Homeಕರ್ನಾಟಕಒಳಮೀಸಲಾತಿ: 60 ದಿನದಲ್ಲಿ ವರದಿ ಸಲ್ಲಿಕೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ

ಒಳಮೀಸಲಾತಿ: 60 ದಿನದಲ್ಲಿ ವರದಿ ಸಲ್ಲಿಕೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ನಿವೃತ್ತ ನ್ಯಾ. ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗಕ್ಕೆ ನಿಯಮ ಮತ್ತು ನಿಬಂಧನೆ ನಿಗದಿಪಡಿಸಿ, 2 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

ಆಯೋಗಕ್ಕೆ ನಿಗದಿ ಮಾಡಿರುವ ಹೊಣೆಗಾರಿಕೆಯನ್ನು ನಿಭಾಯಿಸಲು ಅನುಕೂಲವಾಗುವಂತೆ ಕಚೇರಿ ವ್ಯವಸ್ಥೆ, ವಾಹನ, ಸಿಬ್ಬಂದಿ ಮತ್ತು ಇತರ ವ್ಯವಸ್ಥೆಗಳನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಒದಗಿಸಿಕೊಡಲಿದ್ದಾರೆ ಎಂದು ಆದೇಶ ಹೇಳಿದೆ.

ವರದಿ ಸಿದ್ದಪಡಿಸಲು ಅಗತ್ಯವಿರುವ ದಾಖಲೆಗಳನ್ನು ಮತ್ತು ಪುರಾವೆಗಳನ್ನು ವಿಚಾರಣಾ ಆಯೋಗಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಸಲ್ಲಿಸಬೇಕು ಮತ್ತು ಅಗತ್ಯ ಸಹಕಾರ ನೀಡಬೇಕು ಎಂದು ಸೂಚಿಸಿದೆ.

ನಿಯಮ ಮತ್ತು ನಿಬಂಧನೆಗಳಲ್ಲಿ ಉಲ್ಲೇಖಿಸಲಾದ ಎಲ್ಲ ಅಂಶಗಳ ಬಗ್ಗೆ ದತ್ತಾಂಶಗಳು ಮತ್ತು ಅಗತ್ಯ ಶಿಫಾರಸುಗಳನ್ನು ನೀಡಬೇಕು. ಆಯೋಗವು ಅಧಿಕಾರ ವಹಿಸಿಕೊಂಡ 60 ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದಿದೆ.

ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ಧ  ಒಳಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ ಮಾಡಬೇಕು. ಸರಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಾತಿಯಲ್ಲಿ ಎಸ್ ಸಿಯಲ್ಲಿನ ಉಪ ಗುಂಪುಗಳಲ್ಲಿ ‘ಅಂತರ ಹಿಂದುಳಿದಿರುವಿಕೆ’ ಕುರಿತು ದತ್ತಾಂಶ  ಸಂಗ್ರಹಿಸಬೇಕು. ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂಬ ಹೆಸರುಗಳಷ್ಟೇ ರಾಜ್ಯದ  ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿವೆ. ಜನಸಂಖ್ಯೆಯನ್ನು ಹೀಗೆ ವಿಂಗಡಿಸಲಾಗಿದೆ. ಈ ಮೂರೂ ಹೆಸರುಗಳಡಿ ಇರುವ ಉಪ ಜಾತಿಗಳ ಹೆಸರು ಮತ್ತು ಅವುಗಳ ಜನಸಂಖ್ಯೆಯ ಪರಿಣಾಮಕಾರಿ ಅನುಷ್ಠಾನ ವಿಧಾನದ ಪರಿಶೀಲನೆ ಹಾಗೂ ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳು ಮೀಸಲು ಪ್ರಯೋಜನವನ್ನು ಸಮಾನವಾಗಿ ಪಡೆಯುತ್ತಿವೆಯೇ ಎಂಬುದರ ಪರಿಶೀಲನೆ ಮಾಡಬೇಕು ಎಂದು ಸೂಚಿಸಲಾಗಿದೆ.

ನಿಯಮ ನಿಬಂಧನೆಗಳು

*ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ, ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ಧ ಒಳಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ

*ಪರಿಶಿಷ್ಟ ಜಾತಿಗಳ ಉಪುಗುಂಪುಗಳಲ್ಲಿ ‘ಅಂತರ್‌ ಹಿಂದುಳಿದಿರುವಿಕೆ’’ಗುರುತಿಸುವುದು ಮತ್ತು ಇದಕ್ಕಾಗಿ ದತ್ತಾಂಶ ಸಂಗ್ರಹ

*ಮೀಸಲಾತಿ ಪ್ರಮಾಣ ನಿಗದಿಪಡಿಸುವ ಬಗ್ಗೆ ಪರಿಶೀಲನೆ

*ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂಬ ಹೆಸರುಗಳ ಅಡಿ ಇರುವ ಉಪ ಜಾತಿಗಳ ಹೆಸರು ಮತ್ತು ಅವುಗಳ ಜನಸಂಖ್ಯೆಯ ದತ್ತಾಂಶಗಳ ಸಂಗ್ರಹ

*ಒಳಮೀಸಲಾತಿಯ ಪರಿಣಾಮಕಾರಿ ಜಾರಿಯ ಪರಿಶೀಲನೆ

*ಪರಿಶಿಷ್ಟ ಜಾತಿಯಲ್ಲಿ  ಉಪ ಗುಂಪುಗಳ ಮೀಸಲಾತಿಯ ಪ್ರಯೋಜನ ಪಡೆಯುತ್ತಿರುವ ಕುರಿತು ಪರಿಶೀಲನೆ

ಇದನ್ನೂ ಓದಿ…ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...