Homeಅಂಕಣಗಳುಒಳಮೀಸಲಾತಿ ತೀರ್ಪು : ಕಬಾಬ್‌ನಲ್ಲೊಂದು ಮುಳ್ಳು

ಒಳಮೀಸಲಾತಿ ತೀರ್ಪು : ಕಬಾಬ್‌ನಲ್ಲೊಂದು ಮುಳ್ಳು

"ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ನಿಜ. ಇದು ಸಂತೋಷದ ವಿಚಾರವೇ ಆಗಿದೆ. ಆದರೆ, ಸುಖಾ ಸುಮ್ಮನೆ ಮತ್ತೆ 'ಕ್ರೀಮಿಲೇಯರ್' ಎಂಬ ವಾಮನನನ್ನು ಎಳೆದು ತರಲಾಗಿದೆ"

- Advertisement -
- Advertisement -

1975 ರಲ್ಲಿ ಪಂಜಾಬ್ ಸರ್ಕಾರವು ಅಲ್ಲಿನ ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ಹಿಂದುಳಿದಿದ್ದ ಮಜಬಿ ಸಿಖ್ ಸಮುದಾಯಕ್ಕೆ ಒಳಮೀಸಲಾತಿ ಘೋಷಿಸಿ ಆದೇಶಿಸಿದಾಗ ಆರಂಭವಾದ ಒಳಮೀಸಲಾತಿ ಪರ ವಿರೋಧದ ಚರ್ಚೆಯು ಪರಸ್ಪರ ಹೋರಾಟವಾಗಿ ಮಾರ್ಪಟ್ಟು 5 ದಶಕಗಳ ಕಾಲ ಮುಂದುವರೆಯಿತು. ಈ ನಡುವೆ ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಮಾದಿಗ ದಂಡೋರ ನೇತೃತ್ವದ ಒಳಮೀಸಲಾತಿ ಪರ ಹೋರಾಟವು ಇಡೀ ದೇಶದ ರಾಜಕಾರಣದಲ್ಲಿ ಮೈಲುಗಲ್ಲಾಗಿ ನಿಂತಿದೆ. ಎರಡೂ ರಾಜ್ಯದ ಸರ್ಕಾರಗಳನ್ನು ಏಳಿಸುವ ಹಾಗೂ ಬೀಳಿಸುವಲ್ಲಿ ನಿರ್ಣಾಯಕ ಪಾತ್ರವನ್ನು ಈ ಸಂಘಟನೆ ವಹಿಸಿದೆ. ಹಾಗಾಗಿ , ಸುಪ್ರೀಂಕೋರ್ಟ್ ನೀಡಿರುವ ಒಳಮೀಸಲಾತಿ ಪರ ತೀರ್ಪನ್ನು ಮಾದಿಗ ದಂಡೋರದಂತೆ ದೇಶದಾದ್ಯಂತ ಒಳಮೀಸಲಾತಿ ಪರ ಹೋರಾಟದ ಕಿಚ್ಚು ಹಚ್ಚಿದ ಹೋರಾಟಗಾರರಿಗೆ ಅರ್ಪಿಸಬೇಕಿದೆ.

ಇ.ವಿ ಚಿನ್ನಯ್ಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ಒಳಮೀಸಲಾತಿಯ ವಿರುದ್ಧ ತೀರ್ಪಿತ್ತಿತ್ತು. ಪಂಜಾಬಿನ ಧವಿಂದರ್ ಪ್ರಕರಣದಲ್ಲಿ ಜಸ್ಟೀಸ್ ಅರುಣ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಒಳಮೀಸಲಾತಿ ಪರ ತೀರ್ಪು ನೀಡಿತ್ತು. ಹೀಗಾಗಿ ಒಳಮೀಸಲಾತಿಯ ಪ್ರಶ್ನೆಯು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಪೀಠದ ಮುಂದೆ ಬಂದಿತ್ತು. ಈ ಪೀಠದ ಮುಂದೆ ಬಹುಮುಖ್ಯವಾದ ಎರಡು ಪ್ರಶ್ನೆಗಳಿದ್ದವು.

1. ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ನೀಡುವ ಅಧಿಕಾರವಿದೆಯೇ?

2. ಸಂವಿಧಾನಕ್ಕನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಉಪವರ್ಗೀಕರಣ (ಒಳಮೀಸಲಾತಿ) ಮಾಡಬಹುದೇ?

ಈ ಎರಡು ಪ್ರಶ್ನೆಗಳಿಗೆ ಸಂಬಂಧಿಸಿದಂತೆ ದಿನಾಂಕ 01.08.2024ರಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಪೀಠವು ತೀರ್ಪು ನೀಡಿದೆ. 6:1ರ ಬಹುಮತದೊಂದಿಗೆ ಇ.ವಿ ಚಿನ್ನಯ್ಯ ಪ್ರಕರಣದಲ್ಲಿ ನೀಡಲಾಗಿದ್ದ ಒಳಮೀಸಲಾತಿ ಸಾಧ್ಯವಿಲ್ಲ ಎಂಬ ತೀರ್ಪನ್ನು ರದ್ದುಗೊಳಿಸಿದೆ. ಈ ಮೂಲಕ ಸಾಂವಿಧಾನಿಕವಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಒಳಮೀಸಲಾತಿ ನೀಡಬಹುದು. ಹೀಗೆ ಒಳಮೀಸಲಾತಿ ನೀಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂಬ ದಲಿತ ಪರ ತೀರ್ಪು ನೀಡಿದೆ. ಈ ಮೂಲಕ ಒಳಮೀಸಲಾತಿ ಜಾರಿಗಾಗಿ ಉಷಾ ಮೆಹ್ರಾ ಸಮಿತಿಯ ಶಿಫಾರಸಿನಂತೆ ಸಂವಿಧಾನ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರದ ಮುಂದೆ ಹೋರಾಟ ಮಾಡುವ ಅವಶ್ಯಕತೆ ಇಲ್ಲದಂತೆ ಮಾಡಿದೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಂತೆ ರಾಜ್ಯ ಸರ್ಕಾರಗಳೇ ಪರಿಶಿಷ್ಟರಿಗೆ ಒಳಮೀಸಲಾತಿ ಜಾರಿ ಮಾಡಬಹುದಾಗಿದೆ.

ಒಳಮೀಸಲಾತಿ ಜಾರಿ ಹೇಗೆ?

ಸುಪ್ರೀಂ ಕೋರ್ಟ್ ತೀರ್ಪಿನಂತೆ 7 ಜನ ನ್ಯಾಯಾಧೀಶರಲ್ಲಿ ಏಕೈಕ ಮಹಿಳಾ ನ್ಯಾಯಾಧೀಶೆಯಾಗಿರುವ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿಯವರನ್ನು ಹೊರತುಪಡಿಸಿದರೆ, ಉಳಿದಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ, ಜಿ.ಎ.ಗವಾಯ್, ವಿಕ್ರಮ್ ನಾಥ್ ಜೆ, ಪಂಕಜ್ ಮಿತ್ತಲ್, ಸತೀಶ್ ಚಂದ್ರ ಶರ್ಮಾ ಇವರುಗಳು ರಾಜ್ಯಗಳಿಗೆ ಒಳಮೀಸಲಾತಿಯನ್ನು ನೀಡುವ ಅಧಿಕಾರವಿದೆ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಆದರೆ, ಒಳಮೀಸಲಾತಿ ನೀಡಲು ನಿರ್ದಿಷ್ಟ ಸಮುದಾಯದ ಪ್ರಾತಿನಿಧ್ಯದ ಕೊರತೆಯನ್ನು ದೃಢಪಡಿಸಿಕೊಳ್ಳಲು ಅಂಕಿ ಅಂಶ ಸಂಗ್ರಹಿಸಲು ತಿಳಿಸುತ್ತಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿ ಮನೋಜ್ ಮಿಶ್ರಾರವರು ಪ್ರಾತಿನಿಧ್ಯದ ಹಿಂದುಳಿದಿರುವಿಕೆಯನ್ನು ತಿಳಿದುಕೊಳ್ಳಲು ರಾಜ್ಯವು ‘ರಾಜ್ಯ ಸರ್ಕಾರದ ಉದ್ಯೋಗ’ಗಳ ಅಂಕಿ ಅಂಶವನ್ನು ಸಂಗ್ರಹಿಸಬೇಕೆಂದು ನಿರ್ದಿಷ್ಟವಾಗಿಯೇ ತಿಳಿಸಿದ್ದಾರೆ. ಉದಾಹರಣೆಗೆ, ಕರ್ನಾಟಕ ಸರ್ಕಾರಕ್ಕೆ ಒಳಮೀಸಲಾತಿ ನೀಡುವ ಅಧಿಕಾರವಿದ್ದು, ಜಸ್ಟೀಸ್ ಸದಾಶಿವ ಆಯೋಗದ ಮಾದರಿಯಲ್ಲಿಯೇ ಅಥವಾ ಅದಕ್ಕಿಂತಲೂ ಸಮರ್ಥವಾದ ಆಯೋಗವನ್ನು ರಚಿಸಿ ಅಂಕಿ ಅಂಶಗಳನ್ನು ಕ್ರೋಡೀಕರಿಸಿ ಒಳಮೀಸಲಾತಿ ಜಾರಿಗೊಳಿಸಬೇಕಿದೆ.

ಈ ತೀರ್ಪಿನಲ್ಲಿ ಒಂದು ಅನ್ಯಾಯವೂ ಇದೆ

ಈಗಾಗಲೇ ಹೇಳಿದಂತೆ 6:1ರ ಬಹುಮತದೊಂದಿಗೆ ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ನಿಜ. ಇದು ಸಂತೋಷದ ವಿಚಾರವೇ ಆಗಿದೆ. ಆದರೆ, ಸುಖಾ ಸುಮ್ಮನೆ ಮತ್ತೆ ‘ಕ್ರೀಮಿಲೇಯರ್’ ಎಂಬ ವಾಮನನನ್ನು ಎಳೆದು ತರಲಾಗಿದೆ. ಈ ವಾಮನ ‘ಕ್ರೀಮಿಲೇಯರ್’ ಅನ್ನು ಮೊದಲು ಪ್ರಸ್ತಾಪಿಸಿರುವ ನ್ಯಾಯಾಧೀಶರು ದಲಿತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿ ಜಿ.ಎ ಗವಾಯ್ ಅವರೇ ಆಗಿದ್ದಾರೆ! ಇವರು ಒಳಮೀಸಲಾತಿಗೆ ಒಪ್ಪಿಗೆ ನೀಡುತ್ತಾ, “ಪರಿಶಿಷ್ಟ ಜಾತಿಗಳು ಹಾಗೂ ಪರಿಶಿಷ್ಟ ಪಂಗಡಗಳಿಗೂ ಕ್ರೀಮಿಲೇಯರ್ ತತ್ವವನ್ನು ಅಳವಡಿಸಬೇಕು. ಹೀಗೆ ಅಳವಡಿಸುವಾಗ ಹಿಂದುಳಿದ ವರ್ಗಗಳ ಅನುಸರಿಸಿರುವ ಕ್ರೀಮಿಲೇಯರ್ ಮಾನದಂಡಗಳ ಬದಲಾಗಿ ಇತರೆ ಮಾನದಂಡಗಳನ್ನು ಅಳವಡಿಸಿಕೊಳ್ಳಬಹುದು” ಎಂದಿದ್ದಾರೆ. ಈ ಮೂಲಕ ಕಬಾಬಿನಲ್ಲಿ ಮುಳ್ಳಿಡುವ ಕೆಲಸವನ್ನು ಇವರೇ ಮಾಡಿದ್ದಾರೆ. ಮುಂದೆ ತೀರ್ಪು ಬರೆದಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಜೆ, ಪಂಕಜ್ ಮಿತ್ತಲ್, ಸತೀಶ್ ಚಂದ್ರ ಶರ್ಮಾರವರು ಗವಾಯ್ ಅವರ ತೀರ್ಪನ್ನು ಉಲ್ಲೇಖ ಮಾಡುತ್ತಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೂ ‘ಕ್ರೀಮಿಲೇಯರ್’ ತತ್ವವನ್ನು ಅಳವಡಿಸಬೇಕೆಂದು ತೀರ್ಪಿತ್ತಿದ್ದಾರೆ. ಅಲ್ಲಿಗೆ ಪರಿಗಣನೆಯಲ್ಲಿ ಇಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ. ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರಂತೂ ತಮ್ಮ ತೀರ್ಪಿನಲ್ಲಿ ಚಾತುರ್ವರ್ಣ ಪದ್ಧತಿಯನ್ನು ಸಮರ್ಥಿಸಿಕೊಳ್ಳಲು ಭಗವದ್ಗೀತೆ, ಸ್ಕಂಧ ಪುರಾಣವನ್ನೂ ಎಳೆದು ತಂದಿದ್ದಾರೆ. ಜಾತಿ ಸೃಷ್ಠಿಗೆ ಚಾತುರ್ವರ್ಣ ಪದ್ಧತಿ ಕಾರಣವಲ್ಲ, ಈ ಪದ್ಧತಿಯು ಗುಣಗಳ ಆಧಾರದ ಮೇಲಿತ್ತು, ಜನ್ಮದ ಆಧಾರವಲ್ಲ ಎಂಬ ಹಳತು ಹಿಂದುತ್ವ ಉಪದೇಶವನ್ನೂ ಮಾಡಿದ್ದಾರೆ. ಗಾಂಧೀಜಿಯವರ ಹರಿಜನ ಪದವನ್ನು ಸಮರ್ಥಿಸಿಕೊಂಡಿರುವ ನ್ಯಾಯಮೂರ್ತಿ ಮಿತ್ತಲ್ ಅಪ್ಪಿತಪ್ಪಿಯೂ ಅಂಬೇಡ್ಕರರನ್ನು ಉಲ್ಲೇಖಿಸುವುದಿಲ್ಲ.

ಮಿತ್ತಲ್ ಗವಾಯಿಯವರನ್ನು ಉಲ್ಲೇಖಿಸುತ್ತಲೇ ಪೂರ್ವಾಗ್ರಹ ಪೀಡಿತರಾಗಿ ಅಭಿಪ್ರಾಯಿಸಿದ್ದಾರೆ. ಹಿಂದುಳಿದ ವರ್ಗಗಳವರು ಐಎಎಸ್‌, ಐಪಿಎಸ್‌ ಅಥವಾ ಇತರೆ ಯಾವುದೇ ಅಖಿಲ ಭಾರತ ಮಟ್ಟದ ಸೇವೆಯಲ್ಲಿದ್ದು, ತಮ್ಮ ಸ್ಥಾನವನ್ನು ಮೇಲ್ಮಟ್ಟಕ್ಕೆರಿಸಿಕೊಂಡಿದ್ದರೆ, ಅಂತಹವರ ಮಕ್ಕಳೂ ಸಹ ಮುಂದೆ ಮೀಸಲಾತಿ ಪಡೆಯುತ್ತಾರೆ. ಅಂತವರ ಮಕ್ಕಳನ್ನು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಹೇಳಲು ಸಾಧ್ಯವೇ? ಎಂದಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದುವರೆದಿರುವ ಪ.ಜಾ/ಪ.ಪಂ ದವರನ್ನು ಮೀಸಲಾತಿಯಿಂದ ಹೊರಗಿಡಬೇಕು. ಸೈಂಟ್ ಸ್ಟೀಫನ್ ಕಾಲೇಜು ಅಥವಾ ನಗರದ ಉತ್ತಮ ಕಾಲೇಜಿನಲ್ಲಿ ಕಲಿಯುವ ವಿದ್ಯಾರ್ಥಿ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿ ಒಂದೇ ಅಲ್ಲ ಎನ್ನುವ ಇವರಿಗೆ, ವರ್ಗ ಮತ್ತು ಜಾತಿಯ ನಡುವಿನ ವ್ಯತ್ಯಾಸವೇ ತಿಳಿದಿಲ್ಲ. ಅಸ್ಪೃಶ್ಯರೆಂಬ ಕಾರಣಕ್ಕೆ ರಾಷ್ಟ್ರಪತಿಯವರನ್ನೇ ಅವಮಾನಿಸುವ ಸಮಾಜದಲ್ಲಿ ಸಾಮಾಜಿಕ ಸಮಾನತೆ ಇರಲು ಸಾಧ್ಯವೇ ಇಲ್ಲ ಎಂಬ ಸಣ್ಣ ಅಂಶವೂ ನ್ಯಾಯಾಧೀಶರ ಗಮನಕ್ಕೆ ಬರದಿರುವುದು ವಿಷಾದನೀಯ. ಇಂತಹ ಅಭಿಪ್ರಾಯಗಳನ್ನು ನೀಡುವ ಮಿತ್ತಲ್ ಅವರು ಮತ್ತೊಂದು ಹೆಬ್ಬಂಡೆಯನ್ನು ಪರಿಶಿಷ್ಟರ ಮೀಸಲಾತಿ ಮೇಲೆ ಹಾಕಿದ್ದಾರೆ. ಅದೆಂದರೆ ಮೀಸಲಾತಿಯು ಒಂದೇ ಪೀಳಿಗೆಗೆ ಸಾಕಂತೆ! ಇದಕ್ಕೆ ಪದೇ ಪದೇ ಗವಾಯಿಯವರ ಅಭಿಪ್ರಾಯಕ್ಕೆ ಮೊರೆ ಹೋಗಿದ್ದಾರೆ. ಈ ಅಭಿಪ್ರಾಯ ಎಷ್ಟು ಬಾಲಿಶವಾಗಿದೆ ಎಂದರೆ, ಪಿಯುಸಿಯಲ್ಲಿ ಮೀಸಲಾತಿ ಪಡೆದಿರುವ ಪೋಷಕರ ಮಗ/ಮಗಳು ಪದವಿ ಓದುವಾಗ ಮೀಸಲಾತಿ ಪಡೆಯುವಂತಿಲ್ಲ! ಒಮ್ಮೆ ಮೀಸಲಾತಿ ಪಡೆದ ಡಿ ಗ್ರೂಪ್ ನೌಕರ/ಳ ಮಗ/ಮಗಳು ಮುಂದೆ ಉನ್ನತ ಹುದ್ದೆ ಪಡೆಯಲು ಮೀಸಲಾತಿ ಪಡೆಯುವಂತಿಲ್ಲ! ಇಂತಹ ಅವೈಜ್ಞಾನಿಕ ಹಾಗೂ ಸಮಾಜ ವಿರೋಧಿ ಅಭಿಪ್ರಾಯವನ್ನು ಊಹಿಸಿಕೊಳ್ಳಲೂ ಕಷ್ಟವಾಗುತ್ತದೆ.

ಒಟ್ಟಾರೆ ಇದೊಂದು ಸಮಾಧಾನಕರ ತೀರ್ಪು. ಆದರೆ, ದಲಿತರು ಎಚ್ಚರವಾಗಿರಬೇಕು. ಅಪ್ಪಿತಪ್ಪಿಯೂ ‘ಕ್ರೀಮಿಲೇಯರ್’ ಹೇರಲು ಬಿಡಬಾರದು. 8 ಲಕ್ಷ ಆದಾಯವಿದ್ದರೂ ಮೇಲ್ಜಾತಿಗಳಿಗೆ ಇಡಬ್ಲ್ಯುಎಸ್‌ ಮೂಲಕ ಶೇ. 10 ಮೀಸಲಾತಿ ನೀಡಲು ಒಪ್ಪಿಕೊಂಡಿರುವ ಸುಪ್ರೀಂ ಕೋರ್ಟ್, ಬ್ರಾಹ್ಮಣರು, ಬನಿಯಾಗಳು ಎನ್ನುವ ಕಾರಣಕ್ಕೆ ಸಾಮಾಜಿಕ-ಆರ್ಥಿಕವಾಗಿ ಮುಂದುವರೆದಿರುವಿಕೆಯನ್ನು ಪರಿಗಣಿಸಲೇ ಇಲ್ಲ. ಹಾಗೆಯೇ ದಲಿತರ ವಿಚಾರದಲ್ಲಿ ಆರ್ಥಿಕ ಮುಂದುವರೆದಿರುವಿಕೆಯನ್ನು ಹಾಗೂ ಕೋಟ್ಯಾಧಿಪತಿ ದಲಿತರ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಗಣನೆಗೂ ತೆಗೆದುಕೊಳ್ಳುವುದಿಲ್ಲ. ಇದಾವ ನ್ಯಾಯ? ಬ್ಯಾಂಕ್ ಖಾತೆಯಲ್ಲಿ ಒಂದು ಕೋಟಿ ಬ್ಯಾಂಕ್ ಬ್ಯಾಲೆನ್ಸ್ ಇಟ್ಟಿರುವ ದಲಿತ/ದಲಿತೆ, ಅದೇ ಒಂದು ಕೋಟಿ ಬ್ಯಾಂಕ್ ಬ್ಯಾಲೆನ್ಸ್ ಇಟ್ಟಿರುವ ಬ್ರಾಹ್ಮಣ, ಬನಿಯಾ, ಲಿಂಗಾಯತ, ಒಕ್ಕಲಿಗ, ಕುರುಬ ಅಥವಾ ವಿಶ್ವಕರ್ಮ ಮುಂತಾದವರಿಗೆ ಸಮಾನರೇ? ಇಂತಹ ಕನಿಷ್ಠ ತಿಳುವಳಿಕೆಯೂ ಆ ನಾಲ್ವರು ನ್ಯಾಯಾಧೀಶರಿಗೆ ಇಲ್ಲದಾಯಿತೆ? ಏಕೈಕ ದಲಿತ ನ್ಯಾಯಾಧೀಶರಿಗೂ ತಿಳಿಯದಾಯಿತೆ?

ಇದನ್ನೂ ಓದಿ : ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...