Homeಕರ್ನಾಟಕಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

ಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

- Advertisement -
- Advertisement -

ವಾಲ್ಮೀಕಿ ಜಯಂತಿಯು ಈ ಮೊದಲು ಬೇಡ, ವಾಲ್ಮೀಕಿ, ನಾಯಕ ಸಮುದಾಯಗಳ ಆಚರಣೆಯಾಗಿತ್ತು. ಆದರೆ ಈಗ ಈ ಸಮುದಾಯಗಳ ಜೊತೆಗೆ 50 ಬುಡಕಟ್ಟು ಸಮುದಾಯಗಳು ಸೇರ್ಪಡೆಯಾಗಿ ಎಲ್ಲಾ ಸಮುದಾಯಗಳ  ಆಚರಣೆಯಾಗುತ್ತಿದೆ. ಇದರಲ್ಲಿಯೂ ಮುಂಚೂಣಿ ಪ್ರಬಲ ಜಾತಿಗಳಿಗೆ ಸೀಮಿತವಾದ ಮೀಸಲಾತಿ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಹಂಚಿಕೆಯಾಗಬೇಕು. ಆಗ ಈ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಲಕ್ಷ್ಮಣ ಮಂಡಲಗೇರಾ ಹೇಳಿದ್ದಾರೆ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಾಲ್ಮೀಕಿ ಸಮುದಾಯ ಪ್ರಸ್ತುತ ಶೇಕಡ 7ರಷ್ಟು ಮೀಸಲಾತಿ ಪಡೆಯುತ್ತಿವೆ. ಪರಿಶಿಷ್ಠ ಪಂಗಡದಲ್ಲಿರುವ ಇನ್ನಿತರ ಕಾಡು ಮೇಡುಗಳಲ್ಲಿ ವಾಸಿಸುವ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳು ಮೀಸಲಾತಿ ಸಿಗದೆ ವಂಚಿತವಾಗಿವೆ. ಈಗಿರುವ 7 ಶೇಕಡ ಮೀಸಲಾತಿಯಲ್ಲಿ ಮತ್ತೆ ಕುರುಬ ಸಮುದಾಯವನ್ನು ಸೇರಿದರೆ ಅಲ್ಲಿರುವ ಆದಿವಾಸಿ, ಅಲೆಮಾರಿ, ಬುಡಕಟ್ಟು ಸಮುದಾಯಗಳು ಮೀಸಲಾತಿಯಿಂದ ಮತ್ತಷ್ಟು ಸಂಪೂರ್ಣ ವಂಚಿತವಾಗುವ ಸಾಧ್ಯತೆಯಿದೆ. ಈಗಿರುವ ಮೀಸಲಾತಿ ಆ ಸಮುದಾಯಗಳಿಗೆ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ಈಗ ಮತ್ತೆ ಬಲಿಷ್ಠ ಜಾತಿಗಳನ್ನು ಸೇರಿಸುವುದರಿಂದ ಮತ್ತಷ್ಟು ವಂಚಿತರಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಸಿದ್ಧರಾಮಯ್ಯ ಅವರು ಸ್ವಜಾತಿ ಪ್ರೇಮ ಬಿಟ್ಟು ಸಾಮಾಜಿಕ ನ್ಯಾಯದ ಬಗ್ಗೆ ಯೋಚಿಸಬೇಕಿದೆ ಎಂದಿದ್ದಾರೆ.

ಸಾಮಾಜಿಕ ಹರಿಕಾರ, ಅಹಿಂದ ನಾಯಕ ಎಂದು ಹೇಳುವ ಸಿದ್ದರಾಮಯ್ಯನವರೇ, ಈಗಾಗಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹಂಚಿಕೆಯಲ್ಲಿ ನೀವು ಮಾಡಿರುವ ಮೋಸ ಯಾರೂ ಮರೆಯುವ ಹಾಗಿಲ್ಲ. ಬಸವಣ್ಣನ ಮಾರ್ಗ ಅನುಸರಿಸುತ್ತೇನೆಂದು ಹೇಳುವ ನೀವು, ಪ್ರಬಲ ಜಾತಿಗಳ ಸಚಿವರಿಗೆ ಮಂಡಿಯೂರಿ ಅಲೆಮಾರಿಗಳಿಗೆ ಸಿಗಬೇಕಾದ 1 ಶೇಕಡ ಮೀಸಲಾತಿ ಕಿತ್ತುಕೊಂಡಿದ್ದೀರಿ. ಈ ಮೂಲಕ ಅ ಸಮುದಾಯಗಳು ಮೀಸಲಾತಿಯಿಂದ ಮುಂದೆಯೂ ವಂಚಿತರಾಗಲು ದಾರಿ ಮಾಡಿಕೊಟ್ಟಿದ್ದಿರಿ. ಅಲೆಮಾರಿಗಳನ್ನು ಬೀದಿಗೆ ತಳ್ಳಿ, ಅವರಿಗೆ ತಮಗೆ ಸಿಗಬೇಕಾದ 1 ಶೇಕಡ ಮೀಸಲಾತಿಗಾಗಿ ದೆಹಲಿ ತನಕ ಹೋಗುವಂತೆ ಮಾಡಿದ್ದೀರಿ. ಈಗ ಪರಿಶಿಷ್ಟ ಪಂಗಡಗಳ ಮೀಸಲಾತಿಯ ವಿಚಾರದಲ್ಲೂ ಹಾಗೆ ಮಾಡದೇ ಎಚ್ಚರ ವಹಿಸಿರಿ, ಜಾತಿ ಪ್ರೇಮ ಬಿಟ್ಟು ಹೊರ ಬನ್ನಿ ಎಂದು ಲಕ್ಷ್ಮಣ ಮಂಡಲಗೇರಾ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಜಯಂತಿ ಬರೀ ವಾಲ್ಮೀಕಿ ಸಮುದಾಯಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯಗಳ ಜಯಂತಿಯಾಗಬೇಕು. ಮಹರ್ಷಿ ವಾಲ್ಮೀಕಿ ಒಬ್ಬ ಮಹಾನ್ ಆದಿ ಕವಿ. ರಾಮಾಯಣ ಮೂಲಕ ರಾಮನನ್ನು ಸೃಷ್ಟಿಸಿದ್ದು ಇದೇ ಕವಿ. ಆದರೆ, ಇವತ್ತು ಅದೇ ರಾಮನ ಹೆಸರು ಹೇಳಿಕೊಂಡು ಅಧಿಕಾರ ಹಿಡಿದವರು ಸಮುದಾಯವನ್ನು ಎಲ್ಲಿ ಇಟ್ಟಿದ್ದಾರೆ ಎನ್ನುವುದನ್ನು ಸಮುದಾಯದ ಯುವಕರು, ಮುಖಂಡರು, ಜನಪ್ರತಿನಿಧಿಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ನಾಲ್ಕು ಮೀಸಲು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರ ಇದ್ದರೂ, ಸಮುದಾಯಗಳು ಅಭಿವೃದ್ಧಿ ಕಾಣದೆ ಇರುವುದು ದುರಂತ. ಸಮುದಾಯ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ನೂರಾರು ಕೋಟಿ ಹಗರಣ ನಡೆದರೂ ತುಟಿ ಬಿಚ್ಚದ ಸಮಾಜದ ಮುಖಂಡರು, ಸಚಿವರು, ಶಾಸಕರು ಮೀಸಲಾತಿ ಹೆಸರಿನಲ್ಲಿ ಅಧಿಕಾರ ಹಿಡಿದವರು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದನ್ನು ಸಮುದಾಯದ ಯುವಕರು ಪ್ರಶ್ನಿಸುವಂತಾಗಬೇಕು. ಶಿಕ್ಷಣ, ಸಂಘಟನೆಯಲ್ಲಿ ಮುಂದೆ ಬರಬೇಕು ಎಂದು ಹೇಳಿದ್ದಾರೆ.

ನಕಲಿ ಜಾತಿಪ್ರಮಾಣ ಪತ್ರಗಳು ಹಿಡಿದು ಸಮುದಾಯಗಳನ್ನು ತುಳಿಯುವ ಕೆಲಸ ನಡೆಯುತ್ತಿದೆ. ಆದರೆ, ಇದರ ಬಗ್ಗೆ ಯಾರೂ ಮಾತಾಡಲು ತಯಾರಿಲ್ಲ. ಸಮಾಜದ ಯುವಕರು ಕೇಸರಿ ಭಯೋತ್ಪಾದಕರಿಂದ ಅಂತರ ಕಾಯ್ದುಕೊಂಡು ರಾಮನ ಜಪ ಬಿಟ್ಟು, ಇಂಥ ವಿಷಯಗಳ ಬಗ್ಗೆ ಜಾಗೃತಿ ಮಾಡಿಸುವ ಕೆಲಸಕ್ಕೆ ಮುಂದಾಗಬೇಕು. ಆರ್‌ಎಸ್ಎಸ್, ಬಿಜೆಪಿಗಳಂತಹ ದೇಶದ್ರೋಹಿ ಸಂಘಟನೆಗಳ ಕಾಲಾಳುಗಳಾಗಿ ಬದುಕನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.

ಯುವಜನರು ಅತಿ ಹೆಚ್ಚು ಈ ಸಮುದಾಯದಿಂದ ಹಿಂದೆ ಸರಿಯುತ್ತಿರುವುದರ ಬಗ್ಗೆ ಸಂಬಂಧಪಟ್ಟವರು ಅಧ್ಯಯನ ನಡೆಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಸಮಾಜದ ಯುವಕರು ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟದ ಮಾರ್ಗಕ್ಕೆ ಮುಂದಾಗಬೇಕು. ಆಗ ಮಾತ್ರ ಬುಡಕಟ್ಟು ಸಮುದಾಯಗಳು, ದಮನಿತ ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಲಕ್ಷ್ಮಣ ಮಂಡಲಗೇರಾ ಅಭಿಪ್ರಾಯಪಟ್ಟಿದ್ದಾರೆ.

‘ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..’; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...