Homeಕರ್ನಾಟಕಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

ಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

- Advertisement -
- Advertisement -

ವಾಲ್ಮೀಕಿ ಜಯಂತಿಯು ಈ ಮೊದಲು ಬೇಡ, ವಾಲ್ಮೀಕಿ, ನಾಯಕ ಸಮುದಾಯಗಳ ಆಚರಣೆಯಾಗಿತ್ತು. ಆದರೆ ಈಗ ಈ ಸಮುದಾಯಗಳ ಜೊತೆಗೆ 50 ಬುಡಕಟ್ಟು ಸಮುದಾಯಗಳು ಸೇರ್ಪಡೆಯಾಗಿ ಎಲ್ಲಾ ಸಮುದಾಯಗಳ  ಆಚರಣೆಯಾಗುತ್ತಿದೆ. ಇದರಲ್ಲಿಯೂ ಮುಂಚೂಣಿ ಪ್ರಬಲ ಜಾತಿಗಳಿಗೆ ಸೀಮಿತವಾದ ಮೀಸಲಾತಿ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಹಂಚಿಕೆಯಾಗಬೇಕು. ಆಗ ಈ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಲಕ್ಷ್ಮಣ ಮಂಡಲಗೇರಾ ಹೇಳಿದ್ದಾರೆ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಾಲ್ಮೀಕಿ ಸಮುದಾಯ ಪ್ರಸ್ತುತ ಶೇಕಡ 7ರಷ್ಟು ಮೀಸಲಾತಿ ಪಡೆಯುತ್ತಿವೆ. ಪರಿಶಿಷ್ಠ ಪಂಗಡದಲ್ಲಿರುವ ಇನ್ನಿತರ ಕಾಡು ಮೇಡುಗಳಲ್ಲಿ ವಾಸಿಸುವ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳು ಮೀಸಲಾತಿ ಸಿಗದೆ ವಂಚಿತವಾಗಿವೆ. ಈಗಿರುವ 7 ಶೇಕಡ ಮೀಸಲಾತಿಯಲ್ಲಿ ಮತ್ತೆ ಕುರುಬ ಸಮುದಾಯವನ್ನು ಸೇರಿದರೆ ಅಲ್ಲಿರುವ ಆದಿವಾಸಿ, ಅಲೆಮಾರಿ, ಬುಡಕಟ್ಟು ಸಮುದಾಯಗಳು ಮೀಸಲಾತಿಯಿಂದ ಮತ್ತಷ್ಟು ಸಂಪೂರ್ಣ ವಂಚಿತವಾಗುವ ಸಾಧ್ಯತೆಯಿದೆ. ಈಗಿರುವ ಮೀಸಲಾತಿ ಆ ಸಮುದಾಯಗಳಿಗೆ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ಈಗ ಮತ್ತೆ ಬಲಿಷ್ಠ ಜಾತಿಗಳನ್ನು ಸೇರಿಸುವುದರಿಂದ ಮತ್ತಷ್ಟು ವಂಚಿತರಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಸಿದ್ಧರಾಮಯ್ಯ ಅವರು ಸ್ವಜಾತಿ ಪ್ರೇಮ ಬಿಟ್ಟು ಸಾಮಾಜಿಕ ನ್ಯಾಯದ ಬಗ್ಗೆ ಯೋಚಿಸಬೇಕಿದೆ ಎಂದಿದ್ದಾರೆ.

ಸಾಮಾಜಿಕ ಹರಿಕಾರ, ಅಹಿಂದ ನಾಯಕ ಎಂದು ಹೇಳುವ ಸಿದ್ದರಾಮಯ್ಯನವರೇ, ಈಗಾಗಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹಂಚಿಕೆಯಲ್ಲಿ ನೀವು ಮಾಡಿರುವ ಮೋಸ ಯಾರೂ ಮರೆಯುವ ಹಾಗಿಲ್ಲ. ಬಸವಣ್ಣನ ಮಾರ್ಗ ಅನುಸರಿಸುತ್ತೇನೆಂದು ಹೇಳುವ ನೀವು, ಪ್ರಬಲ ಜಾತಿಗಳ ಸಚಿವರಿಗೆ ಮಂಡಿಯೂರಿ ಅಲೆಮಾರಿಗಳಿಗೆ ಸಿಗಬೇಕಾದ 1 ಶೇಕಡ ಮೀಸಲಾತಿ ಕಿತ್ತುಕೊಂಡಿದ್ದೀರಿ. ಈ ಮೂಲಕ ಅ ಸಮುದಾಯಗಳು ಮೀಸಲಾತಿಯಿಂದ ಮುಂದೆಯೂ ವಂಚಿತರಾಗಲು ದಾರಿ ಮಾಡಿಕೊಟ್ಟಿದ್ದಿರಿ. ಅಲೆಮಾರಿಗಳನ್ನು ಬೀದಿಗೆ ತಳ್ಳಿ, ಅವರಿಗೆ ತಮಗೆ ಸಿಗಬೇಕಾದ 1 ಶೇಕಡ ಮೀಸಲಾತಿಗಾಗಿ ದೆಹಲಿ ತನಕ ಹೋಗುವಂತೆ ಮಾಡಿದ್ದೀರಿ. ಈಗ ಪರಿಶಿಷ್ಟ ಪಂಗಡಗಳ ಮೀಸಲಾತಿಯ ವಿಚಾರದಲ್ಲೂ ಹಾಗೆ ಮಾಡದೇ ಎಚ್ಚರ ವಹಿಸಿರಿ, ಜಾತಿ ಪ್ರೇಮ ಬಿಟ್ಟು ಹೊರ ಬನ್ನಿ ಎಂದು ಲಕ್ಷ್ಮಣ ಮಂಡಲಗೇರಾ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಜಯಂತಿ ಬರೀ ವಾಲ್ಮೀಕಿ ಸಮುದಾಯಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯಗಳ ಜಯಂತಿಯಾಗಬೇಕು. ಮಹರ್ಷಿ ವಾಲ್ಮೀಕಿ ಒಬ್ಬ ಮಹಾನ್ ಆದಿ ಕವಿ. ರಾಮಾಯಣ ಮೂಲಕ ರಾಮನನ್ನು ಸೃಷ್ಟಿಸಿದ್ದು ಇದೇ ಕವಿ. ಆದರೆ, ಇವತ್ತು ಅದೇ ರಾಮನ ಹೆಸರು ಹೇಳಿಕೊಂಡು ಅಧಿಕಾರ ಹಿಡಿದವರು ಸಮುದಾಯವನ್ನು ಎಲ್ಲಿ ಇಟ್ಟಿದ್ದಾರೆ ಎನ್ನುವುದನ್ನು ಸಮುದಾಯದ ಯುವಕರು, ಮುಖಂಡರು, ಜನಪ್ರತಿನಿಧಿಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ನಾಲ್ಕು ಮೀಸಲು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರ ಇದ್ದರೂ, ಸಮುದಾಯಗಳು ಅಭಿವೃದ್ಧಿ ಕಾಣದೆ ಇರುವುದು ದುರಂತ. ಸಮುದಾಯ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ನೂರಾರು ಕೋಟಿ ಹಗರಣ ನಡೆದರೂ ತುಟಿ ಬಿಚ್ಚದ ಸಮಾಜದ ಮುಖಂಡರು, ಸಚಿವರು, ಶಾಸಕರು ಮೀಸಲಾತಿ ಹೆಸರಿನಲ್ಲಿ ಅಧಿಕಾರ ಹಿಡಿದವರು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದನ್ನು ಸಮುದಾಯದ ಯುವಕರು ಪ್ರಶ್ನಿಸುವಂತಾಗಬೇಕು. ಶಿಕ್ಷಣ, ಸಂಘಟನೆಯಲ್ಲಿ ಮುಂದೆ ಬರಬೇಕು ಎಂದು ಹೇಳಿದ್ದಾರೆ.

ನಕಲಿ ಜಾತಿಪ್ರಮಾಣ ಪತ್ರಗಳು ಹಿಡಿದು ಸಮುದಾಯಗಳನ್ನು ತುಳಿಯುವ ಕೆಲಸ ನಡೆಯುತ್ತಿದೆ. ಆದರೆ, ಇದರ ಬಗ್ಗೆ ಯಾರೂ ಮಾತಾಡಲು ತಯಾರಿಲ್ಲ. ಸಮಾಜದ ಯುವಕರು ಕೇಸರಿ ಭಯೋತ್ಪಾದಕರಿಂದ ಅಂತರ ಕಾಯ್ದುಕೊಂಡು ರಾಮನ ಜಪ ಬಿಟ್ಟು, ಇಂಥ ವಿಷಯಗಳ ಬಗ್ಗೆ ಜಾಗೃತಿ ಮಾಡಿಸುವ ಕೆಲಸಕ್ಕೆ ಮುಂದಾಗಬೇಕು. ಆರ್‌ಎಸ್ಎಸ್, ಬಿಜೆಪಿಗಳಂತಹ ದೇಶದ್ರೋಹಿ ಸಂಘಟನೆಗಳ ಕಾಲಾಳುಗಳಾಗಿ ಬದುಕನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.

ಯುವಜನರು ಅತಿ ಹೆಚ್ಚು ಈ ಸಮುದಾಯದಿಂದ ಹಿಂದೆ ಸರಿಯುತ್ತಿರುವುದರ ಬಗ್ಗೆ ಸಂಬಂಧಪಟ್ಟವರು ಅಧ್ಯಯನ ನಡೆಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಸಮಾಜದ ಯುವಕರು ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟದ ಮಾರ್ಗಕ್ಕೆ ಮುಂದಾಗಬೇಕು. ಆಗ ಮಾತ್ರ ಬುಡಕಟ್ಟು ಸಮುದಾಯಗಳು, ದಮನಿತ ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಲಕ್ಷ್ಮಣ ಮಂಡಲಗೇರಾ ಅಭಿಪ್ರಾಯಪಟ್ಟಿದ್ದಾರೆ.

‘ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..’; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...