Homeಮುಖಪುಟಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಹಿರಿಯ ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನದ ಭಾಗವಾಗಿ ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರಾದ ಬೆಟ್ಟಯ್ಯ ಕೋಟೆಯವರ ಸಂದರ್ಶನ ಇಲ್ಲಿದೆ.

ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು? ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ? ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿ ಎಂದರೇನು ಎಂಬುದರ ಅರ್ಥ ಈಗ ಮತ್ತೆ ಹುಡುಕಬೇಕಿದೆ – ಕಾರಣ ಸಂವಿಧಾನಕರ್ತರು ಸಾವಿರಾರು ವರ್ಷಗಳಿಂದ ಜಾತಿ ಕಾರಣದಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದಂತಹ ಅಸ್ಪೃಶ್ಯ ತಳ ಸಮುದಾಯಗಳಿಗೆ ಒಂದಿಷ್ಟು ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ಅವರನ್ನು ಸೇರ್ಪಡೆಗೊಳಿಸುವ ಉದ್ದೇಶವನ್ನು ಮೀಸಲಾತಿ ಹೊಂದಿತ್ತು. ಆದರೆ ಶೇ.3ರಷ್ಟಿರುವ ಮೇಲ್ಜಾತಿಗೆ ಶೇ.10 ಮೀಸಲಾತಿ ಎಂದಾಗ ಆದರ ಅರ್ಥ ಏನು ಎಂಬುದು ಗೊಂದಲಮಯವಾಗಿ ಸಮುದಾಯವನ್ನು ಚಿಂತೆಗೀಡುಮಾಡಿತು. ಇದರ ವಿರುದ್ಧ ಹೋರಾಟ ರೂಪಿಸಬೇಕಾದ ಶೇ.60 ಮಿಕ್ಕಿರುವ ಹಿಂದುಳಿದ ಜಾತಿಗಳ ಮೌನವೂ ಪ್ರಶ್ನಾರ್ಥವಾಯಿತು.

ಜಾತಿ ಕಾರಣಕ್ಕಾಗಿ ಕಡೆಗಣಿಸಲ್ಪಟ್ಟ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಬದುಕು ಕಟ್ಟಿಕೊಳ್ಳುವ ಅವಕಾಶವೇ ಮೀಸಲಾತಿ. ಇಂತಹ ಮೀಸಲಾತಿಗೆ ಒಳಪಡುವ ಜಾತಿ ಉಪಜಾತಿಗಳು ಅಸ್ತಿತ್ವ ಇನ್ನೂ ಅಳಿಸಿಲ್ಲವಾದ್ದರಿಂದ ಒಳಮೀಸಲಾತಿ ಒಪ್ಪಬೇಕಿದೆ. ಮೀಸಲಾತಿ ಮತ್ತು ಒಳಮೀಸಲಾತಿ ಈ ಎರಡರ ತಾಂತ್ರಿಕತೆಯೂ ಒಂದೇ ಆಗಿದೆ.

ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ದಲಿತ ಚಳುವಳಿಯು ಎಲ್ಲಾ ಶೋಷಿತ ಸಮುದಾಯಗಳ ಬಿಡುಗಡೆಗಾಗಿ ಧ್ವನಿ ಎತ್ತಿದ ಸಂಘಟನೆ. ಹುಟ್ಟಿನಿಂದಲೂ ಎಲ್ಲಾ ತಳ ಸಮುದಾಯಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಸಂಘಟನೆಯೇ ಇದು. ಆದರೂ ಅಸ್ಪಶ್ಯ ಮತ್ತು ಸ್ಪೃಶ್ಯರಲ್ಲಿ ಸಾಮಾಜಿಕ ಭಿನ್ನತೆಗಳು ಇರುವಿಕೆಯನ್ನು ಗುರುತಿಸಿಕೊಂಡಿದೆ. ಅಸ್ಪೃಶ್ಯತೆಯ ಅವಮಾನಗಳು ಇನ್ನೂ ಜೀವಂತವಾಗಿರುವುದರಿಂದ ಈ ಎರಡೂ ಸಮುದಾಯಗಳಿಗೂ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ವರ್ಗೀಕರಿಸಬಹುದು ಎಂಬುದು ಒಪ್ಪಿಕೊಳ್ಳಬೇಕಾಗುತ್ತದೆ.

ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಇಂದಿನ ರಾಜಕೀಯವೇ ಓಲೈಕೆ ರಾಜಕಾರಣ. ಇತರರನ್ನು ಅವಲಂಬಿಸಿ ರಾಜಕೀಯ ಮಾಡಬೇಕಾದ ಅನಿವಾರ್ಯತೆ ಸಮುದಾಯಗಳದು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಒತ್ತಾಯಿಸಿದಂತೆ ಅಸ್ಪೃಶ್ಯರಿಗೆ ಪ್ರತ್ಯೇಕ ಮತದಾನ ಪದ್ಧತಿ ಇದ್ದು ಆ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಈಗ ಇಲ್ಲವಾದ್ದರಿಂದ ತಳಸಮುದಾಯಗಳು ರಾಜಕಾರಣಿಗಳಿಂದ ಏನನ್ನೂ ನೀರಿಕ್ಷಿಸಲು ಸಾಧ್ಯವಿಲ್ಲ.

ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರಗಿಡಬೇಕು ಎಂಬ ಕೂಗು ಕೇಳತೊಡಗಿದಾಗ ಒಳಮೀಸಲಾತಿ ಧ್ವನಿ ತಣ್ಣಗಾಗಿ ಅಸ್ಪೃಶ್ಯ ಸಮುದಾಯಗಳು ಒಟ್ಟಾಗತೊಡಗಿದವು. ಈಗ ಇದ್ದಕ್ಕಿದ್ದಂತೆ ಒಳಮೀಸಲಾತಿ ಧ್ವನಿ ಗಟ್ಟಿಯಾಗತೊಡಗಿದ್ದು ಪರಸ್ಪರ ಅನುಮಾನಗಳು ಸೃಷ್ಟಿಯಾಗಿವೆ. ಒಟ್ಟಾರೆ ಸಾರ್ವಜನಿಕ ವಲಯಗಳನ್ನೇ ಖಾಸಗೀಕರಣಗೊಳಿಸುತ್ತಿರುವ ಈ ಸಂದರ್ಭದಲ್ಲಿ ಖಾಸಗಿವಲಯದಲ್ಲಿ ಮೀಸಲಾತಿ ಕಲ್ಪಿಸುವ ಯಾವ ಪ್ರಯತ್ನವೂ ಸರ್ಕಾರಗಳಿಂದ ನಡೆಯುತ್ತಿಲ್ಲ ಬದಲಿಗೆ ಆರ್ಥಿಕ ಸವಲತ್ತು ಒದಗಿಸುವ ಕಾರ್ಯಕ್ರಮವಾಗಿ ಮೀಸಲಾತಿಯನ್ನು ಮೇಲ್ವರ್ಗಗಳಿಗೆ ಕಲ್ಪಿಸಲಾಯಿತು. ಈ ಹೊತ್ತಿನಲ್ಲಿ ಒಳಮೀಸಲಾತಿ ಬಗ್ಗೆ ಇಷ್ಟೊಂದು ದೊಡ್ಡ ಕೂಗು ಮೀಸಲಾತಿಯನ್ನು ವಿರೋಧಿಸುತ್ತಿದ್ದವರಿಂದಲೇ ಬರುತ್ತಿರುವುದು ಅನುಮಾನಕ್ಕೆಡೆಮಾಡಿದೆ.

ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ಆಯೋಗದ ವರದಿ ಬಗ್ಗೆ ಅನೇಕ ಅನುಮಾನಗಳು ಹುಟ್ಟುವುದು ಸಹಜ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

ಜಾತಿ ಅಸಮಾನತೆ ಮತ್ತು ಸಾಮಾಜಿಕ ತಾರತಮ್ಯವನ್ನು ನಿವಾರಿಸುವ ಮೀಸಲಾತಿಯನ್ನು ಬಡತನ ನಿರ್ಮೂಲನ ಕಾರ್ಯಕ್ರಮದಂತೆ ಪ್ರತಿಯೊಂದು ಜಾತಿಗಳ ಜನಸಂಖ್ಯೆ ಆಧರಿಸಿ ಮೇಲ್ಜಾತಿಗಳಿಗೂ ಹಂಚುವುದಾದರೆ ಸಾಮಾಜಿಕ ನ್ಯಾಯ, ಸಮಾನತೆ ಎಂಬುದು ಮರೀಚಿಕೆಯಾಗಿ ಶ್ರೇಣಿಕೃತ ಜಾತಿವ್ಯವಸ್ಥೆಯನ್ನು ಗಟ್ಟಿಗೊಳಿಸುವ ಸಾಧನವಾಗುವುದರಲ್ಲಿ ಸಂಶಯವಿಲ್ಲ.

  • ಬೆಟ್ಟಯ್ಯ ಕೋಟೆ

(ಬೆಟ್ಟಯ್ಯನವರು ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರು. ಎಚ್.ಡಿ.ಕೋಟೆಯ ಬೆಟ್ಟಯ್ಯ, ದಲಿತ ಚಳವಳಿಯಲ್ಲಿ ಸುದೀರ್ಘ ಕಾಲದಿಂದ ಇದ್ದು, ಮೈಸೂರಿನ ದುಡಿಯುವ ಸಮುದಾಯಗಳ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.)


ಇದನ್ನೂ ಓದಿ: ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...