Homeಕರ್ನಾಟಕಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

ಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

- Advertisement -
- Advertisement -

ವಾಲ್ಮೀಕಿ ಜಯಂತಿಯು ಈ ಮೊದಲು ಬೇಡ, ವಾಲ್ಮೀಕಿ, ನಾಯಕ ಸಮುದಾಯಗಳ ಆಚರಣೆಯಾಗಿತ್ತು. ಆದರೆ ಈಗ ಈ ಸಮುದಾಯಗಳ ಜೊತೆಗೆ 50 ಬುಡಕಟ್ಟು ಸಮುದಾಯಗಳು ಸೇರ್ಪಡೆಯಾಗಿ ಎಲ್ಲಾ ಸಮುದಾಯಗಳ  ಆಚರಣೆಯಾಗುತ್ತಿದೆ. ಇದರಲ್ಲಿಯೂ ಮುಂಚೂಣಿ ಪ್ರಬಲ ಜಾತಿಗಳಿಗೆ ಸೀಮಿತವಾದ ಮೀಸಲಾತಿ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಹಂಚಿಕೆಯಾಗಬೇಕು. ಆಗ ಈ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಲಕ್ಷ್ಮಣ ಮಂಡಲಗೇರಾ ಹೇಳಿದ್ದಾರೆ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಾಲ್ಮೀಕಿ ಸಮುದಾಯ ಪ್ರಸ್ತುತ ಶೇಕಡ 7ರಷ್ಟು ಮೀಸಲಾತಿ ಪಡೆಯುತ್ತಿವೆ. ಪರಿಶಿಷ್ಠ ಪಂಗಡದಲ್ಲಿರುವ ಇನ್ನಿತರ ಕಾಡು ಮೇಡುಗಳಲ್ಲಿ ವಾಸಿಸುವ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳು ಮೀಸಲಾತಿ ಸಿಗದೆ ವಂಚಿತವಾಗಿವೆ. ಈಗಿರುವ 7 ಶೇಕಡ ಮೀಸಲಾತಿಯಲ್ಲಿ ಮತ್ತೆ ಕುರುಬ ಸಮುದಾಯವನ್ನು ಸೇರಿದರೆ ಅಲ್ಲಿರುವ ಆದಿವಾಸಿ, ಅಲೆಮಾರಿ, ಬುಡಕಟ್ಟು ಸಮುದಾಯಗಳು ಮೀಸಲಾತಿಯಿಂದ ಮತ್ತಷ್ಟು ಸಂಪೂರ್ಣ ವಂಚಿತವಾಗುವ ಸಾಧ್ಯತೆಯಿದೆ. ಈಗಿರುವ ಮೀಸಲಾತಿ ಆ ಸಮುದಾಯಗಳಿಗೆ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ಈಗ ಮತ್ತೆ ಬಲಿಷ್ಠ ಜಾತಿಗಳನ್ನು ಸೇರಿಸುವುದರಿಂದ ಮತ್ತಷ್ಟು ವಂಚಿತರಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಸಿದ್ಧರಾಮಯ್ಯ ಅವರು ಸ್ವಜಾತಿ ಪ್ರೇಮ ಬಿಟ್ಟು ಸಾಮಾಜಿಕ ನ್ಯಾಯದ ಬಗ್ಗೆ ಯೋಚಿಸಬೇಕಿದೆ ಎಂದಿದ್ದಾರೆ.

ಸಾಮಾಜಿಕ ಹರಿಕಾರ, ಅಹಿಂದ ನಾಯಕ ಎಂದು ಹೇಳುವ ಸಿದ್ದರಾಮಯ್ಯನವರೇ, ಈಗಾಗಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹಂಚಿಕೆಯಲ್ಲಿ ನೀವು ಮಾಡಿರುವ ಮೋಸ ಯಾರೂ ಮರೆಯುವ ಹಾಗಿಲ್ಲ. ಬಸವಣ್ಣನ ಮಾರ್ಗ ಅನುಸರಿಸುತ್ತೇನೆಂದು ಹೇಳುವ ನೀವು, ಪ್ರಬಲ ಜಾತಿಗಳ ಸಚಿವರಿಗೆ ಮಂಡಿಯೂರಿ ಅಲೆಮಾರಿಗಳಿಗೆ ಸಿಗಬೇಕಾದ 1 ಶೇಕಡ ಮೀಸಲಾತಿ ಕಿತ್ತುಕೊಂಡಿದ್ದೀರಿ. ಈ ಮೂಲಕ ಅ ಸಮುದಾಯಗಳು ಮೀಸಲಾತಿಯಿಂದ ಮುಂದೆಯೂ ವಂಚಿತರಾಗಲು ದಾರಿ ಮಾಡಿಕೊಟ್ಟಿದ್ದಿರಿ. ಅಲೆಮಾರಿಗಳನ್ನು ಬೀದಿಗೆ ತಳ್ಳಿ, ಅವರಿಗೆ ತಮಗೆ ಸಿಗಬೇಕಾದ 1 ಶೇಕಡ ಮೀಸಲಾತಿಗಾಗಿ ದೆಹಲಿ ತನಕ ಹೋಗುವಂತೆ ಮಾಡಿದ್ದೀರಿ. ಈಗ ಪರಿಶಿಷ್ಟ ಪಂಗಡಗಳ ಮೀಸಲಾತಿಯ ವಿಚಾರದಲ್ಲೂ ಹಾಗೆ ಮಾಡದೇ ಎಚ್ಚರ ವಹಿಸಿರಿ, ಜಾತಿ ಪ್ರೇಮ ಬಿಟ್ಟು ಹೊರ ಬನ್ನಿ ಎಂದು ಲಕ್ಷ್ಮಣ ಮಂಡಲಗೇರಾ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಜಯಂತಿ ಬರೀ ವಾಲ್ಮೀಕಿ ಸಮುದಾಯಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯಗಳ ಜಯಂತಿಯಾಗಬೇಕು. ಮಹರ್ಷಿ ವಾಲ್ಮೀಕಿ ಒಬ್ಬ ಮಹಾನ್ ಆದಿ ಕವಿ. ರಾಮಾಯಣ ಮೂಲಕ ರಾಮನನ್ನು ಸೃಷ್ಟಿಸಿದ್ದು ಇದೇ ಕವಿ. ಆದರೆ, ಇವತ್ತು ಅದೇ ರಾಮನ ಹೆಸರು ಹೇಳಿಕೊಂಡು ಅಧಿಕಾರ ಹಿಡಿದವರು ಸಮುದಾಯವನ್ನು ಎಲ್ಲಿ ಇಟ್ಟಿದ್ದಾರೆ ಎನ್ನುವುದನ್ನು ಸಮುದಾಯದ ಯುವಕರು, ಮುಖಂಡರು, ಜನಪ್ರತಿನಿಧಿಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ನಾಲ್ಕು ಮೀಸಲು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರ ಇದ್ದರೂ, ಸಮುದಾಯಗಳು ಅಭಿವೃದ್ಧಿ ಕಾಣದೆ ಇರುವುದು ದುರಂತ. ಸಮುದಾಯ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ನೂರಾರು ಕೋಟಿ ಹಗರಣ ನಡೆದರೂ ತುಟಿ ಬಿಚ್ಚದ ಸಮಾಜದ ಮುಖಂಡರು, ಸಚಿವರು, ಶಾಸಕರು ಮೀಸಲಾತಿ ಹೆಸರಿನಲ್ಲಿ ಅಧಿಕಾರ ಹಿಡಿದವರು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದನ್ನು ಸಮುದಾಯದ ಯುವಕರು ಪ್ರಶ್ನಿಸುವಂತಾಗಬೇಕು. ಶಿಕ್ಷಣ, ಸಂಘಟನೆಯಲ್ಲಿ ಮುಂದೆ ಬರಬೇಕು ಎಂದು ಹೇಳಿದ್ದಾರೆ.

ನಕಲಿ ಜಾತಿಪ್ರಮಾಣ ಪತ್ರಗಳು ಹಿಡಿದು ಸಮುದಾಯಗಳನ್ನು ತುಳಿಯುವ ಕೆಲಸ ನಡೆಯುತ್ತಿದೆ. ಆದರೆ, ಇದರ ಬಗ್ಗೆ ಯಾರೂ ಮಾತಾಡಲು ತಯಾರಿಲ್ಲ. ಸಮಾಜದ ಯುವಕರು ಕೇಸರಿ ಭಯೋತ್ಪಾದಕರಿಂದ ಅಂತರ ಕಾಯ್ದುಕೊಂಡು ರಾಮನ ಜಪ ಬಿಟ್ಟು, ಇಂಥ ವಿಷಯಗಳ ಬಗ್ಗೆ ಜಾಗೃತಿ ಮಾಡಿಸುವ ಕೆಲಸಕ್ಕೆ ಮುಂದಾಗಬೇಕು. ಆರ್‌ಎಸ್ಎಸ್, ಬಿಜೆಪಿಗಳಂತಹ ದೇಶದ್ರೋಹಿ ಸಂಘಟನೆಗಳ ಕಾಲಾಳುಗಳಾಗಿ ಬದುಕನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.

ಯುವಜನರು ಅತಿ ಹೆಚ್ಚು ಈ ಸಮುದಾಯದಿಂದ ಹಿಂದೆ ಸರಿಯುತ್ತಿರುವುದರ ಬಗ್ಗೆ ಸಂಬಂಧಪಟ್ಟವರು ಅಧ್ಯಯನ ನಡೆಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಸಮಾಜದ ಯುವಕರು ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟದ ಮಾರ್ಗಕ್ಕೆ ಮುಂದಾಗಬೇಕು. ಆಗ ಮಾತ್ರ ಬುಡಕಟ್ಟು ಸಮುದಾಯಗಳು, ದಮನಿತ ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಲಕ್ಷ್ಮಣ ಮಂಡಲಗೇರಾ ಅಭಿಪ್ರಾಯಪಟ್ಟಿದ್ದಾರೆ.

‘ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..’; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...