Homeಕರ್ನಾಟಕಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

ಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

- Advertisement -
- Advertisement -

ವಾಲ್ಮೀಕಿ ಜಯಂತಿಯು ಈ ಮೊದಲು ಬೇಡ, ವಾಲ್ಮೀಕಿ, ನಾಯಕ ಸಮುದಾಯಗಳ ಆಚರಣೆಯಾಗಿತ್ತು. ಆದರೆ ಈಗ ಈ ಸಮುದಾಯಗಳ ಜೊತೆಗೆ 50 ಬುಡಕಟ್ಟು ಸಮುದಾಯಗಳು ಸೇರ್ಪಡೆಯಾಗಿ ಎಲ್ಲಾ ಸಮುದಾಯಗಳ  ಆಚರಣೆಯಾಗುತ್ತಿದೆ. ಇದರಲ್ಲಿಯೂ ಮುಂಚೂಣಿ ಪ್ರಬಲ ಜಾತಿಗಳಿಗೆ ಸೀಮಿತವಾದ ಮೀಸಲಾತಿ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಹಂಚಿಕೆಯಾಗಬೇಕು. ಆಗ ಈ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಲಕ್ಷ್ಮಣ ಮಂಡಲಗೇರಾ ಹೇಳಿದ್ದಾರೆ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಾಲ್ಮೀಕಿ ಸಮುದಾಯ ಪ್ರಸ್ತುತ ಶೇಕಡ 7ರಷ್ಟು ಮೀಸಲಾತಿ ಪಡೆಯುತ್ತಿವೆ. ಪರಿಶಿಷ್ಠ ಪಂಗಡದಲ್ಲಿರುವ ಇನ್ನಿತರ ಕಾಡು ಮೇಡುಗಳಲ್ಲಿ ವಾಸಿಸುವ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳು ಮೀಸಲಾತಿ ಸಿಗದೆ ವಂಚಿತವಾಗಿವೆ. ಈಗಿರುವ 7 ಶೇಕಡ ಮೀಸಲಾತಿಯಲ್ಲಿ ಮತ್ತೆ ಕುರುಬ ಸಮುದಾಯವನ್ನು ಸೇರಿದರೆ ಅಲ್ಲಿರುವ ಆದಿವಾಸಿ, ಅಲೆಮಾರಿ, ಬುಡಕಟ್ಟು ಸಮುದಾಯಗಳು ಮೀಸಲಾತಿಯಿಂದ ಮತ್ತಷ್ಟು ಸಂಪೂರ್ಣ ವಂಚಿತವಾಗುವ ಸಾಧ್ಯತೆಯಿದೆ. ಈಗಿರುವ ಮೀಸಲಾತಿ ಆ ಸಮುದಾಯಗಳಿಗೆ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ಈಗ ಮತ್ತೆ ಬಲಿಷ್ಠ ಜಾತಿಗಳನ್ನು ಸೇರಿಸುವುದರಿಂದ ಮತ್ತಷ್ಟು ವಂಚಿತರಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಸಿದ್ಧರಾಮಯ್ಯ ಅವರು ಸ್ವಜಾತಿ ಪ್ರೇಮ ಬಿಟ್ಟು ಸಾಮಾಜಿಕ ನ್ಯಾಯದ ಬಗ್ಗೆ ಯೋಚಿಸಬೇಕಿದೆ ಎಂದಿದ್ದಾರೆ.

ಸಾಮಾಜಿಕ ಹರಿಕಾರ, ಅಹಿಂದ ನಾಯಕ ಎಂದು ಹೇಳುವ ಸಿದ್ದರಾಮಯ್ಯನವರೇ, ಈಗಾಗಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹಂಚಿಕೆಯಲ್ಲಿ ನೀವು ಮಾಡಿರುವ ಮೋಸ ಯಾರೂ ಮರೆಯುವ ಹಾಗಿಲ್ಲ. ಬಸವಣ್ಣನ ಮಾರ್ಗ ಅನುಸರಿಸುತ್ತೇನೆಂದು ಹೇಳುವ ನೀವು, ಪ್ರಬಲ ಜಾತಿಗಳ ಸಚಿವರಿಗೆ ಮಂಡಿಯೂರಿ ಅಲೆಮಾರಿಗಳಿಗೆ ಸಿಗಬೇಕಾದ 1 ಶೇಕಡ ಮೀಸಲಾತಿ ಕಿತ್ತುಕೊಂಡಿದ್ದೀರಿ. ಈ ಮೂಲಕ ಅ ಸಮುದಾಯಗಳು ಮೀಸಲಾತಿಯಿಂದ ಮುಂದೆಯೂ ವಂಚಿತರಾಗಲು ದಾರಿ ಮಾಡಿಕೊಟ್ಟಿದ್ದಿರಿ. ಅಲೆಮಾರಿಗಳನ್ನು ಬೀದಿಗೆ ತಳ್ಳಿ, ಅವರಿಗೆ ತಮಗೆ ಸಿಗಬೇಕಾದ 1 ಶೇಕಡ ಮೀಸಲಾತಿಗಾಗಿ ದೆಹಲಿ ತನಕ ಹೋಗುವಂತೆ ಮಾಡಿದ್ದೀರಿ. ಈಗ ಪರಿಶಿಷ್ಟ ಪಂಗಡಗಳ ಮೀಸಲಾತಿಯ ವಿಚಾರದಲ್ಲೂ ಹಾಗೆ ಮಾಡದೇ ಎಚ್ಚರ ವಹಿಸಿರಿ, ಜಾತಿ ಪ್ರೇಮ ಬಿಟ್ಟು ಹೊರ ಬನ್ನಿ ಎಂದು ಲಕ್ಷ್ಮಣ ಮಂಡಲಗೇರಾ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಜಯಂತಿ ಬರೀ ವಾಲ್ಮೀಕಿ ಸಮುದಾಯಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯಗಳ ಜಯಂತಿಯಾಗಬೇಕು. ಮಹರ್ಷಿ ವಾಲ್ಮೀಕಿ ಒಬ್ಬ ಮಹಾನ್ ಆದಿ ಕವಿ. ರಾಮಾಯಣ ಮೂಲಕ ರಾಮನನ್ನು ಸೃಷ್ಟಿಸಿದ್ದು ಇದೇ ಕವಿ. ಆದರೆ, ಇವತ್ತು ಅದೇ ರಾಮನ ಹೆಸರು ಹೇಳಿಕೊಂಡು ಅಧಿಕಾರ ಹಿಡಿದವರು ಸಮುದಾಯವನ್ನು ಎಲ್ಲಿ ಇಟ್ಟಿದ್ದಾರೆ ಎನ್ನುವುದನ್ನು ಸಮುದಾಯದ ಯುವಕರು, ಮುಖಂಡರು, ಜನಪ್ರತಿನಿಧಿಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ನಾಲ್ಕು ಮೀಸಲು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರ ಇದ್ದರೂ, ಸಮುದಾಯಗಳು ಅಭಿವೃದ್ಧಿ ಕಾಣದೆ ಇರುವುದು ದುರಂತ. ಸಮುದಾಯ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ನೂರಾರು ಕೋಟಿ ಹಗರಣ ನಡೆದರೂ ತುಟಿ ಬಿಚ್ಚದ ಸಮಾಜದ ಮುಖಂಡರು, ಸಚಿವರು, ಶಾಸಕರು ಮೀಸಲಾತಿ ಹೆಸರಿನಲ್ಲಿ ಅಧಿಕಾರ ಹಿಡಿದವರು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದನ್ನು ಸಮುದಾಯದ ಯುವಕರು ಪ್ರಶ್ನಿಸುವಂತಾಗಬೇಕು. ಶಿಕ್ಷಣ, ಸಂಘಟನೆಯಲ್ಲಿ ಮುಂದೆ ಬರಬೇಕು ಎಂದು ಹೇಳಿದ್ದಾರೆ.

ನಕಲಿ ಜಾತಿಪ್ರಮಾಣ ಪತ್ರಗಳು ಹಿಡಿದು ಸಮುದಾಯಗಳನ್ನು ತುಳಿಯುವ ಕೆಲಸ ನಡೆಯುತ್ತಿದೆ. ಆದರೆ, ಇದರ ಬಗ್ಗೆ ಯಾರೂ ಮಾತಾಡಲು ತಯಾರಿಲ್ಲ. ಸಮಾಜದ ಯುವಕರು ಕೇಸರಿ ಭಯೋತ್ಪಾದಕರಿಂದ ಅಂತರ ಕಾಯ್ದುಕೊಂಡು ರಾಮನ ಜಪ ಬಿಟ್ಟು, ಇಂಥ ವಿಷಯಗಳ ಬಗ್ಗೆ ಜಾಗೃತಿ ಮಾಡಿಸುವ ಕೆಲಸಕ್ಕೆ ಮುಂದಾಗಬೇಕು. ಆರ್‌ಎಸ್ಎಸ್, ಬಿಜೆಪಿಗಳಂತಹ ದೇಶದ್ರೋಹಿ ಸಂಘಟನೆಗಳ ಕಾಲಾಳುಗಳಾಗಿ ಬದುಕನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.

ಯುವಜನರು ಅತಿ ಹೆಚ್ಚು ಈ ಸಮುದಾಯದಿಂದ ಹಿಂದೆ ಸರಿಯುತ್ತಿರುವುದರ ಬಗ್ಗೆ ಸಂಬಂಧಪಟ್ಟವರು ಅಧ್ಯಯನ ನಡೆಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಸಮಾಜದ ಯುವಕರು ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟದ ಮಾರ್ಗಕ್ಕೆ ಮುಂದಾಗಬೇಕು. ಆಗ ಮಾತ್ರ ಬುಡಕಟ್ಟು ಸಮುದಾಯಗಳು, ದಮನಿತ ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಲಕ್ಷ್ಮಣ ಮಂಡಲಗೇರಾ ಅಭಿಪ್ರಾಯಪಟ್ಟಿದ್ದಾರೆ.

‘ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..’; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...