Homeಮುಖಪುಟಮಧ್ಯಂತರ ಬಜೆಟ್‌ನಲ್ಲಿ 'ಅದ್ಭುತ ಘೋಷಣೆ’ಗಳು ಇರುವುದಿಲ್ಲ: ನಿರ್ಮಲಾ ಸೀತಾರಾಮನ್

ಮಧ್ಯಂತರ ಬಜೆಟ್‌ನಲ್ಲಿ ‘ಅದ್ಭುತ ಘೋಷಣೆ’ಗಳು ಇರುವುದಿಲ್ಲ: ನಿರ್ಮಲಾ ಸೀತಾರಾಮನ್

- Advertisement -
- Advertisement -

‘ಕೇಂದ್ರ ಸರ್ಕಾರದ ಮುಂಬರುವ ಬಜೆಟ್‌ನಲ್ಲಿ ಯಾವುದೇ ‘ಅದ್ಭುತ ಘೋಷಣೆ’ಗಳು ಇರುವುದಿಲ್ಲ. ಜುಲೈನಲ್ಲಿ ನಿಯಮಿತ ಬಜೆಟ್ ಮಂಡನೆಯಾಗುತ್ತದೆ. ವಿಶೇಷ ಘೋಷಣೆಗಳಿಗಾಗಿ ನೀವು ಅಲ್ಲಿಯವರೆಗೆ ಕಾಯಬೇಕಾಗುತ್ತದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಸಿಐಐನ ಗ್ಲೋಬಲ್ ಎಕನಾಮಿಕ್ ಪಾಲಿಸಿ ಫೋರಂ-2023 ರಲ್ಲಿ ಭಾಗವಹಿಸಿ ಮಾತನಾಡಿದ ನಿರ್ಮಲಾ, ‘ಮುಂದಿನ ಫೆಬ್ರವರಿ 1ರಂದು ಮಂಡಿಸುವ ಬಜೆಟ್ ಕೇವಲ ‘ವೋಟ್ ಆನ್ ಅಕೌಂಟ್’ ಆಗಿರುತ್ತದೆ. ಮುಂದಿನ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೆ ವೆಚ್ಚವನ್ನು ಸರಿದೂಗಿಸುವ ಬಜೆಟ್ ಆಗಿರುವದರಿಂದ ಯಾವುದೇ ಅದ್ಭುತ ಘೋಷಣೆಗಳಿರುವದಿಲ್ಲ. ವಿಶೇಷ ಬಜೆಟ್‌ಗಾಗಿ ನೀವು ಸಾರ್ವತ್ರಿಕ ಚುನಾವಣೆ ಮುಗಿಯುವವರೆಗೆ ಕಾಯಬೇಕಾಗುತ್ತದೆ’ ಎಂದರು.

ಏನಿದು ವೋಟ್ ಆನ್ ಅಕೌಂಟ್?

‘ವೋಟ್ ಆನ್ ಅಕೌಂಟ್’ ಎಂದು ಕರೆಯಲ್ಪಡುವ ಮಧ್ಯಂತರ ಬಜೆಟ್, ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿರುವ ಸರ್ಕಾರಕ್ಕೆ ವೆಚ್ಚಗಳನ್ನು ಕೈಗೊಳ್ಳಲು ಅನುವು ಮಾಡಿಕೊಡುತ್ತದೆ. ಮುಖ್ಯವಾಗಿ ಮಧ್ಯಂತರ ಬಜೆಟ್ ಸರ್ಕಾರದ ವೆಚ್ಚ, ಆದಾಯ, ಹಣಕಾಸಿನ ಕೊರತೆ, ಹಣಕಾಸಿನ ಕಾರ್ಯಕ್ಷಮತೆ ಮತ್ತು ಚುನಾವಣೆವರೆಗಿನ ಅಂದಾಜು ಖರ್ಚುವೆಚ್ಚಗಳನ್ನು ಒಳಗೊಂಡಿದೆ.

ಈ ಮಧ್ಯಂತರ ಬಜೆಟ್‌ನಲ್ಲಿ ಯಾವುದೇ ಪ್ರಮುಖ ನೀತಿಗಳನ್ನು ಘೋಷಣೆ ಮಾಡುವುದಿಲ್ಲ. ಇದರಿಂದ ಸರ್ಕಾರಕ್ಕೂ ಭರವಸೆ ನೀಡುವು ಅನಿವಾರ್ಯತೆ ಇರುವುದಿಲ್ಲ. ಚುನಾವಣಾ ಆಯೋಗದ ನೀತಿ ಸಂಹಿತೆಯ ಪ್ರಕಾರ, ಮಧ್ಯಂತರ ಬಜೆಟ್ ಯಾವುದೇ ಪ್ರಮುಖ ಯೋಜನೆಯನ್ನು ಒಳಗೊಂಡಿರಬಾರದು. ಏಕೆಂದರೆ, ಅವರ ಘೊಷಣೆಗಳು ಆಡಳಿತಾರೂಢ ಸರ್ಕಾರದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರಬಹುದು ಎಂದು ಹೇಳುತ್ತದೆ.

ಸಂಸತ್ತು ಮಧ್ಯಂತರ ಬಜೆಟ್ ಮೂಲಕ ‘ವೋಟ್ ಆನ್ ಅಕೌಂಟ್’ ಅನ್ನು ಅಂಗೀಕರಿಸುತ್ತದೆ. ವೋಟ್-ಆನ್-ಅಕೌಂಟ್ ಅನ್ನು ಪ್ರಸ್ತುತ ಸರ್ಕಾರವು ನೌಕರರ ಸಂಬಳ ಮತ್ತು ಪ್ರಗತಿಯಲ್ಲಿರುವ ಕಾಮಗಾರಿಗಳ ವೆಚ್ಚಗಳಂತಹ ಅಗತ್ಯ ಸರ್ಕಾರಿ ವೆಚ್ಚಗಳಿಗೆ ಸಂಸತ್ತಿನ ಅನುಮೋದನೆಯನ್ನು ಪಡೆಯುವ ಒಂದು ಪ್ರಕ್ರಿಯೆ ಎಂದು ವಿವರಿಸಬಹುದು.

ಇದನ್ನೂ ಓದಿ; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....