Homeಮುಖಪುಟಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ಸುಗ್ರೀವಾಜ್ಞೆ ಹೊರಡಿಸಿದ ಆಂಧ್ರ ಸರ್ಕಾರ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ಸುಗ್ರೀವಾಜ್ಞೆ ಹೊರಡಿಸಿದ ಆಂಧ್ರ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಯವರನ್ನು (ಎಸ್‌ಸಿ) ಮೂರು ಉಪ ವರ್ಗಗಳಾಗಿ ವರ್ಗೀಕರಿಸಿ ಒಳ ಮೀಸಲಾತಿ ನೀಡಲು ಆಂಧ್ರ ಪ್ರದೇಶ ಸರ್ಕಾರ ಗುರುವಾರ (ಏ.17) ಸುಗ್ರಿವಾಜ್ಞೆ ಹೊರಡಿಸಿದೆ.

ಸಮುದಾಯದೊಳಗಿನ ಅಸಮಾನತೆಗಳು ಮತ್ತು ಸರ್ಕಾರಿ ಯೋಜನೆಗಳ ಪ್ರವೇಶವನ್ನು ನಿಭಾಯಿಸಲು ಪರಿಶಿಷ್ಟ ಜಾತಿಗಳನ್ನು ಮೂರು ಉಪ-ವರ್ಗಗಳಾಗಿ ವರ್ಗೀಕರಿಸಲು ಈ ಸುಗ್ರೀವಾಜ್ಞೆಯು ಒಂದು ಚೌಕಟ್ಟನ್ನು ಒದಗಿಸುತ್ತದೆ.

‘ಆಂಧ್ರ ಪ್ರದೇಶ ಪರಿಶಿಷ್ಟ ಜಾತಿ (ಉಪ-ವರ್ಗೀಕರಣ) ಸುಗ್ರೀವಾಜ್ಞೆ-2025 ಅನ್ನು ರಾಜ್ಯದ ಗೆಜೆಟ್‌ನಲ್ಲಿ ಇಂಗ್ಲಿಷ್, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಆಂಧ್ರ ಪ್ರದೇಶ ಸುಗ್ರೀವಾಜ್ಞೆ 2025ರ ನಂ. 2 ಎಂದು ಪ್ರಕಟಿಸಲಾಗಿದೆ’ ಎಂದು ಕಾನೂನು ಇಲಾಖೆಯ ಆದೇಶದಲ್ಲಿ ತಿಳಿಸಿದೆ.

ಸುಗ್ರೀವಾಜ್ಞೆಯ ಪ್ರಕಾರ, ಚಂಡಾಲ, ಪಾಕಿ, ರೆಲ್ಲಿ ಮತ್ತು ಡೋಮ್ ಸಮುದಾಯಗಳು ಸೇರಿದಂತೆ ಹನ್ನೆರಡು ಉಪ-ಜಾತಿಗಳನ್ನು ವರ್ಗ 1ರಲ್ಲಿ (ಅತ್ಯಂತ ಹಿಂದುಳಿದ) ಇರಿಸಲಾಗಿದೆ. ಈ ವರ್ಗ ಶೇ. 1ರಷ್ಟು ಮೀಸಲಾತಿ ಪಡೆಯಲಿದೆ.

ವರ್ಗ 2ರಲ್ಲಿ ಚಾಮರ್, ಮಾದಿಗ, ಸಿಂಧೋಲ ಮತ್ತು ಮಾತಂಗಿಯಂತಹ 18 ಉಪಜಾತಿಗಳಿದ್ದು, ಶೇ. 6.5 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.

ವರ್ಗ 3ರಲ್ಲಿ ಮಾಲಾ ಗುಂಪಿನ 29 ಜಾತಿಗಳಾದ, ಆದಿ ದ್ರಾವಿಡ, ಅಣಮುಕ್, ಅರಯಮಾಲ, ಅರ್ವಮಾಲ, ಬಾರಿಕಿ, ಬ್ಯಾಗಾರ, ಚಲವಾದಿ, ಯೆಲ್ಲಾಮಾಲಾವರ್, ಹೊಲೆಯ, ಹೊಲೆಯ ದಾಸರಿ, ಮಾದಸಿ ಕುರುವ, ಮಹಾರ್, ಮಾಲಾ, ಮಾಲಾ ದಾಸರಿ, ಮಾಲಾ ದಾಸು, ಮಾಲಾ ಹಣ್ಣಾಯಿ, ಮಾಲಾ ಜಂಗಮ, ಮಾಲಾ ಮಾಸ್ತಿ, ಮಾಲಾ ಸಾಲೆ, ಮಾಲಾ ಸನ್ಯಾಸಿ, ಮನ್ನೆ, ಮುಂಡಾಲ, ಸಾಂಬನ್, ಯಾತಳ, ವಳ್ಳುವನ್, ಆದಿ ಆಂಧ್ರ, ಮಾಸ್ತಿ, ಮಿತ್ತ ಅಯ್ಯಳವರ್, ಪಂಚಮವನ್ನು ಕಡಿಮೆ ಹಿಂದುಳಿದವರು ಎಂದು ವರ್ಗೀಕರಿಸಿ ಶೇ.7.5 ಮೀಸಲಾತಿ ನೀಡಲಾಗಿದೆ.

“ಸಮಾಜದಲ್ಲಿನ ಎಲ್ಲಾ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಮತ್ತು ಸಮಾನ ಪ್ರಗತಿಯನ್ನು ಖಚಿತಪಡಿಸಿಕೊಳ್ಳುವುದು ಈ ಸುಗ್ರೀವಾಜ್ಞೆಯ ಮುಖ್ಯ ಉದ್ದೇಶವಾಗಿದೆ” ಎಂದು ಸಮಾಜ ಕಲ್ಯಾಣ ಸಚಿವ ಡಾ.ದೋಲ ವೀರಾಂಜನೇಯ ಸ್ವಾಮಿ ಹೇಳಿದ್ದಾರೆ.

ತೆಲುಗು ದೇಶಂ ಪಕ್ಷ (ಟಿಡಿಪಿ) ನೇತೃತ್ವದ ಆಂಧ್ರ ಪ್ರದೇಶ ರಾಜ್ಯ ಸರ್ಕಾರ ಒಳ ಮೀಸಲಾತಿ ಸಂಬಂಧ ನವೆಂಬರ್ 2024ರಲ್ಲಿ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ರಂಜನ್ ಮಿಶ್ರಾ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿತ್ತು. ಇದು ಉಪ-ವರ್ಗೀಕರಣವನ್ನು ಶಿಫಾರಸು ಮಾಡಿತ್ತು.

ರಾಜ್ಯದ 26 ಜಿಲ್ಲೆಗಳಿಂದ ಸಾರ್ವಜನಿಕ ಪ್ರತಿಕ್ರಿಯೆಯನ್ನು ಅನುಸರಿಸಿ, ರಂಜನ್ ಮಿಶ್ರಾ ಈ ವರ್ಷದ ಮಾರ್ಚ್ 10 ರಂದು ಸಮಗ್ರ ವರದಿಯನ್ನು ಸಲ್ಲಿಸಿದ್ದರು.

ಸುಪ್ರೀಂ ಕೋರ್ಟ್‌ ಕಳೆದ ವರ್ಷ ತನ್ನ ತೀರ್ಪಿನಲ್ಲಿ, ಮೀಸಲಾದ ವರ್ಗಗಳಲ್ಲಿ ಒಳ ಮೀಸಲಾತಿ ನೀಡಲು ಎಸ್‌ಸಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಉಪ ವರ್ಗೀಕರಣ ಮಾಡಲು ರಾಜ್ಯಗಳಿಗೆ ಅನುಮತಿ ನೀಡಿದೆ.

ಹಣ, ಹೆಂಡಕ್ಕೆ ಮತ ನೀಡಿದರೆ ಮುಂದಿನ ಜನ್ಮದಲ್ಲಿ ನಾಯಿ, ಬೆಕ್ಕುಗಳಾಗಿ ಹುಟ್ಟುತ್ತೀರಿ: ಬಿಜೆಪಿ ಶಾಸಕಿ ಉಷಾ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...