Homeಕರ್ನಾಟಕಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

ಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

- Advertisement -
- Advertisement -

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ನಿಗದಿಪಡಿಸಲು ಸರ್ಕಾರ ರಚಿಸಿರುವ ಏಕ ಸದಸ್ಯ ಸಮಿತಿಯ ಅಧ್ಯಕ್ಷ ಜಸ್ಟೀಸ್ ನಾಗಮೋಹನ್ ದಾಸ್ ಅವರನ್ನು ಬುಧವಾರ (ಫೆ.12) ಭೇಟಿಯಾದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಸಮಿತಿ ಪ್ರಮುಖರು ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.

ಸುಪ್ರೀಂ ಕೋರ್ಟ್ ತೀರ್ಪಿನಂತೆ ಎಸ್‌ಸಿ ಒಳ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಸಮಿತಿ ರಚಿಸಿರುವುದು ಅಭಿನಂದನಾರ್ಹ. ಒಳ ಮೀಸಲಾತಿ ಜಾರಿ ಆಗುವವರೆಗೆ ಸರ್ಕಾರ ನೇಮಕಾತಿಗಳನ್ನು ತಡೆ ಹಿಡಿದಿದೆ. ಇದು ಸ್ವಾಗತಾರ್ಹವೇ ಆದರೂ, ಹೆಚ್ಚು ಸಮಯ ನೇಮಕಾತಿ ತಡೆ ಹಿಡಿಯುವುದರಿಂದ ಇತರರಿಗೆ ಸಮಸ್ಯೆಯಾಗಲಿದೆ. ಹಾಗಾಗಿ, ನಾಗಮೋಹನ್‌ ದಾಸ್ ಸಮಿತಿ ತುರ್ತಾಗಿ ತನ್ನ ವರದಿ ನೀಡಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ತಾತ್ಕಾಲಿಕ ತಡೆ ಹಿಡಿದಿರುವ ನೇಮಕಾತಿಗಳನ್ನು ತುರ್ತಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಒಳ ಮೀಸಲಾತಿ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆಗ್ರಹಿಸಿದೆ.

ಇನ್ನುಳಿದಂತೆ ಈ ಕೆಳಗಿನ ಬೇಡಿಕೆಗಳನ್ನು ಒಕ್ಕೂಟ ನಾಗಮೋಹನ್ ದಾಸ್ ಅವರ ಮುಂದಿಟ್ಟಿದೆ.

  • ಯಾವುದೇ ಕಾರಣಕ್ಕೂ ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಒಳ ಮೀಸಲಾತಿ ವರ್ಗೀಕರಣ ಮಾಡಬೇಕು.
  • 2025-26ರ ಹಣಕಾಸು ವರ್ಷದ ಆಯವ್ಯಯದಲ್ಲಿ ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಹಣ ಮತ್ತು ಸಂಪನ್ಮೂಲವನ್ನು ಮೀಸಲಿಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು.
  • ಹಲವು ವರ್ಷಗಳಿಂದ ಪರಿಶಿಷ್ಟರ ಜನಸಂಖ್ಯೆಯ ವಿಷಯದಲ್ಲಿ ಸಮಸ್ಯೆಯಾಗಿ ಉಳಿದಿರುವ ಎಕೆ, ಎಡಿ, ಎಎ ಜಾತಿಯಲ್ಲಿ ಮುಂದುವರಿಯುತ್ತಿರುವ ಅಸಂವಿಧಾನಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತುರ್ತಾಗಿ ಆಯೋಗದಿಂದ ಈ ಸಮಸ್ಯೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಿಲ್ಲೆಗಳಲ್ಲಿ ಮರು ಸಮೀಕ್ಷೆ ನಡೆಸಿ ನಿರ್ದಿಷ್ಟ ಶಿಫಾರಸ್ಸನ್ನು ಮಾಡಬೇಕು ಮತ್ತು ಈಗಿರುವ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಳ ಮಾಡಿ ವರ್ಗೀಕರಣವನ್ನು ಜಾರಿಗೆ ತಂದು ಪರಿಶಿಷ್ಟರ ಐಕ್ಯತೆಯನ್ನು ಕಾಪಾಡಬೇಕು.
  • ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ‘ಪ್ರಾಯೋಗಿಕ ದತ್ತಾಂಶ’ವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ‘ಸ್ಯಾಂಪಲ್ ಸಮೀಕ್ಷೆ’ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು.
  • ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣ ನಿಗದಿಗೊಳಿಸಬೇಕು.
  • ಬಡ್ತಿ ಮೀಸಲಾತಿಯಲ್ಲಿಯೂ ಒಳ ಮೀಸಲಾತಿಯನ್ನು ಪರಿಗಣಿಸಬೇಕು
  • ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳ ಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು.
  • ಗುತ್ತಿಗೆ ನೌಕರಿಗಳಲ್ಲಿಯೂ ಒಳ ಮೀಸಲಾತಿ ಪರಿಗಣಿಸಲು ಶಿಫಾರಸು ಮಾಡಬೇಕು.
  • ಒಳ ಮೀಸಲಾತಿ ಅನುಷ್ಠಾನದಲ್ಲಿನ ಕುಂದು ಕೊರತೆಗಳು ಮತ್ತು ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಬೇಕು.
  • ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50ರ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು.
  • ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.

ಜಸ್ಟೀಸ್ ನಾಗಮೋಹನ್ ದಾಸ್ ಅವರನ್ನು ಭೇಟಿಯಾದ ನಿಯೋಗದಲ್ಲಿ ಬಸವರಾಜ್ ಕೌತಾಳ್, ಶ್ರೀನಾಥ್ ಪೂಜಾರಿ, ಅಂಬಣ್ಣ ಅರೋಲಿಕರ್, ಕರಿಯಪ್ಪ ಗುಡಿಮನೆ, ಡಿ.ಟಿ ವೆಂಕಟೇಶ್, ಶಿವಣ್ಣ ಕನಕಪುರ, ಚಂದ್ರು ತರಹುಣಿಸೆ, ಪ್ರಸನ್ನ ಎಸಿ, ಶಿವು (ಡಿಎಂಸಿ), ಗಂಗಾಧರ್, ಮಂಜುನಾಥ್ ಮರಾಠ, ರಘು ಕಾಮಾಕ್ಷಿಪಾಳ್ಯ ಸೇರಿದಂತೆ ಹಲವು ಇದ್ದರು.

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...