Homeಚಳವಳಿಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

ಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಎಂದಿನಂತ ಚುನಾವಣೆಯ ಹೊಸ್ತಿಲಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದೆ. ಆದರೆ ಒಳಮೀಸಲಾತಿ ಜಾರಿ ಎಂದೇ ಸುಳ್ಳು ಪ್ರಚಾರ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ದಲಿತ ಬಾಂಧವರು ಕುಣಿದು ಕುಪ್ಪಳಿಸಿದ್ದಾರೆ. ಸಂತೋಷ. ಆದರೆ ಈ ಒಳಮೀಸಲಾತಿ ಶಿಫಾರಸ್ಸು ಜಾರಿಯಾಗುವುದೇ ಅಥವಾ ಕೇವಲ ಬಿಜೆಪಿ ಗಿಮಿಕ್ ಮಾತ್ರವೇ ಎಂಬುದನ್ನು ತಿಳಿಯಬೇಕಿದೆ.

1. ಒಳಮೀಸಲಾತಿ ವರ್ಗೀಕರಣ ಶಿಫಾರಸ್ಸು ಮಾದಿಗ ಸಮುದಾಯ ನಡೆಸಿದ 30 ವರ್ಷಗಳ ಹೋರಾಟದ ಪ್ರತಿಫಲವೇ ಹೊರತು ಯಾವುದೋ ಒಂದು ಸರ್ಕಾರದ ಸಾಧನೆಯಲ್ಲ.

2. ಜಸ್ಟೀಸ್ ಸದಾಶಿವ ಆಯೋಗ ಮಾಡಿದ ವರ್ಗೀಕರಣವು ಶೇ. 15 ರ ಮೀಸಲಾತಿಯನ್ನು ಆಧರಿಸಿತ್ತು. ಹಲವು ವರ್ಷಗಳ ಕಾಲ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಮಾಡಿ ಎಡಗೈ ಸಂಬಂಧಿತ ಜಾತಿಗಳಿಗೆ 6%, ಬಲಗೈ ಸಂಬಂಧಿತ ಜಾತಿಗಳಿಗೆ 5%, ಸ್ಪೃಶ್ಯ ಜಾತಿಗಳಿಗೆ 3%, ಇತರೆ ಪರಿಶಿಷ್ಟರಿಗೆ 1% ಮೀಸಲಾತಿ ನಿಗಧಿಗೊಳಿಸಿತ್ತು. ಈಗ ಬಿಜೆಪಿ ಸರ್ಕಾರ ಪರಿಶಿಷ್ಟರಿಗೆ ಹೆಚ್ಚಳಗೊಳಿಸಬೇಕೆಂದಿರುವ 17% ಮೀಸಲಾತಿಯಲ್ಲಿ ಮೇಲಿನಂತೆ ಕ್ರಮವಾಗಿ 6%, 5.5%, 4.5% ಮತ್ತು 1% ವರ್ಗೀಕರಿಸಿ ಆದೇಶಿಸಿದೆ. ಇದಕ್ಕೆ‌ಯಾವುದೇ ಸಮೀಕ್ಷೆಗಳು ಆಗಿಲ್ಲ. ಅದಕ್ಕೆ ಪುರಾವೆಗಳನ್ನೂ ಸಹ ಸರ್ಕಾರ ನೀಡಿಲ್ಲ. ಯಾವ ಆಧಾರದಲ್ಲಿ ಸ್ಪೃಶ್ಯ ಜಾತಿಗಳಿಗೆ ಹೆಚ್ಚುವರಿಯಾಗಿ 1.5% ನೀಡಿತೋ ತಿಳಿಯದಾಗಿದೆ. ಈ ಅನ್ಯಾಯವನ್ನು ಮುಚ್ಚಿಡಲು ಹೊಲೆಯರ ಮೂಗಿಗೆ 0.5% ಹೆಚ್ಚುವರಿ ತುಪ್ಪ ಸವರಿದೆ. ಹೆಚ್ಚಳ ಮಾಡುತ್ತೇವೆ ಎಂದಿರುವ 17% ನಲ್ಲಿ ಮಾದಿಗರಿಗೆ ಬಹುದೊಡ್ಡ ಅನ್ಯಾಯವಾಗಿದೆ.

3. ಆಯ್ತು, ಈಗಾಗಿರುವ ವರ್ಗೀಕರಣವನ್ನೇ ಒಪ್ಪಿಕೊಂಡರೂ ಅದು ಜಾರಿಯಾಗುತ್ತದೆಯೇ? ನೋಡೋಣ ಬನ್ನಿ. ಪರಿಶಿಷ್ಟರ ಮೀಸಲಾತಿಯನ್ನು 15% ನಿಂದ 17% ಗೆ ಹೆಚ್ಚಿಸಬೇಕೆಂದು ಆದೇಶ ಮಾಡಿರುವ ಬಿಜೆಪಿ ಸರ್ಕಾರದ ನಡೆ ಸಂಪೂರ್ಣ ವಂಚನೆಯಿಂದ ಕೂಡಿದೆ. ಪರಿಶಿಷ್ಟರಿಗೆ 17% ಗೆ ಮೀಸಲಾತಿ ಹೆಚ್ಚಳವಾದರೆ ಅದು ಸುಪ್ರೀಂ ಕೋರ್ಟ್ ವಿಧಿಸಿರುವ 50% ಮಿತಿ ದಾಟುತ್ತದೆ. ಹಾಗಾಗಿ 17% ಊರ್ಜಿತವಾಗಬೇಕೆಂದರೆ ದೆಹಲಿಯ ಸಂಸತ್ತಿನಲ್ಲಿ ಸಂವಿಧಾನದ 9 ನೇ ಶೆಡ್ಯೂಲಿಗೆ ಕಾಯ್ದೆ ಮಾಡಿ ಸೇರಿಸಬೇಕಿದೆ. ತಮಿಳುನಾಡು ಹೀಗೇ ಜಾರಿ ಮಾಡಿಕೊಂಡದ್ದು. ಮಹಾವಂಚನೆ ಏನೆಂದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವವನ್ನೇ ಕಳಿಸಿಲ್ಲ. ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲವೆಂದು ಹೇಳಿದ್ದಾರೆ. ಅಲ್ಲಿಗೆ 17% ಕತೆ ಮುಗಿಯಿತು. 17% ಗೇ ಮೀಸಲಾತಿ ಹೆಚ್ಚಳವಾಗಲ್ಲ ಎಂದರೆ 17% ವರ್ಗೀಕರಣ ಮಾಡಿರುವ ಒಳಮೀಸಲಾತಿ ಹೇಗೆ ಜಾರಿಯಾಗುತ್ತದೆ? ಸಾಧ್ಯವಿಲ್ಲ.

4. ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರದ ಕೈಯಲ್ಲಿಲ್ಲವೇ? ಹೌದು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವುದು ಅಸಾಧ್ಯ. ಹಿಂದೆ ಪಂಬಾಬ್ ನ ಧರ್ವಿಂದರ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ 5 ಜನ ನ್ಯಾಯಾಧೀಶರ ಪೀಠ ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಗಳಿಗಿಲ್ಲ ಎಂದಿತ್ತು. ಆದರೆ 2020 ರಲ್ಲಿ ಅರುಣ್ ಮಿಶ್ರಾ ಅವರನ್ನು ಒಳಗೊಂಡ 5 ಜನ ನ್ಯಾಯಾಧೀಶರ ಪೀಠವು ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಕ್ಕಿದೆ ಎಂದು ತೀರ್ಪು ನೀಡಿದೆ. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ 5 ಜನ ನ್ಯಾಯಾಧೀಶರು ನೀಡಿದ ತೀರ್ಪನ್ನು ಮತ್ತೊಂದು 5 ಜನ ನ್ಯಾಯಾಧೀಶರ ಪೀಠವು ಅನೂರ್ಜಿತಗೊಳಿಸಲಾರದು. ಹಾಗಾಗಿ 7 ಜನ‌ ನ್ಯಾಯಾಧೀಶರ ಪೀಠದ ಮುಂದೆ ಈ ವಿಷಯ ಹೋಗಬೇಕು. ದುರಂತವೆಂದರೆ ಮೂರು ವರ್ಷವಾದರೂ 7 ಜನ ನ್ಯಾಯಾಧೀಶರ ಪೀಠವನ್ನು ರಚಿಸಿಲ್ಲ.

5. ಹಾಗಾದರೆ ಒಳಮೀಸಲಾತಿ ಜಾರಿ ಅಸಾಧ್ಯವೇ? ಇಲ್ಲ ಸಾಧ್ಯವಾಗುತ್ತದೆ. 2008 ರಲ್ಲಿ ಉಷಾ ಮೆಹ್ರಾ ಸಮಿತಿಯು ಸಂವಿಧಾನ ವಿಧಿ 341 ಕ್ಕೆ 3 ನೇ ತಿದ್ದುಪಡಿ ತರುವ ಮೂಲಕ ಒಳಮೀಸಲಾತಿಯನ್ನು ಜಾರಿಗೆ ತರಬಹುದಾಗಿದೆ ಎಂದು ವರದಿ‌ ನೀಡಿದೆ. EWS ಮಾದರಿಯಲ್ಲಿ ಮೂರೇ ದಿನದಲ್ಲಿ ಈ ಕೆಲಸವನ್ನು ಮೋದಿ ಸರ್ಕಾರ ಮಾಡಬಹುದು. ಆದರೆ ಪ್ರತಿಯೊಂದಕ್ಕೂ ಚುನಾವಣೆಯ ಗಿಮಿಕ್ ಮಾಡುವ ಮೋದಿ ಸರ್ಕಾರ ಇದನ್ನು 2024 ರ ಲೋಕಸಭಾ ಚುನಾವಣೆಯವರೆಗೆ ತಳ್ಳುತ್ತ ಬ್ಲಾಕ್‌ಮೇಲ್ ಮಾಡುತ್ತದೆ. 2024 ಕ್ಕೆ ಮೋದಿ ಸರ್ಕಾರ ಬಂದರೆ ಅಂಬೇಡ್ಕರ್ ಸಂವಿಧಾನವನ್ನೇ ಬದಲಾಯಿಸುವುದು ಖಚಿತ. ಆಗ ಒಳಮೀಸಲಾತಿ ಮಾತ್ರವಲ್ಲ ಮೀಸಲಾತಿಯೇ ಇರುವುದಿಲ್ಲ.

ಒಟ್ಟಾರೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಳಮೀಸಲಾತಿ ಹೋರಾಟಗಾರರಿಗೆ ಅದರಲ್ಲೂ ಮಾದಿಗ ಸಂಬಂಧಿ ಜಾತಿಗಳ ಮೂರು ದಶಕದ ಹೋರಾಟಕ್ಕೆ ಮೋಸ ಮಾಡಿದೆ. ಚುನಾವಣಾ ಹೊಸ್ತಿಲಲ್ಲಿ ಓಟಿನ‌ ಮೇಲೆ ಕಣ್ಣಿಟ್ಟು ಒಳಮೀಸಲಾತಿ ಹೋರಾಟಗಾರರನ್ನು ಕಣ್ಕಟ್ಟಿನ ಮೂಲಕ ವಂಚಿಸಲು ಹವಣಿಸಿದೆ. 2023 ರ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬ್ಲಾಕ್‌ಮೇಲ್ ತಂತ್ರಕ್ಕೆ ಕೈ ಹಾಕಿದೆ. ದಲಿತರೇ ಎಚ್ಚರ. ಸುಳ್ಳು ಹೇಳುವುದು ಹಾಗೂ ಬರಿಗೈ ಮ್ಯಾಜಿಕ್ ಮಾಡುವುದೇ ಬಿಜೆಪಿಯ ಚಾಣಕ್ಯ ತಂತ್ರ.

– ಸಾಕ್ಯ ಸಮಗಾರ

ಇದನ್ನೂ ಓದಿ; ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...