Homeಮುಖಪುಟನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿರುವುದನ್ನು ದೃಢಪಡಿಸಿದ ಆಂತರಿಕ ಸಮಿತಿ: ವರದಿ

ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿರುವುದನ್ನು ದೃಢಪಡಿಸಿದ ಆಂತರಿಕ ಸಮಿತಿ: ವರದಿ

- Advertisement -
- Advertisement -

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿರುವ ಆರೋಪ ನಿಜ ಎಂದು ಮೂವರು ನ್ಯಾಯಾಧೀಶರ ಆಂತರಿಕ ಸಮಿತಿಯು ಸಿಜೆಐಗೆ ಸಲ್ಲಿಸಿದ ಗೌಪ್ಯ ವರದಿಯಲ್ಲಿ ದೃಢೀಕರಿಸಿದೆ ಎಂದು ಮಾಧ್ಯಮಗಳು ಬುಧವಾರ ವರದಿ ಮಾಡಿವೆ.

ವರದಿ ಸ್ವೀಕರಿಸಿದ ಸಿಜೆಐ ಸಂಜೀವ್ ಖನ್ನಾ ಅವರು, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಂದ 48 ಗಂಟೆಗಳ ಒಳಗೆ (ಮೇ.9ರ ಒಳಗೆ) ಪ್ರತಿಕ್ರಿಯೆ ಕೇಳಿದ್ದಾರೆ ಎಂದು ವರದಿಗಳು ಹೇಳಿವೆ.

ಈ ಬೆಳವಣಿಗೆಯಿಂದ ನ್ಯಾ. ವರ್ಮಾ ಅವರ ಮುಂದಿರುವ ಮೊದಲ ಆಯ್ಕೆ ರಾಜೀನಾಮೆ ನೀಡುವುದು. ಒಂದು ವೇಳೆ ರಾಜೀನಾಮೆ ನೀಡದಿದ್ದರೆ ಅವರ ವಿರುದ್ಧ ವಾಗ್ದಂಡನೆಗೆ ಶಿಫಾರಸು ಮಾಡುವ ವರದಿಯನ್ನು ರಾಷ್ಟ್ರಪತಿಗಳಿಗೆ ಕಳಿಸಲಾಗುತ್ತದೆ ಎಂದು ನ್ಯಾಯಾಂಗದ ಉನ್ನತ ಮೂಲಗಳು ತಿಳಿಸಿರುವುದಾಗಿ ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

ನ್ಯಾ.ವರ್ಮಾ ಮೇಲಿನ ಆರೋಪದ ಕುರಿತು ವರದಿ ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶೆ ಅನು ಶಿವರಾಮನ್ ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ಮಾರ್ಚ್ 22ರಂದು ಸಿಜೆಐ ರಚಿಸಿದ್ದರು. ಈ ಸಮಿತಿ ಮೇ 4 ರಂದು ಸಿಜೆಐ ಖನ್ನಾ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ.

ಮಾರ್ಚ್ 25ರಂದು ತನಿಖೆ ಆರಂಭಿಸಿದ್ದ ಸಮಿತಿ ಮೇ 3 ರಂದು ವರದಿಯನ್ನು ಅಂತಿಮಗೊಳಿಸಿತ್ತು. ಅದನ್ನು ಮೇ4 ರಂದು ಸಿಜೆಐ ಅವರಿಗೆ ಸಲ್ಲಿಸಲಾಗಿದೆ.

ನ್ಯಾ.ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.

ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.

ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಂಗದ ಪಾರದರ್ಶಕತೆಯ ಬಗ್ಗೆ ದೇಶದಲ್ಲಿ ಚರ್ಚೆಯಾಗಿತ್ತು. ಇದನ್ನು ಸುಪ್ರೀಂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿತ್ತು. ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದರು. ಅದರಂತೆ, ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನ 21 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...