Homeಮುಖಪುಟಸುದರ್ಶನ್‌ ಟಿವಿ ಸಂಪಾದಕ ಚವ್ಹಾಂಕೆ ಟ್ವೀಟ್ ಬಳಿಕ ಅಂತರಧರ್ಮೀಯ ವಿವಾಹ ರದ್ದು

ಸುದರ್ಶನ್‌ ಟಿವಿ ಸಂಪಾದಕ ಚವ್ಹಾಂಕೆ ಟ್ವೀಟ್ ಬಳಿಕ ಅಂತರಧರ್ಮೀಯ ವಿವಾಹ ರದ್ದು

- Advertisement -
- Advertisement -

ಸುದರ್ಶನ್ ನ್ಯೂಸ್ ಟಿವಿ ಚಾನೆಲ್‌ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಚವ್ಹಾಂಕೆ ಟ್ವೀಟ್ ಮಾಡಿದ ಬಳಿಕ ಅಂತರಧರ್ಮೀಯ ವಿವಾಹ ರದ್ದಾಗಿದೆ. ಉಭಯ ಕುಟುಂಬಗಳು ಮದುವೆಯನ್ನು ನಿಲ್ಲಿಸಿವೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

“ಲವ್ ಜಿಹಾದ್” ಎಂದು ಆರೋಪಿಸಿ ಮದುವೆಯ ಆಮಂತ್ರಣ ಪತ್ರವನ್ನು ಸುರೇಶ್ ಚವ್ಹಾಂಕೆ ಟ್ವೀಟ್ ಮಾಡಿದ್ದರು. ನಂತರ ಮಹಾರಾಷ್ಟ್ರದ ವಸಾಯಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಾಹ ಕಾರ್ಯಕ್ರಮವನ್ನು ಎರಡೂ ಕುಟುಂಬಗಳು ರದ್ದುಗೊಳಿಸಿವೆ.

ಅಂತರ್‌ ಧರ್ಮೀಯವಾಗಿದ್ದ ವಿವಾಹ ಕಾರ್ಯಕ್ರಮವನ್ನು ನವೆಂಬರ್ 20, 2022ರಂದು ನಿಗದಿಪಡಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಧು-ವರರ ಕುಟುಂಬಗಳು ಶುಕ್ರವಾರ ಸಂಜೆ ನನ್ನನ್ನು ಭೇಟಿಯಾದರು” ಎಂದು ಸಮಾರಂಭ ನಡೆಯಬೇಕಿದ್ದ ಸ್ಥಳದ ವ್ಯವಸ್ಥಾಪಕರೊಬ್ಬರು ‘ನ್ಯೂಸ್‌ಲಾಂಡ್ರಿ’ಗೆ ತಿಳಿಸಿದ್ದಾರೆ. ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿರುವ ವ್ಯವಸ್ಥಾಪಕ, “ಅವರು ದಿನವಿಡೀ ಕರೆಗಳನ್ನು ಸ್ವೀಕರಿಸುತ್ತಿದ್ದರು ಮತ್ತು ತೊಂದರೆಗೊಳಗಾದಂತೆ ತೋರುತ್ತಿತ್ತು” ಎಂದು ಉಲ್ಲೇಖಿಸಿದ್ದಾರೆ.

“ನನ್ನ ಸ್ಥಳದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ಅವರು ರದ್ದುಮಾಡಿದರು. ನಾನು ಅವರ ಮುಂಗಡ ಹಣವನ್ನು ಹಿಂದಿರುಗಿಸಿದೆ. ಸಮಾರಂಭದ ಆಮಂತ್ರಣ ಪತ್ರವು ಸಾರ್ವಜನಿಕವಾಗಿ ಸೋರಿಕೆಯಾದ ಕಾರಣ ಕಾರ್ಯಕ್ರಮ ರದ್ದಾಯಿತು” ಎಂದು ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಬೇಕಿದ್ದ ಸ್ಥಳವು ವಸಾಯ್‌ನಲ್ಲಿದೆ.

ತಮ್ಮ ಚಾನೆಲ್‌ನ ಮುಸ್ಲಿಂ ವಿರೋಧಿ ಧೋರಣೆಗೆ ಕುಖ್ಯಾತರಾದ ಚವ್ಹಾಂಕೆ, ಶುಕ್ರವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಮಾರಂಭದ ಆಮಂತ್ರಣ ಪತ್ರವನ್ನು ಟ್ವೀಟ್ ಮಾಡಿದ್ದರು. ತನ್ನ ಸಂಗಾತಿ ಶ್ರದ್ಧಾ ವಾಕರ್‌‌ರನ್ನು ಅಫ್ತಾಬ್ ಪೂನಾವಾಲಾ ಕೊಂದಿರುವ ಪ್ರಕರಣಕ್ಕೆ ಈ ವಿವಾಹವನ್ನು ತಳುಕು ಹಾಕಿದ ಅವರು, ‘ಲವ್‌ಜಿಹಾದ್‌ ಆಕ್ಟ್‌ಆಫ್‌ಟೆರರ್‌‌’ ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ಟ್ವೀಟ್ ಮಾಡಿದ್ದರು.

ಇಸ್ಲಾಂಗೆ ಮತಾಂತರ ಮಾಡಲು ಹಿಂದೂ ಯುವತಿಯನ್ನು ಮುಸ್ಲಿಂ ಯುವಕರು ಮದುವೆಯಾಗುತ್ತಾರೆಂದು ಹುಟ್ಟಿಸಲಾಗಿರುವ ಹಿಂದುತ್ವ ಪಿತೂರಿ ಸಿದ್ಧಾಂತವೇ ‘ಲವ್‌ ಜಿಹಾದ್‌’ ಎಂಬ ವಿಶ್ಲೇಷಣೆಗಳಿವೆ.

“ಕೊಲೆಗಾರ ಅಫ್ತಾಬ್‌ನ ವಸಾಯ್‌ನಲ್ಲಿ ಇಮ್ರಾನ್ ಮತ್ತು ದಿವ್ಯಾ ಅವರ ಮದುವೆಗೆ ಸಾರ್ವಜನಿಕರನ್ನು ಆಹ್ವಾನಿಸಲಾಗಿದೆ” ಎಂದು ಚವ್ಹಾಂಕೆ ಬರೆದಿದ್ದಾರೆ. “35 ತುಂಡುಗಳಾಗಿ ಕತ್ತರಿಸಿದ ಹೃದಯ ವಿದ್ರಾವಕ ಕೊಲೆಯ ನಂತರ, ಅದೇ ಊರಿನಲ್ಲಿ ಇದು ಹೇಗೆ ನಡೆಯುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಶ್ರದ್ಧಾ ವಾಕರ್ ಅವರು ವಸಾಯ್‌ ನಿವಾಸಿಯಾಗಿದ್ದಾರೆ.

ಇದನ್ನೂ ಓದಿರಿ: ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

ಸೆಪ್ಟೆಂಬರ್ 2020ರಲ್ಲಿ ಸರ್ವೋಚ್ಚ ನ್ಯಾಯಾಲಯ ಈ ಚವ್ಹಾಂಚೆ ಅವರಿಗೆ ಎಚ್ಚರಿಕೆಯನ್ನು ನೀಡಿತ್ತು. ಭಾರತೀಯ ಮುಸ್ಲಿಮರು ಸಂಘಟಿತ ಇಸ್ಲಾಮಿಕ್ ಪಿತೂರಿಯ ಭಾಗವಾಗಿ ನಾಗರಿಕ ಸೇವೆಗಳಿಗೆ ಪ್ರವೇಶಿಸುತ್ತಿದ್ದಾರೆ ಎಂದು ಸುದರ್ಶನ್ ನ್ಯೂಸ್ ಸಂಪಾದಕರು ‘UPSE ಜಿಹಾದ್’ ಎಂಬ ಕಾರ್ಯಕ್ರಮ ಮಾಡಿದ್ದಕ್ಕೆ ಕೋರ್ಟ್ ಎಚ್ಚರಿಕೆ ನೀಡಿತ್ತು.

ಸಿಎನ್‌ಎನ್-ನ್ಯೂಸ್ 18, ನ್ಯೂಸ್ 18 ಇಂಡಿಯಾ ಮತ್ತು ರಿಪಬ್ಲಿಕ್ ಭಾರತ್ ಇಂಡಿಯಾದಂತಹ ಮುಖ್ಯವಾಹಿನಿಯ ಟಿವಿ ಸುದ್ದಿ ವಾಹಿನಿಗಳು ವಾಕರ್ ಹತ್ಯೆಯನ್ನು ‘ಲವ್ ಜಿಹಾದ್’ ಎಂದು ಬಿಂಬಿಸಿವೆ.

ಮದುವೆ ಕಾರ್ಯಕ್ರಮವನ್ನು ಆಯೋಜಿಸಿದ್ದ ಕುಟುಂಬಗಳಲ್ಲಿ ಒಂದನ್ನು ಸಂಪರ್ಕಿಸಿರುವ ‘ನ್ಯೂಸ್‌ಲಾಂಡ್ರಿ’, ಅವರ ಪ್ರತಿಕ್ರಿಯೆಯನ್ನು ಸ್ವೀಕರಿಸಲು ಸಾಧ್ಯವಾಗಲಿಲ್ಲ ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....