Homeಮುಖಪುಟಮಧ್ಯಂತರ ಬಜೆಟ್‌ನಲ್ಲಿ 'ಅದ್ಭುತ ಘೋಷಣೆ’ಗಳು ಇರುವುದಿಲ್ಲ: ನಿರ್ಮಲಾ ಸೀತಾರಾಮನ್

ಮಧ್ಯಂತರ ಬಜೆಟ್‌ನಲ್ಲಿ ‘ಅದ್ಭುತ ಘೋಷಣೆ’ಗಳು ಇರುವುದಿಲ್ಲ: ನಿರ್ಮಲಾ ಸೀತಾರಾಮನ್

- Advertisement -
- Advertisement -

‘ಕೇಂದ್ರ ಸರ್ಕಾರದ ಮುಂಬರುವ ಬಜೆಟ್‌ನಲ್ಲಿ ಯಾವುದೇ ‘ಅದ್ಭುತ ಘೋಷಣೆ’ಗಳು ಇರುವುದಿಲ್ಲ. ಜುಲೈನಲ್ಲಿ ನಿಯಮಿತ ಬಜೆಟ್ ಮಂಡನೆಯಾಗುತ್ತದೆ. ವಿಶೇಷ ಘೋಷಣೆಗಳಿಗಾಗಿ ನೀವು ಅಲ್ಲಿಯವರೆಗೆ ಕಾಯಬೇಕಾಗುತ್ತದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಸಿಐಐನ ಗ್ಲೋಬಲ್ ಎಕನಾಮಿಕ್ ಪಾಲಿಸಿ ಫೋರಂ-2023 ರಲ್ಲಿ ಭಾಗವಹಿಸಿ ಮಾತನಾಡಿದ ನಿರ್ಮಲಾ, ‘ಮುಂದಿನ ಫೆಬ್ರವರಿ 1ರಂದು ಮಂಡಿಸುವ ಬಜೆಟ್ ಕೇವಲ ‘ವೋಟ್ ಆನ್ ಅಕೌಂಟ್’ ಆಗಿರುತ್ತದೆ. ಮುಂದಿನ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೆ ವೆಚ್ಚವನ್ನು ಸರಿದೂಗಿಸುವ ಬಜೆಟ್ ಆಗಿರುವದರಿಂದ ಯಾವುದೇ ಅದ್ಭುತ ಘೋಷಣೆಗಳಿರುವದಿಲ್ಲ. ವಿಶೇಷ ಬಜೆಟ್‌ಗಾಗಿ ನೀವು ಸಾರ್ವತ್ರಿಕ ಚುನಾವಣೆ ಮುಗಿಯುವವರೆಗೆ ಕಾಯಬೇಕಾಗುತ್ತದೆ’ ಎಂದರು.

ಏನಿದು ವೋಟ್ ಆನ್ ಅಕೌಂಟ್?

‘ವೋಟ್ ಆನ್ ಅಕೌಂಟ್’ ಎಂದು ಕರೆಯಲ್ಪಡುವ ಮಧ್ಯಂತರ ಬಜೆಟ್, ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿರುವ ಸರ್ಕಾರಕ್ಕೆ ವೆಚ್ಚಗಳನ್ನು ಕೈಗೊಳ್ಳಲು ಅನುವು ಮಾಡಿಕೊಡುತ್ತದೆ. ಮುಖ್ಯವಾಗಿ ಮಧ್ಯಂತರ ಬಜೆಟ್ ಸರ್ಕಾರದ ವೆಚ್ಚ, ಆದಾಯ, ಹಣಕಾಸಿನ ಕೊರತೆ, ಹಣಕಾಸಿನ ಕಾರ್ಯಕ್ಷಮತೆ ಮತ್ತು ಚುನಾವಣೆವರೆಗಿನ ಅಂದಾಜು ಖರ್ಚುವೆಚ್ಚಗಳನ್ನು ಒಳಗೊಂಡಿದೆ.

ಈ ಮಧ್ಯಂತರ ಬಜೆಟ್‌ನಲ್ಲಿ ಯಾವುದೇ ಪ್ರಮುಖ ನೀತಿಗಳನ್ನು ಘೋಷಣೆ ಮಾಡುವುದಿಲ್ಲ. ಇದರಿಂದ ಸರ್ಕಾರಕ್ಕೂ ಭರವಸೆ ನೀಡುವು ಅನಿವಾರ್ಯತೆ ಇರುವುದಿಲ್ಲ. ಚುನಾವಣಾ ಆಯೋಗದ ನೀತಿ ಸಂಹಿತೆಯ ಪ್ರಕಾರ, ಮಧ್ಯಂತರ ಬಜೆಟ್ ಯಾವುದೇ ಪ್ರಮುಖ ಯೋಜನೆಯನ್ನು ಒಳಗೊಂಡಿರಬಾರದು. ಏಕೆಂದರೆ, ಅವರ ಘೊಷಣೆಗಳು ಆಡಳಿತಾರೂಢ ಸರ್ಕಾರದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರಬಹುದು ಎಂದು ಹೇಳುತ್ತದೆ.

ಸಂಸತ್ತು ಮಧ್ಯಂತರ ಬಜೆಟ್ ಮೂಲಕ ‘ವೋಟ್ ಆನ್ ಅಕೌಂಟ್’ ಅನ್ನು ಅಂಗೀಕರಿಸುತ್ತದೆ. ವೋಟ್-ಆನ್-ಅಕೌಂಟ್ ಅನ್ನು ಪ್ರಸ್ತುತ ಸರ್ಕಾರವು ನೌಕರರ ಸಂಬಳ ಮತ್ತು ಪ್ರಗತಿಯಲ್ಲಿರುವ ಕಾಮಗಾರಿಗಳ ವೆಚ್ಚಗಳಂತಹ ಅಗತ್ಯ ಸರ್ಕಾರಿ ವೆಚ್ಚಗಳಿಗೆ ಸಂಸತ್ತಿನ ಅನುಮೋದನೆಯನ್ನು ಪಡೆಯುವ ಒಂದು ಪ್ರಕ್ರಿಯೆ ಎಂದು ವಿವರಿಸಬಹುದು.

ಇದನ್ನೂ ಓದಿ; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...