Homeಕರ್ನಾಟಕಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

"ಪರಿಶಿಷ್ಟ ಜಾತಿಗಳ ಶಾಶ್ವತ ಆಯೋಗ ರಚನೆ, ಶೀಘ್ರ ನೇಮಕಾತಿ ಪ್ರಕ್ರಿಯೆ ಆರಂಭ, ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನ"

- Advertisement -
- Advertisement -

ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರ ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ, ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ತೀರ್ಮಾನದ ಕುರಿತು ಬುಧವಾರ (ಆ.20) ಅವರು ವಿಧಾನಸಭೆಯಲ್ಲಿ ಹೇಳಿಕೆ ನೀಡಿದರು.

ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್‌ದಾಸ್ ಅವರ ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ 1 ಆಗಸ್ಟ್ 2025ರಂದು ವರದಿ ನೀಡಿತ್ತು. ಆಯೋಗವು ಪರಿಶಿಷ್ಟ ಜಾತಿಗಳಿಗೆ ಸೇರಿದ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿಸಿದೆ. ಶೇ.93ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಈ ಸಮೀಕ್ಷೆಗೆ ಲಭ್ಯವಾಗಿದೆ. ಸಚಿವ ಸಂಪುಟವು ಈ ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿದೆ ಎಂದು ಸಿಎಂ ತಿಳಿಸಿದರು.

19 ಆಗಸ್ಟ್ 2025ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗದ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ. ​ಎಡಗೈ ಸಂಬಂಧಿತ ಜಾತಿಗಳೆಂದು ಆಯೋಗವು ಗುರುತಿಸಿರುವ ಸಮುದಾಯಗಳಿಗೆ ಶೇ.6ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬಂಧಿತ ಜಾತಿಗಳನ್ನು ಎಡಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿದೆ ಎಂಬುವುದನ್ನು ಗಮನಿಸಿದ ಸಚಿವ ಸಂಪುಟವು, ಈ ಜಾತಿಗಳನ್ನು ಬಲಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬಂಧಿತ ಜಾತಿಗಳ ಸಮೂಹಕ್ಕೆ ಶೇ.6 ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಸಿಎಂ ವಿವರಿಸಿದರು.

ಇದರ ಜೊತೆಯಲ್ಲಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪುಗಳಲ್ಲಿನ 4,74,954 ಜನಸಂಖ್ಯೆಯನ್ನು ಎಡಗೈ ಸಂಬಂಧಿತ ಮತ್ತು ಬಲಗೈ ಸಂಬಂಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.

​ಸ್ಪೃಶ್ಯ ಜಾತಿಗಳ ಗುಂಪಿಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಶೇ. 4ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಹಾಗೆಯೇ, 59 ಜಾತಿಗಳ 5,22,099 ಜನಸಂಖ್ಯೆಯನ್ನು ಪ್ರವರ್ಗ-ಎ ಎಂದು ತೀರ್ಮಾನಿಸಿ ಶೇ.1 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಈ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ.5 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ.6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ.6 ಹಾಗೂ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದರು.

ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲಾ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ. ಈ ರೀತಿ ನಿರ್ಧಾರ ಮಾಡುವಾಗ ಸಚಿವ ಸಂಪುಟವು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನಮೂದಿಸಲಾದ ತತ್ವಗಳನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ಹೇಳಿದರು.

​ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ. ​ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ ಎಂದರು.

ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ನಮ್ಮ ಈ ತೀರ್ಮಾನವು ಒಳ ಮೀಸಲಾತಿ ಕುರಿತ ದಶಕಗಳ ಹೋರಾಟಕ್ಕೆ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾವಿಸಿದ್ದೇವೆ. ಅಭಿವೃದ್ಧಿಶೀಲ ರಾಜ್ಯವಾದ ಕರ್ನಾಟಕವು ಸಾಮಾಜಿಕ ನ್ಯಾಯದ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂಬುದನ್ನು ನಮ್ಮ ಸರ್ಕಾರವು ಸಾಬೀತು ಮಾಡಿದೆ ಎಂದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...