Homeಮುಖಪುಟಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಆಡಳಿತರೂಢ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗುತ್ತಿದೆ. ಇದರ ಪರಿಣಾಮ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ಶಾಸಕ, ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಬೆಂಬಲಿಗರ ನಡುವೆ ಪೋಸ್ಟರ್ ಯುದ್ಧ ಭುಗಿಲೆದ್ದಿದೆ. ಸಿಧು ಅವರನ್ನು ಒಳಗೊಂಡ ಹಲವಾರು ಪೋಸ್ಟರ್‌ಗಳನ್ನು ಅಮರಿಂದರ್ ಅವರ ತವರೂರಾದ ಪಟಿಯಾಲದಲ್ಲಿ ಹಾಕಲಾಗಿದೆ. ಹಾಗೆಯೆ ಮುಖ್ಯಮಂತ್ರಿಯ ಪೋಸ್ಟರ್‌ಗಳು ಅಮೃತಸರದ ಅನೇಕ ಸ್ಥಳಗಳಲ್ಲಿ ಕಾಣಿಸಿಕೊಂಡಿವೆ.

ಪಕ್ಷದ ಆಂತರಿಕ ಬೇಗುದಿ ಶಮನಕ್ಕಾಗಿ ಹೈಕಮಾಂಡ್‌ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿದ್ದ ಕಾಂಗ್ರೆಸ್ ಸಮಿತಿಯು ಪಕ್ಷದ ಶಾಸಕರು ಮತ್ತು ರಾಜ್ಯದ ಮುಖಂಡರ ಜೊತೆ ಕೆಲವು ದಿನಗಳ ಹಿಂದೆ ಸಭೆ ನಡೆಸಿತ್ತು. ಆದರೂ, ಕಾಂಗ್ರೆಸ್‌ನೊಳಗಿನ ಕಿತ್ತಾಟ ಇನ್ನೂ ಬಗೆಹರಿದಿಲ್ಲ.

ಇದನ್ನೂ ಓದಿ: ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ಈ ಇಬ್ಬರೂ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯವನ್ನು ತಾರ್ಕಿಕವಾಗಿ ಅಂತ್ಯಕ್ಕೆ ಕೊಂಡೊಯ್ಯದಿದ್ದರೆ ಮುಂದಿನ ಚುನಾವಣೆಯಲ್ಲಿ ಅಮರಿಂದರ್‌ ನೇತೃತ್ವದ ಸರ್ಕಾರ ಸಾರ್ವಜನಿಕರನ್ನು ಎದುರಿಸುವುದು ಕಷ್ಟವಾಗುತ್ತದೆ ಎಂದು ಪಕ್ಷದ ಒಂದು ವಿಭಾಗವು ಹೇಳುತ್ತಿದೆ.

ಅಲ್ಲದೆ, ಅಧಿಕಾರಕ್ಕೆ ಬರುವ ಮೊದಲು ನೀಡಿದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ವಿದ್ಯುತ್ ಖರೀದಿ ಒಪ್ಪಂದಗಳ ಬಗ್ಗೆ ಮರು ಮಾತುಕತೆ ನಡೆಸುವುದು ಹಾಗೂ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಡ್ರಗ್‌‌ ಮಾಫಿಯಾ ಕುರಿತ ವರದಿಯನ್ನು ಸಾರ್ವಜನಿಕರಿಗೆ ನೀಡುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರವು ವಿಫಲಾವಾಗಿದೆ ಎಂದು ಆ ವಿಭಾಗ ಒಪ್ಪಿಕೊಂಡಿದೆ.

ಅಸಮಾಧಾನಗೊಂಡ ಬಣವು ರಾಜ್ಯದಲ್ಲಿ ಪಕ್ಷದ ನಾಯಕತ್ವವನ್ನು ಬದಲಿಸಲು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾಂಗ್ರೆಸ್‌ನ ಹಿರಿಯ ಮುಖಂಡರೊಬ್ಬರನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ: ಹವಾಮಾನ ಇಲಾಖೆ ಮಾಹಿತಿ

ಇದೀಗ ಬೆಂಬಲಿಗರ ಪೋಸ್ಟರ್ ಯುದ್ಧವು ಪಕ್ಷದೊಳಗಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಪಟಿಯಾಲದಲ್ಲಿ ‘ಇಡೀ ಪಂಜಾಬ್ ಸಿಧು ಜೊತೆ ಇದೆ’ ಎಂದು ಹೇಳುವ ಪೋಸ್ಟರ್‌ಗಳು ಕಾಣಿಸಿಕೊಂಡಿದೆ. ಅವರನ್ನು ‘ರೈತರ ಧ್ವನಿ’ ಎಂದು ಬಣ್ಣಿಸುವ ಪೋಸ್ಟರ್‌ಗಳು ಸಹ ರಾರಾಜಿಸುತ್ತಿವೆ. ಜೊತೆಗೆ ಅಮರೀಂದರ್ ಬೆಂಬಲಿಗರು ಸಿಖ್ಖರ ಪವಿತ್ರ ನಗರವಾದ ಅಮೃತಸರದ ಅನೇಕ ಪ್ರದೇಶಗಳಲ್ಲಿ ‘2022 ರ ಕ್ಯಾಪ್ಟನ್’ ಮತ್ತು ‘ಏಕೈಕ ಕ್ಯಾಪ್ಟನ್’ ಎಂಬ ಸಂದೇಶಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದಾರೆ.

ಈ ಎಲ್ಲದರ ಮಧ್ಯೆ, ಅಮರಿಂದರ್ ಅವರನ್ನು ಟೀಕಿಸಿದ ರಾಜ್ಯ ತಾಂತ್ರಿಕ ಶಿಕ್ಷಣ ಸಚಿವ ಚರಣಜಿತ್ ಸಿಂಗ್ ಚನ್ನಿ ಅವರು ತಮ್ಮದೇ ಆದ ಪೋಸ್ಟರ್ ಅನ್ನು ಹಾಕಿಕೊಂಡಿದ್ದು, ಅದರಲ್ಲಿ “ಪ್ರತಿ ಮನೆಯಲ್ಲೂ ಎಲ್ಲರ ಸಮಸ್ಯೆಗಳನ್ನು ಚನ್ನಿ ಪರಿಹರಿಸುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಪಂಜಾಬ್‌ನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಒಕ್ಕೂಟ ಸರ್ಕಾರದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದೊಂದಿಗೆ (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿದೆ. ಅಕಾಲಿ ದಳವು ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಬಿಜೆಪಿಯೊಂದಿಗೆ ಕಳೆದ ವರ್ಷ ಸಂಬಂಧವನ್ನು ಮುರಿದುಕೊಂಡಿತ್ತು.

ಇದನ್ನೂ ಓದಿ: ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ ಎಂದ ಬಿ.ಎಸ್.ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...