Homeಕರ್ನಾಟಕಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

ಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

- Advertisement -
- Advertisement -

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ನಿಗದಿಪಡಿಸಲು ಸರ್ಕಾರ ರಚಿಸಿರುವ ಏಕ ಸದಸ್ಯ ಸಮಿತಿಯ ಅಧ್ಯಕ್ಷ ಜಸ್ಟೀಸ್ ನಾಗಮೋಹನ್ ದಾಸ್ ಅವರನ್ನು ಬುಧವಾರ (ಫೆ.12) ಭೇಟಿಯಾದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಸಮಿತಿ ಪ್ರಮುಖರು ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.

ಸುಪ್ರೀಂ ಕೋರ್ಟ್ ತೀರ್ಪಿನಂತೆ ಎಸ್‌ಸಿ ಒಳ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಸಮಿತಿ ರಚಿಸಿರುವುದು ಅಭಿನಂದನಾರ್ಹ. ಒಳ ಮೀಸಲಾತಿ ಜಾರಿ ಆಗುವವರೆಗೆ ಸರ್ಕಾರ ನೇಮಕಾತಿಗಳನ್ನು ತಡೆ ಹಿಡಿದಿದೆ. ಇದು ಸ್ವಾಗತಾರ್ಹವೇ ಆದರೂ, ಹೆಚ್ಚು ಸಮಯ ನೇಮಕಾತಿ ತಡೆ ಹಿಡಿಯುವುದರಿಂದ ಇತರರಿಗೆ ಸಮಸ್ಯೆಯಾಗಲಿದೆ. ಹಾಗಾಗಿ, ನಾಗಮೋಹನ್‌ ದಾಸ್ ಸಮಿತಿ ತುರ್ತಾಗಿ ತನ್ನ ವರದಿ ನೀಡಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ತಾತ್ಕಾಲಿಕ ತಡೆ ಹಿಡಿದಿರುವ ನೇಮಕಾತಿಗಳನ್ನು ತುರ್ತಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಒಳ ಮೀಸಲಾತಿ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆಗ್ರಹಿಸಿದೆ.

ಇನ್ನುಳಿದಂತೆ ಈ ಕೆಳಗಿನ ಬೇಡಿಕೆಗಳನ್ನು ಒಕ್ಕೂಟ ನಾಗಮೋಹನ್ ದಾಸ್ ಅವರ ಮುಂದಿಟ್ಟಿದೆ.

  • ಯಾವುದೇ ಕಾರಣಕ್ಕೂ ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಒಳ ಮೀಸಲಾತಿ ವರ್ಗೀಕರಣ ಮಾಡಬೇಕು.
  • 2025-26ರ ಹಣಕಾಸು ವರ್ಷದ ಆಯವ್ಯಯದಲ್ಲಿ ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಹಣ ಮತ್ತು ಸಂಪನ್ಮೂಲವನ್ನು ಮೀಸಲಿಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು.
  • ಹಲವು ವರ್ಷಗಳಿಂದ ಪರಿಶಿಷ್ಟರ ಜನಸಂಖ್ಯೆಯ ವಿಷಯದಲ್ಲಿ ಸಮಸ್ಯೆಯಾಗಿ ಉಳಿದಿರುವ ಎಕೆ, ಎಡಿ, ಎಎ ಜಾತಿಯಲ್ಲಿ ಮುಂದುವರಿಯುತ್ತಿರುವ ಅಸಂವಿಧಾನಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತುರ್ತಾಗಿ ಆಯೋಗದಿಂದ ಈ ಸಮಸ್ಯೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಿಲ್ಲೆಗಳಲ್ಲಿ ಮರು ಸಮೀಕ್ಷೆ ನಡೆಸಿ ನಿರ್ದಿಷ್ಟ ಶಿಫಾರಸ್ಸನ್ನು ಮಾಡಬೇಕು ಮತ್ತು ಈಗಿರುವ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಳ ಮಾಡಿ ವರ್ಗೀಕರಣವನ್ನು ಜಾರಿಗೆ ತಂದು ಪರಿಶಿಷ್ಟರ ಐಕ್ಯತೆಯನ್ನು ಕಾಪಾಡಬೇಕು.
  • ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ‘ಪ್ರಾಯೋಗಿಕ ದತ್ತಾಂಶ’ವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ‘ಸ್ಯಾಂಪಲ್ ಸಮೀಕ್ಷೆ’ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು.
  • ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣ ನಿಗದಿಗೊಳಿಸಬೇಕು.
  • ಬಡ್ತಿ ಮೀಸಲಾತಿಯಲ್ಲಿಯೂ ಒಳ ಮೀಸಲಾತಿಯನ್ನು ಪರಿಗಣಿಸಬೇಕು
  • ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳ ಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು.
  • ಗುತ್ತಿಗೆ ನೌಕರಿಗಳಲ್ಲಿಯೂ ಒಳ ಮೀಸಲಾತಿ ಪರಿಗಣಿಸಲು ಶಿಫಾರಸು ಮಾಡಬೇಕು.
  • ಒಳ ಮೀಸಲಾತಿ ಅನುಷ್ಠಾನದಲ್ಲಿನ ಕುಂದು ಕೊರತೆಗಳು ಮತ್ತು ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಬೇಕು.
  • ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50ರ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು.
  • ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.

ಜಸ್ಟೀಸ್ ನಾಗಮೋಹನ್ ದಾಸ್ ಅವರನ್ನು ಭೇಟಿಯಾದ ನಿಯೋಗದಲ್ಲಿ ಬಸವರಾಜ್ ಕೌತಾಳ್, ಶ್ರೀನಾಥ್ ಪೂಜಾರಿ, ಅಂಬಣ್ಣ ಅರೋಲಿಕರ್, ಕರಿಯಪ್ಪ ಗುಡಿಮನೆ, ಡಿ.ಟಿ ವೆಂಕಟೇಶ್, ಶಿವಣ್ಣ ಕನಕಪುರ, ಚಂದ್ರು ತರಹುಣಿಸೆ, ಪ್ರಸನ್ನ ಎಸಿ, ಶಿವು (ಡಿಎಂಸಿ), ಗಂಗಾಧರ್, ಮಂಜುನಾಥ್ ಮರಾಠ, ರಘು ಕಾಮಾಕ್ಷಿಪಾಳ್ಯ ಸೇರಿದಂತೆ ಹಲವು ಇದ್ದರು.

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...