Homeಮುಖಪುಟಮಧ್ಯಂತರ ಬಜೆಟ್‌ನಲ್ಲಿ 'ಅದ್ಭುತ ಘೋಷಣೆ’ಗಳು ಇರುವುದಿಲ್ಲ: ನಿರ್ಮಲಾ ಸೀತಾರಾಮನ್

ಮಧ್ಯಂತರ ಬಜೆಟ್‌ನಲ್ಲಿ ‘ಅದ್ಭುತ ಘೋಷಣೆ’ಗಳು ಇರುವುದಿಲ್ಲ: ನಿರ್ಮಲಾ ಸೀತಾರಾಮನ್

- Advertisement -
- Advertisement -

‘ಕೇಂದ್ರ ಸರ್ಕಾರದ ಮುಂಬರುವ ಬಜೆಟ್‌ನಲ್ಲಿ ಯಾವುದೇ ‘ಅದ್ಭುತ ಘೋಷಣೆ’ಗಳು ಇರುವುದಿಲ್ಲ. ಜುಲೈನಲ್ಲಿ ನಿಯಮಿತ ಬಜೆಟ್ ಮಂಡನೆಯಾಗುತ್ತದೆ. ವಿಶೇಷ ಘೋಷಣೆಗಳಿಗಾಗಿ ನೀವು ಅಲ್ಲಿಯವರೆಗೆ ಕಾಯಬೇಕಾಗುತ್ತದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಸಿಐಐನ ಗ್ಲೋಬಲ್ ಎಕನಾಮಿಕ್ ಪಾಲಿಸಿ ಫೋರಂ-2023 ರಲ್ಲಿ ಭಾಗವಹಿಸಿ ಮಾತನಾಡಿದ ನಿರ್ಮಲಾ, ‘ಮುಂದಿನ ಫೆಬ್ರವರಿ 1ರಂದು ಮಂಡಿಸುವ ಬಜೆಟ್ ಕೇವಲ ‘ವೋಟ್ ಆನ್ ಅಕೌಂಟ್’ ಆಗಿರುತ್ತದೆ. ಮುಂದಿನ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೆ ವೆಚ್ಚವನ್ನು ಸರಿದೂಗಿಸುವ ಬಜೆಟ್ ಆಗಿರುವದರಿಂದ ಯಾವುದೇ ಅದ್ಭುತ ಘೋಷಣೆಗಳಿರುವದಿಲ್ಲ. ವಿಶೇಷ ಬಜೆಟ್‌ಗಾಗಿ ನೀವು ಸಾರ್ವತ್ರಿಕ ಚುನಾವಣೆ ಮುಗಿಯುವವರೆಗೆ ಕಾಯಬೇಕಾಗುತ್ತದೆ’ ಎಂದರು.

ಏನಿದು ವೋಟ್ ಆನ್ ಅಕೌಂಟ್?

‘ವೋಟ್ ಆನ್ ಅಕೌಂಟ್’ ಎಂದು ಕರೆಯಲ್ಪಡುವ ಮಧ್ಯಂತರ ಬಜೆಟ್, ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿರುವ ಸರ್ಕಾರಕ್ಕೆ ವೆಚ್ಚಗಳನ್ನು ಕೈಗೊಳ್ಳಲು ಅನುವು ಮಾಡಿಕೊಡುತ್ತದೆ. ಮುಖ್ಯವಾಗಿ ಮಧ್ಯಂತರ ಬಜೆಟ್ ಸರ್ಕಾರದ ವೆಚ್ಚ, ಆದಾಯ, ಹಣಕಾಸಿನ ಕೊರತೆ, ಹಣಕಾಸಿನ ಕಾರ್ಯಕ್ಷಮತೆ ಮತ್ತು ಚುನಾವಣೆವರೆಗಿನ ಅಂದಾಜು ಖರ್ಚುವೆಚ್ಚಗಳನ್ನು ಒಳಗೊಂಡಿದೆ.

ಈ ಮಧ್ಯಂತರ ಬಜೆಟ್‌ನಲ್ಲಿ ಯಾವುದೇ ಪ್ರಮುಖ ನೀತಿಗಳನ್ನು ಘೋಷಣೆ ಮಾಡುವುದಿಲ್ಲ. ಇದರಿಂದ ಸರ್ಕಾರಕ್ಕೂ ಭರವಸೆ ನೀಡುವು ಅನಿವಾರ್ಯತೆ ಇರುವುದಿಲ್ಲ. ಚುನಾವಣಾ ಆಯೋಗದ ನೀತಿ ಸಂಹಿತೆಯ ಪ್ರಕಾರ, ಮಧ್ಯಂತರ ಬಜೆಟ್ ಯಾವುದೇ ಪ್ರಮುಖ ಯೋಜನೆಯನ್ನು ಒಳಗೊಂಡಿರಬಾರದು. ಏಕೆಂದರೆ, ಅವರ ಘೊಷಣೆಗಳು ಆಡಳಿತಾರೂಢ ಸರ್ಕಾರದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರಬಹುದು ಎಂದು ಹೇಳುತ್ತದೆ.

ಸಂಸತ್ತು ಮಧ್ಯಂತರ ಬಜೆಟ್ ಮೂಲಕ ‘ವೋಟ್ ಆನ್ ಅಕೌಂಟ್’ ಅನ್ನು ಅಂಗೀಕರಿಸುತ್ತದೆ. ವೋಟ್-ಆನ್-ಅಕೌಂಟ್ ಅನ್ನು ಪ್ರಸ್ತುತ ಸರ್ಕಾರವು ನೌಕರರ ಸಂಬಳ ಮತ್ತು ಪ್ರಗತಿಯಲ್ಲಿರುವ ಕಾಮಗಾರಿಗಳ ವೆಚ್ಚಗಳಂತಹ ಅಗತ್ಯ ಸರ್ಕಾರಿ ವೆಚ್ಚಗಳಿಗೆ ಸಂಸತ್ತಿನ ಅನುಮೋದನೆಯನ್ನು ಪಡೆಯುವ ಒಂದು ಪ್ರಕ್ರಿಯೆ ಎಂದು ವಿವರಿಸಬಹುದು.

ಇದನ್ನೂ ಓದಿ; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...