Homeಮುಖಪುಟಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಹಿರಿಯ ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನದ ಭಾಗವಾಗಿ ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರಾದ ಬೆಟ್ಟಯ್ಯ ಕೋಟೆಯವರ ಸಂದರ್ಶನ ಇಲ್ಲಿದೆ.

ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು? ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ? ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿ ಎಂದರೇನು ಎಂಬುದರ ಅರ್ಥ ಈಗ ಮತ್ತೆ ಹುಡುಕಬೇಕಿದೆ – ಕಾರಣ ಸಂವಿಧಾನಕರ್ತರು ಸಾವಿರಾರು ವರ್ಷಗಳಿಂದ ಜಾತಿ ಕಾರಣದಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದಂತಹ ಅಸ್ಪೃಶ್ಯ ತಳ ಸಮುದಾಯಗಳಿಗೆ ಒಂದಿಷ್ಟು ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ಅವರನ್ನು ಸೇರ್ಪಡೆಗೊಳಿಸುವ ಉದ್ದೇಶವನ್ನು ಮೀಸಲಾತಿ ಹೊಂದಿತ್ತು. ಆದರೆ ಶೇ.3ರಷ್ಟಿರುವ ಮೇಲ್ಜಾತಿಗೆ ಶೇ.10 ಮೀಸಲಾತಿ ಎಂದಾಗ ಆದರ ಅರ್ಥ ಏನು ಎಂಬುದು ಗೊಂದಲಮಯವಾಗಿ ಸಮುದಾಯವನ್ನು ಚಿಂತೆಗೀಡುಮಾಡಿತು. ಇದರ ವಿರುದ್ಧ ಹೋರಾಟ ರೂಪಿಸಬೇಕಾದ ಶೇ.60 ಮಿಕ್ಕಿರುವ ಹಿಂದುಳಿದ ಜಾತಿಗಳ ಮೌನವೂ ಪ್ರಶ್ನಾರ್ಥವಾಯಿತು.

ಜಾತಿ ಕಾರಣಕ್ಕಾಗಿ ಕಡೆಗಣಿಸಲ್ಪಟ್ಟ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಬದುಕು ಕಟ್ಟಿಕೊಳ್ಳುವ ಅವಕಾಶವೇ ಮೀಸಲಾತಿ. ಇಂತಹ ಮೀಸಲಾತಿಗೆ ಒಳಪಡುವ ಜಾತಿ ಉಪಜಾತಿಗಳು ಅಸ್ತಿತ್ವ ಇನ್ನೂ ಅಳಿಸಿಲ್ಲವಾದ್ದರಿಂದ ಒಳಮೀಸಲಾತಿ ಒಪ್ಪಬೇಕಿದೆ. ಮೀಸಲಾತಿ ಮತ್ತು ಒಳಮೀಸಲಾತಿ ಈ ಎರಡರ ತಾಂತ್ರಿಕತೆಯೂ ಒಂದೇ ಆಗಿದೆ.

ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ದಲಿತ ಚಳುವಳಿಯು ಎಲ್ಲಾ ಶೋಷಿತ ಸಮುದಾಯಗಳ ಬಿಡುಗಡೆಗಾಗಿ ಧ್ವನಿ ಎತ್ತಿದ ಸಂಘಟನೆ. ಹುಟ್ಟಿನಿಂದಲೂ ಎಲ್ಲಾ ತಳ ಸಮುದಾಯಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಸಂಘಟನೆಯೇ ಇದು. ಆದರೂ ಅಸ್ಪಶ್ಯ ಮತ್ತು ಸ್ಪೃಶ್ಯರಲ್ಲಿ ಸಾಮಾಜಿಕ ಭಿನ್ನತೆಗಳು ಇರುವಿಕೆಯನ್ನು ಗುರುತಿಸಿಕೊಂಡಿದೆ. ಅಸ್ಪೃಶ್ಯತೆಯ ಅವಮಾನಗಳು ಇನ್ನೂ ಜೀವಂತವಾಗಿರುವುದರಿಂದ ಈ ಎರಡೂ ಸಮುದಾಯಗಳಿಗೂ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ವರ್ಗೀಕರಿಸಬಹುದು ಎಂಬುದು ಒಪ್ಪಿಕೊಳ್ಳಬೇಕಾಗುತ್ತದೆ.

ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಇಂದಿನ ರಾಜಕೀಯವೇ ಓಲೈಕೆ ರಾಜಕಾರಣ. ಇತರರನ್ನು ಅವಲಂಬಿಸಿ ರಾಜಕೀಯ ಮಾಡಬೇಕಾದ ಅನಿವಾರ್ಯತೆ ಸಮುದಾಯಗಳದು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಒತ್ತಾಯಿಸಿದಂತೆ ಅಸ್ಪೃಶ್ಯರಿಗೆ ಪ್ರತ್ಯೇಕ ಮತದಾನ ಪದ್ಧತಿ ಇದ್ದು ಆ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಈಗ ಇಲ್ಲವಾದ್ದರಿಂದ ತಳಸಮುದಾಯಗಳು ರಾಜಕಾರಣಿಗಳಿಂದ ಏನನ್ನೂ ನೀರಿಕ್ಷಿಸಲು ಸಾಧ್ಯವಿಲ್ಲ.

ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರಗಿಡಬೇಕು ಎಂಬ ಕೂಗು ಕೇಳತೊಡಗಿದಾಗ ಒಳಮೀಸಲಾತಿ ಧ್ವನಿ ತಣ್ಣಗಾಗಿ ಅಸ್ಪೃಶ್ಯ ಸಮುದಾಯಗಳು ಒಟ್ಟಾಗತೊಡಗಿದವು. ಈಗ ಇದ್ದಕ್ಕಿದ್ದಂತೆ ಒಳಮೀಸಲಾತಿ ಧ್ವನಿ ಗಟ್ಟಿಯಾಗತೊಡಗಿದ್ದು ಪರಸ್ಪರ ಅನುಮಾನಗಳು ಸೃಷ್ಟಿಯಾಗಿವೆ. ಒಟ್ಟಾರೆ ಸಾರ್ವಜನಿಕ ವಲಯಗಳನ್ನೇ ಖಾಸಗೀಕರಣಗೊಳಿಸುತ್ತಿರುವ ಈ ಸಂದರ್ಭದಲ್ಲಿ ಖಾಸಗಿವಲಯದಲ್ಲಿ ಮೀಸಲಾತಿ ಕಲ್ಪಿಸುವ ಯಾವ ಪ್ರಯತ್ನವೂ ಸರ್ಕಾರಗಳಿಂದ ನಡೆಯುತ್ತಿಲ್ಲ ಬದಲಿಗೆ ಆರ್ಥಿಕ ಸವಲತ್ತು ಒದಗಿಸುವ ಕಾರ್ಯಕ್ರಮವಾಗಿ ಮೀಸಲಾತಿಯನ್ನು ಮೇಲ್ವರ್ಗಗಳಿಗೆ ಕಲ್ಪಿಸಲಾಯಿತು. ಈ ಹೊತ್ತಿನಲ್ಲಿ ಒಳಮೀಸಲಾತಿ ಬಗ್ಗೆ ಇಷ್ಟೊಂದು ದೊಡ್ಡ ಕೂಗು ಮೀಸಲಾತಿಯನ್ನು ವಿರೋಧಿಸುತ್ತಿದ್ದವರಿಂದಲೇ ಬರುತ್ತಿರುವುದು ಅನುಮಾನಕ್ಕೆಡೆಮಾಡಿದೆ.

ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ಆಯೋಗದ ವರದಿ ಬಗ್ಗೆ ಅನೇಕ ಅನುಮಾನಗಳು ಹುಟ್ಟುವುದು ಸಹಜ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

ಜಾತಿ ಅಸಮಾನತೆ ಮತ್ತು ಸಾಮಾಜಿಕ ತಾರತಮ್ಯವನ್ನು ನಿವಾರಿಸುವ ಮೀಸಲಾತಿಯನ್ನು ಬಡತನ ನಿರ್ಮೂಲನ ಕಾರ್ಯಕ್ರಮದಂತೆ ಪ್ರತಿಯೊಂದು ಜಾತಿಗಳ ಜನಸಂಖ್ಯೆ ಆಧರಿಸಿ ಮೇಲ್ಜಾತಿಗಳಿಗೂ ಹಂಚುವುದಾದರೆ ಸಾಮಾಜಿಕ ನ್ಯಾಯ, ಸಮಾನತೆ ಎಂಬುದು ಮರೀಚಿಕೆಯಾಗಿ ಶ್ರೇಣಿಕೃತ ಜಾತಿವ್ಯವಸ್ಥೆಯನ್ನು ಗಟ್ಟಿಗೊಳಿಸುವ ಸಾಧನವಾಗುವುದರಲ್ಲಿ ಸಂಶಯವಿಲ್ಲ.

  • ಬೆಟ್ಟಯ್ಯ ಕೋಟೆ

(ಬೆಟ್ಟಯ್ಯನವರು ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರು. ಎಚ್.ಡಿ.ಕೋಟೆಯ ಬೆಟ್ಟಯ್ಯ, ದಲಿತ ಚಳವಳಿಯಲ್ಲಿ ಸುದೀರ್ಘ ಕಾಲದಿಂದ ಇದ್ದು, ಮೈಸೂರಿನ ದುಡಿಯುವ ಸಮುದಾಯಗಳ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.)


ಇದನ್ನೂ ಓದಿ: ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...