Homeಕರ್ನಾಟಕಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

"ಪರಿಶಿಷ್ಟ ಜಾತಿಗಳ ಶಾಶ್ವತ ಆಯೋಗ ರಚನೆ, ಶೀಘ್ರ ನೇಮಕಾತಿ ಪ್ರಕ್ರಿಯೆ ಆರಂಭ, ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನ"

- Advertisement -
- Advertisement -

ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರ ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ, ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ತೀರ್ಮಾನದ ಕುರಿತು ಬುಧವಾರ (ಆ.20) ಅವರು ವಿಧಾನಸಭೆಯಲ್ಲಿ ಹೇಳಿಕೆ ನೀಡಿದರು.

ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್‌ದಾಸ್ ಅವರ ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ 1 ಆಗಸ್ಟ್ 2025ರಂದು ವರದಿ ನೀಡಿತ್ತು. ಆಯೋಗವು ಪರಿಶಿಷ್ಟ ಜಾತಿಗಳಿಗೆ ಸೇರಿದ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿಸಿದೆ. ಶೇ.93ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಈ ಸಮೀಕ್ಷೆಗೆ ಲಭ್ಯವಾಗಿದೆ. ಸಚಿವ ಸಂಪುಟವು ಈ ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿದೆ ಎಂದು ಸಿಎಂ ತಿಳಿಸಿದರು.

19 ಆಗಸ್ಟ್ 2025ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗದ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ. ​ಎಡಗೈ ಸಂಬಂಧಿತ ಜಾತಿಗಳೆಂದು ಆಯೋಗವು ಗುರುತಿಸಿರುವ ಸಮುದಾಯಗಳಿಗೆ ಶೇ.6ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬಂಧಿತ ಜಾತಿಗಳನ್ನು ಎಡಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿದೆ ಎಂಬುವುದನ್ನು ಗಮನಿಸಿದ ಸಚಿವ ಸಂಪುಟವು, ಈ ಜಾತಿಗಳನ್ನು ಬಲಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬಂಧಿತ ಜಾತಿಗಳ ಸಮೂಹಕ್ಕೆ ಶೇ.6 ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಸಿಎಂ ವಿವರಿಸಿದರು.

ಇದರ ಜೊತೆಯಲ್ಲಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪುಗಳಲ್ಲಿನ 4,74,954 ಜನಸಂಖ್ಯೆಯನ್ನು ಎಡಗೈ ಸಂಬಂಧಿತ ಮತ್ತು ಬಲಗೈ ಸಂಬಂಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.

​ಸ್ಪೃಶ್ಯ ಜಾತಿಗಳ ಗುಂಪಿಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಶೇ. 4ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಹಾಗೆಯೇ, 59 ಜಾತಿಗಳ 5,22,099 ಜನಸಂಖ್ಯೆಯನ್ನು ಪ್ರವರ್ಗ-ಎ ಎಂದು ತೀರ್ಮಾನಿಸಿ ಶೇ.1 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಈ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ.5 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ.6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ.6 ಹಾಗೂ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದರು.

ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲಾ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ. ಈ ರೀತಿ ನಿರ್ಧಾರ ಮಾಡುವಾಗ ಸಚಿವ ಸಂಪುಟವು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನಮೂದಿಸಲಾದ ತತ್ವಗಳನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ಹೇಳಿದರು.

​ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ. ​ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ ಎಂದರು.

ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ನಮ್ಮ ಈ ತೀರ್ಮಾನವು ಒಳ ಮೀಸಲಾತಿ ಕುರಿತ ದಶಕಗಳ ಹೋರಾಟಕ್ಕೆ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾವಿಸಿದ್ದೇವೆ. ಅಭಿವೃದ್ಧಿಶೀಲ ರಾಜ್ಯವಾದ ಕರ್ನಾಟಕವು ಸಾಮಾಜಿಕ ನ್ಯಾಯದ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂಬುದನ್ನು ನಮ್ಮ ಸರ್ಕಾರವು ಸಾಬೀತು ಮಾಡಿದೆ ಎಂದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...