Homeಕರ್ನಾಟಕಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

ಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

- Advertisement -
- Advertisement -

ವಾಲ್ಮೀಕಿ ಜಯಂತಿಯು ಈ ಮೊದಲು ಬೇಡ, ವಾಲ್ಮೀಕಿ, ನಾಯಕ ಸಮುದಾಯಗಳ ಆಚರಣೆಯಾಗಿತ್ತು. ಆದರೆ ಈಗ ಈ ಸಮುದಾಯಗಳ ಜೊತೆಗೆ 50 ಬುಡಕಟ್ಟು ಸಮುದಾಯಗಳು ಸೇರ್ಪಡೆಯಾಗಿ ಎಲ್ಲಾ ಸಮುದಾಯಗಳ  ಆಚರಣೆಯಾಗುತ್ತಿದೆ. ಇದರಲ್ಲಿಯೂ ಮುಂಚೂಣಿ ಪ್ರಬಲ ಜಾತಿಗಳಿಗೆ ಸೀಮಿತವಾದ ಮೀಸಲಾತಿ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಹಂಚಿಕೆಯಾಗಬೇಕು. ಆಗ ಈ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಲಕ್ಷ್ಮಣ ಮಂಡಲಗೇರಾ ಹೇಳಿದ್ದಾರೆ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಾಲ್ಮೀಕಿ ಸಮುದಾಯ ಪ್ರಸ್ತುತ ಶೇಕಡ 7ರಷ್ಟು ಮೀಸಲಾತಿ ಪಡೆಯುತ್ತಿವೆ. ಪರಿಶಿಷ್ಠ ಪಂಗಡದಲ್ಲಿರುವ ಇನ್ನಿತರ ಕಾಡು ಮೇಡುಗಳಲ್ಲಿ ವಾಸಿಸುವ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳು ಮೀಸಲಾತಿ ಸಿಗದೆ ವಂಚಿತವಾಗಿವೆ. ಈಗಿರುವ 7 ಶೇಕಡ ಮೀಸಲಾತಿಯಲ್ಲಿ ಮತ್ತೆ ಕುರುಬ ಸಮುದಾಯವನ್ನು ಸೇರಿದರೆ ಅಲ್ಲಿರುವ ಆದಿವಾಸಿ, ಅಲೆಮಾರಿ, ಬುಡಕಟ್ಟು ಸಮುದಾಯಗಳು ಮೀಸಲಾತಿಯಿಂದ ಮತ್ತಷ್ಟು ಸಂಪೂರ್ಣ ವಂಚಿತವಾಗುವ ಸಾಧ್ಯತೆಯಿದೆ. ಈಗಿರುವ ಮೀಸಲಾತಿ ಆ ಸಮುದಾಯಗಳಿಗೆ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ಈಗ ಮತ್ತೆ ಬಲಿಷ್ಠ ಜಾತಿಗಳನ್ನು ಸೇರಿಸುವುದರಿಂದ ಮತ್ತಷ್ಟು ವಂಚಿತರಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಸಿದ್ಧರಾಮಯ್ಯ ಅವರು ಸ್ವಜಾತಿ ಪ್ರೇಮ ಬಿಟ್ಟು ಸಾಮಾಜಿಕ ನ್ಯಾಯದ ಬಗ್ಗೆ ಯೋಚಿಸಬೇಕಿದೆ ಎಂದಿದ್ದಾರೆ.

ಸಾಮಾಜಿಕ ಹರಿಕಾರ, ಅಹಿಂದ ನಾಯಕ ಎಂದು ಹೇಳುವ ಸಿದ್ದರಾಮಯ್ಯನವರೇ, ಈಗಾಗಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹಂಚಿಕೆಯಲ್ಲಿ ನೀವು ಮಾಡಿರುವ ಮೋಸ ಯಾರೂ ಮರೆಯುವ ಹಾಗಿಲ್ಲ. ಬಸವಣ್ಣನ ಮಾರ್ಗ ಅನುಸರಿಸುತ್ತೇನೆಂದು ಹೇಳುವ ನೀವು, ಪ್ರಬಲ ಜಾತಿಗಳ ಸಚಿವರಿಗೆ ಮಂಡಿಯೂರಿ ಅಲೆಮಾರಿಗಳಿಗೆ ಸಿಗಬೇಕಾದ 1 ಶೇಕಡ ಮೀಸಲಾತಿ ಕಿತ್ತುಕೊಂಡಿದ್ದೀರಿ. ಈ ಮೂಲಕ ಅ ಸಮುದಾಯಗಳು ಮೀಸಲಾತಿಯಿಂದ ಮುಂದೆಯೂ ವಂಚಿತರಾಗಲು ದಾರಿ ಮಾಡಿಕೊಟ್ಟಿದ್ದಿರಿ. ಅಲೆಮಾರಿಗಳನ್ನು ಬೀದಿಗೆ ತಳ್ಳಿ, ಅವರಿಗೆ ತಮಗೆ ಸಿಗಬೇಕಾದ 1 ಶೇಕಡ ಮೀಸಲಾತಿಗಾಗಿ ದೆಹಲಿ ತನಕ ಹೋಗುವಂತೆ ಮಾಡಿದ್ದೀರಿ. ಈಗ ಪರಿಶಿಷ್ಟ ಪಂಗಡಗಳ ಮೀಸಲಾತಿಯ ವಿಚಾರದಲ್ಲೂ ಹಾಗೆ ಮಾಡದೇ ಎಚ್ಚರ ವಹಿಸಿರಿ, ಜಾತಿ ಪ್ರೇಮ ಬಿಟ್ಟು ಹೊರ ಬನ್ನಿ ಎಂದು ಲಕ್ಷ್ಮಣ ಮಂಡಲಗೇರಾ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಜಯಂತಿ ಬರೀ ವಾಲ್ಮೀಕಿ ಸಮುದಾಯಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯಗಳ ಜಯಂತಿಯಾಗಬೇಕು. ಮಹರ್ಷಿ ವಾಲ್ಮೀಕಿ ಒಬ್ಬ ಮಹಾನ್ ಆದಿ ಕವಿ. ರಾಮಾಯಣ ಮೂಲಕ ರಾಮನನ್ನು ಸೃಷ್ಟಿಸಿದ್ದು ಇದೇ ಕವಿ. ಆದರೆ, ಇವತ್ತು ಅದೇ ರಾಮನ ಹೆಸರು ಹೇಳಿಕೊಂಡು ಅಧಿಕಾರ ಹಿಡಿದವರು ಸಮುದಾಯವನ್ನು ಎಲ್ಲಿ ಇಟ್ಟಿದ್ದಾರೆ ಎನ್ನುವುದನ್ನು ಸಮುದಾಯದ ಯುವಕರು, ಮುಖಂಡರು, ಜನಪ್ರತಿನಿಧಿಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ನಾಲ್ಕು ಮೀಸಲು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರ ಇದ್ದರೂ, ಸಮುದಾಯಗಳು ಅಭಿವೃದ್ಧಿ ಕಾಣದೆ ಇರುವುದು ದುರಂತ. ಸಮುದಾಯ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ನೂರಾರು ಕೋಟಿ ಹಗರಣ ನಡೆದರೂ ತುಟಿ ಬಿಚ್ಚದ ಸಮಾಜದ ಮುಖಂಡರು, ಸಚಿವರು, ಶಾಸಕರು ಮೀಸಲಾತಿ ಹೆಸರಿನಲ್ಲಿ ಅಧಿಕಾರ ಹಿಡಿದವರು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದನ್ನು ಸಮುದಾಯದ ಯುವಕರು ಪ್ರಶ್ನಿಸುವಂತಾಗಬೇಕು. ಶಿಕ್ಷಣ, ಸಂಘಟನೆಯಲ್ಲಿ ಮುಂದೆ ಬರಬೇಕು ಎಂದು ಹೇಳಿದ್ದಾರೆ.

ನಕಲಿ ಜಾತಿಪ್ರಮಾಣ ಪತ್ರಗಳು ಹಿಡಿದು ಸಮುದಾಯಗಳನ್ನು ತುಳಿಯುವ ಕೆಲಸ ನಡೆಯುತ್ತಿದೆ. ಆದರೆ, ಇದರ ಬಗ್ಗೆ ಯಾರೂ ಮಾತಾಡಲು ತಯಾರಿಲ್ಲ. ಸಮಾಜದ ಯುವಕರು ಕೇಸರಿ ಭಯೋತ್ಪಾದಕರಿಂದ ಅಂತರ ಕಾಯ್ದುಕೊಂಡು ರಾಮನ ಜಪ ಬಿಟ್ಟು, ಇಂಥ ವಿಷಯಗಳ ಬಗ್ಗೆ ಜಾಗೃತಿ ಮಾಡಿಸುವ ಕೆಲಸಕ್ಕೆ ಮುಂದಾಗಬೇಕು. ಆರ್‌ಎಸ್ಎಸ್, ಬಿಜೆಪಿಗಳಂತಹ ದೇಶದ್ರೋಹಿ ಸಂಘಟನೆಗಳ ಕಾಲಾಳುಗಳಾಗಿ ಬದುಕನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.

ಯುವಜನರು ಅತಿ ಹೆಚ್ಚು ಈ ಸಮುದಾಯದಿಂದ ಹಿಂದೆ ಸರಿಯುತ್ತಿರುವುದರ ಬಗ್ಗೆ ಸಂಬಂಧಪಟ್ಟವರು ಅಧ್ಯಯನ ನಡೆಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಸಮಾಜದ ಯುವಕರು ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟದ ಮಾರ್ಗಕ್ಕೆ ಮುಂದಾಗಬೇಕು. ಆಗ ಮಾತ್ರ ಬುಡಕಟ್ಟು ಸಮುದಾಯಗಳು, ದಮನಿತ ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಲಕ್ಷ್ಮಣ ಮಂಡಲಗೇರಾ ಅಭಿಪ್ರಾಯಪಟ್ಟಿದ್ದಾರೆ.

‘ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..’; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...