Homeಕರ್ನಾಟಕಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

ಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

- Advertisement -
- Advertisement -

ವಾಲ್ಮೀಕಿ ಜಯಂತಿಯು ಈ ಮೊದಲು ಬೇಡ, ವಾಲ್ಮೀಕಿ, ನಾಯಕ ಸಮುದಾಯಗಳ ಆಚರಣೆಯಾಗಿತ್ತು. ಆದರೆ ಈಗ ಈ ಸಮುದಾಯಗಳ ಜೊತೆಗೆ 50 ಬುಡಕಟ್ಟು ಸಮುದಾಯಗಳು ಸೇರ್ಪಡೆಯಾಗಿ ಎಲ್ಲಾ ಸಮುದಾಯಗಳ  ಆಚರಣೆಯಾಗುತ್ತಿದೆ. ಇದರಲ್ಲಿಯೂ ಮುಂಚೂಣಿ ಪ್ರಬಲ ಜಾತಿಗಳಿಗೆ ಸೀಮಿತವಾದ ಮೀಸಲಾತಿ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಹಂಚಿಕೆಯಾಗಬೇಕು. ಆಗ ಈ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಲಕ್ಷ್ಮಣ ಮಂಡಲಗೇರಾ ಹೇಳಿದ್ದಾರೆ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಾಲ್ಮೀಕಿ ಸಮುದಾಯ ಪ್ರಸ್ತುತ ಶೇಕಡ 7ರಷ್ಟು ಮೀಸಲಾತಿ ಪಡೆಯುತ್ತಿವೆ. ಪರಿಶಿಷ್ಠ ಪಂಗಡದಲ್ಲಿರುವ ಇನ್ನಿತರ ಕಾಡು ಮೇಡುಗಳಲ್ಲಿ ವಾಸಿಸುವ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳು ಮೀಸಲಾತಿ ಸಿಗದೆ ವಂಚಿತವಾಗಿವೆ. ಈಗಿರುವ 7 ಶೇಕಡ ಮೀಸಲಾತಿಯಲ್ಲಿ ಮತ್ತೆ ಕುರುಬ ಸಮುದಾಯವನ್ನು ಸೇರಿದರೆ ಅಲ್ಲಿರುವ ಆದಿವಾಸಿ, ಅಲೆಮಾರಿ, ಬುಡಕಟ್ಟು ಸಮುದಾಯಗಳು ಮೀಸಲಾತಿಯಿಂದ ಮತ್ತಷ್ಟು ಸಂಪೂರ್ಣ ವಂಚಿತವಾಗುವ ಸಾಧ್ಯತೆಯಿದೆ. ಈಗಿರುವ ಮೀಸಲಾತಿ ಆ ಸಮುದಾಯಗಳಿಗೆ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ಈಗ ಮತ್ತೆ ಬಲಿಷ್ಠ ಜಾತಿಗಳನ್ನು ಸೇರಿಸುವುದರಿಂದ ಮತ್ತಷ್ಟು ವಂಚಿತರಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಸಿದ್ಧರಾಮಯ್ಯ ಅವರು ಸ್ವಜಾತಿ ಪ್ರೇಮ ಬಿಟ್ಟು ಸಾಮಾಜಿಕ ನ್ಯಾಯದ ಬಗ್ಗೆ ಯೋಚಿಸಬೇಕಿದೆ ಎಂದಿದ್ದಾರೆ.

ಸಾಮಾಜಿಕ ಹರಿಕಾರ, ಅಹಿಂದ ನಾಯಕ ಎಂದು ಹೇಳುವ ಸಿದ್ದರಾಮಯ್ಯನವರೇ, ಈಗಾಗಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹಂಚಿಕೆಯಲ್ಲಿ ನೀವು ಮಾಡಿರುವ ಮೋಸ ಯಾರೂ ಮರೆಯುವ ಹಾಗಿಲ್ಲ. ಬಸವಣ್ಣನ ಮಾರ್ಗ ಅನುಸರಿಸುತ್ತೇನೆಂದು ಹೇಳುವ ನೀವು, ಪ್ರಬಲ ಜಾತಿಗಳ ಸಚಿವರಿಗೆ ಮಂಡಿಯೂರಿ ಅಲೆಮಾರಿಗಳಿಗೆ ಸಿಗಬೇಕಾದ 1 ಶೇಕಡ ಮೀಸಲಾತಿ ಕಿತ್ತುಕೊಂಡಿದ್ದೀರಿ. ಈ ಮೂಲಕ ಅ ಸಮುದಾಯಗಳು ಮೀಸಲಾತಿಯಿಂದ ಮುಂದೆಯೂ ವಂಚಿತರಾಗಲು ದಾರಿ ಮಾಡಿಕೊಟ್ಟಿದ್ದಿರಿ. ಅಲೆಮಾರಿಗಳನ್ನು ಬೀದಿಗೆ ತಳ್ಳಿ, ಅವರಿಗೆ ತಮಗೆ ಸಿಗಬೇಕಾದ 1 ಶೇಕಡ ಮೀಸಲಾತಿಗಾಗಿ ದೆಹಲಿ ತನಕ ಹೋಗುವಂತೆ ಮಾಡಿದ್ದೀರಿ. ಈಗ ಪರಿಶಿಷ್ಟ ಪಂಗಡಗಳ ಮೀಸಲಾತಿಯ ವಿಚಾರದಲ್ಲೂ ಹಾಗೆ ಮಾಡದೇ ಎಚ್ಚರ ವಹಿಸಿರಿ, ಜಾತಿ ಪ್ರೇಮ ಬಿಟ್ಟು ಹೊರ ಬನ್ನಿ ಎಂದು ಲಕ್ಷ್ಮಣ ಮಂಡಲಗೇರಾ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಜಯಂತಿ ಬರೀ ವಾಲ್ಮೀಕಿ ಸಮುದಾಯಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯಗಳ ಜಯಂತಿಯಾಗಬೇಕು. ಮಹರ್ಷಿ ವಾಲ್ಮೀಕಿ ಒಬ್ಬ ಮಹಾನ್ ಆದಿ ಕವಿ. ರಾಮಾಯಣ ಮೂಲಕ ರಾಮನನ್ನು ಸೃಷ್ಟಿಸಿದ್ದು ಇದೇ ಕವಿ. ಆದರೆ, ಇವತ್ತು ಅದೇ ರಾಮನ ಹೆಸರು ಹೇಳಿಕೊಂಡು ಅಧಿಕಾರ ಹಿಡಿದವರು ಸಮುದಾಯವನ್ನು ಎಲ್ಲಿ ಇಟ್ಟಿದ್ದಾರೆ ಎನ್ನುವುದನ್ನು ಸಮುದಾಯದ ಯುವಕರು, ಮುಖಂಡರು, ಜನಪ್ರತಿನಿಧಿಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ನಾಲ್ಕು ಮೀಸಲು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರ ಇದ್ದರೂ, ಸಮುದಾಯಗಳು ಅಭಿವೃದ್ಧಿ ಕಾಣದೆ ಇರುವುದು ದುರಂತ. ಸಮುದಾಯ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ನೂರಾರು ಕೋಟಿ ಹಗರಣ ನಡೆದರೂ ತುಟಿ ಬಿಚ್ಚದ ಸಮಾಜದ ಮುಖಂಡರು, ಸಚಿವರು, ಶಾಸಕರು ಮೀಸಲಾತಿ ಹೆಸರಿನಲ್ಲಿ ಅಧಿಕಾರ ಹಿಡಿದವರು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದನ್ನು ಸಮುದಾಯದ ಯುವಕರು ಪ್ರಶ್ನಿಸುವಂತಾಗಬೇಕು. ಶಿಕ್ಷಣ, ಸಂಘಟನೆಯಲ್ಲಿ ಮುಂದೆ ಬರಬೇಕು ಎಂದು ಹೇಳಿದ್ದಾರೆ.

ನಕಲಿ ಜಾತಿಪ್ರಮಾಣ ಪತ್ರಗಳು ಹಿಡಿದು ಸಮುದಾಯಗಳನ್ನು ತುಳಿಯುವ ಕೆಲಸ ನಡೆಯುತ್ತಿದೆ. ಆದರೆ, ಇದರ ಬಗ್ಗೆ ಯಾರೂ ಮಾತಾಡಲು ತಯಾರಿಲ್ಲ. ಸಮಾಜದ ಯುವಕರು ಕೇಸರಿ ಭಯೋತ್ಪಾದಕರಿಂದ ಅಂತರ ಕಾಯ್ದುಕೊಂಡು ರಾಮನ ಜಪ ಬಿಟ್ಟು, ಇಂಥ ವಿಷಯಗಳ ಬಗ್ಗೆ ಜಾಗೃತಿ ಮಾಡಿಸುವ ಕೆಲಸಕ್ಕೆ ಮುಂದಾಗಬೇಕು. ಆರ್‌ಎಸ್ಎಸ್, ಬಿಜೆಪಿಗಳಂತಹ ದೇಶದ್ರೋಹಿ ಸಂಘಟನೆಗಳ ಕಾಲಾಳುಗಳಾಗಿ ಬದುಕನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.

ಯುವಜನರು ಅತಿ ಹೆಚ್ಚು ಈ ಸಮುದಾಯದಿಂದ ಹಿಂದೆ ಸರಿಯುತ್ತಿರುವುದರ ಬಗ್ಗೆ ಸಂಬಂಧಪಟ್ಟವರು ಅಧ್ಯಯನ ನಡೆಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಸಮಾಜದ ಯುವಕರು ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟದ ಮಾರ್ಗಕ್ಕೆ ಮುಂದಾಗಬೇಕು. ಆಗ ಮಾತ್ರ ಬುಡಕಟ್ಟು ಸಮುದಾಯಗಳು, ದಮನಿತ ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಲಕ್ಷ್ಮಣ ಮಂಡಲಗೇರಾ ಅಭಿಪ್ರಾಯಪಟ್ಟಿದ್ದಾರೆ.

‘ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..’; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...