Homeಮುಖಪುಟಸುದರ್ಶನ್‌ ಟಿವಿ ಸಂಪಾದಕ ಚವ್ಹಾಂಕೆ ಟ್ವೀಟ್ ಬಳಿಕ ಅಂತರಧರ್ಮೀಯ ವಿವಾಹ ರದ್ದು

ಸುದರ್ಶನ್‌ ಟಿವಿ ಸಂಪಾದಕ ಚವ್ಹಾಂಕೆ ಟ್ವೀಟ್ ಬಳಿಕ ಅಂತರಧರ್ಮೀಯ ವಿವಾಹ ರದ್ದು

- Advertisement -
- Advertisement -

ಸುದರ್ಶನ್ ನ್ಯೂಸ್ ಟಿವಿ ಚಾನೆಲ್‌ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಚವ್ಹಾಂಕೆ ಟ್ವೀಟ್ ಮಾಡಿದ ಬಳಿಕ ಅಂತರಧರ್ಮೀಯ ವಿವಾಹ ರದ್ದಾಗಿದೆ. ಉಭಯ ಕುಟುಂಬಗಳು ಮದುವೆಯನ್ನು ನಿಲ್ಲಿಸಿವೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

“ಲವ್ ಜಿಹಾದ್” ಎಂದು ಆರೋಪಿಸಿ ಮದುವೆಯ ಆಮಂತ್ರಣ ಪತ್ರವನ್ನು ಸುರೇಶ್ ಚವ್ಹಾಂಕೆ ಟ್ವೀಟ್ ಮಾಡಿದ್ದರು. ನಂತರ ಮಹಾರಾಷ್ಟ್ರದ ವಸಾಯಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಾಹ ಕಾರ್ಯಕ್ರಮವನ್ನು ಎರಡೂ ಕುಟುಂಬಗಳು ರದ್ದುಗೊಳಿಸಿವೆ.

ಅಂತರ್‌ ಧರ್ಮೀಯವಾಗಿದ್ದ ವಿವಾಹ ಕಾರ್ಯಕ್ರಮವನ್ನು ನವೆಂಬರ್ 20, 2022ರಂದು ನಿಗದಿಪಡಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಧು-ವರರ ಕುಟುಂಬಗಳು ಶುಕ್ರವಾರ ಸಂಜೆ ನನ್ನನ್ನು ಭೇಟಿಯಾದರು” ಎಂದು ಸಮಾರಂಭ ನಡೆಯಬೇಕಿದ್ದ ಸ್ಥಳದ ವ್ಯವಸ್ಥಾಪಕರೊಬ್ಬರು ‘ನ್ಯೂಸ್‌ಲಾಂಡ್ರಿ’ಗೆ ತಿಳಿಸಿದ್ದಾರೆ. ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿರುವ ವ್ಯವಸ್ಥಾಪಕ, “ಅವರು ದಿನವಿಡೀ ಕರೆಗಳನ್ನು ಸ್ವೀಕರಿಸುತ್ತಿದ್ದರು ಮತ್ತು ತೊಂದರೆಗೊಳಗಾದಂತೆ ತೋರುತ್ತಿತ್ತು” ಎಂದು ಉಲ್ಲೇಖಿಸಿದ್ದಾರೆ.

“ನನ್ನ ಸ್ಥಳದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ಅವರು ರದ್ದುಮಾಡಿದರು. ನಾನು ಅವರ ಮುಂಗಡ ಹಣವನ್ನು ಹಿಂದಿರುಗಿಸಿದೆ. ಸಮಾರಂಭದ ಆಮಂತ್ರಣ ಪತ್ರವು ಸಾರ್ವಜನಿಕವಾಗಿ ಸೋರಿಕೆಯಾದ ಕಾರಣ ಕಾರ್ಯಕ್ರಮ ರದ್ದಾಯಿತು” ಎಂದು ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಬೇಕಿದ್ದ ಸ್ಥಳವು ವಸಾಯ್‌ನಲ್ಲಿದೆ.

ತಮ್ಮ ಚಾನೆಲ್‌ನ ಮುಸ್ಲಿಂ ವಿರೋಧಿ ಧೋರಣೆಗೆ ಕುಖ್ಯಾತರಾದ ಚವ್ಹಾಂಕೆ, ಶುಕ್ರವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಮಾರಂಭದ ಆಮಂತ್ರಣ ಪತ್ರವನ್ನು ಟ್ವೀಟ್ ಮಾಡಿದ್ದರು. ತನ್ನ ಸಂಗಾತಿ ಶ್ರದ್ಧಾ ವಾಕರ್‌‌ರನ್ನು ಅಫ್ತಾಬ್ ಪೂನಾವಾಲಾ ಕೊಂದಿರುವ ಪ್ರಕರಣಕ್ಕೆ ಈ ವಿವಾಹವನ್ನು ತಳುಕು ಹಾಕಿದ ಅವರು, ‘ಲವ್‌ಜಿಹಾದ್‌ ಆಕ್ಟ್‌ಆಫ್‌ಟೆರರ್‌‌’ ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ಟ್ವೀಟ್ ಮಾಡಿದ್ದರು.

ಇಸ್ಲಾಂಗೆ ಮತಾಂತರ ಮಾಡಲು ಹಿಂದೂ ಯುವತಿಯನ್ನು ಮುಸ್ಲಿಂ ಯುವಕರು ಮದುವೆಯಾಗುತ್ತಾರೆಂದು ಹುಟ್ಟಿಸಲಾಗಿರುವ ಹಿಂದುತ್ವ ಪಿತೂರಿ ಸಿದ್ಧಾಂತವೇ ‘ಲವ್‌ ಜಿಹಾದ್‌’ ಎಂಬ ವಿಶ್ಲೇಷಣೆಗಳಿವೆ.

“ಕೊಲೆಗಾರ ಅಫ್ತಾಬ್‌ನ ವಸಾಯ್‌ನಲ್ಲಿ ಇಮ್ರಾನ್ ಮತ್ತು ದಿವ್ಯಾ ಅವರ ಮದುವೆಗೆ ಸಾರ್ವಜನಿಕರನ್ನು ಆಹ್ವಾನಿಸಲಾಗಿದೆ” ಎಂದು ಚವ್ಹಾಂಕೆ ಬರೆದಿದ್ದಾರೆ. “35 ತುಂಡುಗಳಾಗಿ ಕತ್ತರಿಸಿದ ಹೃದಯ ವಿದ್ರಾವಕ ಕೊಲೆಯ ನಂತರ, ಅದೇ ಊರಿನಲ್ಲಿ ಇದು ಹೇಗೆ ನಡೆಯುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಶ್ರದ್ಧಾ ವಾಕರ್ ಅವರು ವಸಾಯ್‌ ನಿವಾಸಿಯಾಗಿದ್ದಾರೆ.

ಇದನ್ನೂ ಓದಿರಿ: ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

ಸೆಪ್ಟೆಂಬರ್ 2020ರಲ್ಲಿ ಸರ್ವೋಚ್ಚ ನ್ಯಾಯಾಲಯ ಈ ಚವ್ಹಾಂಚೆ ಅವರಿಗೆ ಎಚ್ಚರಿಕೆಯನ್ನು ನೀಡಿತ್ತು. ಭಾರತೀಯ ಮುಸ್ಲಿಮರು ಸಂಘಟಿತ ಇಸ್ಲಾಮಿಕ್ ಪಿತೂರಿಯ ಭಾಗವಾಗಿ ನಾಗರಿಕ ಸೇವೆಗಳಿಗೆ ಪ್ರವೇಶಿಸುತ್ತಿದ್ದಾರೆ ಎಂದು ಸುದರ್ಶನ್ ನ್ಯೂಸ್ ಸಂಪಾದಕರು ‘UPSE ಜಿಹಾದ್’ ಎಂಬ ಕಾರ್ಯಕ್ರಮ ಮಾಡಿದ್ದಕ್ಕೆ ಕೋರ್ಟ್ ಎಚ್ಚರಿಕೆ ನೀಡಿತ್ತು.

ಸಿಎನ್‌ಎನ್-ನ್ಯೂಸ್ 18, ನ್ಯೂಸ್ 18 ಇಂಡಿಯಾ ಮತ್ತು ರಿಪಬ್ಲಿಕ್ ಭಾರತ್ ಇಂಡಿಯಾದಂತಹ ಮುಖ್ಯವಾಹಿನಿಯ ಟಿವಿ ಸುದ್ದಿ ವಾಹಿನಿಗಳು ವಾಕರ್ ಹತ್ಯೆಯನ್ನು ‘ಲವ್ ಜಿಹಾದ್’ ಎಂದು ಬಿಂಬಿಸಿವೆ.

ಮದುವೆ ಕಾರ್ಯಕ್ರಮವನ್ನು ಆಯೋಜಿಸಿದ್ದ ಕುಟುಂಬಗಳಲ್ಲಿ ಒಂದನ್ನು ಸಂಪರ್ಕಿಸಿರುವ ‘ನ್ಯೂಸ್‌ಲಾಂಡ್ರಿ’, ಅವರ ಪ್ರತಿಕ್ರಿಯೆಯನ್ನು ಸ್ವೀಕರಿಸಲು ಸಾಧ್ಯವಾಗಲಿಲ್ಲ ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...