Homeಕರ್ನಾಟಕಒಳಮೀಸಲಾತಿ ಧರಣಿ| ಆಹ್ವಾನವಿಲ್ಲದೆ ವೇದಿಕೆಗೆ ಬಂದ ಬಿಜೆಪಿ ನಾಯಕರು; ಕೆಳಗಿಳಿಸಿದ ಹೋರಾಟಗಾರರು

ಒಳಮೀಸಲಾತಿ ಧರಣಿ| ಆಹ್ವಾನವಿಲ್ಲದೆ ವೇದಿಕೆಗೆ ಬಂದ ಬಿಜೆಪಿ ನಾಯಕರು; ಕೆಳಗಿಳಿಸಿದ ಹೋರಾಟಗಾರರು

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದ್ದು, ಆಹ್ವಾನ ಇಲ್ಲದೆಯೇ ವೇದಿಕೆಗೆ ಆಗಮಿಸಿದ ಬಿಜೆಪಿ ನಾಯಕರನ್ನು ಹೋರಾಟಗಾರರು ವಾಪಸ್ ಕಳುಹಿಸಿದರು.

‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿ’ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿದೆ. ಈಗಾಗಲೇ ಸರ್ಕಾರ 6-6-5ರ ಅನುಪಾತದಲ್ಲಿ ಒಳಮೀಸಲಾತಿ ಜಾರಿ ಮಾಡಿದ್ದರೂ, ನಾಗಮೋಹನ್ ದಾಸ್ ಆಯೋಗದ ಸಲಹೆಯಾದ ಅಲೆಮಾರಿಗಳಿಗೆ ಶೇ.1ರ ಪ್ರತ್ಯೇಕ ಮೀಸಲಾತಿಯನ್ನು ಕೈಬಿಡಲಾಗಿದೆ. ಸರ್ಕಾರದ ನಿರ್ಧಾರವನ್ನು ಪುನರ್ ಪರಿಶೀಲನಗೆಗೆ ಒಳಪಡಿಸಿ ಅಲೆಮಾರಿಗಳಿಗೆ ಮೀಸಲಾತಿ ಕಲ್ಪಿಸಬೇಕು ಎಂದು ಹೋರಾಟ ಮುಂದುವರೆದಿದೆ.

ಪ್ರತಿಭಟನೆಗೆ ಹೋರಾಟ ಸಮಿತಿಯಿಂದ ಯಾವುದೇ ಆಹ್ವಾನ ಇರದಿದ್ದರೂ ಬಿಜೆಪಿ ಶಾಸಕರಾದ ಅಶ್ವತ್ಥ ನಾರಾಯಣ ಮತ್ತು ಅರವಿಂದ್ ಬೆಲ್ಲದ್ ಅವರು ಆಗಮಿಸಿದರು. ಬಿಜೆಪಿ ನಾಯಕರ ಈ ನಡೆಯಿಂದ ಕೆಲಹೊತ್ತು ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇನ್ನು ಇದೇ ವೇಳೆ, ಶಾಸಕ ಅರವಿಂದ್ ಬೆಲ್ಲದ್ ಅವರು ಸಭೆಯನ್ನುದ್ದೇಶಿ ಮಾತನಾಡಿದರು. ಅವರ ಮಾತು ಮುಗಿಯುತ್ತಿದ್ದಂತೆಯೇ ಹೋರಾಟಗಾರರು ಬಿಜೆಪಿ ನಾಯಕರನ್ನು ವೇದಿಕೆಯಿಂದ ಕೆಳಗಿಳಿಸಿದರು.

ಈ ವೇಳೆ ಬಿಜೆಪಿ ನಾಯಕರಿಗೆ ತಾಕೀತು ಮಾಡಿದ ಹೋರಾಟಗಾರರು, “ಒಳಮೀಸಲಾತಿ ವಿಚಾರವಾಗಿ ನೀವು ಸದನದಲ್ಲಿ ಏನೆಲ್ಲಾ ಮಾತನಾಡುತ್ತಿದ್ದೀರಾ ಎಂಬುದನ್ನು ನಾವು ಗಮನಿಸುತ್ತೇವೆ. ಸದನದಲ್ಲಿ ತಾವೆಲ್ಲರೂ ಒಕ್ಕೋರಲಿನಿಂದ ಮಾತನಾಡಿ, ಅಲೆಮಾರಿಗಳ ಪ್ರತ್ಯೇಕ ಮೀಸಲಾತಿಗಾಗಿ ಮುಖ್ಯಮಂತ್ರಿಗಳ ಮನವೊಲಿಸಬೇಕು. ಒಂದು ವೇಳೆ ಈ ಬಗ್ಗೆ ಸದಸನದಲ್ಲಿ ಮಾತನಾಡಲು ತಮಗೆ ಅವಕಾಶ ಸಿಗದೇ ಇದ್ದರೆ, ತಾವುಗಳು ಬೇರೆ ವಿಚಾರದಲ್ಲಿ ಸದನ ಬಹಿಷ್ಕರಿಸಿದಂತೆ, ಈವಿಚಾರದಲ್ಲಿ ಬಾಯ್ಕಾಟ್‌ ಮಾಡಬೇಕು” ಎಂದು ಆಗ್ರಹಿಸಿದರು.

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...