Homeಚಳವಳಿಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

ಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಎಂದಿನಂತ ಚುನಾವಣೆಯ ಹೊಸ್ತಿಲಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದೆ. ಆದರೆ ಒಳಮೀಸಲಾತಿ ಜಾರಿ ಎಂದೇ ಸುಳ್ಳು ಪ್ರಚಾರ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ದಲಿತ ಬಾಂಧವರು ಕುಣಿದು ಕುಪ್ಪಳಿಸಿದ್ದಾರೆ. ಸಂತೋಷ. ಆದರೆ ಈ ಒಳಮೀಸಲಾತಿ ಶಿಫಾರಸ್ಸು ಜಾರಿಯಾಗುವುದೇ ಅಥವಾ ಕೇವಲ ಬಿಜೆಪಿ ಗಿಮಿಕ್ ಮಾತ್ರವೇ ಎಂಬುದನ್ನು ತಿಳಿಯಬೇಕಿದೆ.

1. ಒಳಮೀಸಲಾತಿ ವರ್ಗೀಕರಣ ಶಿಫಾರಸ್ಸು ಮಾದಿಗ ಸಮುದಾಯ ನಡೆಸಿದ 30 ವರ್ಷಗಳ ಹೋರಾಟದ ಪ್ರತಿಫಲವೇ ಹೊರತು ಯಾವುದೋ ಒಂದು ಸರ್ಕಾರದ ಸಾಧನೆಯಲ್ಲ.

2. ಜಸ್ಟೀಸ್ ಸದಾಶಿವ ಆಯೋಗ ಮಾಡಿದ ವರ್ಗೀಕರಣವು ಶೇ. 15 ರ ಮೀಸಲಾತಿಯನ್ನು ಆಧರಿಸಿತ್ತು. ಹಲವು ವರ್ಷಗಳ ಕಾಲ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಮಾಡಿ ಎಡಗೈ ಸಂಬಂಧಿತ ಜಾತಿಗಳಿಗೆ 6%, ಬಲಗೈ ಸಂಬಂಧಿತ ಜಾತಿಗಳಿಗೆ 5%, ಸ್ಪೃಶ್ಯ ಜಾತಿಗಳಿಗೆ 3%, ಇತರೆ ಪರಿಶಿಷ್ಟರಿಗೆ 1% ಮೀಸಲಾತಿ ನಿಗಧಿಗೊಳಿಸಿತ್ತು. ಈಗ ಬಿಜೆಪಿ ಸರ್ಕಾರ ಪರಿಶಿಷ್ಟರಿಗೆ ಹೆಚ್ಚಳಗೊಳಿಸಬೇಕೆಂದಿರುವ 17% ಮೀಸಲಾತಿಯಲ್ಲಿ ಮೇಲಿನಂತೆ ಕ್ರಮವಾಗಿ 6%, 5.5%, 4.5% ಮತ್ತು 1% ವರ್ಗೀಕರಿಸಿ ಆದೇಶಿಸಿದೆ. ಇದಕ್ಕೆ‌ಯಾವುದೇ ಸಮೀಕ್ಷೆಗಳು ಆಗಿಲ್ಲ. ಅದಕ್ಕೆ ಪುರಾವೆಗಳನ್ನೂ ಸಹ ಸರ್ಕಾರ ನೀಡಿಲ್ಲ. ಯಾವ ಆಧಾರದಲ್ಲಿ ಸ್ಪೃಶ್ಯ ಜಾತಿಗಳಿಗೆ ಹೆಚ್ಚುವರಿಯಾಗಿ 1.5% ನೀಡಿತೋ ತಿಳಿಯದಾಗಿದೆ. ಈ ಅನ್ಯಾಯವನ್ನು ಮುಚ್ಚಿಡಲು ಹೊಲೆಯರ ಮೂಗಿಗೆ 0.5% ಹೆಚ್ಚುವರಿ ತುಪ್ಪ ಸವರಿದೆ. ಹೆಚ್ಚಳ ಮಾಡುತ್ತೇವೆ ಎಂದಿರುವ 17% ನಲ್ಲಿ ಮಾದಿಗರಿಗೆ ಬಹುದೊಡ್ಡ ಅನ್ಯಾಯವಾಗಿದೆ.

3. ಆಯ್ತು, ಈಗಾಗಿರುವ ವರ್ಗೀಕರಣವನ್ನೇ ಒಪ್ಪಿಕೊಂಡರೂ ಅದು ಜಾರಿಯಾಗುತ್ತದೆಯೇ? ನೋಡೋಣ ಬನ್ನಿ. ಪರಿಶಿಷ್ಟರ ಮೀಸಲಾತಿಯನ್ನು 15% ನಿಂದ 17% ಗೆ ಹೆಚ್ಚಿಸಬೇಕೆಂದು ಆದೇಶ ಮಾಡಿರುವ ಬಿಜೆಪಿ ಸರ್ಕಾರದ ನಡೆ ಸಂಪೂರ್ಣ ವಂಚನೆಯಿಂದ ಕೂಡಿದೆ. ಪರಿಶಿಷ್ಟರಿಗೆ 17% ಗೆ ಮೀಸಲಾತಿ ಹೆಚ್ಚಳವಾದರೆ ಅದು ಸುಪ್ರೀಂ ಕೋರ್ಟ್ ವಿಧಿಸಿರುವ 50% ಮಿತಿ ದಾಟುತ್ತದೆ. ಹಾಗಾಗಿ 17% ಊರ್ಜಿತವಾಗಬೇಕೆಂದರೆ ದೆಹಲಿಯ ಸಂಸತ್ತಿನಲ್ಲಿ ಸಂವಿಧಾನದ 9 ನೇ ಶೆಡ್ಯೂಲಿಗೆ ಕಾಯ್ದೆ ಮಾಡಿ ಸೇರಿಸಬೇಕಿದೆ. ತಮಿಳುನಾಡು ಹೀಗೇ ಜಾರಿ ಮಾಡಿಕೊಂಡದ್ದು. ಮಹಾವಂಚನೆ ಏನೆಂದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವವನ್ನೇ ಕಳಿಸಿಲ್ಲ. ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲವೆಂದು ಹೇಳಿದ್ದಾರೆ. ಅಲ್ಲಿಗೆ 17% ಕತೆ ಮುಗಿಯಿತು. 17% ಗೇ ಮೀಸಲಾತಿ ಹೆಚ್ಚಳವಾಗಲ್ಲ ಎಂದರೆ 17% ವರ್ಗೀಕರಣ ಮಾಡಿರುವ ಒಳಮೀಸಲಾತಿ ಹೇಗೆ ಜಾರಿಯಾಗುತ್ತದೆ? ಸಾಧ್ಯವಿಲ್ಲ.

4. ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರದ ಕೈಯಲ್ಲಿಲ್ಲವೇ? ಹೌದು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವುದು ಅಸಾಧ್ಯ. ಹಿಂದೆ ಪಂಬಾಬ್ ನ ಧರ್ವಿಂದರ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ 5 ಜನ ನ್ಯಾಯಾಧೀಶರ ಪೀಠ ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಗಳಿಗಿಲ್ಲ ಎಂದಿತ್ತು. ಆದರೆ 2020 ರಲ್ಲಿ ಅರುಣ್ ಮಿಶ್ರಾ ಅವರನ್ನು ಒಳಗೊಂಡ 5 ಜನ ನ್ಯಾಯಾಧೀಶರ ಪೀಠವು ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಕ್ಕಿದೆ ಎಂದು ತೀರ್ಪು ನೀಡಿದೆ. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ 5 ಜನ ನ್ಯಾಯಾಧೀಶರು ನೀಡಿದ ತೀರ್ಪನ್ನು ಮತ್ತೊಂದು 5 ಜನ ನ್ಯಾಯಾಧೀಶರ ಪೀಠವು ಅನೂರ್ಜಿತಗೊಳಿಸಲಾರದು. ಹಾಗಾಗಿ 7 ಜನ‌ ನ್ಯಾಯಾಧೀಶರ ಪೀಠದ ಮುಂದೆ ಈ ವಿಷಯ ಹೋಗಬೇಕು. ದುರಂತವೆಂದರೆ ಮೂರು ವರ್ಷವಾದರೂ 7 ಜನ ನ್ಯಾಯಾಧೀಶರ ಪೀಠವನ್ನು ರಚಿಸಿಲ್ಲ.

5. ಹಾಗಾದರೆ ಒಳಮೀಸಲಾತಿ ಜಾರಿ ಅಸಾಧ್ಯವೇ? ಇಲ್ಲ ಸಾಧ್ಯವಾಗುತ್ತದೆ. 2008 ರಲ್ಲಿ ಉಷಾ ಮೆಹ್ರಾ ಸಮಿತಿಯು ಸಂವಿಧಾನ ವಿಧಿ 341 ಕ್ಕೆ 3 ನೇ ತಿದ್ದುಪಡಿ ತರುವ ಮೂಲಕ ಒಳಮೀಸಲಾತಿಯನ್ನು ಜಾರಿಗೆ ತರಬಹುದಾಗಿದೆ ಎಂದು ವರದಿ‌ ನೀಡಿದೆ. EWS ಮಾದರಿಯಲ್ಲಿ ಮೂರೇ ದಿನದಲ್ಲಿ ಈ ಕೆಲಸವನ್ನು ಮೋದಿ ಸರ್ಕಾರ ಮಾಡಬಹುದು. ಆದರೆ ಪ್ರತಿಯೊಂದಕ್ಕೂ ಚುನಾವಣೆಯ ಗಿಮಿಕ್ ಮಾಡುವ ಮೋದಿ ಸರ್ಕಾರ ಇದನ್ನು 2024 ರ ಲೋಕಸಭಾ ಚುನಾವಣೆಯವರೆಗೆ ತಳ್ಳುತ್ತ ಬ್ಲಾಕ್‌ಮೇಲ್ ಮಾಡುತ್ತದೆ. 2024 ಕ್ಕೆ ಮೋದಿ ಸರ್ಕಾರ ಬಂದರೆ ಅಂಬೇಡ್ಕರ್ ಸಂವಿಧಾನವನ್ನೇ ಬದಲಾಯಿಸುವುದು ಖಚಿತ. ಆಗ ಒಳಮೀಸಲಾತಿ ಮಾತ್ರವಲ್ಲ ಮೀಸಲಾತಿಯೇ ಇರುವುದಿಲ್ಲ.

ಒಟ್ಟಾರೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಳಮೀಸಲಾತಿ ಹೋರಾಟಗಾರರಿಗೆ ಅದರಲ್ಲೂ ಮಾದಿಗ ಸಂಬಂಧಿ ಜಾತಿಗಳ ಮೂರು ದಶಕದ ಹೋರಾಟಕ್ಕೆ ಮೋಸ ಮಾಡಿದೆ. ಚುನಾವಣಾ ಹೊಸ್ತಿಲಲ್ಲಿ ಓಟಿನ‌ ಮೇಲೆ ಕಣ್ಣಿಟ್ಟು ಒಳಮೀಸಲಾತಿ ಹೋರಾಟಗಾರರನ್ನು ಕಣ್ಕಟ್ಟಿನ ಮೂಲಕ ವಂಚಿಸಲು ಹವಣಿಸಿದೆ. 2023 ರ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬ್ಲಾಕ್‌ಮೇಲ್ ತಂತ್ರಕ್ಕೆ ಕೈ ಹಾಕಿದೆ. ದಲಿತರೇ ಎಚ್ಚರ. ಸುಳ್ಳು ಹೇಳುವುದು ಹಾಗೂ ಬರಿಗೈ ಮ್ಯಾಜಿಕ್ ಮಾಡುವುದೇ ಬಿಜೆಪಿಯ ಚಾಣಕ್ಯ ತಂತ್ರ.

– ಸಾಕ್ಯ ಸಮಗಾರ

ಇದನ್ನೂ ಓದಿ; ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...