Homeಚಳವಳಿನ್ಯಾಯ ಕೇಳಿದ ಒಳಮೀಸಲಾತಿ ಹೋರಾಟಗಾರರ ಬಂಧನ

ನ್ಯಾಯ ಕೇಳಿದ ಒಳಮೀಸಲಾತಿ ಹೋರಾಟಗಾರರ ಬಂಧನ

- Advertisement -
- Advertisement -

ಒಳಮೀಸಲು ಜಾರಿಗೆ ಒತ್ತಾಯಿಸಿ ಸಿಎಂ ಮನೆಯೆಡೆಗೆ ಪಾದಯಾತ್ರೆ ಹೊರಟ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಮುಖಂಡರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದ್ದು, ಹಲವರನ್ನು ಬಂಧಿಸಲಾಗಿದೆ.

ಒಳಮೀಸಲಾತಿ ಹೋರಾಟಗಾರ ಕರಿಯಪ್ಪ ಗುಡಿಮನಿಯವರ ತಲೆಗೆ ಪೆಟ್ಟಾಗಿದ್ದು ಅವರನ್ನು ಕೆ.ಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ. 62 ವರ್ಷ ವಯಸ್ಸಿನ ಅವರು ನವೆಂಬರ್ 28 ರಿಂದಲೂ ಹರಿಹರದಿಂದ ಪಾದಯಾತ್ರೆಯಲ್ಲಿ ನಡೆದು ಬೆಂಗಳೂರು ತಲುಪಿದ್ದರು. ಅವರ ಮೇಲಿನ ಹಲ್ಲೆ ನಡೆಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಉಳಿದಂತೆ ಅಂಬಣ್ಣ ಅರೋಲಿಕರ್ ಸೇರಿದಂತೆ ನೂರಾರು ಹೋರಾಟಗಾರರನ್ನು ಆಡುಗೋಡಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಇಂದು ಬೆಳಿಗ್ಗೆಯಿಂದಲೇ ಸಾವಿರಾರು ಜನರು ಒಳಮೀಸಲಾತಿ ಜಾರಿಗಾಗಿ ಹೋರಾಟ ಆರಂಭಿಸಿದ್ದರು. ಮಳೆ-ಚಳಿ-ಗಾಳಿ ಲೆಕ್ಕಿಸದೆ ಸದಾಶಿವ ಆಯೋಗದ ವರದಿ ಚರ್ಚೆ ಮತ್ತು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದರು. ಸಚಿವ ವಿ.ಸೋಮಣ್ಣ ಮನವಿ ಆಲಿಸಲು ಬಂದಾಗ ಧಿಕ್ಕಾರ ಕೂಗಿ ಸಿಎಂ ಬೊಮ್ಮಾಯಿಯವರೆ ಬರಬೇಕೆಂದು ಪಟ್ಟು ಹಿಡಿದಿದ್ದರು.

ಸಂಜೆ 6 ಗಂಟೆಯಾದರೂ ಸಹ ಪ್ರತಿಭಟನಾ ಸ್ಥಳಕ್ಕೆ ಸಿಎಂ ಬರಲಿಲ್ಲ. ಪೊಲೀಸರು ಹೋರಾಟ ನಿಲ್ಲಿಸಲು ಮನವಿ ಮಾಡಿದರು. ಆದರೆ ಹೋರಾಟಗಾರರು ಸಿಎಂ ಮನೆ ಕಡೆ ಪಾದಯಾತ್ರೆಗೆ ಮುಂದಾದರು. ಆಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಗುಂಪು ಚದುರಿಸಲು ಲಾಠೀಚಾರ್ಜ್ ಮಾಡಿದ ಪೊಲೀಸರು ಮುಖಂಡರನ್ನು ಬಂಧಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರಿಯಪ್ಪ ಗುಡಿಮನಿಯವರು, “ಸಮುದಾಯ 35 ವರ್ಷದಿಂದ ಒಳಮೀಸಲಾತಿಗಾಗಿ ಹೋರಾಡುತ್ತಿದೆ. 13 ದಿನದಿಂದ ಹರಿಹರದಿಂದ ನಡೆದಿದ್ದೇವೆ. ಇಂದು 50 ಸಾವಿರದಷ್ಟು ಜನ ಸೇರಿದ್ದಾರೆ. ಆದರೆ ನಮ್ಮ ಅಳಲು ಆಲಿಸುವ ಬದಲು ಸರ್ಕಾರ ನಮ್ಮ ಮೇಲೆ ಲಾಠೀ ಚಾರ್ಜ್ ಮಾಡಿದೆ. ನಮ್ಮನ್ನು ಬಂಧಿಸಿದೆ. ಈ ಹಿಂದೆ ಬೆಳಗಾವಿಯಲ್ಲಿಯೂ ಸಹ ನಮ್ಮ ಮೇಲೆ ಲಾಠೀ ಚಾರ್ಜ್ ಮಾಡಿತ್ತು ಬಿಜೆಪಿ ಸರ್ಕಾರ. ನನ್ನ ತಲೆಗೆ ಪಟ್ಟಾಗಿದೆ. ಆಸ್ಪತ್ರೆಯಲ್ಲಿದ್ದೇನೆ. ನನ್ನ ಪ್ರಾಣ ಹೋದರೂ ಚಿಂತೆ ಇಲ್ಲ. ಹೋರಾಟ ನಿಲ್ಲಬಾರದು. ಸಮುದಾಯ ಸೋಲಬಾರದು. ನಾಳೆ ಇನ್ನೂ ಬಿರುಸಿನ ಹೋರಾಟ ನಡೆಯಲಿದೆ. ಎಲ್ಲಾ ಬಂಧುಗಳು ಗೆಲ್ಲುವ ಹೋರಾಟಕ್ಕೆ ಸಿದ್ಧರಾಗೋಣ” ಎಂದರು.

ಬಂಧನಕ್ಕೆ ತೀವ್ರ ಖಂಡನೆ

ಒಳ ಮೀಸಲಾತಿ ಹೋರಾಟಗಾರರನ್ನು ಬಂಧಿಸಿದ ಹೇಡಿ ಸರ್ಕಾರ, ಪೋಲೀಸರ ಮೂಲಕ ದಲಿತರ ರಕ್ತ ಹರಿಸಿದ ಬೊಮ್ಮಾಯಿ ಸರ್ಕಾರ ಎಂದು ಹಲವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಮೊದಲು ವೋಟ್ ಕೊಟ್ಟಿದ್ದೀರಲ್ಲ ಬಿಜೆಪಿಗೆ ಅದಕ್ಕೆ ಹೀಗೆ ಆಗಿದೆ ಬಿಜೆಪಿ ಹಣೆಬರ ಗೊತ್ತಿದ್ದು ನೀವು ದಲಿತರಾಗಿ ಬಿಜೆಪಿಗೆ ವೋಟು ಕೊಡ್ತೀರಲ್ಲ …..ದಲಿತ ವಿರೋಧಿ ಸರಕಾರ ಅಲ್ವಾ ನನ್ನ ಬಂಧುಗಳೇ …. ಕಾಂಗ್ರೆಸ್ ಸರಕಾರ ಇರುವಾಗ ಶಿಸ್ತು ಇತ್ತು….ಸರಕಾರದಲ್ಲಿ ಬರೀ ಕೋಮುಗಲಭೆ ಹಗರಣ ರೌಡಿಸಂ ಬಿಟ್ರೆ ಇನ್ನೇನಿದೆ ಹೇಳಿ ಅಭಿವೃದ್ಧಿಯನ್ನು ಕಂಡಿದ್ದೀರಾ …..ಮುಂದಕ್ಕೆ ಆರಿಸಬೇಡಿ ಇಂತಹ ಸರಕಾರವನ್ನು ದಲಿತರು …..ಇದು ಶ್ರೀಮಂತರ ಸರಕಾರ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...