Homeಚಳವಳಿಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

ಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಎಂದಿನಂತ ಚುನಾವಣೆಯ ಹೊಸ್ತಿಲಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದೆ. ಆದರೆ ಒಳಮೀಸಲಾತಿ ಜಾರಿ ಎಂದೇ ಸುಳ್ಳು ಪ್ರಚಾರ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ದಲಿತ ಬಾಂಧವರು ಕುಣಿದು ಕುಪ್ಪಳಿಸಿದ್ದಾರೆ. ಸಂತೋಷ. ಆದರೆ ಈ ಒಳಮೀಸಲಾತಿ ಶಿಫಾರಸ್ಸು ಜಾರಿಯಾಗುವುದೇ ಅಥವಾ ಕೇವಲ ಬಿಜೆಪಿ ಗಿಮಿಕ್ ಮಾತ್ರವೇ ಎಂಬುದನ್ನು ತಿಳಿಯಬೇಕಿದೆ.

1. ಒಳಮೀಸಲಾತಿ ವರ್ಗೀಕರಣ ಶಿಫಾರಸ್ಸು ಮಾದಿಗ ಸಮುದಾಯ ನಡೆಸಿದ 30 ವರ್ಷಗಳ ಹೋರಾಟದ ಪ್ರತಿಫಲವೇ ಹೊರತು ಯಾವುದೋ ಒಂದು ಸರ್ಕಾರದ ಸಾಧನೆಯಲ್ಲ.

2. ಜಸ್ಟೀಸ್ ಸದಾಶಿವ ಆಯೋಗ ಮಾಡಿದ ವರ್ಗೀಕರಣವು ಶೇ. 15 ರ ಮೀಸಲಾತಿಯನ್ನು ಆಧರಿಸಿತ್ತು. ಹಲವು ವರ್ಷಗಳ ಕಾಲ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಮಾಡಿ ಎಡಗೈ ಸಂಬಂಧಿತ ಜಾತಿಗಳಿಗೆ 6%, ಬಲಗೈ ಸಂಬಂಧಿತ ಜಾತಿಗಳಿಗೆ 5%, ಸ್ಪೃಶ್ಯ ಜಾತಿಗಳಿಗೆ 3%, ಇತರೆ ಪರಿಶಿಷ್ಟರಿಗೆ 1% ಮೀಸಲಾತಿ ನಿಗಧಿಗೊಳಿಸಿತ್ತು. ಈಗ ಬಿಜೆಪಿ ಸರ್ಕಾರ ಪರಿಶಿಷ್ಟರಿಗೆ ಹೆಚ್ಚಳಗೊಳಿಸಬೇಕೆಂದಿರುವ 17% ಮೀಸಲಾತಿಯಲ್ಲಿ ಮೇಲಿನಂತೆ ಕ್ರಮವಾಗಿ 6%, 5.5%, 4.5% ಮತ್ತು 1% ವರ್ಗೀಕರಿಸಿ ಆದೇಶಿಸಿದೆ. ಇದಕ್ಕೆ‌ಯಾವುದೇ ಸಮೀಕ್ಷೆಗಳು ಆಗಿಲ್ಲ. ಅದಕ್ಕೆ ಪುರಾವೆಗಳನ್ನೂ ಸಹ ಸರ್ಕಾರ ನೀಡಿಲ್ಲ. ಯಾವ ಆಧಾರದಲ್ಲಿ ಸ್ಪೃಶ್ಯ ಜಾತಿಗಳಿಗೆ ಹೆಚ್ಚುವರಿಯಾಗಿ 1.5% ನೀಡಿತೋ ತಿಳಿಯದಾಗಿದೆ. ಈ ಅನ್ಯಾಯವನ್ನು ಮುಚ್ಚಿಡಲು ಹೊಲೆಯರ ಮೂಗಿಗೆ 0.5% ಹೆಚ್ಚುವರಿ ತುಪ್ಪ ಸವರಿದೆ. ಹೆಚ್ಚಳ ಮಾಡುತ್ತೇವೆ ಎಂದಿರುವ 17% ನಲ್ಲಿ ಮಾದಿಗರಿಗೆ ಬಹುದೊಡ್ಡ ಅನ್ಯಾಯವಾಗಿದೆ.

3. ಆಯ್ತು, ಈಗಾಗಿರುವ ವರ್ಗೀಕರಣವನ್ನೇ ಒಪ್ಪಿಕೊಂಡರೂ ಅದು ಜಾರಿಯಾಗುತ್ತದೆಯೇ? ನೋಡೋಣ ಬನ್ನಿ. ಪರಿಶಿಷ್ಟರ ಮೀಸಲಾತಿಯನ್ನು 15% ನಿಂದ 17% ಗೆ ಹೆಚ್ಚಿಸಬೇಕೆಂದು ಆದೇಶ ಮಾಡಿರುವ ಬಿಜೆಪಿ ಸರ್ಕಾರದ ನಡೆ ಸಂಪೂರ್ಣ ವಂಚನೆಯಿಂದ ಕೂಡಿದೆ. ಪರಿಶಿಷ್ಟರಿಗೆ 17% ಗೆ ಮೀಸಲಾತಿ ಹೆಚ್ಚಳವಾದರೆ ಅದು ಸುಪ್ರೀಂ ಕೋರ್ಟ್ ವಿಧಿಸಿರುವ 50% ಮಿತಿ ದಾಟುತ್ತದೆ. ಹಾಗಾಗಿ 17% ಊರ್ಜಿತವಾಗಬೇಕೆಂದರೆ ದೆಹಲಿಯ ಸಂಸತ್ತಿನಲ್ಲಿ ಸಂವಿಧಾನದ 9 ನೇ ಶೆಡ್ಯೂಲಿಗೆ ಕಾಯ್ದೆ ಮಾಡಿ ಸೇರಿಸಬೇಕಿದೆ. ತಮಿಳುನಾಡು ಹೀಗೇ ಜಾರಿ ಮಾಡಿಕೊಂಡದ್ದು. ಮಹಾವಂಚನೆ ಏನೆಂದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವವನ್ನೇ ಕಳಿಸಿಲ್ಲ. ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲವೆಂದು ಹೇಳಿದ್ದಾರೆ. ಅಲ್ಲಿಗೆ 17% ಕತೆ ಮುಗಿಯಿತು. 17% ಗೇ ಮೀಸಲಾತಿ ಹೆಚ್ಚಳವಾಗಲ್ಲ ಎಂದರೆ 17% ವರ್ಗೀಕರಣ ಮಾಡಿರುವ ಒಳಮೀಸಲಾತಿ ಹೇಗೆ ಜಾರಿಯಾಗುತ್ತದೆ? ಸಾಧ್ಯವಿಲ್ಲ.

4. ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರದ ಕೈಯಲ್ಲಿಲ್ಲವೇ? ಹೌದು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವುದು ಅಸಾಧ್ಯ. ಹಿಂದೆ ಪಂಬಾಬ್ ನ ಧರ್ವಿಂದರ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ 5 ಜನ ನ್ಯಾಯಾಧೀಶರ ಪೀಠ ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಗಳಿಗಿಲ್ಲ ಎಂದಿತ್ತು. ಆದರೆ 2020 ರಲ್ಲಿ ಅರುಣ್ ಮಿಶ್ರಾ ಅವರನ್ನು ಒಳಗೊಂಡ 5 ಜನ ನ್ಯಾಯಾಧೀಶರ ಪೀಠವು ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಕ್ಕಿದೆ ಎಂದು ತೀರ್ಪು ನೀಡಿದೆ. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ 5 ಜನ ನ್ಯಾಯಾಧೀಶರು ನೀಡಿದ ತೀರ್ಪನ್ನು ಮತ್ತೊಂದು 5 ಜನ ನ್ಯಾಯಾಧೀಶರ ಪೀಠವು ಅನೂರ್ಜಿತಗೊಳಿಸಲಾರದು. ಹಾಗಾಗಿ 7 ಜನ‌ ನ್ಯಾಯಾಧೀಶರ ಪೀಠದ ಮುಂದೆ ಈ ವಿಷಯ ಹೋಗಬೇಕು. ದುರಂತವೆಂದರೆ ಮೂರು ವರ್ಷವಾದರೂ 7 ಜನ ನ್ಯಾಯಾಧೀಶರ ಪೀಠವನ್ನು ರಚಿಸಿಲ್ಲ.

5. ಹಾಗಾದರೆ ಒಳಮೀಸಲಾತಿ ಜಾರಿ ಅಸಾಧ್ಯವೇ? ಇಲ್ಲ ಸಾಧ್ಯವಾಗುತ್ತದೆ. 2008 ರಲ್ಲಿ ಉಷಾ ಮೆಹ್ರಾ ಸಮಿತಿಯು ಸಂವಿಧಾನ ವಿಧಿ 341 ಕ್ಕೆ 3 ನೇ ತಿದ್ದುಪಡಿ ತರುವ ಮೂಲಕ ಒಳಮೀಸಲಾತಿಯನ್ನು ಜಾರಿಗೆ ತರಬಹುದಾಗಿದೆ ಎಂದು ವರದಿ‌ ನೀಡಿದೆ. EWS ಮಾದರಿಯಲ್ಲಿ ಮೂರೇ ದಿನದಲ್ಲಿ ಈ ಕೆಲಸವನ್ನು ಮೋದಿ ಸರ್ಕಾರ ಮಾಡಬಹುದು. ಆದರೆ ಪ್ರತಿಯೊಂದಕ್ಕೂ ಚುನಾವಣೆಯ ಗಿಮಿಕ್ ಮಾಡುವ ಮೋದಿ ಸರ್ಕಾರ ಇದನ್ನು 2024 ರ ಲೋಕಸಭಾ ಚುನಾವಣೆಯವರೆಗೆ ತಳ್ಳುತ್ತ ಬ್ಲಾಕ್‌ಮೇಲ್ ಮಾಡುತ್ತದೆ. 2024 ಕ್ಕೆ ಮೋದಿ ಸರ್ಕಾರ ಬಂದರೆ ಅಂಬೇಡ್ಕರ್ ಸಂವಿಧಾನವನ್ನೇ ಬದಲಾಯಿಸುವುದು ಖಚಿತ. ಆಗ ಒಳಮೀಸಲಾತಿ ಮಾತ್ರವಲ್ಲ ಮೀಸಲಾತಿಯೇ ಇರುವುದಿಲ್ಲ.

ಒಟ್ಟಾರೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಳಮೀಸಲಾತಿ ಹೋರಾಟಗಾರರಿಗೆ ಅದರಲ್ಲೂ ಮಾದಿಗ ಸಂಬಂಧಿ ಜಾತಿಗಳ ಮೂರು ದಶಕದ ಹೋರಾಟಕ್ಕೆ ಮೋಸ ಮಾಡಿದೆ. ಚುನಾವಣಾ ಹೊಸ್ತಿಲಲ್ಲಿ ಓಟಿನ‌ ಮೇಲೆ ಕಣ್ಣಿಟ್ಟು ಒಳಮೀಸಲಾತಿ ಹೋರಾಟಗಾರರನ್ನು ಕಣ್ಕಟ್ಟಿನ ಮೂಲಕ ವಂಚಿಸಲು ಹವಣಿಸಿದೆ. 2023 ರ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬ್ಲಾಕ್‌ಮೇಲ್ ತಂತ್ರಕ್ಕೆ ಕೈ ಹಾಕಿದೆ. ದಲಿತರೇ ಎಚ್ಚರ. ಸುಳ್ಳು ಹೇಳುವುದು ಹಾಗೂ ಬರಿಗೈ ಮ್ಯಾಜಿಕ್ ಮಾಡುವುದೇ ಬಿಜೆಪಿಯ ಚಾಣಕ್ಯ ತಂತ್ರ.

– ಸಾಕ್ಯ ಸಮಗಾರ

ಇದನ್ನೂ ಓದಿ; ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...