Homeಮುಖಪುಟಸ್ಟಾಂಡ್‌ಅಪ್‌ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿಗೆ ಮಧ್ಯಂತರ ಜಾಮೀನು

ಸ್ಟಾಂಡ್‌ಅಪ್‌ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿಗೆ ಮಧ್ಯಂತರ ಜಾಮೀನು

- Advertisement -
- Advertisement -

ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂಬ ಆರೋಪದಲ್ಲಿ ಬಂಧಿತನಾಗಿದ್ದ ಸ್ಟಾಂಡ್‌ಅಪ್‌ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಅಲ್ಲದೆ ಸುಪ್ರೀಂ ಮಧ್ಯಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಮುನಾವರ್‌ ಫಾರೂಕಿ ಬಂಧನಕ್ಕೂ ಮುನ್ನ ನಿಯಮಾವಳಿಗಳನ್ನು ಅನುಸರಿಸಲಾಗಿಲ್ಲ ಮತ್ತು ಎಫ್‌ಐಆರ್ ಅಸ್ಪಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ. ಉತ್ತರ ಪ್ರದೇಶ ಪೊಲೀಸರು ಫಾರೂಕಿ ವಿರುದ್ಧ ಹೊರಡಿಸಿದ ಪ್ರೊಡಕ್ಷನ್ ವಾರಂಟ್ ಅನ್ನು ಸಹ ನ್ಯಾಯಾಲಯ ತಡೆಹಿಡಿದಿದೆ.

“ಅವರನ್ನು ಬಂಧಿಸುವ ಮೊದಲು ಅರ್ನೇಶ್ ಕುಮಾರ್ ತೀರ್ಪಿನ ನಿಯಮಗಳನ್ನು ಪಾಲಿಸದಿರುವುದು ಸರಿಯೇ? ಎಫ್‌ಐಆರ್‌ನಲ್ಲಿರುವ ಆರೋಪಗಳು ಸಾಕಷ್ಟು ಅಸ್ಪಷ್ಟವಾಗಿರುವುದನ್ನು ಹೊರತುಪಡಿಸಿಯೂ ನಮ್ಮ ತೀರ್ಪಿನಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಅನುಸರಿಸಲಾಗಿಲ್ಲ” ಎಂದು ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ಹೇಳಿದ್ದಾರೆ.

ಮುನಾವರ್‌ ಫಾರೂಕಿ ಮತ್ತು ಸಹ ಆರೋಪಿ ನಳಿನ್ ಯಾದವ್ ಅವರು ಮೂರು ಬಾರಿ ಜಾಮೀನು ಅರ್ಜಿ ಹಾಕಿದ್ದರೂ ಸಹ ತಿರಸ್ಕೃತಗೊಂಡಿದ್ದವು. ಜನವರಿ 28 ರಂದು ಜಾಮೀನು ಅರ್ಜಿಯನ್ನು ಮಧ್ಯಪ್ರದೇಶದ ಹೈಕೋರ್ಟ್‌ನ ಇಂದೋರ್ ನ್ಯಾಯಪೀಠ ಗುರುವಾರ ತಿರಸ್ಕರಿಸಿತ್ತು.

ಹೊಸ ವರ್ಷಾಚರಣೆಯ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳನ್ನು ಹಾಗೂ ಒಕ್ಕೂಟದ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಹಾಸ್ಯ ಕಲಾವಿದ ಮತ್ತು ಇತರೆ ನಾಲ್ಕು ಜನ ಕಾರ್ಯಕ್ರಮ ಸಂಘಟಕರನ್ನು ಪೊಲೀಸರು ಜನವರಿ 2 ರಂದು ಬಂಧಿಸಿದ್ದರು. ಬಂಧನದ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲೇ ವ್ಯಕ್ತಿಯೊಬ್ಬರು ಥಳಿಸುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿ ಭಾರಿ ಆಕ್ರೋಶ ಉಂಟು ಮಾಡಿತ್ತು.

ಮುನಾವರ್‌ ಫಾರೂಕಿ ಸ್ಥಳೀಯ ರೆಸ್ಟೋರೆಂಟ್‌ವೊಂದರಲ್ಲಿ ತಮ್ಮ ಪ್ರದರ್ಶನವನ್ನು ಪ್ರಾರಂಭಿಸುವ ಮುನ್ನ ಇಂದೋರ್‌ನ ಬಿಜೆಪಿ ಶಾಸಕ ಮಾಲಿನಿ ಸಿಂಗ್ ಗೌಡ್ ಅವರ ಪುತ್ರ, ಹಿಂದೂ ರಕ್ಷಕ ಸಂಘಟನ್ ಮುಖ್ಯಸ್ಥ ಏಕಲವ್ಯ ಸಿಂಗ್ ಗೌಡ್ ದೂರಿನ ಮೇರೆಗೆ ಪೊಲೀಸರು ಬಂಧಿಸಿದ್ದರು.

ಅವರು ಇತರ ನಾಲ್ವರು ಸಹ ಆರೋಪಿಗಳೊಂದಿಗೆ ಜನವರಿ 2 ರಿಂದ ಜೈಲಿನಲ್ಲಿದ್ದಾರೆ. ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ಜನವರಿ 25 ರಂದು ವಿಚಾರಣೆ ನಡೆಸಿದ್ದು ಆದೇಶವನ್ನು ಕಾಯ್ದಿರಿಸಿತ್ತು. ಇಂದು ಕೊನೆಗೂ ಅವರಿಗೆ ಮಧ್ಯಂತರ ಜಾಮೀನು ಲಭಿಸಿದೆ.


ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಹಾಸ್ಯ ನಟನ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...