Homeಮುಖಪುಟಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಆಡಳಿತರೂಢ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗುತ್ತಿದೆ. ಇದರ ಪರಿಣಾಮ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ಶಾಸಕ, ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಬೆಂಬಲಿಗರ ನಡುವೆ ಪೋಸ್ಟರ್ ಯುದ್ಧ ಭುಗಿಲೆದ್ದಿದೆ. ಸಿಧು ಅವರನ್ನು ಒಳಗೊಂಡ ಹಲವಾರು ಪೋಸ್ಟರ್‌ಗಳನ್ನು ಅಮರಿಂದರ್ ಅವರ ತವರೂರಾದ ಪಟಿಯಾಲದಲ್ಲಿ ಹಾಕಲಾಗಿದೆ. ಹಾಗೆಯೆ ಮುಖ್ಯಮಂತ್ರಿಯ ಪೋಸ್ಟರ್‌ಗಳು ಅಮೃತಸರದ ಅನೇಕ ಸ್ಥಳಗಳಲ್ಲಿ ಕಾಣಿಸಿಕೊಂಡಿವೆ.

ಪಕ್ಷದ ಆಂತರಿಕ ಬೇಗುದಿ ಶಮನಕ್ಕಾಗಿ ಹೈಕಮಾಂಡ್‌ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿದ್ದ ಕಾಂಗ್ರೆಸ್ ಸಮಿತಿಯು ಪಕ್ಷದ ಶಾಸಕರು ಮತ್ತು ರಾಜ್ಯದ ಮುಖಂಡರ ಜೊತೆ ಕೆಲವು ದಿನಗಳ ಹಿಂದೆ ಸಭೆ ನಡೆಸಿತ್ತು. ಆದರೂ, ಕಾಂಗ್ರೆಸ್‌ನೊಳಗಿನ ಕಿತ್ತಾಟ ಇನ್ನೂ ಬಗೆಹರಿದಿಲ್ಲ.

ಇದನ್ನೂ ಓದಿ: ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ಈ ಇಬ್ಬರೂ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯವನ್ನು ತಾರ್ಕಿಕವಾಗಿ ಅಂತ್ಯಕ್ಕೆ ಕೊಂಡೊಯ್ಯದಿದ್ದರೆ ಮುಂದಿನ ಚುನಾವಣೆಯಲ್ಲಿ ಅಮರಿಂದರ್‌ ನೇತೃತ್ವದ ಸರ್ಕಾರ ಸಾರ್ವಜನಿಕರನ್ನು ಎದುರಿಸುವುದು ಕಷ್ಟವಾಗುತ್ತದೆ ಎಂದು ಪಕ್ಷದ ಒಂದು ವಿಭಾಗವು ಹೇಳುತ್ತಿದೆ.

ಅಲ್ಲದೆ, ಅಧಿಕಾರಕ್ಕೆ ಬರುವ ಮೊದಲು ನೀಡಿದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ವಿದ್ಯುತ್ ಖರೀದಿ ಒಪ್ಪಂದಗಳ ಬಗ್ಗೆ ಮರು ಮಾತುಕತೆ ನಡೆಸುವುದು ಹಾಗೂ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಡ್ರಗ್‌‌ ಮಾಫಿಯಾ ಕುರಿತ ವರದಿಯನ್ನು ಸಾರ್ವಜನಿಕರಿಗೆ ನೀಡುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರವು ವಿಫಲಾವಾಗಿದೆ ಎಂದು ಆ ವಿಭಾಗ ಒಪ್ಪಿಕೊಂಡಿದೆ.

ಅಸಮಾಧಾನಗೊಂಡ ಬಣವು ರಾಜ್ಯದಲ್ಲಿ ಪಕ್ಷದ ನಾಯಕತ್ವವನ್ನು ಬದಲಿಸಲು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾಂಗ್ರೆಸ್‌ನ ಹಿರಿಯ ಮುಖಂಡರೊಬ್ಬರನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ: ಹವಾಮಾನ ಇಲಾಖೆ ಮಾಹಿತಿ

ಇದೀಗ ಬೆಂಬಲಿಗರ ಪೋಸ್ಟರ್ ಯುದ್ಧವು ಪಕ್ಷದೊಳಗಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಪಟಿಯಾಲದಲ್ಲಿ ‘ಇಡೀ ಪಂಜಾಬ್ ಸಿಧು ಜೊತೆ ಇದೆ’ ಎಂದು ಹೇಳುವ ಪೋಸ್ಟರ್‌ಗಳು ಕಾಣಿಸಿಕೊಂಡಿದೆ. ಅವರನ್ನು ‘ರೈತರ ಧ್ವನಿ’ ಎಂದು ಬಣ್ಣಿಸುವ ಪೋಸ್ಟರ್‌ಗಳು ಸಹ ರಾರಾಜಿಸುತ್ತಿವೆ. ಜೊತೆಗೆ ಅಮರೀಂದರ್ ಬೆಂಬಲಿಗರು ಸಿಖ್ಖರ ಪವಿತ್ರ ನಗರವಾದ ಅಮೃತಸರದ ಅನೇಕ ಪ್ರದೇಶಗಳಲ್ಲಿ ‘2022 ರ ಕ್ಯಾಪ್ಟನ್’ ಮತ್ತು ‘ಏಕೈಕ ಕ್ಯಾಪ್ಟನ್’ ಎಂಬ ಸಂದೇಶಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದಾರೆ.

ಈ ಎಲ್ಲದರ ಮಧ್ಯೆ, ಅಮರಿಂದರ್ ಅವರನ್ನು ಟೀಕಿಸಿದ ರಾಜ್ಯ ತಾಂತ್ರಿಕ ಶಿಕ್ಷಣ ಸಚಿವ ಚರಣಜಿತ್ ಸಿಂಗ್ ಚನ್ನಿ ಅವರು ತಮ್ಮದೇ ಆದ ಪೋಸ್ಟರ್ ಅನ್ನು ಹಾಕಿಕೊಂಡಿದ್ದು, ಅದರಲ್ಲಿ “ಪ್ರತಿ ಮನೆಯಲ್ಲೂ ಎಲ್ಲರ ಸಮಸ್ಯೆಗಳನ್ನು ಚನ್ನಿ ಪರಿಹರಿಸುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಪಂಜಾಬ್‌ನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಒಕ್ಕೂಟ ಸರ್ಕಾರದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದೊಂದಿಗೆ (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿದೆ. ಅಕಾಲಿ ದಳವು ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಬಿಜೆಪಿಯೊಂದಿಗೆ ಕಳೆದ ವರ್ಷ ಸಂಬಂಧವನ್ನು ಮುರಿದುಕೊಂಡಿತ್ತು.

ಇದನ್ನೂ ಓದಿ: ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ ಎಂದ ಬಿ.ಎಸ್.ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...