Homeಕರ್ನಾಟಕಒಳ ಮೀಸಲಾತಿ| ಮಧ್ಯಂತರ ವರದಿ ಅಂಗೀಕರಿಸಿದ ಸರ್ಕಾರ; ಆಯೋಗದ ಅವಧಿ 60 ದಿನಕ್ಕೆ ವಿಸ್ತರಣೆ

ಒಳ ಮೀಸಲಾತಿ| ಮಧ್ಯಂತರ ವರದಿ ಅಂಗೀಕರಿಸಿದ ಸರ್ಕಾರ; ಆಯೋಗದ ಅವಧಿ 60 ದಿನಕ್ಕೆ ವಿಸ್ತರಣೆ

- Advertisement -
- Advertisement -

ಒಳ ಮೀಸಲಾತಿ ಜಾರಿಗೊಳಿಸಲು ಪರಿಶಿಷ್ಟ ಜಾತಿಗಳಲ್ಲಿರುವ ಉಪ ಜಾತಿಗಳ ವರ್ಗೀಕರಣಕ್ಕೆ ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗ ಗುರುವಾರ (ಮಾ.27) ಸರ್ಕಾರಕ್ಕೆ ಸಲ್ಲಿಸಿರುವ ತನ್ನ ಮಧ್ಯಂತರ ವರದಿಯಲ್ಲಿ ಶಿಫಾರಸ್ಸು ಮಾಡಿದೆ.

ಹಾಗಾಗಿ, ಹೊಸದಾಗಿ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ನಾಗಮೋಹನದಾಸ್ ಆಯೋಗಕ್ಕೇ ನೀಡಿರುವ ಸರ್ಕಾರ, ಆಯೋಗದ ಅವಧಿಯನ್ನು 60 ದಿನಗಳಿಗೆ ವಿಸ್ತರಣೆ ಮಾಡಿದೆ.

ಸಚಿವ ಸಂಪುಟ ಸಭೆಯ ಬಳಿಕ ಗುರುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ “ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಾಗಮೋಹನದಾಸ್ ಆಯೋಗ ನೀಡಿರುವ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ. ವರದಿಯಲ್ಲಿ ಉಪ ಜಾತಿಗಳ ವರ್ಗೀಕರಣಕ್ಕೆ ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸುವಂತೆ ಶಿಫಾರಸ್ಸು ಮಾಡಲಾಗಿದೆ. ಹಾಗಾಗಿ, ಹೊಸ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ನಾಗಮೋಹನದಾಸ್ ಆಯೋಗಕ್ಕೇ ನೀಡಲು ಸಂಪುಟ ಸಭೆ ನಿರ್ಣಯ ಮಾಡಿದೆ. ಈ ಕಾರ್ಯ ಮುಗಿಸಲು ಅವರು 40 ದಿನಗಳ ಕಾಲಾವಕಾಶ ಕೇಳಿದ್ದಾರೆ. ನಾವು 60 ದಿನಗಳ ಕಾಲಾವಕಾಶ ಕೊಟ್ಟು ಆಯೋಗದ ಅವಧಿಯನ್ನು ವಿಸ್ತರಿಸಿದ್ದೇವೆ ಎಂದು ತಿಳಿಸಿದ್ದಾರೆ.

ನಾಗಮೋಹನದಾಸ್ ಆಯೋಗದ ಶಿಫಾರಸ್ಸುಗಳಲ್ಲಿ ಹೊಸ ವಿಷಯಗಳೇನಿದೆ ಹಾಗೂ ಎರಡು ತಿಂಗಳ ಕಾಲಾವಧಿಯಲ್ಲಿ ಹೊಸ ಸಮೀಕ್ಷೆ ಕೈಗೊಳ್ಳಲು ಸಾಧ್ಯವೇ? ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, “ರಾಜ್ಯದಲ್ಲಿ ಆರು ಸಾವಿರ ಗ್ರಾಮ ಪಂಚಾಯತ್‌ ಹಾಗೂ 300ಕ್ಕೂ ಹೆಚ್ಚು ವಾರ್ಡ್‌ಗಳಿವೆ. ಈ ಕಾರ್ಯವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಉಸ್ತುವಾರಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ತೀವ್ರಗತಿಯಲ್ಲಿ ಕೈಗೊಳ್ಳಲು ಸಚಿವ ಸಂಪುಟ ಸೂಚನೆ ನೀಡಿದೆ. ಆಯೋಗವು ಸಮೀಕ್ಷೆ ಕೈಗೊಳ್ಳಲು ಬೇಕಿರುವ ಸೌಲಭ್ಯಗಳನ್ನು ಒದಗಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿಗಳ ಸಭೆ ನಡೆಸಲಾಗುವುದು. ಕಾಂಗ್ರೆಸ್ ಸರ್ಕಾರ ಮೀಸಲಾತಿ ಸೌಲಭ್ಯಗಳನ್ನು ನೀಡಲು ಬದ್ದವಾಗಿದ್ದು, ಭವಿಷ್ಯದಲ್ಲಿ ಯಾವುದೇ ಗೊಂದಲಗಳಾಗದಂತೆ ದತ್ತಾಂಶಗಳು ಕರಾರುವಕ್ಕಾಗಿ ಪಡೆಯಲು ಹಾಗೂ ಜನರಿಗೆ ಮೀಸಲಾತಿಯ ಅನುಕೂಲ ಕಲ್ಪಿಸುವ ಉದ್ದೇವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದ್ದಾರೆ.

“ಈ ಹಿಂದೆ ನಡೆಸಲಾಗಿರುವ ಜನಗಣತಿಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಸ್‌ಸಿ ವರ್ಗಗಳ ಮಾಹಿತಿಗಳು ವರದಿಯಲ್ಲಿ ಇರುವುದಿಲ್ಲ. ಈ ದತ್ತಾಂಶಗಳಲಿಲ್ಲದೇ ಹೋದರೆ ಕಾನೂನಿನಡಿ ಮಾನ್ಯವಾಗಲು ಸಾಧ್ಯವಿಲ್ಲ. ಆದ್ದರಿಂದ ಎರಡು ತಿಂಗಳ ಕಾಲಾವಧಿಯಲ್ಲಿ ಹೊಸ ಸಮೀಕ್ಷೆ ಮಾಡಲು ನಿರ್ಧರಿಸಲಾಗಿದೆ” ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ವಿವರಿಸಿದ್ದಾರೆ.

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ನೇತೃತ್ವದ ಆಯೋಗ ಗುರುವಾರ ರಾಜ್ಯ ಸರ್ಕಾರಕ್ಕೆ ತನ್ನ ಮಧ್ಯಂತರ ವರದಿ ಸಲ್ಲಿಸಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನ್ಯಾ.ನಾಗಮೋಹನದಾಸ್ ಅವರು ವರದಿ ಸಲ್ಲಿಸಿದ್ದಾರೆ.

ಈ ವರದಿಯಲ್ಲಿ ನಾಲ್ಕು ಶಿಫಾರಸ್ಸುಗಳನ್ನು ಮಾಡಲಾಗಿದೆ. ಅವುಗಳನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಒಪ್ಪಿಕೊಂಡಿದೆ. ಆ ಶಿಫಾರಸ್ಸುಗಳು ಹೀಗಿವೆ…

1. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣಕ್ಕೆ ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಬೇಕು.

2.ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30-40 ದಿನಗಳೊಳಗೆ ಹೊಸ ಸಮೀಕ್ಷೆ ನಡೆಸಬಹುದು ಎಂಬುದು ತಜ್ಞರ ಅಭಿಪ್ರಾಯ

3. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿ ಸಿದ್ಧಪಡಿಸುವುದು, ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಿಬ್ಬಂದಿಗೆ ತರಬೇತಿ, ಸಂಪನ್ಮೂಲಗಳ ಕ್ರೂಢೀಕರಣದ ಇತ್ಯಾದಿ ಉಸ್ತುವಾರಿ ನೋಡಿಕೊಳ್ಳಲು ಉನ್ನತ ಮಟ್ಟದ ಸಮಿತಿ ರಚನೆ ಮಾಡಬೇಕು

4. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡದಂತೆ ಪರಿಶಿಷ್ಟ ಜಾತಿಯ ಉಪಜಾತಿಗಳ ವರ್ಗೀಕರಣ ಮಾಡಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು

ಕಾಂಗ್ರೆಸ್ ಸರ್ಕಾರವು ಒಳ ಮೀಸಲಾತಿ ಜಾರಿಗೆ ತರುವ ರಾಜಕೀಯ ಇಚ್ಛಾಶಕ್ತಿ ಹೊಂದಿದೆ: ಜಸ್ಟೀಸ್ ನಾಗಮೋಹನ್‌ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...