Homeಅಂಕಣಗಳುಒಳಮೀಸಲಾತಿ ತೀರ್ಪು : ಕಬಾಬ್‌ನಲ್ಲೊಂದು ಮುಳ್ಳು

ಒಳಮೀಸಲಾತಿ ತೀರ್ಪು : ಕಬಾಬ್‌ನಲ್ಲೊಂದು ಮುಳ್ಳು

"ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ನಿಜ. ಇದು ಸಂತೋಷದ ವಿಚಾರವೇ ಆಗಿದೆ. ಆದರೆ, ಸುಖಾ ಸುಮ್ಮನೆ ಮತ್ತೆ 'ಕ್ರೀಮಿಲೇಯರ್' ಎಂಬ ವಾಮನನನ್ನು ಎಳೆದು ತರಲಾಗಿದೆ"

- Advertisement -
- Advertisement -

1975 ರಲ್ಲಿ ಪಂಜಾಬ್ ಸರ್ಕಾರವು ಅಲ್ಲಿನ ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ಹಿಂದುಳಿದಿದ್ದ ಮಜಬಿ ಸಿಖ್ ಸಮುದಾಯಕ್ಕೆ ಒಳಮೀಸಲಾತಿ ಘೋಷಿಸಿ ಆದೇಶಿಸಿದಾಗ ಆರಂಭವಾದ ಒಳಮೀಸಲಾತಿ ಪರ ವಿರೋಧದ ಚರ್ಚೆಯು ಪರಸ್ಪರ ಹೋರಾಟವಾಗಿ ಮಾರ್ಪಟ್ಟು 5 ದಶಕಗಳ ಕಾಲ ಮುಂದುವರೆಯಿತು. ಈ ನಡುವೆ ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಮಾದಿಗ ದಂಡೋರ ನೇತೃತ್ವದ ಒಳಮೀಸಲಾತಿ ಪರ ಹೋರಾಟವು ಇಡೀ ದೇಶದ ರಾಜಕಾರಣದಲ್ಲಿ ಮೈಲುಗಲ್ಲಾಗಿ ನಿಂತಿದೆ. ಎರಡೂ ರಾಜ್ಯದ ಸರ್ಕಾರಗಳನ್ನು ಏಳಿಸುವ ಹಾಗೂ ಬೀಳಿಸುವಲ್ಲಿ ನಿರ್ಣಾಯಕ ಪಾತ್ರವನ್ನು ಈ ಸಂಘಟನೆ ವಹಿಸಿದೆ. ಹಾಗಾಗಿ , ಸುಪ್ರೀಂಕೋರ್ಟ್ ನೀಡಿರುವ ಒಳಮೀಸಲಾತಿ ಪರ ತೀರ್ಪನ್ನು ಮಾದಿಗ ದಂಡೋರದಂತೆ ದೇಶದಾದ್ಯಂತ ಒಳಮೀಸಲಾತಿ ಪರ ಹೋರಾಟದ ಕಿಚ್ಚು ಹಚ್ಚಿದ ಹೋರಾಟಗಾರರಿಗೆ ಅರ್ಪಿಸಬೇಕಿದೆ.

ಇ.ವಿ ಚಿನ್ನಯ್ಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ಒಳಮೀಸಲಾತಿಯ ವಿರುದ್ಧ ತೀರ್ಪಿತ್ತಿತ್ತು. ಪಂಜಾಬಿನ ಧವಿಂದರ್ ಪ್ರಕರಣದಲ್ಲಿ ಜಸ್ಟೀಸ್ ಅರುಣ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಒಳಮೀಸಲಾತಿ ಪರ ತೀರ್ಪು ನೀಡಿತ್ತು. ಹೀಗಾಗಿ ಒಳಮೀಸಲಾತಿಯ ಪ್ರಶ್ನೆಯು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಪೀಠದ ಮುಂದೆ ಬಂದಿತ್ತು. ಈ ಪೀಠದ ಮುಂದೆ ಬಹುಮುಖ್ಯವಾದ ಎರಡು ಪ್ರಶ್ನೆಗಳಿದ್ದವು.

1. ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ನೀಡುವ ಅಧಿಕಾರವಿದೆಯೇ?

2. ಸಂವಿಧಾನಕ್ಕನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಉಪವರ್ಗೀಕರಣ (ಒಳಮೀಸಲಾತಿ) ಮಾಡಬಹುದೇ?

ಈ ಎರಡು ಪ್ರಶ್ನೆಗಳಿಗೆ ಸಂಬಂಧಿಸಿದಂತೆ ದಿನಾಂಕ 01.08.2024ರಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಪೀಠವು ತೀರ್ಪು ನೀಡಿದೆ. 6:1ರ ಬಹುಮತದೊಂದಿಗೆ ಇ.ವಿ ಚಿನ್ನಯ್ಯ ಪ್ರಕರಣದಲ್ಲಿ ನೀಡಲಾಗಿದ್ದ ಒಳಮೀಸಲಾತಿ ಸಾಧ್ಯವಿಲ್ಲ ಎಂಬ ತೀರ್ಪನ್ನು ರದ್ದುಗೊಳಿಸಿದೆ. ಈ ಮೂಲಕ ಸಾಂವಿಧಾನಿಕವಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಒಳಮೀಸಲಾತಿ ನೀಡಬಹುದು. ಹೀಗೆ ಒಳಮೀಸಲಾತಿ ನೀಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂಬ ದಲಿತ ಪರ ತೀರ್ಪು ನೀಡಿದೆ. ಈ ಮೂಲಕ ಒಳಮೀಸಲಾತಿ ಜಾರಿಗಾಗಿ ಉಷಾ ಮೆಹ್ರಾ ಸಮಿತಿಯ ಶಿಫಾರಸಿನಂತೆ ಸಂವಿಧಾನ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರದ ಮುಂದೆ ಹೋರಾಟ ಮಾಡುವ ಅವಶ್ಯಕತೆ ಇಲ್ಲದಂತೆ ಮಾಡಿದೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಂತೆ ರಾಜ್ಯ ಸರ್ಕಾರಗಳೇ ಪರಿಶಿಷ್ಟರಿಗೆ ಒಳಮೀಸಲಾತಿ ಜಾರಿ ಮಾಡಬಹುದಾಗಿದೆ.

ಒಳಮೀಸಲಾತಿ ಜಾರಿ ಹೇಗೆ?

ಸುಪ್ರೀಂ ಕೋರ್ಟ್ ತೀರ್ಪಿನಂತೆ 7 ಜನ ನ್ಯಾಯಾಧೀಶರಲ್ಲಿ ಏಕೈಕ ಮಹಿಳಾ ನ್ಯಾಯಾಧೀಶೆಯಾಗಿರುವ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿಯವರನ್ನು ಹೊರತುಪಡಿಸಿದರೆ, ಉಳಿದಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ, ಜಿ.ಎ.ಗವಾಯ್, ವಿಕ್ರಮ್ ನಾಥ್ ಜೆ, ಪಂಕಜ್ ಮಿತ್ತಲ್, ಸತೀಶ್ ಚಂದ್ರ ಶರ್ಮಾ ಇವರುಗಳು ರಾಜ್ಯಗಳಿಗೆ ಒಳಮೀಸಲಾತಿಯನ್ನು ನೀಡುವ ಅಧಿಕಾರವಿದೆ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಆದರೆ, ಒಳಮೀಸಲಾತಿ ನೀಡಲು ನಿರ್ದಿಷ್ಟ ಸಮುದಾಯದ ಪ್ರಾತಿನಿಧ್ಯದ ಕೊರತೆಯನ್ನು ದೃಢಪಡಿಸಿಕೊಳ್ಳಲು ಅಂಕಿ ಅಂಶ ಸಂಗ್ರಹಿಸಲು ತಿಳಿಸುತ್ತಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿ ಮನೋಜ್ ಮಿಶ್ರಾರವರು ಪ್ರಾತಿನಿಧ್ಯದ ಹಿಂದುಳಿದಿರುವಿಕೆಯನ್ನು ತಿಳಿದುಕೊಳ್ಳಲು ರಾಜ್ಯವು ‘ರಾಜ್ಯ ಸರ್ಕಾರದ ಉದ್ಯೋಗ’ಗಳ ಅಂಕಿ ಅಂಶವನ್ನು ಸಂಗ್ರಹಿಸಬೇಕೆಂದು ನಿರ್ದಿಷ್ಟವಾಗಿಯೇ ತಿಳಿಸಿದ್ದಾರೆ. ಉದಾಹರಣೆಗೆ, ಕರ್ನಾಟಕ ಸರ್ಕಾರಕ್ಕೆ ಒಳಮೀಸಲಾತಿ ನೀಡುವ ಅಧಿಕಾರವಿದ್ದು, ಜಸ್ಟೀಸ್ ಸದಾಶಿವ ಆಯೋಗದ ಮಾದರಿಯಲ್ಲಿಯೇ ಅಥವಾ ಅದಕ್ಕಿಂತಲೂ ಸಮರ್ಥವಾದ ಆಯೋಗವನ್ನು ರಚಿಸಿ ಅಂಕಿ ಅಂಶಗಳನ್ನು ಕ್ರೋಡೀಕರಿಸಿ ಒಳಮೀಸಲಾತಿ ಜಾರಿಗೊಳಿಸಬೇಕಿದೆ.

ಈ ತೀರ್ಪಿನಲ್ಲಿ ಒಂದು ಅನ್ಯಾಯವೂ ಇದೆ

ಈಗಾಗಲೇ ಹೇಳಿದಂತೆ 6:1ರ ಬಹುಮತದೊಂದಿಗೆ ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ನಿಜ. ಇದು ಸಂತೋಷದ ವಿಚಾರವೇ ಆಗಿದೆ. ಆದರೆ, ಸುಖಾ ಸುಮ್ಮನೆ ಮತ್ತೆ ‘ಕ್ರೀಮಿಲೇಯರ್’ ಎಂಬ ವಾಮನನನ್ನು ಎಳೆದು ತರಲಾಗಿದೆ. ಈ ವಾಮನ ‘ಕ್ರೀಮಿಲೇಯರ್’ ಅನ್ನು ಮೊದಲು ಪ್ರಸ್ತಾಪಿಸಿರುವ ನ್ಯಾಯಾಧೀಶರು ದಲಿತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿ ಜಿ.ಎ ಗವಾಯ್ ಅವರೇ ಆಗಿದ್ದಾರೆ! ಇವರು ಒಳಮೀಸಲಾತಿಗೆ ಒಪ್ಪಿಗೆ ನೀಡುತ್ತಾ, “ಪರಿಶಿಷ್ಟ ಜಾತಿಗಳು ಹಾಗೂ ಪರಿಶಿಷ್ಟ ಪಂಗಡಗಳಿಗೂ ಕ್ರೀಮಿಲೇಯರ್ ತತ್ವವನ್ನು ಅಳವಡಿಸಬೇಕು. ಹೀಗೆ ಅಳವಡಿಸುವಾಗ ಹಿಂದುಳಿದ ವರ್ಗಗಳ ಅನುಸರಿಸಿರುವ ಕ್ರೀಮಿಲೇಯರ್ ಮಾನದಂಡಗಳ ಬದಲಾಗಿ ಇತರೆ ಮಾನದಂಡಗಳನ್ನು ಅಳವಡಿಸಿಕೊಳ್ಳಬಹುದು” ಎಂದಿದ್ದಾರೆ. ಈ ಮೂಲಕ ಕಬಾಬಿನಲ್ಲಿ ಮುಳ್ಳಿಡುವ ಕೆಲಸವನ್ನು ಇವರೇ ಮಾಡಿದ್ದಾರೆ. ಮುಂದೆ ತೀರ್ಪು ಬರೆದಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಜೆ, ಪಂಕಜ್ ಮಿತ್ತಲ್, ಸತೀಶ್ ಚಂದ್ರ ಶರ್ಮಾರವರು ಗವಾಯ್ ಅವರ ತೀರ್ಪನ್ನು ಉಲ್ಲೇಖ ಮಾಡುತ್ತಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೂ ‘ಕ್ರೀಮಿಲೇಯರ್’ ತತ್ವವನ್ನು ಅಳವಡಿಸಬೇಕೆಂದು ತೀರ್ಪಿತ್ತಿದ್ದಾರೆ. ಅಲ್ಲಿಗೆ ಪರಿಗಣನೆಯಲ್ಲಿ ಇಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ. ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರಂತೂ ತಮ್ಮ ತೀರ್ಪಿನಲ್ಲಿ ಚಾತುರ್ವರ್ಣ ಪದ್ಧತಿಯನ್ನು ಸಮರ್ಥಿಸಿಕೊಳ್ಳಲು ಭಗವದ್ಗೀತೆ, ಸ್ಕಂಧ ಪುರಾಣವನ್ನೂ ಎಳೆದು ತಂದಿದ್ದಾರೆ. ಜಾತಿ ಸೃಷ್ಠಿಗೆ ಚಾತುರ್ವರ್ಣ ಪದ್ಧತಿ ಕಾರಣವಲ್ಲ, ಈ ಪದ್ಧತಿಯು ಗುಣಗಳ ಆಧಾರದ ಮೇಲಿತ್ತು, ಜನ್ಮದ ಆಧಾರವಲ್ಲ ಎಂಬ ಹಳತು ಹಿಂದುತ್ವ ಉಪದೇಶವನ್ನೂ ಮಾಡಿದ್ದಾರೆ. ಗಾಂಧೀಜಿಯವರ ಹರಿಜನ ಪದವನ್ನು ಸಮರ್ಥಿಸಿಕೊಂಡಿರುವ ನ್ಯಾಯಮೂರ್ತಿ ಮಿತ್ತಲ್ ಅಪ್ಪಿತಪ್ಪಿಯೂ ಅಂಬೇಡ್ಕರರನ್ನು ಉಲ್ಲೇಖಿಸುವುದಿಲ್ಲ.

ಮಿತ್ತಲ್ ಗವಾಯಿಯವರನ್ನು ಉಲ್ಲೇಖಿಸುತ್ತಲೇ ಪೂರ್ವಾಗ್ರಹ ಪೀಡಿತರಾಗಿ ಅಭಿಪ್ರಾಯಿಸಿದ್ದಾರೆ. ಹಿಂದುಳಿದ ವರ್ಗಗಳವರು ಐಎಎಸ್‌, ಐಪಿಎಸ್‌ ಅಥವಾ ಇತರೆ ಯಾವುದೇ ಅಖಿಲ ಭಾರತ ಮಟ್ಟದ ಸೇವೆಯಲ್ಲಿದ್ದು, ತಮ್ಮ ಸ್ಥಾನವನ್ನು ಮೇಲ್ಮಟ್ಟಕ್ಕೆರಿಸಿಕೊಂಡಿದ್ದರೆ, ಅಂತಹವರ ಮಕ್ಕಳೂ ಸಹ ಮುಂದೆ ಮೀಸಲಾತಿ ಪಡೆಯುತ್ತಾರೆ. ಅಂತವರ ಮಕ್ಕಳನ್ನು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಹೇಳಲು ಸಾಧ್ಯವೇ? ಎಂದಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದುವರೆದಿರುವ ಪ.ಜಾ/ಪ.ಪಂ ದವರನ್ನು ಮೀಸಲಾತಿಯಿಂದ ಹೊರಗಿಡಬೇಕು. ಸೈಂಟ್ ಸ್ಟೀಫನ್ ಕಾಲೇಜು ಅಥವಾ ನಗರದ ಉತ್ತಮ ಕಾಲೇಜಿನಲ್ಲಿ ಕಲಿಯುವ ವಿದ್ಯಾರ್ಥಿ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿ ಒಂದೇ ಅಲ್ಲ ಎನ್ನುವ ಇವರಿಗೆ, ವರ್ಗ ಮತ್ತು ಜಾತಿಯ ನಡುವಿನ ವ್ಯತ್ಯಾಸವೇ ತಿಳಿದಿಲ್ಲ. ಅಸ್ಪೃಶ್ಯರೆಂಬ ಕಾರಣಕ್ಕೆ ರಾಷ್ಟ್ರಪತಿಯವರನ್ನೇ ಅವಮಾನಿಸುವ ಸಮಾಜದಲ್ಲಿ ಸಾಮಾಜಿಕ ಸಮಾನತೆ ಇರಲು ಸಾಧ್ಯವೇ ಇಲ್ಲ ಎಂಬ ಸಣ್ಣ ಅಂಶವೂ ನ್ಯಾಯಾಧೀಶರ ಗಮನಕ್ಕೆ ಬರದಿರುವುದು ವಿಷಾದನೀಯ. ಇಂತಹ ಅಭಿಪ್ರಾಯಗಳನ್ನು ನೀಡುವ ಮಿತ್ತಲ್ ಅವರು ಮತ್ತೊಂದು ಹೆಬ್ಬಂಡೆಯನ್ನು ಪರಿಶಿಷ್ಟರ ಮೀಸಲಾತಿ ಮೇಲೆ ಹಾಕಿದ್ದಾರೆ. ಅದೆಂದರೆ ಮೀಸಲಾತಿಯು ಒಂದೇ ಪೀಳಿಗೆಗೆ ಸಾಕಂತೆ! ಇದಕ್ಕೆ ಪದೇ ಪದೇ ಗವಾಯಿಯವರ ಅಭಿಪ್ರಾಯಕ್ಕೆ ಮೊರೆ ಹೋಗಿದ್ದಾರೆ. ಈ ಅಭಿಪ್ರಾಯ ಎಷ್ಟು ಬಾಲಿಶವಾಗಿದೆ ಎಂದರೆ, ಪಿಯುಸಿಯಲ್ಲಿ ಮೀಸಲಾತಿ ಪಡೆದಿರುವ ಪೋಷಕರ ಮಗ/ಮಗಳು ಪದವಿ ಓದುವಾಗ ಮೀಸಲಾತಿ ಪಡೆಯುವಂತಿಲ್ಲ! ಒಮ್ಮೆ ಮೀಸಲಾತಿ ಪಡೆದ ಡಿ ಗ್ರೂಪ್ ನೌಕರ/ಳ ಮಗ/ಮಗಳು ಮುಂದೆ ಉನ್ನತ ಹುದ್ದೆ ಪಡೆಯಲು ಮೀಸಲಾತಿ ಪಡೆಯುವಂತಿಲ್ಲ! ಇಂತಹ ಅವೈಜ್ಞಾನಿಕ ಹಾಗೂ ಸಮಾಜ ವಿರೋಧಿ ಅಭಿಪ್ರಾಯವನ್ನು ಊಹಿಸಿಕೊಳ್ಳಲೂ ಕಷ್ಟವಾಗುತ್ತದೆ.

ಒಟ್ಟಾರೆ ಇದೊಂದು ಸಮಾಧಾನಕರ ತೀರ್ಪು. ಆದರೆ, ದಲಿತರು ಎಚ್ಚರವಾಗಿರಬೇಕು. ಅಪ್ಪಿತಪ್ಪಿಯೂ ‘ಕ್ರೀಮಿಲೇಯರ್’ ಹೇರಲು ಬಿಡಬಾರದು. 8 ಲಕ್ಷ ಆದಾಯವಿದ್ದರೂ ಮೇಲ್ಜಾತಿಗಳಿಗೆ ಇಡಬ್ಲ್ಯುಎಸ್‌ ಮೂಲಕ ಶೇ. 10 ಮೀಸಲಾತಿ ನೀಡಲು ಒಪ್ಪಿಕೊಂಡಿರುವ ಸುಪ್ರೀಂ ಕೋರ್ಟ್, ಬ್ರಾಹ್ಮಣರು, ಬನಿಯಾಗಳು ಎನ್ನುವ ಕಾರಣಕ್ಕೆ ಸಾಮಾಜಿಕ-ಆರ್ಥಿಕವಾಗಿ ಮುಂದುವರೆದಿರುವಿಕೆಯನ್ನು ಪರಿಗಣಿಸಲೇ ಇಲ್ಲ. ಹಾಗೆಯೇ ದಲಿತರ ವಿಚಾರದಲ್ಲಿ ಆರ್ಥಿಕ ಮುಂದುವರೆದಿರುವಿಕೆಯನ್ನು ಹಾಗೂ ಕೋಟ್ಯಾಧಿಪತಿ ದಲಿತರ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಗಣನೆಗೂ ತೆಗೆದುಕೊಳ್ಳುವುದಿಲ್ಲ. ಇದಾವ ನ್ಯಾಯ? ಬ್ಯಾಂಕ್ ಖಾತೆಯಲ್ಲಿ ಒಂದು ಕೋಟಿ ಬ್ಯಾಂಕ್ ಬ್ಯಾಲೆನ್ಸ್ ಇಟ್ಟಿರುವ ದಲಿತ/ದಲಿತೆ, ಅದೇ ಒಂದು ಕೋಟಿ ಬ್ಯಾಂಕ್ ಬ್ಯಾಲೆನ್ಸ್ ಇಟ್ಟಿರುವ ಬ್ರಾಹ್ಮಣ, ಬನಿಯಾ, ಲಿಂಗಾಯತ, ಒಕ್ಕಲಿಗ, ಕುರುಬ ಅಥವಾ ವಿಶ್ವಕರ್ಮ ಮುಂತಾದವರಿಗೆ ಸಮಾನರೇ? ಇಂತಹ ಕನಿಷ್ಠ ತಿಳುವಳಿಕೆಯೂ ಆ ನಾಲ್ವರು ನ್ಯಾಯಾಧೀಶರಿಗೆ ಇಲ್ಲದಾಯಿತೆ? ಏಕೈಕ ದಲಿತ ನ್ಯಾಯಾಧೀಶರಿಗೂ ತಿಳಿಯದಾಯಿತೆ?

ಇದನ್ನೂ ಓದಿ : ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...