Homeಮುಖಪುಟಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಹಿರಿಯ ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನದ ಭಾಗವಾಗಿ ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರಾದ ಬೆಟ್ಟಯ್ಯ ಕೋಟೆಯವರ ಸಂದರ್ಶನ ಇಲ್ಲಿದೆ.

ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು? ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ? ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿ ಎಂದರೇನು ಎಂಬುದರ ಅರ್ಥ ಈಗ ಮತ್ತೆ ಹುಡುಕಬೇಕಿದೆ – ಕಾರಣ ಸಂವಿಧಾನಕರ್ತರು ಸಾವಿರಾರು ವರ್ಷಗಳಿಂದ ಜಾತಿ ಕಾರಣದಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದಂತಹ ಅಸ್ಪೃಶ್ಯ ತಳ ಸಮುದಾಯಗಳಿಗೆ ಒಂದಿಷ್ಟು ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ಅವರನ್ನು ಸೇರ್ಪಡೆಗೊಳಿಸುವ ಉದ್ದೇಶವನ್ನು ಮೀಸಲಾತಿ ಹೊಂದಿತ್ತು. ಆದರೆ ಶೇ.3ರಷ್ಟಿರುವ ಮೇಲ್ಜಾತಿಗೆ ಶೇ.10 ಮೀಸಲಾತಿ ಎಂದಾಗ ಆದರ ಅರ್ಥ ಏನು ಎಂಬುದು ಗೊಂದಲಮಯವಾಗಿ ಸಮುದಾಯವನ್ನು ಚಿಂತೆಗೀಡುಮಾಡಿತು. ಇದರ ವಿರುದ್ಧ ಹೋರಾಟ ರೂಪಿಸಬೇಕಾದ ಶೇ.60 ಮಿಕ್ಕಿರುವ ಹಿಂದುಳಿದ ಜಾತಿಗಳ ಮೌನವೂ ಪ್ರಶ್ನಾರ್ಥವಾಯಿತು.

ಜಾತಿ ಕಾರಣಕ್ಕಾಗಿ ಕಡೆಗಣಿಸಲ್ಪಟ್ಟ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಬದುಕು ಕಟ್ಟಿಕೊಳ್ಳುವ ಅವಕಾಶವೇ ಮೀಸಲಾತಿ. ಇಂತಹ ಮೀಸಲಾತಿಗೆ ಒಳಪಡುವ ಜಾತಿ ಉಪಜಾತಿಗಳು ಅಸ್ತಿತ್ವ ಇನ್ನೂ ಅಳಿಸಿಲ್ಲವಾದ್ದರಿಂದ ಒಳಮೀಸಲಾತಿ ಒಪ್ಪಬೇಕಿದೆ. ಮೀಸಲಾತಿ ಮತ್ತು ಒಳಮೀಸಲಾತಿ ಈ ಎರಡರ ತಾಂತ್ರಿಕತೆಯೂ ಒಂದೇ ಆಗಿದೆ.

ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ದಲಿತ ಚಳುವಳಿಯು ಎಲ್ಲಾ ಶೋಷಿತ ಸಮುದಾಯಗಳ ಬಿಡುಗಡೆಗಾಗಿ ಧ್ವನಿ ಎತ್ತಿದ ಸಂಘಟನೆ. ಹುಟ್ಟಿನಿಂದಲೂ ಎಲ್ಲಾ ತಳ ಸಮುದಾಯಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಸಂಘಟನೆಯೇ ಇದು. ಆದರೂ ಅಸ್ಪಶ್ಯ ಮತ್ತು ಸ್ಪೃಶ್ಯರಲ್ಲಿ ಸಾಮಾಜಿಕ ಭಿನ್ನತೆಗಳು ಇರುವಿಕೆಯನ್ನು ಗುರುತಿಸಿಕೊಂಡಿದೆ. ಅಸ್ಪೃಶ್ಯತೆಯ ಅವಮಾನಗಳು ಇನ್ನೂ ಜೀವಂತವಾಗಿರುವುದರಿಂದ ಈ ಎರಡೂ ಸಮುದಾಯಗಳಿಗೂ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ವರ್ಗೀಕರಿಸಬಹುದು ಎಂಬುದು ಒಪ್ಪಿಕೊಳ್ಳಬೇಕಾಗುತ್ತದೆ.

ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಇಂದಿನ ರಾಜಕೀಯವೇ ಓಲೈಕೆ ರಾಜಕಾರಣ. ಇತರರನ್ನು ಅವಲಂಬಿಸಿ ರಾಜಕೀಯ ಮಾಡಬೇಕಾದ ಅನಿವಾರ್ಯತೆ ಸಮುದಾಯಗಳದು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಒತ್ತಾಯಿಸಿದಂತೆ ಅಸ್ಪೃಶ್ಯರಿಗೆ ಪ್ರತ್ಯೇಕ ಮತದಾನ ಪದ್ಧತಿ ಇದ್ದು ಆ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಈಗ ಇಲ್ಲವಾದ್ದರಿಂದ ತಳಸಮುದಾಯಗಳು ರಾಜಕಾರಣಿಗಳಿಂದ ಏನನ್ನೂ ನೀರಿಕ್ಷಿಸಲು ಸಾಧ್ಯವಿಲ್ಲ.

ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರಗಿಡಬೇಕು ಎಂಬ ಕೂಗು ಕೇಳತೊಡಗಿದಾಗ ಒಳಮೀಸಲಾತಿ ಧ್ವನಿ ತಣ್ಣಗಾಗಿ ಅಸ್ಪೃಶ್ಯ ಸಮುದಾಯಗಳು ಒಟ್ಟಾಗತೊಡಗಿದವು. ಈಗ ಇದ್ದಕ್ಕಿದ್ದಂತೆ ಒಳಮೀಸಲಾತಿ ಧ್ವನಿ ಗಟ್ಟಿಯಾಗತೊಡಗಿದ್ದು ಪರಸ್ಪರ ಅನುಮಾನಗಳು ಸೃಷ್ಟಿಯಾಗಿವೆ. ಒಟ್ಟಾರೆ ಸಾರ್ವಜನಿಕ ವಲಯಗಳನ್ನೇ ಖಾಸಗೀಕರಣಗೊಳಿಸುತ್ತಿರುವ ಈ ಸಂದರ್ಭದಲ್ಲಿ ಖಾಸಗಿವಲಯದಲ್ಲಿ ಮೀಸಲಾತಿ ಕಲ್ಪಿಸುವ ಯಾವ ಪ್ರಯತ್ನವೂ ಸರ್ಕಾರಗಳಿಂದ ನಡೆಯುತ್ತಿಲ್ಲ ಬದಲಿಗೆ ಆರ್ಥಿಕ ಸವಲತ್ತು ಒದಗಿಸುವ ಕಾರ್ಯಕ್ರಮವಾಗಿ ಮೀಸಲಾತಿಯನ್ನು ಮೇಲ್ವರ್ಗಗಳಿಗೆ ಕಲ್ಪಿಸಲಾಯಿತು. ಈ ಹೊತ್ತಿನಲ್ಲಿ ಒಳಮೀಸಲಾತಿ ಬಗ್ಗೆ ಇಷ್ಟೊಂದು ದೊಡ್ಡ ಕೂಗು ಮೀಸಲಾತಿಯನ್ನು ವಿರೋಧಿಸುತ್ತಿದ್ದವರಿಂದಲೇ ಬರುತ್ತಿರುವುದು ಅನುಮಾನಕ್ಕೆಡೆಮಾಡಿದೆ.

ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ಆಯೋಗದ ವರದಿ ಬಗ್ಗೆ ಅನೇಕ ಅನುಮಾನಗಳು ಹುಟ್ಟುವುದು ಸಹಜ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

ಜಾತಿ ಅಸಮಾನತೆ ಮತ್ತು ಸಾಮಾಜಿಕ ತಾರತಮ್ಯವನ್ನು ನಿವಾರಿಸುವ ಮೀಸಲಾತಿಯನ್ನು ಬಡತನ ನಿರ್ಮೂಲನ ಕಾರ್ಯಕ್ರಮದಂತೆ ಪ್ರತಿಯೊಂದು ಜಾತಿಗಳ ಜನಸಂಖ್ಯೆ ಆಧರಿಸಿ ಮೇಲ್ಜಾತಿಗಳಿಗೂ ಹಂಚುವುದಾದರೆ ಸಾಮಾಜಿಕ ನ್ಯಾಯ, ಸಮಾನತೆ ಎಂಬುದು ಮರೀಚಿಕೆಯಾಗಿ ಶ್ರೇಣಿಕೃತ ಜಾತಿವ್ಯವಸ್ಥೆಯನ್ನು ಗಟ್ಟಿಗೊಳಿಸುವ ಸಾಧನವಾಗುವುದರಲ್ಲಿ ಸಂಶಯವಿಲ್ಲ.

  • ಬೆಟ್ಟಯ್ಯ ಕೋಟೆ

(ಬೆಟ್ಟಯ್ಯನವರು ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರು. ಎಚ್.ಡಿ.ಕೋಟೆಯ ಬೆಟ್ಟಯ್ಯ, ದಲಿತ ಚಳವಳಿಯಲ್ಲಿ ಸುದೀರ್ಘ ಕಾಲದಿಂದ ಇದ್ದು, ಮೈಸೂರಿನ ದುಡಿಯುವ ಸಮುದಾಯಗಳ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.)


ಇದನ್ನೂ ಓದಿ: ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...