Homeಮುಖಪುಟಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಹಿರಿಯ ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನದ ಭಾಗವಾಗಿ ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರಾದ ಬೆಟ್ಟಯ್ಯ ಕೋಟೆಯವರ ಸಂದರ್ಶನ ಇಲ್ಲಿದೆ.

ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು? ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ? ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿ ಎಂದರೇನು ಎಂಬುದರ ಅರ್ಥ ಈಗ ಮತ್ತೆ ಹುಡುಕಬೇಕಿದೆ – ಕಾರಣ ಸಂವಿಧಾನಕರ್ತರು ಸಾವಿರಾರು ವರ್ಷಗಳಿಂದ ಜಾತಿ ಕಾರಣದಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದಂತಹ ಅಸ್ಪೃಶ್ಯ ತಳ ಸಮುದಾಯಗಳಿಗೆ ಒಂದಿಷ್ಟು ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ಅವರನ್ನು ಸೇರ್ಪಡೆಗೊಳಿಸುವ ಉದ್ದೇಶವನ್ನು ಮೀಸಲಾತಿ ಹೊಂದಿತ್ತು. ಆದರೆ ಶೇ.3ರಷ್ಟಿರುವ ಮೇಲ್ಜಾತಿಗೆ ಶೇ.10 ಮೀಸಲಾತಿ ಎಂದಾಗ ಆದರ ಅರ್ಥ ಏನು ಎಂಬುದು ಗೊಂದಲಮಯವಾಗಿ ಸಮುದಾಯವನ್ನು ಚಿಂತೆಗೀಡುಮಾಡಿತು. ಇದರ ವಿರುದ್ಧ ಹೋರಾಟ ರೂಪಿಸಬೇಕಾದ ಶೇ.60 ಮಿಕ್ಕಿರುವ ಹಿಂದುಳಿದ ಜಾತಿಗಳ ಮೌನವೂ ಪ್ರಶ್ನಾರ್ಥವಾಯಿತು.

ಜಾತಿ ಕಾರಣಕ್ಕಾಗಿ ಕಡೆಗಣಿಸಲ್ಪಟ್ಟ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಬದುಕು ಕಟ್ಟಿಕೊಳ್ಳುವ ಅವಕಾಶವೇ ಮೀಸಲಾತಿ. ಇಂತಹ ಮೀಸಲಾತಿಗೆ ಒಳಪಡುವ ಜಾತಿ ಉಪಜಾತಿಗಳು ಅಸ್ತಿತ್ವ ಇನ್ನೂ ಅಳಿಸಿಲ್ಲವಾದ್ದರಿಂದ ಒಳಮೀಸಲಾತಿ ಒಪ್ಪಬೇಕಿದೆ. ಮೀಸಲಾತಿ ಮತ್ತು ಒಳಮೀಸಲಾತಿ ಈ ಎರಡರ ತಾಂತ್ರಿಕತೆಯೂ ಒಂದೇ ಆಗಿದೆ.

ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ದಲಿತ ಚಳುವಳಿಯು ಎಲ್ಲಾ ಶೋಷಿತ ಸಮುದಾಯಗಳ ಬಿಡುಗಡೆಗಾಗಿ ಧ್ವನಿ ಎತ್ತಿದ ಸಂಘಟನೆ. ಹುಟ್ಟಿನಿಂದಲೂ ಎಲ್ಲಾ ತಳ ಸಮುದಾಯಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಸಂಘಟನೆಯೇ ಇದು. ಆದರೂ ಅಸ್ಪಶ್ಯ ಮತ್ತು ಸ್ಪೃಶ್ಯರಲ್ಲಿ ಸಾಮಾಜಿಕ ಭಿನ್ನತೆಗಳು ಇರುವಿಕೆಯನ್ನು ಗುರುತಿಸಿಕೊಂಡಿದೆ. ಅಸ್ಪೃಶ್ಯತೆಯ ಅವಮಾನಗಳು ಇನ್ನೂ ಜೀವಂತವಾಗಿರುವುದರಿಂದ ಈ ಎರಡೂ ಸಮುದಾಯಗಳಿಗೂ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ವರ್ಗೀಕರಿಸಬಹುದು ಎಂಬುದು ಒಪ್ಪಿಕೊಳ್ಳಬೇಕಾಗುತ್ತದೆ.

ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಇಂದಿನ ರಾಜಕೀಯವೇ ಓಲೈಕೆ ರಾಜಕಾರಣ. ಇತರರನ್ನು ಅವಲಂಬಿಸಿ ರಾಜಕೀಯ ಮಾಡಬೇಕಾದ ಅನಿವಾರ್ಯತೆ ಸಮುದಾಯಗಳದು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಒತ್ತಾಯಿಸಿದಂತೆ ಅಸ್ಪೃಶ್ಯರಿಗೆ ಪ್ರತ್ಯೇಕ ಮತದಾನ ಪದ್ಧತಿ ಇದ್ದು ಆ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಈಗ ಇಲ್ಲವಾದ್ದರಿಂದ ತಳಸಮುದಾಯಗಳು ರಾಜಕಾರಣಿಗಳಿಂದ ಏನನ್ನೂ ನೀರಿಕ್ಷಿಸಲು ಸಾಧ್ಯವಿಲ್ಲ.

ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರಗಿಡಬೇಕು ಎಂಬ ಕೂಗು ಕೇಳತೊಡಗಿದಾಗ ಒಳಮೀಸಲಾತಿ ಧ್ವನಿ ತಣ್ಣಗಾಗಿ ಅಸ್ಪೃಶ್ಯ ಸಮುದಾಯಗಳು ಒಟ್ಟಾಗತೊಡಗಿದವು. ಈಗ ಇದ್ದಕ್ಕಿದ್ದಂತೆ ಒಳಮೀಸಲಾತಿ ಧ್ವನಿ ಗಟ್ಟಿಯಾಗತೊಡಗಿದ್ದು ಪರಸ್ಪರ ಅನುಮಾನಗಳು ಸೃಷ್ಟಿಯಾಗಿವೆ. ಒಟ್ಟಾರೆ ಸಾರ್ವಜನಿಕ ವಲಯಗಳನ್ನೇ ಖಾಸಗೀಕರಣಗೊಳಿಸುತ್ತಿರುವ ಈ ಸಂದರ್ಭದಲ್ಲಿ ಖಾಸಗಿವಲಯದಲ್ಲಿ ಮೀಸಲಾತಿ ಕಲ್ಪಿಸುವ ಯಾವ ಪ್ರಯತ್ನವೂ ಸರ್ಕಾರಗಳಿಂದ ನಡೆಯುತ್ತಿಲ್ಲ ಬದಲಿಗೆ ಆರ್ಥಿಕ ಸವಲತ್ತು ಒದಗಿಸುವ ಕಾರ್ಯಕ್ರಮವಾಗಿ ಮೀಸಲಾತಿಯನ್ನು ಮೇಲ್ವರ್ಗಗಳಿಗೆ ಕಲ್ಪಿಸಲಾಯಿತು. ಈ ಹೊತ್ತಿನಲ್ಲಿ ಒಳಮೀಸಲಾತಿ ಬಗ್ಗೆ ಇಷ್ಟೊಂದು ದೊಡ್ಡ ಕೂಗು ಮೀಸಲಾತಿಯನ್ನು ವಿರೋಧಿಸುತ್ತಿದ್ದವರಿಂದಲೇ ಬರುತ್ತಿರುವುದು ಅನುಮಾನಕ್ಕೆಡೆಮಾಡಿದೆ.

ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ಆಯೋಗದ ವರದಿ ಬಗ್ಗೆ ಅನೇಕ ಅನುಮಾನಗಳು ಹುಟ್ಟುವುದು ಸಹಜ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

ಜಾತಿ ಅಸಮಾನತೆ ಮತ್ತು ಸಾಮಾಜಿಕ ತಾರತಮ್ಯವನ್ನು ನಿವಾರಿಸುವ ಮೀಸಲಾತಿಯನ್ನು ಬಡತನ ನಿರ್ಮೂಲನ ಕಾರ್ಯಕ್ರಮದಂತೆ ಪ್ರತಿಯೊಂದು ಜಾತಿಗಳ ಜನಸಂಖ್ಯೆ ಆಧರಿಸಿ ಮೇಲ್ಜಾತಿಗಳಿಗೂ ಹಂಚುವುದಾದರೆ ಸಾಮಾಜಿಕ ನ್ಯಾಯ, ಸಮಾನತೆ ಎಂಬುದು ಮರೀಚಿಕೆಯಾಗಿ ಶ್ರೇಣಿಕೃತ ಜಾತಿವ್ಯವಸ್ಥೆಯನ್ನು ಗಟ್ಟಿಗೊಳಿಸುವ ಸಾಧನವಾಗುವುದರಲ್ಲಿ ಸಂಶಯವಿಲ್ಲ.

  • ಬೆಟ್ಟಯ್ಯ ಕೋಟೆ

(ಬೆಟ್ಟಯ್ಯನವರು ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರು. ಎಚ್.ಡಿ.ಕೋಟೆಯ ಬೆಟ್ಟಯ್ಯ, ದಲಿತ ಚಳವಳಿಯಲ್ಲಿ ಸುದೀರ್ಘ ಕಾಲದಿಂದ ಇದ್ದು, ಮೈಸೂರಿನ ದುಡಿಯುವ ಸಮುದಾಯಗಳ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.)


ಇದನ್ನೂ ಓದಿ: ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....