Homeಮುಖಪುಟಸುದರ್ಶನ್‌ ಟಿವಿ ಸಂಪಾದಕ ಚವ್ಹಾಂಕೆ ಟ್ವೀಟ್ ಬಳಿಕ ಅಂತರಧರ್ಮೀಯ ವಿವಾಹ ರದ್ದು

ಸುದರ್ಶನ್‌ ಟಿವಿ ಸಂಪಾದಕ ಚವ್ಹಾಂಕೆ ಟ್ವೀಟ್ ಬಳಿಕ ಅಂತರಧರ್ಮೀಯ ವಿವಾಹ ರದ್ದು

- Advertisement -
- Advertisement -

ಸುದರ್ಶನ್ ನ್ಯೂಸ್ ಟಿವಿ ಚಾನೆಲ್‌ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಚವ್ಹಾಂಕೆ ಟ್ವೀಟ್ ಮಾಡಿದ ಬಳಿಕ ಅಂತರಧರ್ಮೀಯ ವಿವಾಹ ರದ್ದಾಗಿದೆ. ಉಭಯ ಕುಟುಂಬಗಳು ಮದುವೆಯನ್ನು ನಿಲ್ಲಿಸಿವೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

“ಲವ್ ಜಿಹಾದ್” ಎಂದು ಆರೋಪಿಸಿ ಮದುವೆಯ ಆಮಂತ್ರಣ ಪತ್ರವನ್ನು ಸುರೇಶ್ ಚವ್ಹಾಂಕೆ ಟ್ವೀಟ್ ಮಾಡಿದ್ದರು. ನಂತರ ಮಹಾರಾಷ್ಟ್ರದ ವಸಾಯಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಾಹ ಕಾರ್ಯಕ್ರಮವನ್ನು ಎರಡೂ ಕುಟುಂಬಗಳು ರದ್ದುಗೊಳಿಸಿವೆ.

ಅಂತರ್‌ ಧರ್ಮೀಯವಾಗಿದ್ದ ವಿವಾಹ ಕಾರ್ಯಕ್ರಮವನ್ನು ನವೆಂಬರ್ 20, 2022ರಂದು ನಿಗದಿಪಡಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಧು-ವರರ ಕುಟುಂಬಗಳು ಶುಕ್ರವಾರ ಸಂಜೆ ನನ್ನನ್ನು ಭೇಟಿಯಾದರು” ಎಂದು ಸಮಾರಂಭ ನಡೆಯಬೇಕಿದ್ದ ಸ್ಥಳದ ವ್ಯವಸ್ಥಾಪಕರೊಬ್ಬರು ‘ನ್ಯೂಸ್‌ಲಾಂಡ್ರಿ’ಗೆ ತಿಳಿಸಿದ್ದಾರೆ. ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿರುವ ವ್ಯವಸ್ಥಾಪಕ, “ಅವರು ದಿನವಿಡೀ ಕರೆಗಳನ್ನು ಸ್ವೀಕರಿಸುತ್ತಿದ್ದರು ಮತ್ತು ತೊಂದರೆಗೊಳಗಾದಂತೆ ತೋರುತ್ತಿತ್ತು” ಎಂದು ಉಲ್ಲೇಖಿಸಿದ್ದಾರೆ.

“ನನ್ನ ಸ್ಥಳದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ಅವರು ರದ್ದುಮಾಡಿದರು. ನಾನು ಅವರ ಮುಂಗಡ ಹಣವನ್ನು ಹಿಂದಿರುಗಿಸಿದೆ. ಸಮಾರಂಭದ ಆಮಂತ್ರಣ ಪತ್ರವು ಸಾರ್ವಜನಿಕವಾಗಿ ಸೋರಿಕೆಯಾದ ಕಾರಣ ಕಾರ್ಯಕ್ರಮ ರದ್ದಾಯಿತು” ಎಂದು ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಬೇಕಿದ್ದ ಸ್ಥಳವು ವಸಾಯ್‌ನಲ್ಲಿದೆ.

ತಮ್ಮ ಚಾನೆಲ್‌ನ ಮುಸ್ಲಿಂ ವಿರೋಧಿ ಧೋರಣೆಗೆ ಕುಖ್ಯಾತರಾದ ಚವ್ಹಾಂಕೆ, ಶುಕ್ರವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಮಾರಂಭದ ಆಮಂತ್ರಣ ಪತ್ರವನ್ನು ಟ್ವೀಟ್ ಮಾಡಿದ್ದರು. ತನ್ನ ಸಂಗಾತಿ ಶ್ರದ್ಧಾ ವಾಕರ್‌‌ರನ್ನು ಅಫ್ತಾಬ್ ಪೂನಾವಾಲಾ ಕೊಂದಿರುವ ಪ್ರಕರಣಕ್ಕೆ ಈ ವಿವಾಹವನ್ನು ತಳುಕು ಹಾಕಿದ ಅವರು, ‘ಲವ್‌ಜಿಹಾದ್‌ ಆಕ್ಟ್‌ಆಫ್‌ಟೆರರ್‌‌’ ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ಟ್ವೀಟ್ ಮಾಡಿದ್ದರು.

ಇಸ್ಲಾಂಗೆ ಮತಾಂತರ ಮಾಡಲು ಹಿಂದೂ ಯುವತಿಯನ್ನು ಮುಸ್ಲಿಂ ಯುವಕರು ಮದುವೆಯಾಗುತ್ತಾರೆಂದು ಹುಟ್ಟಿಸಲಾಗಿರುವ ಹಿಂದುತ್ವ ಪಿತೂರಿ ಸಿದ್ಧಾಂತವೇ ‘ಲವ್‌ ಜಿಹಾದ್‌’ ಎಂಬ ವಿಶ್ಲೇಷಣೆಗಳಿವೆ.

“ಕೊಲೆಗಾರ ಅಫ್ತಾಬ್‌ನ ವಸಾಯ್‌ನಲ್ಲಿ ಇಮ್ರಾನ್ ಮತ್ತು ದಿವ್ಯಾ ಅವರ ಮದುವೆಗೆ ಸಾರ್ವಜನಿಕರನ್ನು ಆಹ್ವಾನಿಸಲಾಗಿದೆ” ಎಂದು ಚವ್ಹಾಂಕೆ ಬರೆದಿದ್ದಾರೆ. “35 ತುಂಡುಗಳಾಗಿ ಕತ್ತರಿಸಿದ ಹೃದಯ ವಿದ್ರಾವಕ ಕೊಲೆಯ ನಂತರ, ಅದೇ ಊರಿನಲ್ಲಿ ಇದು ಹೇಗೆ ನಡೆಯುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಶ್ರದ್ಧಾ ವಾಕರ್ ಅವರು ವಸಾಯ್‌ ನಿವಾಸಿಯಾಗಿದ್ದಾರೆ.

ಇದನ್ನೂ ಓದಿರಿ: ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

ಸೆಪ್ಟೆಂಬರ್ 2020ರಲ್ಲಿ ಸರ್ವೋಚ್ಚ ನ್ಯಾಯಾಲಯ ಈ ಚವ್ಹಾಂಚೆ ಅವರಿಗೆ ಎಚ್ಚರಿಕೆಯನ್ನು ನೀಡಿತ್ತು. ಭಾರತೀಯ ಮುಸ್ಲಿಮರು ಸಂಘಟಿತ ಇಸ್ಲಾಮಿಕ್ ಪಿತೂರಿಯ ಭಾಗವಾಗಿ ನಾಗರಿಕ ಸೇವೆಗಳಿಗೆ ಪ್ರವೇಶಿಸುತ್ತಿದ್ದಾರೆ ಎಂದು ಸುದರ್ಶನ್ ನ್ಯೂಸ್ ಸಂಪಾದಕರು ‘UPSE ಜಿಹಾದ್’ ಎಂಬ ಕಾರ್ಯಕ್ರಮ ಮಾಡಿದ್ದಕ್ಕೆ ಕೋರ್ಟ್ ಎಚ್ಚರಿಕೆ ನೀಡಿತ್ತು.

ಸಿಎನ್‌ಎನ್-ನ್ಯೂಸ್ 18, ನ್ಯೂಸ್ 18 ಇಂಡಿಯಾ ಮತ್ತು ರಿಪಬ್ಲಿಕ್ ಭಾರತ್ ಇಂಡಿಯಾದಂತಹ ಮುಖ್ಯವಾಹಿನಿಯ ಟಿವಿ ಸುದ್ದಿ ವಾಹಿನಿಗಳು ವಾಕರ್ ಹತ್ಯೆಯನ್ನು ‘ಲವ್ ಜಿಹಾದ್’ ಎಂದು ಬಿಂಬಿಸಿವೆ.

ಮದುವೆ ಕಾರ್ಯಕ್ರಮವನ್ನು ಆಯೋಜಿಸಿದ್ದ ಕುಟುಂಬಗಳಲ್ಲಿ ಒಂದನ್ನು ಸಂಪರ್ಕಿಸಿರುವ ‘ನ್ಯೂಸ್‌ಲಾಂಡ್ರಿ’, ಅವರ ಪ್ರತಿಕ್ರಿಯೆಯನ್ನು ಸ್ವೀಕರಿಸಲು ಸಾಧ್ಯವಾಗಲಿಲ್ಲ ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...