೇಟಿಯಿಂದ ಹಿಡಿದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತು ಬ್ಲಿಂಕಿಟ್ ಬೈಕ್ ಸವಾರಿ ಮಾಡುವವರೆಗೆ, ಅವರು ಸಮಾಜದ ವಿವಿಧ ವರ್ಗಗಳ ಜನರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಜನರನ್ನು ಆಲಿಸುವ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...