Homeಮುಖಪುಟಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಹಿರಿಯ ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನದ ಭಾಗವಾಗಿ ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರಾದ ಬೆಟ್ಟಯ್ಯ ಕೋಟೆಯವರ ಸಂದರ್ಶನ ಇಲ್ಲಿದೆ.

ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು? ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ? ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿ ಎಂದರೇನು ಎಂಬುದರ ಅರ್ಥ ಈಗ ಮತ್ತೆ ಹುಡುಕಬೇಕಿದೆ – ಕಾರಣ ಸಂವಿಧಾನಕರ್ತರು ಸಾವಿರಾರು ವರ್ಷಗಳಿಂದ ಜಾತಿ ಕಾರಣದಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದಂತಹ ಅಸ್ಪೃಶ್ಯ ತಳ ಸಮುದಾಯಗಳಿಗೆ ಒಂದಿಷ್ಟು ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ಅವರನ್ನು ಸೇರ್ಪಡೆಗೊಳಿಸುವ ಉದ್ದೇಶವನ್ನು ಮೀಸಲಾತಿ ಹೊಂದಿತ್ತು. ಆದರೆ ಶೇ.3ರಷ್ಟಿರುವ ಮೇಲ್ಜಾತಿಗೆ ಶೇ.10 ಮೀಸಲಾತಿ ಎಂದಾಗ ಆದರ ಅರ್ಥ ಏನು ಎಂಬುದು ಗೊಂದಲಮಯವಾಗಿ ಸಮುದಾಯವನ್ನು ಚಿಂತೆಗೀಡುಮಾಡಿತು. ಇದರ ವಿರುದ್ಧ ಹೋರಾಟ ರೂಪಿಸಬೇಕಾದ ಶೇ.60 ಮಿಕ್ಕಿರುವ ಹಿಂದುಳಿದ ಜಾತಿಗಳ ಮೌನವೂ ಪ್ರಶ್ನಾರ್ಥವಾಯಿತು.

ಜಾತಿ ಕಾರಣಕ್ಕಾಗಿ ಕಡೆಗಣಿಸಲ್ಪಟ್ಟ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಬದುಕು ಕಟ್ಟಿಕೊಳ್ಳುವ ಅವಕಾಶವೇ ಮೀಸಲಾತಿ. ಇಂತಹ ಮೀಸಲಾತಿಗೆ ಒಳಪಡುವ ಜಾತಿ ಉಪಜಾತಿಗಳು ಅಸ್ತಿತ್ವ ಇನ್ನೂ ಅಳಿಸಿಲ್ಲವಾದ್ದರಿಂದ ಒಳಮೀಸಲಾತಿ ಒಪ್ಪಬೇಕಿದೆ. ಮೀಸಲಾತಿ ಮತ್ತು ಒಳಮೀಸಲಾತಿ ಈ ಎರಡರ ತಾಂತ್ರಿಕತೆಯೂ ಒಂದೇ ಆಗಿದೆ.

ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ದಲಿತ ಚಳುವಳಿಯು ಎಲ್ಲಾ ಶೋಷಿತ ಸಮುದಾಯಗಳ ಬಿಡುಗಡೆಗಾಗಿ ಧ್ವನಿ ಎತ್ತಿದ ಸಂಘಟನೆ. ಹುಟ್ಟಿನಿಂದಲೂ ಎಲ್ಲಾ ತಳ ಸಮುದಾಯಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಸಂಘಟನೆಯೇ ಇದು. ಆದರೂ ಅಸ್ಪಶ್ಯ ಮತ್ತು ಸ್ಪೃಶ್ಯರಲ್ಲಿ ಸಾಮಾಜಿಕ ಭಿನ್ನತೆಗಳು ಇರುವಿಕೆಯನ್ನು ಗುರುತಿಸಿಕೊಂಡಿದೆ. ಅಸ್ಪೃಶ್ಯತೆಯ ಅವಮಾನಗಳು ಇನ್ನೂ ಜೀವಂತವಾಗಿರುವುದರಿಂದ ಈ ಎರಡೂ ಸಮುದಾಯಗಳಿಗೂ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ವರ್ಗೀಕರಿಸಬಹುದು ಎಂಬುದು ಒಪ್ಪಿಕೊಳ್ಳಬೇಕಾಗುತ್ತದೆ.

ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಇಂದಿನ ರಾಜಕೀಯವೇ ಓಲೈಕೆ ರಾಜಕಾರಣ. ಇತರರನ್ನು ಅವಲಂಬಿಸಿ ರಾಜಕೀಯ ಮಾಡಬೇಕಾದ ಅನಿವಾರ್ಯತೆ ಸಮುದಾಯಗಳದು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಒತ್ತಾಯಿಸಿದಂತೆ ಅಸ್ಪೃಶ್ಯರಿಗೆ ಪ್ರತ್ಯೇಕ ಮತದಾನ ಪದ್ಧತಿ ಇದ್ದು ಆ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಈಗ ಇಲ್ಲವಾದ್ದರಿಂದ ತಳಸಮುದಾಯಗಳು ರಾಜಕಾರಣಿಗಳಿಂದ ಏನನ್ನೂ ನೀರಿಕ್ಷಿಸಲು ಸಾಧ್ಯವಿಲ್ಲ.

ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರಗಿಡಬೇಕು ಎಂಬ ಕೂಗು ಕೇಳತೊಡಗಿದಾಗ ಒಳಮೀಸಲಾತಿ ಧ್ವನಿ ತಣ್ಣಗಾಗಿ ಅಸ್ಪೃಶ್ಯ ಸಮುದಾಯಗಳು ಒಟ್ಟಾಗತೊಡಗಿದವು. ಈಗ ಇದ್ದಕ್ಕಿದ್ದಂತೆ ಒಳಮೀಸಲಾತಿ ಧ್ವನಿ ಗಟ್ಟಿಯಾಗತೊಡಗಿದ್ದು ಪರಸ್ಪರ ಅನುಮಾನಗಳು ಸೃಷ್ಟಿಯಾಗಿವೆ. ಒಟ್ಟಾರೆ ಸಾರ್ವಜನಿಕ ವಲಯಗಳನ್ನೇ ಖಾಸಗೀಕರಣಗೊಳಿಸುತ್ತಿರುವ ಈ ಸಂದರ್ಭದಲ್ಲಿ ಖಾಸಗಿವಲಯದಲ್ಲಿ ಮೀಸಲಾತಿ ಕಲ್ಪಿಸುವ ಯಾವ ಪ್ರಯತ್ನವೂ ಸರ್ಕಾರಗಳಿಂದ ನಡೆಯುತ್ತಿಲ್ಲ ಬದಲಿಗೆ ಆರ್ಥಿಕ ಸವಲತ್ತು ಒದಗಿಸುವ ಕಾರ್ಯಕ್ರಮವಾಗಿ ಮೀಸಲಾತಿಯನ್ನು ಮೇಲ್ವರ್ಗಗಳಿಗೆ ಕಲ್ಪಿಸಲಾಯಿತು. ಈ ಹೊತ್ತಿನಲ್ಲಿ ಒಳಮೀಸಲಾತಿ ಬಗ್ಗೆ ಇಷ್ಟೊಂದು ದೊಡ್ಡ ಕೂಗು ಮೀಸಲಾತಿಯನ್ನು ವಿರೋಧಿಸುತ್ತಿದ್ದವರಿಂದಲೇ ಬರುತ್ತಿರುವುದು ಅನುಮಾನಕ್ಕೆಡೆಮಾಡಿದೆ.

ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ಆಯೋಗದ ವರದಿ ಬಗ್ಗೆ ಅನೇಕ ಅನುಮಾನಗಳು ಹುಟ್ಟುವುದು ಸಹಜ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

ಜಾತಿ ಅಸಮಾನತೆ ಮತ್ತು ಸಾಮಾಜಿಕ ತಾರತಮ್ಯವನ್ನು ನಿವಾರಿಸುವ ಮೀಸಲಾತಿಯನ್ನು ಬಡತನ ನಿರ್ಮೂಲನ ಕಾರ್ಯಕ್ರಮದಂತೆ ಪ್ರತಿಯೊಂದು ಜಾತಿಗಳ ಜನಸಂಖ್ಯೆ ಆಧರಿಸಿ ಮೇಲ್ಜಾತಿಗಳಿಗೂ ಹಂಚುವುದಾದರೆ ಸಾಮಾಜಿಕ ನ್ಯಾಯ, ಸಮಾನತೆ ಎಂಬುದು ಮರೀಚಿಕೆಯಾಗಿ ಶ್ರೇಣಿಕೃತ ಜಾತಿವ್ಯವಸ್ಥೆಯನ್ನು ಗಟ್ಟಿಗೊಳಿಸುವ ಸಾಧನವಾಗುವುದರಲ್ಲಿ ಸಂಶಯವಿಲ್ಲ.

  • ಬೆಟ್ಟಯ್ಯ ಕೋಟೆ

(ಬೆಟ್ಟಯ್ಯನವರು ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರು. ಎಚ್.ಡಿ.ಕೋಟೆಯ ಬೆಟ್ಟಯ್ಯ, ದಲಿತ ಚಳವಳಿಯಲ್ಲಿ ಸುದೀರ್ಘ ಕಾಲದಿಂದ ಇದ್ದು, ಮೈಸೂರಿನ ದುಡಿಯುವ ಸಮುದಾಯಗಳ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.)


ಇದನ್ನೂ ಓದಿ: ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...