Homeಕರ್ನಾಟಕಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

ಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

- Advertisement -
- Advertisement -

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ನಿಗದಿಪಡಿಸಲು ಸರ್ಕಾರ ರಚಿಸಿರುವ ಏಕ ಸದಸ್ಯ ಸಮಿತಿಯ ಅಧ್ಯಕ್ಷ ಜಸ್ಟೀಸ್ ನಾಗಮೋಹನ್ ದಾಸ್ ಅವರನ್ನು ಬುಧವಾರ (ಫೆ.12) ಭೇಟಿಯಾದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಸಮಿತಿ ಪ್ರಮುಖರು ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.

ಸುಪ್ರೀಂ ಕೋರ್ಟ್ ತೀರ್ಪಿನಂತೆ ಎಸ್‌ಸಿ ಒಳ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಸಮಿತಿ ರಚಿಸಿರುವುದು ಅಭಿನಂದನಾರ್ಹ. ಒಳ ಮೀಸಲಾತಿ ಜಾರಿ ಆಗುವವರೆಗೆ ಸರ್ಕಾರ ನೇಮಕಾತಿಗಳನ್ನು ತಡೆ ಹಿಡಿದಿದೆ. ಇದು ಸ್ವಾಗತಾರ್ಹವೇ ಆದರೂ, ಹೆಚ್ಚು ಸಮಯ ನೇಮಕಾತಿ ತಡೆ ಹಿಡಿಯುವುದರಿಂದ ಇತರರಿಗೆ ಸಮಸ್ಯೆಯಾಗಲಿದೆ. ಹಾಗಾಗಿ, ನಾಗಮೋಹನ್‌ ದಾಸ್ ಸಮಿತಿ ತುರ್ತಾಗಿ ತನ್ನ ವರದಿ ನೀಡಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ತಾತ್ಕಾಲಿಕ ತಡೆ ಹಿಡಿದಿರುವ ನೇಮಕಾತಿಗಳನ್ನು ತುರ್ತಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಒಳ ಮೀಸಲಾತಿ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆಗ್ರಹಿಸಿದೆ.

ಇನ್ನುಳಿದಂತೆ ಈ ಕೆಳಗಿನ ಬೇಡಿಕೆಗಳನ್ನು ಒಕ್ಕೂಟ ನಾಗಮೋಹನ್ ದಾಸ್ ಅವರ ಮುಂದಿಟ್ಟಿದೆ.

  • ಯಾವುದೇ ಕಾರಣಕ್ಕೂ ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಒಳ ಮೀಸಲಾತಿ ವರ್ಗೀಕರಣ ಮಾಡಬೇಕು.
  • 2025-26ರ ಹಣಕಾಸು ವರ್ಷದ ಆಯವ್ಯಯದಲ್ಲಿ ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಹಣ ಮತ್ತು ಸಂಪನ್ಮೂಲವನ್ನು ಮೀಸಲಿಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು.
  • ಹಲವು ವರ್ಷಗಳಿಂದ ಪರಿಶಿಷ್ಟರ ಜನಸಂಖ್ಯೆಯ ವಿಷಯದಲ್ಲಿ ಸಮಸ್ಯೆಯಾಗಿ ಉಳಿದಿರುವ ಎಕೆ, ಎಡಿ, ಎಎ ಜಾತಿಯಲ್ಲಿ ಮುಂದುವರಿಯುತ್ತಿರುವ ಅಸಂವಿಧಾನಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತುರ್ತಾಗಿ ಆಯೋಗದಿಂದ ಈ ಸಮಸ್ಯೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಿಲ್ಲೆಗಳಲ್ಲಿ ಮರು ಸಮೀಕ್ಷೆ ನಡೆಸಿ ನಿರ್ದಿಷ್ಟ ಶಿಫಾರಸ್ಸನ್ನು ಮಾಡಬೇಕು ಮತ್ತು ಈಗಿರುವ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಳ ಮಾಡಿ ವರ್ಗೀಕರಣವನ್ನು ಜಾರಿಗೆ ತಂದು ಪರಿಶಿಷ್ಟರ ಐಕ್ಯತೆಯನ್ನು ಕಾಪಾಡಬೇಕು.
  • ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ‘ಪ್ರಾಯೋಗಿಕ ದತ್ತಾಂಶ’ವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ‘ಸ್ಯಾಂಪಲ್ ಸಮೀಕ್ಷೆ’ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು.
  • ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣ ನಿಗದಿಗೊಳಿಸಬೇಕು.
  • ಬಡ್ತಿ ಮೀಸಲಾತಿಯಲ್ಲಿಯೂ ಒಳ ಮೀಸಲಾತಿಯನ್ನು ಪರಿಗಣಿಸಬೇಕು
  • ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳ ಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು.
  • ಗುತ್ತಿಗೆ ನೌಕರಿಗಳಲ್ಲಿಯೂ ಒಳ ಮೀಸಲಾತಿ ಪರಿಗಣಿಸಲು ಶಿಫಾರಸು ಮಾಡಬೇಕು.
  • ಒಳ ಮೀಸಲಾತಿ ಅನುಷ್ಠಾನದಲ್ಲಿನ ಕುಂದು ಕೊರತೆಗಳು ಮತ್ತು ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಬೇಕು.
  • ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50ರ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು.
  • ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.

ಜಸ್ಟೀಸ್ ನಾಗಮೋಹನ್ ದಾಸ್ ಅವರನ್ನು ಭೇಟಿಯಾದ ನಿಯೋಗದಲ್ಲಿ ಬಸವರಾಜ್ ಕೌತಾಳ್, ಶ್ರೀನಾಥ್ ಪೂಜಾರಿ, ಅಂಬಣ್ಣ ಅರೋಲಿಕರ್, ಕರಿಯಪ್ಪ ಗುಡಿಮನೆ, ಡಿ.ಟಿ ವೆಂಕಟೇಶ್, ಶಿವಣ್ಣ ಕನಕಪುರ, ಚಂದ್ರು ತರಹುಣಿಸೆ, ಪ್ರಸನ್ನ ಎಸಿ, ಶಿವು (ಡಿಎಂಸಿ), ಗಂಗಾಧರ್, ಮಂಜುನಾಥ್ ಮರಾಠ, ರಘು ಕಾಮಾಕ್ಷಿಪಾಳ್ಯ ಸೇರಿದಂತೆ ಹಲವು ಇದ್ದರು.

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...