Homeಮುಖಪುಟಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಹಿರಿಯ ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನದ ಭಾಗವಾಗಿ ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರಾದ ಬೆಟ್ಟಯ್ಯ ಕೋಟೆಯವರ ಸಂದರ್ಶನ ಇಲ್ಲಿದೆ.

ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು? ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ? ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿ ಎಂದರೇನು ಎಂಬುದರ ಅರ್ಥ ಈಗ ಮತ್ತೆ ಹುಡುಕಬೇಕಿದೆ – ಕಾರಣ ಸಂವಿಧಾನಕರ್ತರು ಸಾವಿರಾರು ವರ್ಷಗಳಿಂದ ಜಾತಿ ಕಾರಣದಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದಂತಹ ಅಸ್ಪೃಶ್ಯ ತಳ ಸಮುದಾಯಗಳಿಗೆ ಒಂದಿಷ್ಟು ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ಅವರನ್ನು ಸೇರ್ಪಡೆಗೊಳಿಸುವ ಉದ್ದೇಶವನ್ನು ಮೀಸಲಾತಿ ಹೊಂದಿತ್ತು. ಆದರೆ ಶೇ.3ರಷ್ಟಿರುವ ಮೇಲ್ಜಾತಿಗೆ ಶೇ.10 ಮೀಸಲಾತಿ ಎಂದಾಗ ಆದರ ಅರ್ಥ ಏನು ಎಂಬುದು ಗೊಂದಲಮಯವಾಗಿ ಸಮುದಾಯವನ್ನು ಚಿಂತೆಗೀಡುಮಾಡಿತು. ಇದರ ವಿರುದ್ಧ ಹೋರಾಟ ರೂಪಿಸಬೇಕಾದ ಶೇ.60 ಮಿಕ್ಕಿರುವ ಹಿಂದುಳಿದ ಜಾತಿಗಳ ಮೌನವೂ ಪ್ರಶ್ನಾರ್ಥವಾಯಿತು.

ಜಾತಿ ಕಾರಣಕ್ಕಾಗಿ ಕಡೆಗಣಿಸಲ್ಪಟ್ಟ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಬದುಕು ಕಟ್ಟಿಕೊಳ್ಳುವ ಅವಕಾಶವೇ ಮೀಸಲಾತಿ. ಇಂತಹ ಮೀಸಲಾತಿಗೆ ಒಳಪಡುವ ಜಾತಿ ಉಪಜಾತಿಗಳು ಅಸ್ತಿತ್ವ ಇನ್ನೂ ಅಳಿಸಿಲ್ಲವಾದ್ದರಿಂದ ಒಳಮೀಸಲಾತಿ ಒಪ್ಪಬೇಕಿದೆ. ಮೀಸಲಾತಿ ಮತ್ತು ಒಳಮೀಸಲಾತಿ ಈ ಎರಡರ ತಾಂತ್ರಿಕತೆಯೂ ಒಂದೇ ಆಗಿದೆ.

ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ದಲಿತ ಚಳುವಳಿಯು ಎಲ್ಲಾ ಶೋಷಿತ ಸಮುದಾಯಗಳ ಬಿಡುಗಡೆಗಾಗಿ ಧ್ವನಿ ಎತ್ತಿದ ಸಂಘಟನೆ. ಹುಟ್ಟಿನಿಂದಲೂ ಎಲ್ಲಾ ತಳ ಸಮುದಾಯಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಸಂಘಟನೆಯೇ ಇದು. ಆದರೂ ಅಸ್ಪಶ್ಯ ಮತ್ತು ಸ್ಪೃಶ್ಯರಲ್ಲಿ ಸಾಮಾಜಿಕ ಭಿನ್ನತೆಗಳು ಇರುವಿಕೆಯನ್ನು ಗುರುತಿಸಿಕೊಂಡಿದೆ. ಅಸ್ಪೃಶ್ಯತೆಯ ಅವಮಾನಗಳು ಇನ್ನೂ ಜೀವಂತವಾಗಿರುವುದರಿಂದ ಈ ಎರಡೂ ಸಮುದಾಯಗಳಿಗೂ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ವರ್ಗೀಕರಿಸಬಹುದು ಎಂಬುದು ಒಪ್ಪಿಕೊಳ್ಳಬೇಕಾಗುತ್ತದೆ.

ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಇಂದಿನ ರಾಜಕೀಯವೇ ಓಲೈಕೆ ರಾಜಕಾರಣ. ಇತರರನ್ನು ಅವಲಂಬಿಸಿ ರಾಜಕೀಯ ಮಾಡಬೇಕಾದ ಅನಿವಾರ್ಯತೆ ಸಮುದಾಯಗಳದು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಒತ್ತಾಯಿಸಿದಂತೆ ಅಸ್ಪೃಶ್ಯರಿಗೆ ಪ್ರತ್ಯೇಕ ಮತದಾನ ಪದ್ಧತಿ ಇದ್ದು ಆ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಈಗ ಇಲ್ಲವಾದ್ದರಿಂದ ತಳಸಮುದಾಯಗಳು ರಾಜಕಾರಣಿಗಳಿಂದ ಏನನ್ನೂ ನೀರಿಕ್ಷಿಸಲು ಸಾಧ್ಯವಿಲ್ಲ.

ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರಗಿಡಬೇಕು ಎಂಬ ಕೂಗು ಕೇಳತೊಡಗಿದಾಗ ಒಳಮೀಸಲಾತಿ ಧ್ವನಿ ತಣ್ಣಗಾಗಿ ಅಸ್ಪೃಶ್ಯ ಸಮುದಾಯಗಳು ಒಟ್ಟಾಗತೊಡಗಿದವು. ಈಗ ಇದ್ದಕ್ಕಿದ್ದಂತೆ ಒಳಮೀಸಲಾತಿ ಧ್ವನಿ ಗಟ್ಟಿಯಾಗತೊಡಗಿದ್ದು ಪರಸ್ಪರ ಅನುಮಾನಗಳು ಸೃಷ್ಟಿಯಾಗಿವೆ. ಒಟ್ಟಾರೆ ಸಾರ್ವಜನಿಕ ವಲಯಗಳನ್ನೇ ಖಾಸಗೀಕರಣಗೊಳಿಸುತ್ತಿರುವ ಈ ಸಂದರ್ಭದಲ್ಲಿ ಖಾಸಗಿವಲಯದಲ್ಲಿ ಮೀಸಲಾತಿ ಕಲ್ಪಿಸುವ ಯಾವ ಪ್ರಯತ್ನವೂ ಸರ್ಕಾರಗಳಿಂದ ನಡೆಯುತ್ತಿಲ್ಲ ಬದಲಿಗೆ ಆರ್ಥಿಕ ಸವಲತ್ತು ಒದಗಿಸುವ ಕಾರ್ಯಕ್ರಮವಾಗಿ ಮೀಸಲಾತಿಯನ್ನು ಮೇಲ್ವರ್ಗಗಳಿಗೆ ಕಲ್ಪಿಸಲಾಯಿತು. ಈ ಹೊತ್ತಿನಲ್ಲಿ ಒಳಮೀಸಲಾತಿ ಬಗ್ಗೆ ಇಷ್ಟೊಂದು ದೊಡ್ಡ ಕೂಗು ಮೀಸಲಾತಿಯನ್ನು ವಿರೋಧಿಸುತ್ತಿದ್ದವರಿಂದಲೇ ಬರುತ್ತಿರುವುದು ಅನುಮಾನಕ್ಕೆಡೆಮಾಡಿದೆ.

ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ಆಯೋಗದ ವರದಿ ಬಗ್ಗೆ ಅನೇಕ ಅನುಮಾನಗಳು ಹುಟ್ಟುವುದು ಸಹಜ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

ಜಾತಿ ಅಸಮಾನತೆ ಮತ್ತು ಸಾಮಾಜಿಕ ತಾರತಮ್ಯವನ್ನು ನಿವಾರಿಸುವ ಮೀಸಲಾತಿಯನ್ನು ಬಡತನ ನಿರ್ಮೂಲನ ಕಾರ್ಯಕ್ರಮದಂತೆ ಪ್ರತಿಯೊಂದು ಜಾತಿಗಳ ಜನಸಂಖ್ಯೆ ಆಧರಿಸಿ ಮೇಲ್ಜಾತಿಗಳಿಗೂ ಹಂಚುವುದಾದರೆ ಸಾಮಾಜಿಕ ನ್ಯಾಯ, ಸಮಾನತೆ ಎಂಬುದು ಮರೀಚಿಕೆಯಾಗಿ ಶ್ರೇಣಿಕೃತ ಜಾತಿವ್ಯವಸ್ಥೆಯನ್ನು ಗಟ್ಟಿಗೊಳಿಸುವ ಸಾಧನವಾಗುವುದರಲ್ಲಿ ಸಂಶಯವಿಲ್ಲ.

  • ಬೆಟ್ಟಯ್ಯ ಕೋಟೆ

(ಬೆಟ್ಟಯ್ಯನವರು ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರು. ಎಚ್.ಡಿ.ಕೋಟೆಯ ಬೆಟ್ಟಯ್ಯ, ದಲಿತ ಚಳವಳಿಯಲ್ಲಿ ಸುದೀರ್ಘ ಕಾಲದಿಂದ ಇದ್ದು, ಮೈಸೂರಿನ ದುಡಿಯುವ ಸಮುದಾಯಗಳ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.)


ಇದನ್ನೂ ಓದಿ: ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....