Homeಮುಖಪುಟಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಹಿರಿಯ ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನದ ಭಾಗವಾಗಿ ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರಾದ ಬೆಟ್ಟಯ್ಯ ಕೋಟೆಯವರ ಸಂದರ್ಶನ ಇಲ್ಲಿದೆ.

ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು? ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ? ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿ ಎಂದರೇನು ಎಂಬುದರ ಅರ್ಥ ಈಗ ಮತ್ತೆ ಹುಡುಕಬೇಕಿದೆ – ಕಾರಣ ಸಂವಿಧಾನಕರ್ತರು ಸಾವಿರಾರು ವರ್ಷಗಳಿಂದ ಜಾತಿ ಕಾರಣದಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದಂತಹ ಅಸ್ಪೃಶ್ಯ ತಳ ಸಮುದಾಯಗಳಿಗೆ ಒಂದಿಷ್ಟು ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ಅವರನ್ನು ಸೇರ್ಪಡೆಗೊಳಿಸುವ ಉದ್ದೇಶವನ್ನು ಮೀಸಲಾತಿ ಹೊಂದಿತ್ತು. ಆದರೆ ಶೇ.3ರಷ್ಟಿರುವ ಮೇಲ್ಜಾತಿಗೆ ಶೇ.10 ಮೀಸಲಾತಿ ಎಂದಾಗ ಆದರ ಅರ್ಥ ಏನು ಎಂಬುದು ಗೊಂದಲಮಯವಾಗಿ ಸಮುದಾಯವನ್ನು ಚಿಂತೆಗೀಡುಮಾಡಿತು. ಇದರ ವಿರುದ್ಧ ಹೋರಾಟ ರೂಪಿಸಬೇಕಾದ ಶೇ.60 ಮಿಕ್ಕಿರುವ ಹಿಂದುಳಿದ ಜಾತಿಗಳ ಮೌನವೂ ಪ್ರಶ್ನಾರ್ಥವಾಯಿತು.

ಜಾತಿ ಕಾರಣಕ್ಕಾಗಿ ಕಡೆಗಣಿಸಲ್ಪಟ್ಟ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಬದುಕು ಕಟ್ಟಿಕೊಳ್ಳುವ ಅವಕಾಶವೇ ಮೀಸಲಾತಿ. ಇಂತಹ ಮೀಸಲಾತಿಗೆ ಒಳಪಡುವ ಜಾತಿ ಉಪಜಾತಿಗಳು ಅಸ್ತಿತ್ವ ಇನ್ನೂ ಅಳಿಸಿಲ್ಲವಾದ್ದರಿಂದ ಒಳಮೀಸಲಾತಿ ಒಪ್ಪಬೇಕಿದೆ. ಮೀಸಲಾತಿ ಮತ್ತು ಒಳಮೀಸಲಾತಿ ಈ ಎರಡರ ತಾಂತ್ರಿಕತೆಯೂ ಒಂದೇ ಆಗಿದೆ.

ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ದಲಿತ ಚಳುವಳಿಯು ಎಲ್ಲಾ ಶೋಷಿತ ಸಮುದಾಯಗಳ ಬಿಡುಗಡೆಗಾಗಿ ಧ್ವನಿ ಎತ್ತಿದ ಸಂಘಟನೆ. ಹುಟ್ಟಿನಿಂದಲೂ ಎಲ್ಲಾ ತಳ ಸಮುದಾಯಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಸಂಘಟನೆಯೇ ಇದು. ಆದರೂ ಅಸ್ಪಶ್ಯ ಮತ್ತು ಸ್ಪೃಶ್ಯರಲ್ಲಿ ಸಾಮಾಜಿಕ ಭಿನ್ನತೆಗಳು ಇರುವಿಕೆಯನ್ನು ಗುರುತಿಸಿಕೊಂಡಿದೆ. ಅಸ್ಪೃಶ್ಯತೆಯ ಅವಮಾನಗಳು ಇನ್ನೂ ಜೀವಂತವಾಗಿರುವುದರಿಂದ ಈ ಎರಡೂ ಸಮುದಾಯಗಳಿಗೂ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ವರ್ಗೀಕರಿಸಬಹುದು ಎಂಬುದು ಒಪ್ಪಿಕೊಳ್ಳಬೇಕಾಗುತ್ತದೆ.

ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಇಂದಿನ ರಾಜಕೀಯವೇ ಓಲೈಕೆ ರಾಜಕಾರಣ. ಇತರರನ್ನು ಅವಲಂಬಿಸಿ ರಾಜಕೀಯ ಮಾಡಬೇಕಾದ ಅನಿವಾರ್ಯತೆ ಸಮುದಾಯಗಳದು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಒತ್ತಾಯಿಸಿದಂತೆ ಅಸ್ಪೃಶ್ಯರಿಗೆ ಪ್ರತ್ಯೇಕ ಮತದಾನ ಪದ್ಧತಿ ಇದ್ದು ಆ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಈಗ ಇಲ್ಲವಾದ್ದರಿಂದ ತಳಸಮುದಾಯಗಳು ರಾಜಕಾರಣಿಗಳಿಂದ ಏನನ್ನೂ ನೀರಿಕ್ಷಿಸಲು ಸಾಧ್ಯವಿಲ್ಲ.

ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರಗಿಡಬೇಕು ಎಂಬ ಕೂಗು ಕೇಳತೊಡಗಿದಾಗ ಒಳಮೀಸಲಾತಿ ಧ್ವನಿ ತಣ್ಣಗಾಗಿ ಅಸ್ಪೃಶ್ಯ ಸಮುದಾಯಗಳು ಒಟ್ಟಾಗತೊಡಗಿದವು. ಈಗ ಇದ್ದಕ್ಕಿದ್ದಂತೆ ಒಳಮೀಸಲಾತಿ ಧ್ವನಿ ಗಟ್ಟಿಯಾಗತೊಡಗಿದ್ದು ಪರಸ್ಪರ ಅನುಮಾನಗಳು ಸೃಷ್ಟಿಯಾಗಿವೆ. ಒಟ್ಟಾರೆ ಸಾರ್ವಜನಿಕ ವಲಯಗಳನ್ನೇ ಖಾಸಗೀಕರಣಗೊಳಿಸುತ್ತಿರುವ ಈ ಸಂದರ್ಭದಲ್ಲಿ ಖಾಸಗಿವಲಯದಲ್ಲಿ ಮೀಸಲಾತಿ ಕಲ್ಪಿಸುವ ಯಾವ ಪ್ರಯತ್ನವೂ ಸರ್ಕಾರಗಳಿಂದ ನಡೆಯುತ್ತಿಲ್ಲ ಬದಲಿಗೆ ಆರ್ಥಿಕ ಸವಲತ್ತು ಒದಗಿಸುವ ಕಾರ್ಯಕ್ರಮವಾಗಿ ಮೀಸಲಾತಿಯನ್ನು ಮೇಲ್ವರ್ಗಗಳಿಗೆ ಕಲ್ಪಿಸಲಾಯಿತು. ಈ ಹೊತ್ತಿನಲ್ಲಿ ಒಳಮೀಸಲಾತಿ ಬಗ್ಗೆ ಇಷ್ಟೊಂದು ದೊಡ್ಡ ಕೂಗು ಮೀಸಲಾತಿಯನ್ನು ವಿರೋಧಿಸುತ್ತಿದ್ದವರಿಂದಲೇ ಬರುತ್ತಿರುವುದು ಅನುಮಾನಕ್ಕೆಡೆಮಾಡಿದೆ.

ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ಆಯೋಗದ ವರದಿ ಬಗ್ಗೆ ಅನೇಕ ಅನುಮಾನಗಳು ಹುಟ್ಟುವುದು ಸಹಜ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

ಜಾತಿ ಅಸಮಾನತೆ ಮತ್ತು ಸಾಮಾಜಿಕ ತಾರತಮ್ಯವನ್ನು ನಿವಾರಿಸುವ ಮೀಸಲಾತಿಯನ್ನು ಬಡತನ ನಿರ್ಮೂಲನ ಕಾರ್ಯಕ್ರಮದಂತೆ ಪ್ರತಿಯೊಂದು ಜಾತಿಗಳ ಜನಸಂಖ್ಯೆ ಆಧರಿಸಿ ಮೇಲ್ಜಾತಿಗಳಿಗೂ ಹಂಚುವುದಾದರೆ ಸಾಮಾಜಿಕ ನ್ಯಾಯ, ಸಮಾನತೆ ಎಂಬುದು ಮರೀಚಿಕೆಯಾಗಿ ಶ್ರೇಣಿಕೃತ ಜಾತಿವ್ಯವಸ್ಥೆಯನ್ನು ಗಟ್ಟಿಗೊಳಿಸುವ ಸಾಧನವಾಗುವುದರಲ್ಲಿ ಸಂಶಯವಿಲ್ಲ.

  • ಬೆಟ್ಟಯ್ಯ ಕೋಟೆ

(ಬೆಟ್ಟಯ್ಯನವರು ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರು. ಎಚ್.ಡಿ.ಕೋಟೆಯ ಬೆಟ್ಟಯ್ಯ, ದಲಿತ ಚಳವಳಿಯಲ್ಲಿ ಸುದೀರ್ಘ ಕಾಲದಿಂದ ಇದ್ದು, ಮೈಸೂರಿನ ದುಡಿಯುವ ಸಮುದಾಯಗಳ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.)


ಇದನ್ನೂ ಓದಿ: ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...