Homeಮುಖಪುಟಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಆಡಳಿತರೂಢ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗುತ್ತಿದೆ. ಇದರ ಪರಿಣಾಮ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ಶಾಸಕ, ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಬೆಂಬಲಿಗರ ನಡುವೆ ಪೋಸ್ಟರ್ ಯುದ್ಧ ಭುಗಿಲೆದ್ದಿದೆ. ಸಿಧು ಅವರನ್ನು ಒಳಗೊಂಡ ಹಲವಾರು ಪೋಸ್ಟರ್‌ಗಳನ್ನು ಅಮರಿಂದರ್ ಅವರ ತವರೂರಾದ ಪಟಿಯಾಲದಲ್ಲಿ ಹಾಕಲಾಗಿದೆ. ಹಾಗೆಯೆ ಮುಖ್ಯಮಂತ್ರಿಯ ಪೋಸ್ಟರ್‌ಗಳು ಅಮೃತಸರದ ಅನೇಕ ಸ್ಥಳಗಳಲ್ಲಿ ಕಾಣಿಸಿಕೊಂಡಿವೆ.

ಪಕ್ಷದ ಆಂತರಿಕ ಬೇಗುದಿ ಶಮನಕ್ಕಾಗಿ ಹೈಕಮಾಂಡ್‌ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿದ್ದ ಕಾಂಗ್ರೆಸ್ ಸಮಿತಿಯು ಪಕ್ಷದ ಶಾಸಕರು ಮತ್ತು ರಾಜ್ಯದ ಮುಖಂಡರ ಜೊತೆ ಕೆಲವು ದಿನಗಳ ಹಿಂದೆ ಸಭೆ ನಡೆಸಿತ್ತು. ಆದರೂ, ಕಾಂಗ್ರೆಸ್‌ನೊಳಗಿನ ಕಿತ್ತಾಟ ಇನ್ನೂ ಬಗೆಹರಿದಿಲ್ಲ.

ಇದನ್ನೂ ಓದಿ: ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ಈ ಇಬ್ಬರೂ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯವನ್ನು ತಾರ್ಕಿಕವಾಗಿ ಅಂತ್ಯಕ್ಕೆ ಕೊಂಡೊಯ್ಯದಿದ್ದರೆ ಮುಂದಿನ ಚುನಾವಣೆಯಲ್ಲಿ ಅಮರಿಂದರ್‌ ನೇತೃತ್ವದ ಸರ್ಕಾರ ಸಾರ್ವಜನಿಕರನ್ನು ಎದುರಿಸುವುದು ಕಷ್ಟವಾಗುತ್ತದೆ ಎಂದು ಪಕ್ಷದ ಒಂದು ವಿಭಾಗವು ಹೇಳುತ್ತಿದೆ.

ಅಲ್ಲದೆ, ಅಧಿಕಾರಕ್ಕೆ ಬರುವ ಮೊದಲು ನೀಡಿದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ವಿದ್ಯುತ್ ಖರೀದಿ ಒಪ್ಪಂದಗಳ ಬಗ್ಗೆ ಮರು ಮಾತುಕತೆ ನಡೆಸುವುದು ಹಾಗೂ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಡ್ರಗ್‌‌ ಮಾಫಿಯಾ ಕುರಿತ ವರದಿಯನ್ನು ಸಾರ್ವಜನಿಕರಿಗೆ ನೀಡುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರವು ವಿಫಲಾವಾಗಿದೆ ಎಂದು ಆ ವಿಭಾಗ ಒಪ್ಪಿಕೊಂಡಿದೆ.

ಅಸಮಾಧಾನಗೊಂಡ ಬಣವು ರಾಜ್ಯದಲ್ಲಿ ಪಕ್ಷದ ನಾಯಕತ್ವವನ್ನು ಬದಲಿಸಲು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾಂಗ್ರೆಸ್‌ನ ಹಿರಿಯ ಮುಖಂಡರೊಬ್ಬರನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ: ಹವಾಮಾನ ಇಲಾಖೆ ಮಾಹಿತಿ

ಇದೀಗ ಬೆಂಬಲಿಗರ ಪೋಸ್ಟರ್ ಯುದ್ಧವು ಪಕ್ಷದೊಳಗಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಪಟಿಯಾಲದಲ್ಲಿ ‘ಇಡೀ ಪಂಜಾಬ್ ಸಿಧು ಜೊತೆ ಇದೆ’ ಎಂದು ಹೇಳುವ ಪೋಸ್ಟರ್‌ಗಳು ಕಾಣಿಸಿಕೊಂಡಿದೆ. ಅವರನ್ನು ‘ರೈತರ ಧ್ವನಿ’ ಎಂದು ಬಣ್ಣಿಸುವ ಪೋಸ್ಟರ್‌ಗಳು ಸಹ ರಾರಾಜಿಸುತ್ತಿವೆ. ಜೊತೆಗೆ ಅಮರೀಂದರ್ ಬೆಂಬಲಿಗರು ಸಿಖ್ಖರ ಪವಿತ್ರ ನಗರವಾದ ಅಮೃತಸರದ ಅನೇಕ ಪ್ರದೇಶಗಳಲ್ಲಿ ‘2022 ರ ಕ್ಯಾಪ್ಟನ್’ ಮತ್ತು ‘ಏಕೈಕ ಕ್ಯಾಪ್ಟನ್’ ಎಂಬ ಸಂದೇಶಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದಾರೆ.

ಈ ಎಲ್ಲದರ ಮಧ್ಯೆ, ಅಮರಿಂದರ್ ಅವರನ್ನು ಟೀಕಿಸಿದ ರಾಜ್ಯ ತಾಂತ್ರಿಕ ಶಿಕ್ಷಣ ಸಚಿವ ಚರಣಜಿತ್ ಸಿಂಗ್ ಚನ್ನಿ ಅವರು ತಮ್ಮದೇ ಆದ ಪೋಸ್ಟರ್ ಅನ್ನು ಹಾಕಿಕೊಂಡಿದ್ದು, ಅದರಲ್ಲಿ “ಪ್ರತಿ ಮನೆಯಲ್ಲೂ ಎಲ್ಲರ ಸಮಸ್ಯೆಗಳನ್ನು ಚನ್ನಿ ಪರಿಹರಿಸುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಪಂಜಾಬ್‌ನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಒಕ್ಕೂಟ ಸರ್ಕಾರದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದೊಂದಿಗೆ (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿದೆ. ಅಕಾಲಿ ದಳವು ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಬಿಜೆಪಿಯೊಂದಿಗೆ ಕಳೆದ ವರ್ಷ ಸಂಬಂಧವನ್ನು ಮುರಿದುಕೊಂಡಿತ್ತು.

ಇದನ್ನೂ ಓದಿ: ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ ಎಂದ ಬಿ.ಎಸ್.ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...