Homeಚಳವಳಿಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

ಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಎಂದಿನಂತ ಚುನಾವಣೆಯ ಹೊಸ್ತಿಲಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದೆ. ಆದರೆ ಒಳಮೀಸಲಾತಿ ಜಾರಿ ಎಂದೇ ಸುಳ್ಳು ಪ್ರಚಾರ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ದಲಿತ ಬಾಂಧವರು ಕುಣಿದು ಕುಪ್ಪಳಿಸಿದ್ದಾರೆ. ಸಂತೋಷ. ಆದರೆ ಈ ಒಳಮೀಸಲಾತಿ ಶಿಫಾರಸ್ಸು ಜಾರಿಯಾಗುವುದೇ ಅಥವಾ ಕೇವಲ ಬಿಜೆಪಿ ಗಿಮಿಕ್ ಮಾತ್ರವೇ ಎಂಬುದನ್ನು ತಿಳಿಯಬೇಕಿದೆ.

1. ಒಳಮೀಸಲಾತಿ ವರ್ಗೀಕರಣ ಶಿಫಾರಸ್ಸು ಮಾದಿಗ ಸಮುದಾಯ ನಡೆಸಿದ 30 ವರ್ಷಗಳ ಹೋರಾಟದ ಪ್ರತಿಫಲವೇ ಹೊರತು ಯಾವುದೋ ಒಂದು ಸರ್ಕಾರದ ಸಾಧನೆಯಲ್ಲ.

2. ಜಸ್ಟೀಸ್ ಸದಾಶಿವ ಆಯೋಗ ಮಾಡಿದ ವರ್ಗೀಕರಣವು ಶೇ. 15 ರ ಮೀಸಲಾತಿಯನ್ನು ಆಧರಿಸಿತ್ತು. ಹಲವು ವರ್ಷಗಳ ಕಾಲ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಮಾಡಿ ಎಡಗೈ ಸಂಬಂಧಿತ ಜಾತಿಗಳಿಗೆ 6%, ಬಲಗೈ ಸಂಬಂಧಿತ ಜಾತಿಗಳಿಗೆ 5%, ಸ್ಪೃಶ್ಯ ಜಾತಿಗಳಿಗೆ 3%, ಇತರೆ ಪರಿಶಿಷ್ಟರಿಗೆ 1% ಮೀಸಲಾತಿ ನಿಗಧಿಗೊಳಿಸಿತ್ತು. ಈಗ ಬಿಜೆಪಿ ಸರ್ಕಾರ ಪರಿಶಿಷ್ಟರಿಗೆ ಹೆಚ್ಚಳಗೊಳಿಸಬೇಕೆಂದಿರುವ 17% ಮೀಸಲಾತಿಯಲ್ಲಿ ಮೇಲಿನಂತೆ ಕ್ರಮವಾಗಿ 6%, 5.5%, 4.5% ಮತ್ತು 1% ವರ್ಗೀಕರಿಸಿ ಆದೇಶಿಸಿದೆ. ಇದಕ್ಕೆ‌ಯಾವುದೇ ಸಮೀಕ್ಷೆಗಳು ಆಗಿಲ್ಲ. ಅದಕ್ಕೆ ಪುರಾವೆಗಳನ್ನೂ ಸಹ ಸರ್ಕಾರ ನೀಡಿಲ್ಲ. ಯಾವ ಆಧಾರದಲ್ಲಿ ಸ್ಪೃಶ್ಯ ಜಾತಿಗಳಿಗೆ ಹೆಚ್ಚುವರಿಯಾಗಿ 1.5% ನೀಡಿತೋ ತಿಳಿಯದಾಗಿದೆ. ಈ ಅನ್ಯಾಯವನ್ನು ಮುಚ್ಚಿಡಲು ಹೊಲೆಯರ ಮೂಗಿಗೆ 0.5% ಹೆಚ್ಚುವರಿ ತುಪ್ಪ ಸವರಿದೆ. ಹೆಚ್ಚಳ ಮಾಡುತ್ತೇವೆ ಎಂದಿರುವ 17% ನಲ್ಲಿ ಮಾದಿಗರಿಗೆ ಬಹುದೊಡ್ಡ ಅನ್ಯಾಯವಾಗಿದೆ.

3. ಆಯ್ತು, ಈಗಾಗಿರುವ ವರ್ಗೀಕರಣವನ್ನೇ ಒಪ್ಪಿಕೊಂಡರೂ ಅದು ಜಾರಿಯಾಗುತ್ತದೆಯೇ? ನೋಡೋಣ ಬನ್ನಿ. ಪರಿಶಿಷ್ಟರ ಮೀಸಲಾತಿಯನ್ನು 15% ನಿಂದ 17% ಗೆ ಹೆಚ್ಚಿಸಬೇಕೆಂದು ಆದೇಶ ಮಾಡಿರುವ ಬಿಜೆಪಿ ಸರ್ಕಾರದ ನಡೆ ಸಂಪೂರ್ಣ ವಂಚನೆಯಿಂದ ಕೂಡಿದೆ. ಪರಿಶಿಷ್ಟರಿಗೆ 17% ಗೆ ಮೀಸಲಾತಿ ಹೆಚ್ಚಳವಾದರೆ ಅದು ಸುಪ್ರೀಂ ಕೋರ್ಟ್ ವಿಧಿಸಿರುವ 50% ಮಿತಿ ದಾಟುತ್ತದೆ. ಹಾಗಾಗಿ 17% ಊರ್ಜಿತವಾಗಬೇಕೆಂದರೆ ದೆಹಲಿಯ ಸಂಸತ್ತಿನಲ್ಲಿ ಸಂವಿಧಾನದ 9 ನೇ ಶೆಡ್ಯೂಲಿಗೆ ಕಾಯ್ದೆ ಮಾಡಿ ಸೇರಿಸಬೇಕಿದೆ. ತಮಿಳುನಾಡು ಹೀಗೇ ಜಾರಿ ಮಾಡಿಕೊಂಡದ್ದು. ಮಹಾವಂಚನೆ ಏನೆಂದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವವನ್ನೇ ಕಳಿಸಿಲ್ಲ. ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲವೆಂದು ಹೇಳಿದ್ದಾರೆ. ಅಲ್ಲಿಗೆ 17% ಕತೆ ಮುಗಿಯಿತು. 17% ಗೇ ಮೀಸಲಾತಿ ಹೆಚ್ಚಳವಾಗಲ್ಲ ಎಂದರೆ 17% ವರ್ಗೀಕರಣ ಮಾಡಿರುವ ಒಳಮೀಸಲಾತಿ ಹೇಗೆ ಜಾರಿಯಾಗುತ್ತದೆ? ಸಾಧ್ಯವಿಲ್ಲ.

4. ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರದ ಕೈಯಲ್ಲಿಲ್ಲವೇ? ಹೌದು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವುದು ಅಸಾಧ್ಯ. ಹಿಂದೆ ಪಂಬಾಬ್ ನ ಧರ್ವಿಂದರ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ 5 ಜನ ನ್ಯಾಯಾಧೀಶರ ಪೀಠ ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಗಳಿಗಿಲ್ಲ ಎಂದಿತ್ತು. ಆದರೆ 2020 ರಲ್ಲಿ ಅರುಣ್ ಮಿಶ್ರಾ ಅವರನ್ನು ಒಳಗೊಂಡ 5 ಜನ ನ್ಯಾಯಾಧೀಶರ ಪೀಠವು ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಕ್ಕಿದೆ ಎಂದು ತೀರ್ಪು ನೀಡಿದೆ. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ 5 ಜನ ನ್ಯಾಯಾಧೀಶರು ನೀಡಿದ ತೀರ್ಪನ್ನು ಮತ್ತೊಂದು 5 ಜನ ನ್ಯಾಯಾಧೀಶರ ಪೀಠವು ಅನೂರ್ಜಿತಗೊಳಿಸಲಾರದು. ಹಾಗಾಗಿ 7 ಜನ‌ ನ್ಯಾಯಾಧೀಶರ ಪೀಠದ ಮುಂದೆ ಈ ವಿಷಯ ಹೋಗಬೇಕು. ದುರಂತವೆಂದರೆ ಮೂರು ವರ್ಷವಾದರೂ 7 ಜನ ನ್ಯಾಯಾಧೀಶರ ಪೀಠವನ್ನು ರಚಿಸಿಲ್ಲ.

5. ಹಾಗಾದರೆ ಒಳಮೀಸಲಾತಿ ಜಾರಿ ಅಸಾಧ್ಯವೇ? ಇಲ್ಲ ಸಾಧ್ಯವಾಗುತ್ತದೆ. 2008 ರಲ್ಲಿ ಉಷಾ ಮೆಹ್ರಾ ಸಮಿತಿಯು ಸಂವಿಧಾನ ವಿಧಿ 341 ಕ್ಕೆ 3 ನೇ ತಿದ್ದುಪಡಿ ತರುವ ಮೂಲಕ ಒಳಮೀಸಲಾತಿಯನ್ನು ಜಾರಿಗೆ ತರಬಹುದಾಗಿದೆ ಎಂದು ವರದಿ‌ ನೀಡಿದೆ. EWS ಮಾದರಿಯಲ್ಲಿ ಮೂರೇ ದಿನದಲ್ಲಿ ಈ ಕೆಲಸವನ್ನು ಮೋದಿ ಸರ್ಕಾರ ಮಾಡಬಹುದು. ಆದರೆ ಪ್ರತಿಯೊಂದಕ್ಕೂ ಚುನಾವಣೆಯ ಗಿಮಿಕ್ ಮಾಡುವ ಮೋದಿ ಸರ್ಕಾರ ಇದನ್ನು 2024 ರ ಲೋಕಸಭಾ ಚುನಾವಣೆಯವರೆಗೆ ತಳ್ಳುತ್ತ ಬ್ಲಾಕ್‌ಮೇಲ್ ಮಾಡುತ್ತದೆ. 2024 ಕ್ಕೆ ಮೋದಿ ಸರ್ಕಾರ ಬಂದರೆ ಅಂಬೇಡ್ಕರ್ ಸಂವಿಧಾನವನ್ನೇ ಬದಲಾಯಿಸುವುದು ಖಚಿತ. ಆಗ ಒಳಮೀಸಲಾತಿ ಮಾತ್ರವಲ್ಲ ಮೀಸಲಾತಿಯೇ ಇರುವುದಿಲ್ಲ.

ಒಟ್ಟಾರೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಳಮೀಸಲಾತಿ ಹೋರಾಟಗಾರರಿಗೆ ಅದರಲ್ಲೂ ಮಾದಿಗ ಸಂಬಂಧಿ ಜಾತಿಗಳ ಮೂರು ದಶಕದ ಹೋರಾಟಕ್ಕೆ ಮೋಸ ಮಾಡಿದೆ. ಚುನಾವಣಾ ಹೊಸ್ತಿಲಲ್ಲಿ ಓಟಿನ‌ ಮೇಲೆ ಕಣ್ಣಿಟ್ಟು ಒಳಮೀಸಲಾತಿ ಹೋರಾಟಗಾರರನ್ನು ಕಣ್ಕಟ್ಟಿನ ಮೂಲಕ ವಂಚಿಸಲು ಹವಣಿಸಿದೆ. 2023 ರ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬ್ಲಾಕ್‌ಮೇಲ್ ತಂತ್ರಕ್ಕೆ ಕೈ ಹಾಕಿದೆ. ದಲಿತರೇ ಎಚ್ಚರ. ಸುಳ್ಳು ಹೇಳುವುದು ಹಾಗೂ ಬರಿಗೈ ಮ್ಯಾಜಿಕ್ ಮಾಡುವುದೇ ಬಿಜೆಪಿಯ ಚಾಣಕ್ಯ ತಂತ್ರ.

– ಸಾಕ್ಯ ಸಮಗಾರ

ಇದನ್ನೂ ಓದಿ; ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...