Homeಕರ್ನಾಟಕಒಳಮೀಸಲಾತಿ: 60 ದಿನದಲ್ಲಿ ವರದಿ ಸಲ್ಲಿಕೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ

ಒಳಮೀಸಲಾತಿ: 60 ದಿನದಲ್ಲಿ ವರದಿ ಸಲ್ಲಿಕೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ನಿವೃತ್ತ ನ್ಯಾ. ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗಕ್ಕೆ ನಿಯಮ ಮತ್ತು ನಿಬಂಧನೆ ನಿಗದಿಪಡಿಸಿ, 2 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

ಆಯೋಗಕ್ಕೆ ನಿಗದಿ ಮಾಡಿರುವ ಹೊಣೆಗಾರಿಕೆಯನ್ನು ನಿಭಾಯಿಸಲು ಅನುಕೂಲವಾಗುವಂತೆ ಕಚೇರಿ ವ್ಯವಸ್ಥೆ, ವಾಹನ, ಸಿಬ್ಬಂದಿ ಮತ್ತು ಇತರ ವ್ಯವಸ್ಥೆಗಳನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಒದಗಿಸಿಕೊಡಲಿದ್ದಾರೆ ಎಂದು ಆದೇಶ ಹೇಳಿದೆ.

ವರದಿ ಸಿದ್ದಪಡಿಸಲು ಅಗತ್ಯವಿರುವ ದಾಖಲೆಗಳನ್ನು ಮತ್ತು ಪುರಾವೆಗಳನ್ನು ವಿಚಾರಣಾ ಆಯೋಗಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಸಲ್ಲಿಸಬೇಕು ಮತ್ತು ಅಗತ್ಯ ಸಹಕಾರ ನೀಡಬೇಕು ಎಂದು ಸೂಚಿಸಿದೆ.

ನಿಯಮ ಮತ್ತು ನಿಬಂಧನೆಗಳಲ್ಲಿ ಉಲ್ಲೇಖಿಸಲಾದ ಎಲ್ಲ ಅಂಶಗಳ ಬಗ್ಗೆ ದತ್ತಾಂಶಗಳು ಮತ್ತು ಅಗತ್ಯ ಶಿಫಾರಸುಗಳನ್ನು ನೀಡಬೇಕು. ಆಯೋಗವು ಅಧಿಕಾರ ವಹಿಸಿಕೊಂಡ 60 ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದಿದೆ.

ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ಧ  ಒಳಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ ಮಾಡಬೇಕು. ಸರಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಾತಿಯಲ್ಲಿ ಎಸ್ ಸಿಯಲ್ಲಿನ ಉಪ ಗುಂಪುಗಳಲ್ಲಿ ‘ಅಂತರ ಹಿಂದುಳಿದಿರುವಿಕೆ’ ಕುರಿತು ದತ್ತಾಂಶ  ಸಂಗ್ರಹಿಸಬೇಕು. ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂಬ ಹೆಸರುಗಳಷ್ಟೇ ರಾಜ್ಯದ  ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿವೆ. ಜನಸಂಖ್ಯೆಯನ್ನು ಹೀಗೆ ವಿಂಗಡಿಸಲಾಗಿದೆ. ಈ ಮೂರೂ ಹೆಸರುಗಳಡಿ ಇರುವ ಉಪ ಜಾತಿಗಳ ಹೆಸರು ಮತ್ತು ಅವುಗಳ ಜನಸಂಖ್ಯೆಯ ಪರಿಣಾಮಕಾರಿ ಅನುಷ್ಠಾನ ವಿಧಾನದ ಪರಿಶೀಲನೆ ಹಾಗೂ ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳು ಮೀಸಲು ಪ್ರಯೋಜನವನ್ನು ಸಮಾನವಾಗಿ ಪಡೆಯುತ್ತಿವೆಯೇ ಎಂಬುದರ ಪರಿಶೀಲನೆ ಮಾಡಬೇಕು ಎಂದು ಸೂಚಿಸಲಾಗಿದೆ.

ನಿಯಮ ನಿಬಂಧನೆಗಳು

*ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ, ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ಧ ಒಳಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ

*ಪರಿಶಿಷ್ಟ ಜಾತಿಗಳ ಉಪುಗುಂಪುಗಳಲ್ಲಿ ‘ಅಂತರ್‌ ಹಿಂದುಳಿದಿರುವಿಕೆ’’ಗುರುತಿಸುವುದು ಮತ್ತು ಇದಕ್ಕಾಗಿ ದತ್ತಾಂಶ ಸಂಗ್ರಹ

*ಮೀಸಲಾತಿ ಪ್ರಮಾಣ ನಿಗದಿಪಡಿಸುವ ಬಗ್ಗೆ ಪರಿಶೀಲನೆ

*ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂಬ ಹೆಸರುಗಳ ಅಡಿ ಇರುವ ಉಪ ಜಾತಿಗಳ ಹೆಸರು ಮತ್ತು ಅವುಗಳ ಜನಸಂಖ್ಯೆಯ ದತ್ತಾಂಶಗಳ ಸಂಗ್ರಹ

*ಒಳಮೀಸಲಾತಿಯ ಪರಿಣಾಮಕಾರಿ ಜಾರಿಯ ಪರಿಶೀಲನೆ

*ಪರಿಶಿಷ್ಟ ಜಾತಿಯಲ್ಲಿ  ಉಪ ಗುಂಪುಗಳ ಮೀಸಲಾತಿಯ ಪ್ರಯೋಜನ ಪಡೆಯುತ್ತಿರುವ ಕುರಿತು ಪರಿಶೀಲನೆ

ಇದನ್ನೂ ಓದಿ…ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...