Homeಕರ್ನಾಟಕಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

ಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

- Advertisement -
- Advertisement -

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ನಿಗದಿಪಡಿಸಲು ಸರ್ಕಾರ ರಚಿಸಿರುವ ಏಕ ಸದಸ್ಯ ಸಮಿತಿಯ ಅಧ್ಯಕ್ಷ ಜಸ್ಟೀಸ್ ನಾಗಮೋಹನ್ ದಾಸ್ ಅವರನ್ನು ಬುಧವಾರ (ಫೆ.12) ಭೇಟಿಯಾದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಸಮಿತಿ ಪ್ರಮುಖರು ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.

ಸುಪ್ರೀಂ ಕೋರ್ಟ್ ತೀರ್ಪಿನಂತೆ ಎಸ್‌ಸಿ ಒಳ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಸಮಿತಿ ರಚಿಸಿರುವುದು ಅಭಿನಂದನಾರ್ಹ. ಒಳ ಮೀಸಲಾತಿ ಜಾರಿ ಆಗುವವರೆಗೆ ಸರ್ಕಾರ ನೇಮಕಾತಿಗಳನ್ನು ತಡೆ ಹಿಡಿದಿದೆ. ಇದು ಸ್ವಾಗತಾರ್ಹವೇ ಆದರೂ, ಹೆಚ್ಚು ಸಮಯ ನೇಮಕಾತಿ ತಡೆ ಹಿಡಿಯುವುದರಿಂದ ಇತರರಿಗೆ ಸಮಸ್ಯೆಯಾಗಲಿದೆ. ಹಾಗಾಗಿ, ನಾಗಮೋಹನ್‌ ದಾಸ್ ಸಮಿತಿ ತುರ್ತಾಗಿ ತನ್ನ ವರದಿ ನೀಡಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ತಾತ್ಕಾಲಿಕ ತಡೆ ಹಿಡಿದಿರುವ ನೇಮಕಾತಿಗಳನ್ನು ತುರ್ತಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಒಳ ಮೀಸಲಾತಿ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆಗ್ರಹಿಸಿದೆ.

ಇನ್ನುಳಿದಂತೆ ಈ ಕೆಳಗಿನ ಬೇಡಿಕೆಗಳನ್ನು ಒಕ್ಕೂಟ ನಾಗಮೋಹನ್ ದಾಸ್ ಅವರ ಮುಂದಿಟ್ಟಿದೆ.

  • ಯಾವುದೇ ಕಾರಣಕ್ಕೂ ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಒಳ ಮೀಸಲಾತಿ ವರ್ಗೀಕರಣ ಮಾಡಬೇಕು.
  • 2025-26ರ ಹಣಕಾಸು ವರ್ಷದ ಆಯವ್ಯಯದಲ್ಲಿ ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಹಣ ಮತ್ತು ಸಂಪನ್ಮೂಲವನ್ನು ಮೀಸಲಿಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು.
  • ಹಲವು ವರ್ಷಗಳಿಂದ ಪರಿಶಿಷ್ಟರ ಜನಸಂಖ್ಯೆಯ ವಿಷಯದಲ್ಲಿ ಸಮಸ್ಯೆಯಾಗಿ ಉಳಿದಿರುವ ಎಕೆ, ಎಡಿ, ಎಎ ಜಾತಿಯಲ್ಲಿ ಮುಂದುವರಿಯುತ್ತಿರುವ ಅಸಂವಿಧಾನಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತುರ್ತಾಗಿ ಆಯೋಗದಿಂದ ಈ ಸಮಸ್ಯೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಿಲ್ಲೆಗಳಲ್ಲಿ ಮರು ಸಮೀಕ್ಷೆ ನಡೆಸಿ ನಿರ್ದಿಷ್ಟ ಶಿಫಾರಸ್ಸನ್ನು ಮಾಡಬೇಕು ಮತ್ತು ಈಗಿರುವ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಳ ಮಾಡಿ ವರ್ಗೀಕರಣವನ್ನು ಜಾರಿಗೆ ತಂದು ಪರಿಶಿಷ್ಟರ ಐಕ್ಯತೆಯನ್ನು ಕಾಪಾಡಬೇಕು.
  • ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ‘ಪ್ರಾಯೋಗಿಕ ದತ್ತಾಂಶ’ವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ‘ಸ್ಯಾಂಪಲ್ ಸಮೀಕ್ಷೆ’ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು.
  • ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣ ನಿಗದಿಗೊಳಿಸಬೇಕು.
  • ಬಡ್ತಿ ಮೀಸಲಾತಿಯಲ್ಲಿಯೂ ಒಳ ಮೀಸಲಾತಿಯನ್ನು ಪರಿಗಣಿಸಬೇಕು
  • ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳ ಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು.
  • ಗುತ್ತಿಗೆ ನೌಕರಿಗಳಲ್ಲಿಯೂ ಒಳ ಮೀಸಲಾತಿ ಪರಿಗಣಿಸಲು ಶಿಫಾರಸು ಮಾಡಬೇಕು.
  • ಒಳ ಮೀಸಲಾತಿ ಅನುಷ್ಠಾನದಲ್ಲಿನ ಕುಂದು ಕೊರತೆಗಳು ಮತ್ತು ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಬೇಕು.
  • ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50ರ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು.
  • ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.

ಜಸ್ಟೀಸ್ ನಾಗಮೋಹನ್ ದಾಸ್ ಅವರನ್ನು ಭೇಟಿಯಾದ ನಿಯೋಗದಲ್ಲಿ ಬಸವರಾಜ್ ಕೌತಾಳ್, ಶ್ರೀನಾಥ್ ಪೂಜಾರಿ, ಅಂಬಣ್ಣ ಅರೋಲಿಕರ್, ಕರಿಯಪ್ಪ ಗುಡಿಮನೆ, ಡಿ.ಟಿ ವೆಂಕಟೇಶ್, ಶಿವಣ್ಣ ಕನಕಪುರ, ಚಂದ್ರು ತರಹುಣಿಸೆ, ಪ್ರಸನ್ನ ಎಸಿ, ಶಿವು (ಡಿಎಂಸಿ), ಗಂಗಾಧರ್, ಮಂಜುನಾಥ್ ಮರಾಠ, ರಘು ಕಾಮಾಕ್ಷಿಪಾಳ್ಯ ಸೇರಿದಂತೆ ಹಲವು ಇದ್ದರು.

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...