Homeಕರ್ನಾಟಕಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

ಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

- Advertisement -
- Advertisement -

ವಾಲ್ಮೀಕಿ ಜಯಂತಿಯು ಈ ಮೊದಲು ಬೇಡ, ವಾಲ್ಮೀಕಿ, ನಾಯಕ ಸಮುದಾಯಗಳ ಆಚರಣೆಯಾಗಿತ್ತು. ಆದರೆ ಈಗ ಈ ಸಮುದಾಯಗಳ ಜೊತೆಗೆ 50 ಬುಡಕಟ್ಟು ಸಮುದಾಯಗಳು ಸೇರ್ಪಡೆಯಾಗಿ ಎಲ್ಲಾ ಸಮುದಾಯಗಳ  ಆಚರಣೆಯಾಗುತ್ತಿದೆ. ಇದರಲ್ಲಿಯೂ ಮುಂಚೂಣಿ ಪ್ರಬಲ ಜಾತಿಗಳಿಗೆ ಸೀಮಿತವಾದ ಮೀಸಲಾತಿ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಹಂಚಿಕೆಯಾಗಬೇಕು. ಆಗ ಈ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಲಕ್ಷ್ಮಣ ಮಂಡಲಗೇರಾ ಹೇಳಿದ್ದಾರೆ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಾಲ್ಮೀಕಿ ಸಮುದಾಯ ಪ್ರಸ್ತುತ ಶೇಕಡ 7ರಷ್ಟು ಮೀಸಲಾತಿ ಪಡೆಯುತ್ತಿವೆ. ಪರಿಶಿಷ್ಠ ಪಂಗಡದಲ್ಲಿರುವ ಇನ್ನಿತರ ಕಾಡು ಮೇಡುಗಳಲ್ಲಿ ವಾಸಿಸುವ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳು ಮೀಸಲಾತಿ ಸಿಗದೆ ವಂಚಿತವಾಗಿವೆ. ಈಗಿರುವ 7 ಶೇಕಡ ಮೀಸಲಾತಿಯಲ್ಲಿ ಮತ್ತೆ ಕುರುಬ ಸಮುದಾಯವನ್ನು ಸೇರಿದರೆ ಅಲ್ಲಿರುವ ಆದಿವಾಸಿ, ಅಲೆಮಾರಿ, ಬುಡಕಟ್ಟು ಸಮುದಾಯಗಳು ಮೀಸಲಾತಿಯಿಂದ ಮತ್ತಷ್ಟು ಸಂಪೂರ್ಣ ವಂಚಿತವಾಗುವ ಸಾಧ್ಯತೆಯಿದೆ. ಈಗಿರುವ ಮೀಸಲಾತಿ ಆ ಸಮುದಾಯಗಳಿಗೆ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ಈಗ ಮತ್ತೆ ಬಲಿಷ್ಠ ಜಾತಿಗಳನ್ನು ಸೇರಿಸುವುದರಿಂದ ಮತ್ತಷ್ಟು ವಂಚಿತರಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಸಿದ್ಧರಾಮಯ್ಯ ಅವರು ಸ್ವಜಾತಿ ಪ್ರೇಮ ಬಿಟ್ಟು ಸಾಮಾಜಿಕ ನ್ಯಾಯದ ಬಗ್ಗೆ ಯೋಚಿಸಬೇಕಿದೆ ಎಂದಿದ್ದಾರೆ.

ಸಾಮಾಜಿಕ ಹರಿಕಾರ, ಅಹಿಂದ ನಾಯಕ ಎಂದು ಹೇಳುವ ಸಿದ್ದರಾಮಯ್ಯನವರೇ, ಈಗಾಗಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹಂಚಿಕೆಯಲ್ಲಿ ನೀವು ಮಾಡಿರುವ ಮೋಸ ಯಾರೂ ಮರೆಯುವ ಹಾಗಿಲ್ಲ. ಬಸವಣ್ಣನ ಮಾರ್ಗ ಅನುಸರಿಸುತ್ತೇನೆಂದು ಹೇಳುವ ನೀವು, ಪ್ರಬಲ ಜಾತಿಗಳ ಸಚಿವರಿಗೆ ಮಂಡಿಯೂರಿ ಅಲೆಮಾರಿಗಳಿಗೆ ಸಿಗಬೇಕಾದ 1 ಶೇಕಡ ಮೀಸಲಾತಿ ಕಿತ್ತುಕೊಂಡಿದ್ದೀರಿ. ಈ ಮೂಲಕ ಅ ಸಮುದಾಯಗಳು ಮೀಸಲಾತಿಯಿಂದ ಮುಂದೆಯೂ ವಂಚಿತರಾಗಲು ದಾರಿ ಮಾಡಿಕೊಟ್ಟಿದ್ದಿರಿ. ಅಲೆಮಾರಿಗಳನ್ನು ಬೀದಿಗೆ ತಳ್ಳಿ, ಅವರಿಗೆ ತಮಗೆ ಸಿಗಬೇಕಾದ 1 ಶೇಕಡ ಮೀಸಲಾತಿಗಾಗಿ ದೆಹಲಿ ತನಕ ಹೋಗುವಂತೆ ಮಾಡಿದ್ದೀರಿ. ಈಗ ಪರಿಶಿಷ್ಟ ಪಂಗಡಗಳ ಮೀಸಲಾತಿಯ ವಿಚಾರದಲ್ಲೂ ಹಾಗೆ ಮಾಡದೇ ಎಚ್ಚರ ವಹಿಸಿರಿ, ಜಾತಿ ಪ್ರೇಮ ಬಿಟ್ಟು ಹೊರ ಬನ್ನಿ ಎಂದು ಲಕ್ಷ್ಮಣ ಮಂಡಲಗೇರಾ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಜಯಂತಿ ಬರೀ ವಾಲ್ಮೀಕಿ ಸಮುದಾಯಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯಗಳ ಜಯಂತಿಯಾಗಬೇಕು. ಮಹರ್ಷಿ ವಾಲ್ಮೀಕಿ ಒಬ್ಬ ಮಹಾನ್ ಆದಿ ಕವಿ. ರಾಮಾಯಣ ಮೂಲಕ ರಾಮನನ್ನು ಸೃಷ್ಟಿಸಿದ್ದು ಇದೇ ಕವಿ. ಆದರೆ, ಇವತ್ತು ಅದೇ ರಾಮನ ಹೆಸರು ಹೇಳಿಕೊಂಡು ಅಧಿಕಾರ ಹಿಡಿದವರು ಸಮುದಾಯವನ್ನು ಎಲ್ಲಿ ಇಟ್ಟಿದ್ದಾರೆ ಎನ್ನುವುದನ್ನು ಸಮುದಾಯದ ಯುವಕರು, ಮುಖಂಡರು, ಜನಪ್ರತಿನಿಧಿಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ನಾಲ್ಕು ಮೀಸಲು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರ ಇದ್ದರೂ, ಸಮುದಾಯಗಳು ಅಭಿವೃದ್ಧಿ ಕಾಣದೆ ಇರುವುದು ದುರಂತ. ಸಮುದಾಯ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ನೂರಾರು ಕೋಟಿ ಹಗರಣ ನಡೆದರೂ ತುಟಿ ಬಿಚ್ಚದ ಸಮಾಜದ ಮುಖಂಡರು, ಸಚಿವರು, ಶಾಸಕರು ಮೀಸಲಾತಿ ಹೆಸರಿನಲ್ಲಿ ಅಧಿಕಾರ ಹಿಡಿದವರು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದನ್ನು ಸಮುದಾಯದ ಯುವಕರು ಪ್ರಶ್ನಿಸುವಂತಾಗಬೇಕು. ಶಿಕ್ಷಣ, ಸಂಘಟನೆಯಲ್ಲಿ ಮುಂದೆ ಬರಬೇಕು ಎಂದು ಹೇಳಿದ್ದಾರೆ.

ನಕಲಿ ಜಾತಿಪ್ರಮಾಣ ಪತ್ರಗಳು ಹಿಡಿದು ಸಮುದಾಯಗಳನ್ನು ತುಳಿಯುವ ಕೆಲಸ ನಡೆಯುತ್ತಿದೆ. ಆದರೆ, ಇದರ ಬಗ್ಗೆ ಯಾರೂ ಮಾತಾಡಲು ತಯಾರಿಲ್ಲ. ಸಮಾಜದ ಯುವಕರು ಕೇಸರಿ ಭಯೋತ್ಪಾದಕರಿಂದ ಅಂತರ ಕಾಯ್ದುಕೊಂಡು ರಾಮನ ಜಪ ಬಿಟ್ಟು, ಇಂಥ ವಿಷಯಗಳ ಬಗ್ಗೆ ಜಾಗೃತಿ ಮಾಡಿಸುವ ಕೆಲಸಕ್ಕೆ ಮುಂದಾಗಬೇಕು. ಆರ್‌ಎಸ್ಎಸ್, ಬಿಜೆಪಿಗಳಂತಹ ದೇಶದ್ರೋಹಿ ಸಂಘಟನೆಗಳ ಕಾಲಾಳುಗಳಾಗಿ ಬದುಕನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.

ಯುವಜನರು ಅತಿ ಹೆಚ್ಚು ಈ ಸಮುದಾಯದಿಂದ ಹಿಂದೆ ಸರಿಯುತ್ತಿರುವುದರ ಬಗ್ಗೆ ಸಂಬಂಧಪಟ್ಟವರು ಅಧ್ಯಯನ ನಡೆಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಸಮಾಜದ ಯುವಕರು ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟದ ಮಾರ್ಗಕ್ಕೆ ಮುಂದಾಗಬೇಕು. ಆಗ ಮಾತ್ರ ಬುಡಕಟ್ಟು ಸಮುದಾಯಗಳು, ದಮನಿತ ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಲಕ್ಷ್ಮಣ ಮಂಡಲಗೇರಾ ಅಭಿಪ್ರಾಯಪಟ್ಟಿದ್ದಾರೆ.

‘ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..’; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...