Homeಮುಖಪುಟಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಹಿರಿಯ ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನದ ಭಾಗವಾಗಿ ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರಾದ ಬೆಟ್ಟಯ್ಯ ಕೋಟೆಯವರ ಸಂದರ್ಶನ ಇಲ್ಲಿದೆ.

ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು? ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ? ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿ ಎಂದರೇನು ಎಂಬುದರ ಅರ್ಥ ಈಗ ಮತ್ತೆ ಹುಡುಕಬೇಕಿದೆ – ಕಾರಣ ಸಂವಿಧಾನಕರ್ತರು ಸಾವಿರಾರು ವರ್ಷಗಳಿಂದ ಜಾತಿ ಕಾರಣದಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದಂತಹ ಅಸ್ಪೃಶ್ಯ ತಳ ಸಮುದಾಯಗಳಿಗೆ ಒಂದಿಷ್ಟು ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ಅವರನ್ನು ಸೇರ್ಪಡೆಗೊಳಿಸುವ ಉದ್ದೇಶವನ್ನು ಮೀಸಲಾತಿ ಹೊಂದಿತ್ತು. ಆದರೆ ಶೇ.3ರಷ್ಟಿರುವ ಮೇಲ್ಜಾತಿಗೆ ಶೇ.10 ಮೀಸಲಾತಿ ಎಂದಾಗ ಆದರ ಅರ್ಥ ಏನು ಎಂಬುದು ಗೊಂದಲಮಯವಾಗಿ ಸಮುದಾಯವನ್ನು ಚಿಂತೆಗೀಡುಮಾಡಿತು. ಇದರ ವಿರುದ್ಧ ಹೋರಾಟ ರೂಪಿಸಬೇಕಾದ ಶೇ.60 ಮಿಕ್ಕಿರುವ ಹಿಂದುಳಿದ ಜಾತಿಗಳ ಮೌನವೂ ಪ್ರಶ್ನಾರ್ಥವಾಯಿತು.

ಜಾತಿ ಕಾರಣಕ್ಕಾಗಿ ಕಡೆಗಣಿಸಲ್ಪಟ್ಟ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಬದುಕು ಕಟ್ಟಿಕೊಳ್ಳುವ ಅವಕಾಶವೇ ಮೀಸಲಾತಿ. ಇಂತಹ ಮೀಸಲಾತಿಗೆ ಒಳಪಡುವ ಜಾತಿ ಉಪಜಾತಿಗಳು ಅಸ್ತಿತ್ವ ಇನ್ನೂ ಅಳಿಸಿಲ್ಲವಾದ್ದರಿಂದ ಒಳಮೀಸಲಾತಿ ಒಪ್ಪಬೇಕಿದೆ. ಮೀಸಲಾತಿ ಮತ್ತು ಒಳಮೀಸಲಾತಿ ಈ ಎರಡರ ತಾಂತ್ರಿಕತೆಯೂ ಒಂದೇ ಆಗಿದೆ.

ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ದಲಿತ ಚಳುವಳಿಯು ಎಲ್ಲಾ ಶೋಷಿತ ಸಮುದಾಯಗಳ ಬಿಡುಗಡೆಗಾಗಿ ಧ್ವನಿ ಎತ್ತಿದ ಸಂಘಟನೆ. ಹುಟ್ಟಿನಿಂದಲೂ ಎಲ್ಲಾ ತಳ ಸಮುದಾಯಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಸಂಘಟನೆಯೇ ಇದು. ಆದರೂ ಅಸ್ಪಶ್ಯ ಮತ್ತು ಸ್ಪೃಶ್ಯರಲ್ಲಿ ಸಾಮಾಜಿಕ ಭಿನ್ನತೆಗಳು ಇರುವಿಕೆಯನ್ನು ಗುರುತಿಸಿಕೊಂಡಿದೆ. ಅಸ್ಪೃಶ್ಯತೆಯ ಅವಮಾನಗಳು ಇನ್ನೂ ಜೀವಂತವಾಗಿರುವುದರಿಂದ ಈ ಎರಡೂ ಸಮುದಾಯಗಳಿಗೂ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ವರ್ಗೀಕರಿಸಬಹುದು ಎಂಬುದು ಒಪ್ಪಿಕೊಳ್ಳಬೇಕಾಗುತ್ತದೆ.

ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಇಂದಿನ ರಾಜಕೀಯವೇ ಓಲೈಕೆ ರಾಜಕಾರಣ. ಇತರರನ್ನು ಅವಲಂಬಿಸಿ ರಾಜಕೀಯ ಮಾಡಬೇಕಾದ ಅನಿವಾರ್ಯತೆ ಸಮುದಾಯಗಳದು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಒತ್ತಾಯಿಸಿದಂತೆ ಅಸ್ಪೃಶ್ಯರಿಗೆ ಪ್ರತ್ಯೇಕ ಮತದಾನ ಪದ್ಧತಿ ಇದ್ದು ಆ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಈಗ ಇಲ್ಲವಾದ್ದರಿಂದ ತಳಸಮುದಾಯಗಳು ರಾಜಕಾರಣಿಗಳಿಂದ ಏನನ್ನೂ ನೀರಿಕ್ಷಿಸಲು ಸಾಧ್ಯವಿಲ್ಲ.

ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರಗಿಡಬೇಕು ಎಂಬ ಕೂಗು ಕೇಳತೊಡಗಿದಾಗ ಒಳಮೀಸಲಾತಿ ಧ್ವನಿ ತಣ್ಣಗಾಗಿ ಅಸ್ಪೃಶ್ಯ ಸಮುದಾಯಗಳು ಒಟ್ಟಾಗತೊಡಗಿದವು. ಈಗ ಇದ್ದಕ್ಕಿದ್ದಂತೆ ಒಳಮೀಸಲಾತಿ ಧ್ವನಿ ಗಟ್ಟಿಯಾಗತೊಡಗಿದ್ದು ಪರಸ್ಪರ ಅನುಮಾನಗಳು ಸೃಷ್ಟಿಯಾಗಿವೆ. ಒಟ್ಟಾರೆ ಸಾರ್ವಜನಿಕ ವಲಯಗಳನ್ನೇ ಖಾಸಗೀಕರಣಗೊಳಿಸುತ್ತಿರುವ ಈ ಸಂದರ್ಭದಲ್ಲಿ ಖಾಸಗಿವಲಯದಲ್ಲಿ ಮೀಸಲಾತಿ ಕಲ್ಪಿಸುವ ಯಾವ ಪ್ರಯತ್ನವೂ ಸರ್ಕಾರಗಳಿಂದ ನಡೆಯುತ್ತಿಲ್ಲ ಬದಲಿಗೆ ಆರ್ಥಿಕ ಸವಲತ್ತು ಒದಗಿಸುವ ಕಾರ್ಯಕ್ರಮವಾಗಿ ಮೀಸಲಾತಿಯನ್ನು ಮೇಲ್ವರ್ಗಗಳಿಗೆ ಕಲ್ಪಿಸಲಾಯಿತು. ಈ ಹೊತ್ತಿನಲ್ಲಿ ಒಳಮೀಸಲಾತಿ ಬಗ್ಗೆ ಇಷ್ಟೊಂದು ದೊಡ್ಡ ಕೂಗು ಮೀಸಲಾತಿಯನ್ನು ವಿರೋಧಿಸುತ್ತಿದ್ದವರಿಂದಲೇ ಬರುತ್ತಿರುವುದು ಅನುಮಾನಕ್ಕೆಡೆಮಾಡಿದೆ.

ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ಆಯೋಗದ ವರದಿ ಬಗ್ಗೆ ಅನೇಕ ಅನುಮಾನಗಳು ಹುಟ್ಟುವುದು ಸಹಜ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

ಜಾತಿ ಅಸಮಾನತೆ ಮತ್ತು ಸಾಮಾಜಿಕ ತಾರತಮ್ಯವನ್ನು ನಿವಾರಿಸುವ ಮೀಸಲಾತಿಯನ್ನು ಬಡತನ ನಿರ್ಮೂಲನ ಕಾರ್ಯಕ್ರಮದಂತೆ ಪ್ರತಿಯೊಂದು ಜಾತಿಗಳ ಜನಸಂಖ್ಯೆ ಆಧರಿಸಿ ಮೇಲ್ಜಾತಿಗಳಿಗೂ ಹಂಚುವುದಾದರೆ ಸಾಮಾಜಿಕ ನ್ಯಾಯ, ಸಮಾನತೆ ಎಂಬುದು ಮರೀಚಿಕೆಯಾಗಿ ಶ್ರೇಣಿಕೃತ ಜಾತಿವ್ಯವಸ್ಥೆಯನ್ನು ಗಟ್ಟಿಗೊಳಿಸುವ ಸಾಧನವಾಗುವುದರಲ್ಲಿ ಸಂಶಯವಿಲ್ಲ.

  • ಬೆಟ್ಟಯ್ಯ ಕೋಟೆ

(ಬೆಟ್ಟಯ್ಯನವರು ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರು. ಎಚ್.ಡಿ.ಕೋಟೆಯ ಬೆಟ್ಟಯ್ಯ, ದಲಿತ ಚಳವಳಿಯಲ್ಲಿ ಸುದೀರ್ಘ ಕಾಲದಿಂದ ಇದ್ದು, ಮೈಸೂರಿನ ದುಡಿಯುವ ಸಮುದಾಯಗಳ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.)


ಇದನ್ನೂ ಓದಿ: ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...