Homeಮುಖಪುಟ'ಆಸಕ್ತಿದಾಯಕ ಸಂಭಾಷಣೆ': ಹೆದ್ದಾರಿಯಲ್ಲಿ ಟ್ರಕ್ ಸವಾರಿಯ ವಿಡಿಯೋ ಹಂಚಿಕೊಂಡ ರಾಹುಲ್

‘ಆಸಕ್ತಿದಾಯಕ ಸಂಭಾಷಣೆ’: ಹೆದ್ದಾರಿಯಲ್ಲಿ ಟ್ರಕ್ ಸವಾರಿಯ ವಿಡಿಯೋ ಹಂಚಿಕೊಂಡ ರಾಹುಲ್

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿ-ಚಂಡೀಗಡ ಹೆದ್ದಾರಿಯಲ್ಲಿ ಪ್ರಯಾಣಿಸುವಾಗ ಟ್ರಕ್ ಡ್ರೈವರ್‌ಗಳೊಂದಿಗಿನ ತಮ್ಮ ರಾತ್ರಿಯ “ಯಾತ್ರೆ” ಮತ್ತು ಅವರೊಂದಿಗೆ ನಡೆಸಿದ ಸಂಭಾಷಣೆಯ ವಿಡಿಯೋವನ್ನು ಸೋಮವಾರ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ರಾಹುಲ್ ಗಾಂಧಿ ಕಳೆದ ಸೋಮವಾರ ದೆಹಲಿಯಿಂದ ಚಂಡೀಗಡಕ್ಕೆ ಪ್ರಯಾಣ ಬೆಳೆಸಿದರು. ಆ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್‌ ಆಗಿದ್ದವು.

ತಮ್ಮ ಟ್ರೇಡ್‌ಮಾರ್ಕ್ ಬಿಳಿ ಟಿ-ಶರ್ಟ್ ಅನ್ನು ಧರಿಸಿರುವ ರಾಹುಲ್ ಗಾಂಧಿ, ಟ್ರಕ್‌ನೊಳಗೆ ಕುಳಿತು, ಚಾಲಕನೊಂದಿಗೆ ಪ್ರಯಾಣಿಸುತ್ತಿರುವುದನ್ನು ಮತ್ತು ಧಾಬಾದಲ್ಲಿ ಚಾಲಕರೊಂದಿಗೆ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

”ಆರು ಗಂಟೆಗಳ ದೆಹಲಿ-ಚಂಡೀಗಡ ಪ್ರಯಾಣದಲ್ಲಿ ಟ್ರಕ್ ಡ್ರೈವರ್‌ಗಳೊಂದಿಗೆ ಆಸಕ್ತಿದಾಯಕ ಸಂಭಾಷಣೆ! 24 ಗಂಟೆಗಳ ಕಾಲ ರಸ್ತೆಯಲ್ಲಿ ಕಳೆಯುವ ಅವರು ಭಾರತದ ಪ್ರತಿಯೊಂದು ಮೂಲೆಯನ್ನು ಒಂದುಗೂಡಿಸುತ್ತಾರೆ” ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ. ತಮ್ಮ ಪ್ರಯಾಣದ ಸಮಯದಲ್ಲಿನ 35 ಸೆಕೆಂಡ್ ವಿಡಿಯೋವನ್ನು ಹಂಚಿಕೊಂಡಿದ್ದು, ಇನ್ನು ತಮ್ಮ ಪ್ರಯಾಣದ ಸಂಪೂರ್ಣ ವಿಡಿಯೋದ ಲಿಂಕ್‌ನ್ನು ತಮ್ಮ ಯೂಟ್ಯೂಬ್ ಪುಟದಲ್ಲಿ ಹಂಚಿಕೊಂಡಿದ್ದಾರೆ.

”ಭಾರತ್ ಜೋಡೋ ಯಾತ್ರೆಯಂತೆಯೇ ಜನರೊಂದಿಗೆ ತಮ್ಮ ಸಂವಾದವನ್ನು ಮುಂದುವರೆಸುತ್ತಾ, ರಾಹುಲ್ ಗಾಂಧಿಯವರು NH-44ರ ಮುರ್ಥಾಲ್‌ನಲ್ಲಿರುವ ಧಾಬಾದಲ್ಲಿ ಟ್ರಕ್ ಡ್ರೈವರ್‌ಗಳ ಗುಂಪನ್ನು ಭೇಟಿಯಾಗಿ ಮಾತನಾಡಿದರು ಮತ್ತು ಅಲ್ಲಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದರು, ಶಿಮ್ಲಾಗೆ ತೆರಳುತ್ತಿದ್ದರು” ಎಂದು ಕಾಂಗ್ರೆಸ್‌ ಹೇಳಿದೆ.

ಮೂರು ಕೋಟಿ ಭಾರತೀಯರು ನೇರವಾಗಿ ಟ್ರಕ್ ಉದ್ಯಮದಲ್ಲಿ ಉದ್ಯೋಗದಲ್ಲಿದ್ದಾರೆ ಮತ್ತು ಪ್ರತಿ ವರ್ಷ ಒಂಬತ್ತು ಲಕ್ಷ ಹೊಸ ಟ್ರಕ್ ಡ್ರೈವರ್‌ಗಳಿಗೆ ಬೇಡಿಕೆಯಿದೆ ಎಂದು ವರದಿಗಳು ಸೂಚಿಸುತ್ತವೆ ಎಂಬ ಕಥೆಯನ್ನು ಸಂಪೂರ್ಣ ವಿಡಿಯೋ ವಿವರಿಸುತ್ತದೆ.

ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ, ಮಧ್ಯಪ್ರದೇಶದಲ್ಲೂ ಪುನರಾವರ್ತನೆ: 150 ಸ್ಥಾನ ಗೆಲ್ಲುತ್ತೇವೆ ಎಂದ ರಾಹುಲ್ ಗಾಂಧಿ

ಯುಪಿಯ ಲೋಧಿ ಯುವಕ ಪ್ರೇಮ್ ರಾಜ್‌ಪೂತ್ ಮಾತನಾಡುತ್ತಾ, ”ಸುಮಾರು 98 ಪ್ರತಿಶತದಷ್ಟು ಟ್ರಕ್ ಡ್ರೈವರ್‌ಗಳು, ತಮ್ಮ ಕುಟುಂಬ ಸದಸ್ಯರು ತಮ್ಮ ವೃತ್ತಿಗೆ ಸೇರಲು ಬಯಸುವುದಿಲ್ಲ. ಅವರಲ್ಲಿ ಹೆಚ್ಚಿನವರು ಪೊಲೀಸರಿಂದ ಕಿರುಕುಳ, ಕಡಿಮೆ ಮತ್ತು ಅನಿಯಮಿತ ಆದಾಯ ಬರುತ್ತದೆ” ಎಂದು ದೂರು ಹೇಳಿರುವುದು ವಿಡಿಯೋ ಹೇಳಿದೆ.

ಆಗ ರಾಹುಲ್ ಗಾಂಧಿ ಅವರು ಮುಂದಿನ ಕಾಂಗ್ರೆಸ್ ಸರ್ಕಾರವು ಅವರ ದುಃಸ್ಥಿತಿಯನ್ನು ಸುಧಾರಿಸಲು ಅತ್ಯುತ್ತಮವಾಗಿ ಪ್ರಯತ್ನಿಸುತ್ತದೆ ಎಂದು ಭರವಸೆ ನೀಡಿದರು ಎಂದು ಪಕ್ಷವು ಹೇಳಿದೆ.

ರಾಹುಲ್ ಗಾಂಧಿಯವರು ಜನರನ್ನು ಭೇಟಿಯಾಗುತ್ತಿದ್ದಾರೆ ಮತ್ತು ಸಾಮಾನ್ಯ ಭಾರತೀಯರ ಧ್ವನಿಯನ್ನು ನಿಯಮಿತವಾಗಿ ಕೇಳುತ್ತಿದ್ದಾರೆ. ಹಳೆ ದೆಹಲಿ ಮತ್ತು ಮುಖರ್ಜಿ ನಗರ ಮತ್ತು ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಭೇಟಿಯಿಂದ ಹಿಡಿದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತು ಬ್ಲಿಂಕಿಟ್ ಬೈಕ್ ಸವಾರಿ ಮಾಡುವವರೆಗೆ, ಅವರು ಸಮಾಜದ ವಿವಿಧ ವರ್ಗಗಳ ಜನರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಜನರನ್ನು ಆಲಿಸುವ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...