Homeಕರ್ನಾಟಕಒಳ ಮೀಸಲಾತಿ: ಸಿವಿಲ್ ಸೇವೆಗಳ ನೇಮಕಾತಿ ಹೊಸ ಅಧಿಸೂಚನೆಗೆ ತಡೆ

ಒಳ ಮೀಸಲಾತಿ: ಸಿವಿಲ್ ಸೇವೆಗಳ ನೇಮಕಾತಿ ಹೊಸ ಅಧಿಸೂಚನೆಗೆ ತಡೆ

- Advertisement -
- Advertisement -

ರಾಜ್ಯ ನಾಗರಿಕ (ಸಿವಿಲ್) ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸ ಅಧಿಸೂಚನೆ ಹೊರಡಿಸುವುದನ್ನು ತಡೆ ಹಿಡಿಯುವಂತೆ ಸಿಬ್ಬಂದಿ ಹಾಗೂ ಅಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸದಂತೆ 2024ರ ನವೆಂಬರ್ 25ರಂದು ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ, ಕೆಲವು ನೇಮಕಾತಿ ಪ್ರಾಧಿಕಾರಗಳು ಈ ಸೂಚನೆಯನ್ನು ಉಲ್ಲಂಘಿಸುತ್ತಿವೆ ಎನ್ನಲಾಗಿದೆ.

ಹಾಗಾಗಿ, ಆದೇಶ ಉಲ್ಲಂಘಿಸಿ ಹೊಸ ಅಧಿಸೂಚನೆ ಹೊರಡಿಸುವ ನೇಮಕಾತಿ ಪ್ರಾಧಿಕಾರಗಳ ವಿರುದ್ದ ಆಡಳಿತ ಇಲಾಖೆಗಳ ಕಾರ್ಯದರ್ಶಿಗಳು ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಉಪ ಕಾರ್ಯದರ್ಶಿ ಉಮಾ ವರದಯ್ಯ ಶನಿವಾರ (ಮಾ.29) ಸೂಚನೆ ನೀಡಿದ್ದಾರೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಬರುವವರೆಗೆ ಯಾವುದೇ ಹೊಸ ನೇಮಕಾತಿ ನಡೆಸದಿರಲು ರಾಜ್ಯ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿತ್ತು. ಅದರನ್ವಯ 2024ರ ನವೆಂಬರ್ 25 ರಂದು ಸುತ್ತೋಲೆ ಹೊರಡಿಸಿದ್ದ ಡಿಪಿಎಆರ್, ರಾಜ್ಯ ನಾಗರಿಕ ಸೇವೆಗಳ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಹೊರಡಿಸಬಾರದು ಎಂದು ಸೂಚನೆ ನೀಡಿತ್ತು.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನೇಮಿಸಿದ ರಾಜ್ಯ ಸರ್ಕಾರ ನೇಮಿಸಿದ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗ ಮಾರ್ಚ್ 27ರಂದು ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ. ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ಉಪ ಜಾತಿಗಳ ವರ್ಗೀಕರಣಕ್ಕೆ ಹೊಸದಾಗಿ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಶಿಫಾರಸ್ಸು ಮಾಡಿದೆ. ಅದಕ್ಕೆ ಒಪ್ಪಿಗೆ ಸೂಚಿಸಿರುವ ಸರ್ಕಾರ, ಹೊಸ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ನಾಗಮೋಹನದಾಸ್ ಆಯೋಗಕ್ಕೇ ನೀಡಿದ್ದು, ಆಯೋಗದ ಅವಧಿಯನ್ನು ಎರಡು ತಿಂಗಳಿಗೆ ವಿಸ್ತರಿಸಿದೆ.

‘ನ್ಯಾಯಯುತ ಬೇಡಿಕೆ ಮುಂದಕ್ಕೆ ಹಾಕುವ ಮತ್ತೊಂದು ಪ್ರಯತ್ನ..’; ನಾಗಮೋಹನ್‌ದಾಸ್‌ ಸಮಿತಿ ಮಧ್ಯಂತರ ವರದಿಗೆ ಎನ್.ಮೂರ್ತಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...